Homeಮುಖಪುಟ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

- Advertisement -
- Advertisement -

ಹಿರಿಯ ನಟ ಕಮಲ್ ಹಾಸನ್ ನಟಿಸಿರುವ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ “ನ್ಯಾಯಾಂಗೇತರ ತಡೆ” ಹೇರಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಕರ್ನಾಟಕ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠವು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಬುಧವಾರದೊಳಗೆ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

“ಗುಂಪುಗಳು ಮತ್ತು ಗೂಂಡಾ ಗುಂಪುಗಳು ಬೀದಿಗಳಲ್ಲಿ ಓಡಾಡಲು ನಾವು ಬಿಡುವುದಿಲ್ಲ. ಕಾನೂನಿನ ನಿಯಮ ಜಾರಿಯಲ್ಲಿರಬೇಕು. ಯಾರಾದರೂ ಹೇಳಿಕೆ ನೀಡಿದ್ದರೆ, ಅದನ್ನು ಹೇಳಿಕೆಯ ಮೂಲಕ ಎದುರಿಸಿ. ಯಾರಾದರೂ ಬರೆದಿದ್ದರೆ, ಬರೆದು ತೋರಿಸಿ” ಎಂದು ನ್ಯಾಯಾಲಯ ಹೇಳಿದೆ.

ಕನ್ನಡ ಭಾಷೆಯ ಕುರಿತು ನಟ ಕಮಲ್ ಹಾಸನ್ ನೀಡಿದ ಹೇಳಿಕೆಯನ್ನು ವಿರೋಧಿಸಿ ಕನ್ನಡ ಪರ ಗುಂಪುಗಳು ಪ್ರತಿಭಟನೆ ನಡೆಸಿದ ನಂತರ ಮಣಿರತ್ನಂ ನಿರ್ದೇಶನದ ಚಿತ್ರ ಬಿಡುಗಡೆಯನ್ನು  ಕರ್ನಾಟಕದಲ್ಲಿ ತಡೆ ಹಿಡಿಯಲಾಗಿದೆ. ಚೆನ್ನೈನಲ್ಲಿ ನಡೆದ ಚಿತ್ರದ ಆಡಿಯೋ ಬಿಡುಗಡೆ ಸಂದರ್ಭದಲ್ಲಿ, ನಟ-ರಾಜಕಾರಣಿ ಕನ್ನಡ “ತಮಿಳಿನಿಂದ ಹುಟ್ಟಿದೆ” ಎಂದು ಹೇಳಿದ್ದರು.

ತನ್ನ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಲು ನಿರಾಕರಿಸಿರುವುದು ಕನ್ನಡ ಪರ ಗುಂಪುಗಳನ್ನು ಮತ್ತಷ್ಟು ಕೆರಳಿಸಿತ್ತು. ಹಾಗಾಗಿ, ಕಮಲ್ ಹಾಸನ್ ಕ್ಷಮೆಯಾಚಿಸುವವರೆಗೆ ಚಿತ್ರವನ್ನು ರಾಜ್ಯದಲ್ಲಿ ಪ್ರದರ್ಶಿಸುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಘೋಷಿಸಿತ್ತು.

ಜೂನ್ 5ರಂದು ಕರ್ನಾಟಕ ಹೊರತುಪಡಿಸಿ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಥಗ್ ಲೈಫ್ ಬಿಡುಗಡೆಯಾಗಿದೆ.

ಸಿಬಿಎಫ್‌ಸಿ ಪ್ರಮಾಣಪತ್ರ ಹೊಂದಿರುವ ಯಾವುದೇ ಚಿತ್ರದ ಪ್ರದರ್ಶನಕ್ಕೆ ಅವಕಾಶ ಒದಗಿಸಿಕೊಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

“ಜನರು ಚಿತ್ರವನ್ನು ನೋಡದೇ ಇರಬಹುದು. ಅದು ಬೇರೆ ವಿಷಯ. ಜನರು ಚಿತ್ರವನ್ನು ನೋಡಲೇಬೇಕು ಎಂದು ನಾವು ಯಾವುದೇ ಆದೇಶವನ್ನು ಹೊರಡಿಸುತ್ತಿಲ್ಲ. ಆದರೆ, ಚಿತ್ರವನ್ನು ಬಿಡುಗಡೆ ಮಾಡಬೇಕು” ಎಂದಿದೆ.

ಕಮಲ್ ಹಾಸನ್ ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸುವಂತೆ ನಿರ್ದೇಶಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೂ ನ್ಯಾಯಾಲಯ ಅಸಮ್ಮತಿ ವ್ಯಕ್ತಪಡಿಸಿದೆ. “ಇದು ಹೈಕೋರ್ಟ್‌ನ ಕೆಲಸವಲ್ಲ” ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

ಕರ್ನಾಟಕದ ಜನರು ನಟನ ಮಾತನ್ನು ಒಪ್ಪದೇ ಇರಬಹುದು. ಆದರೆ, ಅವರು ಬೆದರಿಕೆ ಹಾಕಬಾರದಿತ್ತು. ಬೆಂಗಳೂರಿನ ಎಲ್ಲಾ ಪ್ರಬುದ್ದ ಜನರು ಕಮಲ್ ಹಾಸನ್ ಅವರ ಹೇಳಿಕೆಯನ್ನು  ತಪ್ಪು ಎಂದು ಹೇಳಬಹುದು. ಆದರೆ, ಬೆದರಿಕೆ ಏಕೆ ಹಾಕಬೇಕಿತ್ತು? ಎಂದು ನ್ಯಾಯಮೂರ್ತಿ ಭುಯಾನ್ ಕೇಳಿದ್ದಾರೆ.

“ಕನ್ನಡವು ತಮಿಳಿನಿಂದ ಹುಟ್ಟಿದೆ” ಎಂಬ ನಟ ಕಮಲ್ ಹಾಸನ್ ಅವರ ಹೇಳಿಕೆಯನ್ನು ಹೈಕೋರ್ಟ್ ತೀವ್ರವಾಗಿ ಟೀಕಿಸಿತ್ತು. “ಒಂದೇ ಒಂದು ಕ್ಷಮೆಯಾಚನೆಯಿಂದ ಸಮಸ್ಯೆ ಬಗೆಹರಿಯುತ್ತಿತ್ತು” ಎಂದು ಹೇಳಿತ್ತು.

ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಯ ತಡೆಯನ್ನು ಪ್ರಶ್ನಿಸಿ ಎಂ ಮಹೇಶ್ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.

ಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...