Homeಮುಖಪುಟ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

- Advertisement -
- Advertisement -

ಹಿರಿಯ ನಟ ಕಮಲ್ ಹಾಸನ್ ನಟಿಸಿರುವ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ “ನ್ಯಾಯಾಂಗೇತರ ತಡೆ” ಹೇರಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಕರ್ನಾಟಕ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠವು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಬುಧವಾರದೊಳಗೆ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

“ಗುಂಪುಗಳು ಮತ್ತು ಗೂಂಡಾ ಗುಂಪುಗಳು ಬೀದಿಗಳಲ್ಲಿ ಓಡಾಡಲು ನಾವು ಬಿಡುವುದಿಲ್ಲ. ಕಾನೂನಿನ ನಿಯಮ ಜಾರಿಯಲ್ಲಿರಬೇಕು. ಯಾರಾದರೂ ಹೇಳಿಕೆ ನೀಡಿದ್ದರೆ, ಅದನ್ನು ಹೇಳಿಕೆಯ ಮೂಲಕ ಎದುರಿಸಿ. ಯಾರಾದರೂ ಬರೆದಿದ್ದರೆ, ಬರೆದು ತೋರಿಸಿ” ಎಂದು ನ್ಯಾಯಾಲಯ ಹೇಳಿದೆ.

ಕನ್ನಡ ಭಾಷೆಯ ಕುರಿತು ನಟ ಕಮಲ್ ಹಾಸನ್ ನೀಡಿದ ಹೇಳಿಕೆಯನ್ನು ವಿರೋಧಿಸಿ ಕನ್ನಡ ಪರ ಗುಂಪುಗಳು ಪ್ರತಿಭಟನೆ ನಡೆಸಿದ ನಂತರ ಮಣಿರತ್ನಂ ನಿರ್ದೇಶನದ ಚಿತ್ರ ಬಿಡುಗಡೆಯನ್ನು  ಕರ್ನಾಟಕದಲ್ಲಿ ತಡೆ ಹಿಡಿಯಲಾಗಿದೆ. ಚೆನ್ನೈನಲ್ಲಿ ನಡೆದ ಚಿತ್ರದ ಆಡಿಯೋ ಬಿಡುಗಡೆ ಸಂದರ್ಭದಲ್ಲಿ, ನಟ-ರಾಜಕಾರಣಿ ಕನ್ನಡ “ತಮಿಳಿನಿಂದ ಹುಟ್ಟಿದೆ” ಎಂದು ಹೇಳಿದ್ದರು.

ತನ್ನ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಲು ನಿರಾಕರಿಸಿರುವುದು ಕನ್ನಡ ಪರ ಗುಂಪುಗಳನ್ನು ಮತ್ತಷ್ಟು ಕೆರಳಿಸಿತ್ತು. ಹಾಗಾಗಿ, ಕಮಲ್ ಹಾಸನ್ ಕ್ಷಮೆಯಾಚಿಸುವವರೆಗೆ ಚಿತ್ರವನ್ನು ರಾಜ್ಯದಲ್ಲಿ ಪ್ರದರ್ಶಿಸುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಘೋಷಿಸಿತ್ತು.

ಜೂನ್ 5ರಂದು ಕರ್ನಾಟಕ ಹೊರತುಪಡಿಸಿ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಥಗ್ ಲೈಫ್ ಬಿಡುಗಡೆಯಾಗಿದೆ.

ಸಿಬಿಎಫ್‌ಸಿ ಪ್ರಮಾಣಪತ್ರ ಹೊಂದಿರುವ ಯಾವುದೇ ಚಿತ್ರದ ಪ್ರದರ್ಶನಕ್ಕೆ ಅವಕಾಶ ಒದಗಿಸಿಕೊಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

“ಜನರು ಚಿತ್ರವನ್ನು ನೋಡದೇ ಇರಬಹುದು. ಅದು ಬೇರೆ ವಿಷಯ. ಜನರು ಚಿತ್ರವನ್ನು ನೋಡಲೇಬೇಕು ಎಂದು ನಾವು ಯಾವುದೇ ಆದೇಶವನ್ನು ಹೊರಡಿಸುತ್ತಿಲ್ಲ. ಆದರೆ, ಚಿತ್ರವನ್ನು ಬಿಡುಗಡೆ ಮಾಡಬೇಕು” ಎಂದಿದೆ.

ಕಮಲ್ ಹಾಸನ್ ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸುವಂತೆ ನಿರ್ದೇಶಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೂ ನ್ಯಾಯಾಲಯ ಅಸಮ್ಮತಿ ವ್ಯಕ್ತಪಡಿಸಿದೆ. “ಇದು ಹೈಕೋರ್ಟ್‌ನ ಕೆಲಸವಲ್ಲ” ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

ಕರ್ನಾಟಕದ ಜನರು ನಟನ ಮಾತನ್ನು ಒಪ್ಪದೇ ಇರಬಹುದು. ಆದರೆ, ಅವರು ಬೆದರಿಕೆ ಹಾಕಬಾರದಿತ್ತು. ಬೆಂಗಳೂರಿನ ಎಲ್ಲಾ ಪ್ರಬುದ್ದ ಜನರು ಕಮಲ್ ಹಾಸನ್ ಅವರ ಹೇಳಿಕೆಯನ್ನು  ತಪ್ಪು ಎಂದು ಹೇಳಬಹುದು. ಆದರೆ, ಬೆದರಿಕೆ ಏಕೆ ಹಾಕಬೇಕಿತ್ತು? ಎಂದು ನ್ಯಾಯಮೂರ್ತಿ ಭುಯಾನ್ ಕೇಳಿದ್ದಾರೆ.

“ಕನ್ನಡವು ತಮಿಳಿನಿಂದ ಹುಟ್ಟಿದೆ” ಎಂಬ ನಟ ಕಮಲ್ ಹಾಸನ್ ಅವರ ಹೇಳಿಕೆಯನ್ನು ಹೈಕೋರ್ಟ್ ತೀವ್ರವಾಗಿ ಟೀಕಿಸಿತ್ತು. “ಒಂದೇ ಒಂದು ಕ್ಷಮೆಯಾಚನೆಯಿಂದ ಸಮಸ್ಯೆ ಬಗೆಹರಿಯುತ್ತಿತ್ತು” ಎಂದು ಹೇಳಿತ್ತು.

ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಯ ತಡೆಯನ್ನು ಪ್ರಶ್ನಿಸಿ ಎಂ ಮಹೇಶ್ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.

ಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...