Homeಅಂತರಾಷ್ಟ್ರೀಯಇರಾನ್ | ಸರ್ಕಾರಿ ಸ್ವಾಮ್ಯದ ಪ್ರಮುಖ ಬ್ಯಾಂಕ್‌ ಮೇಲೆ ಸೈಬರ್ ದಾಳಿ!

ಇರಾನ್ | ಸರ್ಕಾರಿ ಸ್ವಾಮ್ಯದ ಪ್ರಮುಖ ಬ್ಯಾಂಕ್‌ ಮೇಲೆ ಸೈಬರ್ ದಾಳಿ!

- Advertisement -
- Advertisement -

ಇರಾನ್ ಮತ್ತು ಇಸ್ರೇಲ್ ನಡುವೆ ವಾಯು ಯುದ್ಧ ಹೆಚ್ಚುತ್ತಿರುವ ಮಧ್ಯೆ, ಇರಾನ್‌ನ ಪ್ರಮುಖ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಒಂದಾದ ”ಸೆಪಾ ಬ್ಯಾಂಕ್” ಮೇಲೆ ಮಂಗಳವಾರ ಸೈಬರ್ ದಾಳಿ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇರಾನ್‌ನ ಸೈನ್ಯ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ನೊಂದಿಗೆ ಸಂಬಂಧ ಹೊಂದಿರುವ ಇರಾನ್‌ನ ಅತ್ಯಂತ ಹಳೆಯ ಹಣಕಾಸು ಸಂಸ್ಥೆಗಳಲ್ಲಿ ಇದು ಒಂದಾಗಿದೆ. ಇರಾನ್ | ಸರ್ಕಾರಿ

“ಸೆಪಾ ಬ್ಯಾಂಕಿನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಸೈಬರ್ ದಾಳಿ ನಡೆಸಲಾಗಿದ್ದು, ಸಂಸ್ಥೆಯ ಆನ್‌ಲೈನ್ ಸೇವೆಗಳಿಗೆ ಅಡ್ಡಿ ಉಂಟಾಗಿದೆ” ಎಂದು ಫಾರ್ಸ್ ಸುದ್ದಿ ಸಂಸ್ಥೆ ಹೇಳಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಸಮಸ್ಯೆ ಬಗೆಹರಿಯುವ ನಿರೀಕ್ಷೆಯಿದೆ ಎಂದು ಹೇಳಿದೆ.

ಹ್ಯಾಕರ್‌ಗಳ ಗುಂಪಾದ ಪ್ರಿಡೇಟರಿ ಸ್ಪ್ಯಾರೋ ಈ ಸೈಬರ್‌ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ತಾನು ಬ್ಯಾಂಕ್‌ನ ಎಲ್ಲಾ ಡೇಟಾವನ್ನು ನಾಶಪಡಿಸಿದ್ದೇನೆ ಎಂದು ಅದು ಹೇಳಿಕೊಂಡಿದೆ. ಇರಾನ್‌ನಲ್ಲಿ ವ್ಯಾಪಕ ಬ್ಯಾಂಕಿಂಗ್ ಅಡಚಣೆಗಳ ವರದಿಗಳ ನಡುವೆ ಈ ಹೇಳಿಕೆ ಹೊರಬಿದ್ದಿದೆ.

ಸೈಬರ್ ದಾಳಿಯ ಹಿನ್ನಲೆ ಮಂಗಳವಾರ ಹಲವಾರು ಸೆಪಾ ಬ್ಯಾಂಕ್‌ನ ಶಾಖೆಗಳನ್ನು ಮುಚ್ಚಲಾಯಿತು ಮತ್ತು ಗ್ರಾಹಕರು ತಮ್ಮ ಖಾತೆಗಳಿಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಎಂದು ಗ್ರಾಹಕರು ಹೇಳಿದ್ದಾಗಿ ಇರಾನ್ ಇಂಟರ್‌ನ್ಯಾಷನಲ್‌ ವರದಿ ಮಾಡಿದೆ.

ಸೆಪಾ ಬ್ಯಾಂಕ್ ಇರಾನ್‌ನಲ್ಲಿ 1,800 ಶಾಖೆಗಳನ್ನು ಹೊಂದಿದ್ದು, ಜೊತೆಗೆ ಬ್ರಿಟನ್, ಫ್ರಾನ್ಸ್, ಜರ್ಮನಿ ಮತ್ತು ಇಟಲಿಯಲ್ಲಿ ಕೂಡಾ ಶಾಖೆಗಳನ್ನು ಹೊಂದಿದೆ. 2015ರ ವೇಳೆ ಇರಾನ್‌ ಪರಮಾಣು ಒಪ್ಪಂದದಿಂದ ಹಿಂದೆ ಸರಿದ ನಂತರ ಅಮೆರಿಕ 2019 ರಲ್ಲಿ ಸೆಪಾ ಬ್ಯಾಂಕ್ ಮೇಲೆ ನಿರ್ಬಂಧಗಳನ್ನು ವಿಧಿಸಿತ್ತು.

ಅದಾಗ್ಯೂ, ಇರಾನ್ ಅಧಿಕಾರಿಗಳು ಬ್ಯಾಂಕ್ ಸ್ಥಗಿತವಾಗಿರುವ ಬಗ್ಗೆ ಅಥವಾ ಸೈಬರ್ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದಾಗ್ಯೂ, ಸೆಪಾ ಬ್ಯಾಂಕಿನಲ್ಲಿನ ಸಮಸ್ಯೆಯನ್ನು ಕೆಲವೇ ಗಂಟೆಗಳಲ್ಲಿ ಪರಿಹರಿಸಲಾಗುವುದು ಎಂದು ಫಾರ್ಸ್ ನ್ಯೂಸ್ ಹೇಳಿದೆ.

ಈ ಹಿಂದೆ ಇರಾನಿನ ಉಕ್ಕಿನ ಸ್ಥಾವರಗಳು ಮತ್ತು ಇಂಧನ ಕೇಂದ್ರಗಳ ವಿರುದ್ಧ ನಡೆದ ಸೈಬರ್ ಕಾರ್ಯಾಚರಣೆಗಳ ಹೊಣೆಯನ್ನು ಹೊತ್ತುಕೊಂಡಿದ್ದ ಪ್ರಿಡೇಟರಿ ಸ್ಪ್ಯಾರೋ, ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸೆಪಾ ಬ್ಯಾಂಕ್ ಮಿಲಿಟರಿ ಕಾರ್ಯಕ್ರಮಗಳಿಗೆ ಹಣಕಾಸು ಒದಗಿಸಲು ಮತ್ತು ಅಂತರರಾಷ್ಟ್ರೀಯ ನಿರ್ಬಂಧಗಳನ್ನು ತಪ್ಪಿಸಲು ಬಳಸಲಾಗಿದೆ ಎಂದು ಹೇಳಿದೆ. ಇರಾನ್ | ಸರ್ಕಾರಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

ಜಾಗತಿಕ ರಾಜತಾಂತ್ರಿಕ ಸಂಪರ್ಕದ ನಂತರ ಭಾರತಕ್ಕೆ ಎಷ್ಟು ದೇಶಗಳು ಬೆಂಬಲ ನೀಡಿವೆ: ಕೇಂದ್ರಕ್ಕೆ ಟಿಎಂಸಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...