Homeಮುಖಪುಟಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

- Advertisement -
- Advertisement -

ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕವಾಗಿ ಅವಮಾನಿಸಿದ್ದಲ್ಲದೆ, ಹಲ್ಲೆ ನಡೆಸಿರುವ ಘಟನೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಅವರು ಪ್ರತಿನಿಧಿಸುವ ಕುಪ್ಪಂ ಕ್ಷೇತ್ರದಲ್ಲಿ ನಡೆದಿದೆ.

ಸಾಲ ಮರುಪಾವತಿ ವಿಚಾರಕ್ಕೆ  ದುಷ್ಕೃತ್ಯ ಎಸಗಲಾಗಿದೆ. ಆರೋಪಿಯನ್ನು ಮುನಿಕಣ್ಣಪ್ಪ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಮಹಿಳೆಯ ಹೆಸರು ಸಿರಿಷಾ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಸಿರಿಷಾ ಅವರ ಪತಿ ತಿಮ್ಮರಾಯಪ್ಪ ಅವರು ಮೂರು ವರ್ಷಗಳ ಹಿಂದೆ ಮುನಿಕಣ್ಣಪ್ಪ ಅವರಿಂದ 80,000 ರೂಪಾಯಿ ಸಾಲ ಪಡೆದಿದ್ದರು. ಸಾಲ ಮರುಪಾವತಿಸಲು ವಿಫಲವಾದ ನಂತರ, ತಿಮ್ಮರಾಯಪ್ಪ ಅವರು ಸಿರಿಷಾ ಮತ್ತು ಮಕ್ಕಳನ್ನು ತ್ಯಜಿಸಿ, ಮರುಪಾವತಿಯ ಹೊರೆಯನ್ನು ಅವರ ಮೇಲೆ ಹೊರಿಸಿ ಹೋಗಿದ್ದರು.

ತನ್ನ ಮಕ್ಕಳನ್ನು ಸಾಕಲು ಮತ್ತು ಸಾಲ ಮರುಪಾವತಿಸಲು ಸಿರಿಷಾ ಅವರು ದಿನಗೂಲಿ ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದರೂ, ಪಾವತಿ ವಿಳಂಬ ಮಾಡಿದ್ದಕ್ಕಾಗಿ ಮುನಿಕಣ್ಣಪ್ಪ ಮರಕ್ಕೆ ಕಟ್ಟಿ ಹಾಕಿ ಸಾರ್ವಜನಿಕವಾಗಿ ಅವಮಾನಿಸಿದ್ದಾನೆ. ಅಲ್ಲದೆ, ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

ಸೋಮವಾರ ಮಧ್ಯಾಹ್ನ ಸಿರಿಷಾ ಅವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಮುನಿಕಣ್ಣಪ್ಪ ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ಬಲವಂತವಾಗಿ ಎಳೆದೊಯ್ದು ಬೇವಿನ ಮರಕ್ಕೆ  ಕಟ್ಟಿಹಾಕಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ಘಟನೆಯನ್ನು ತಮ್ಮ ಫೋನ್‌ಗಳಲ್ಲಿ ರೆಕಾರ್ಡ್ ಮಾಡಲು ಪ್ರಯತ್ನಿಸಿದ ಗ್ರಾಮಸ್ಥರ ಮೇಲೂ ಮುನಿಕಣ್ಣಪ್ಪ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಸ್ಥಳೀಯ ನಿವಾಸಿಗಳು ತಕ್ಷಣ ಕುಪ್ಪಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಿಎನ್‌ಎಸ್‌ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ದಾಖಲಾದ ಬೆನ್ನಲ್ಲೇ ಮುನಿಕಣ್ಣಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತನ್ನ ಕ್ಷೇತ್ರದಲ್ಲಿ ನಡೆದಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಸಿಎಂ ಚರ್ಚೆ ನಡೆಸಿದ್ದಾರೆ.

ಇಂತಹ ಅನಾಗರಿಕ ಕೃತ್ಯಗಳು ಎಂದಿಗೂ ಪುನರಾವರ್ತನೆಯಾಗದಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಸಂತ್ರಸ್ತೆಯ ಕುಟುಂಬಕ್ಕೆ ಸಂಪೂರ್ಣ ಬೆಂಬಲ ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

“ಇದು ಗಂಭೀರ ಅನ್ಯಾಯ. ಅಪರಾಧಿಗಳು ಕಠಿಣ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಮಹಿಳೆಯರ ಮೇಲಿನ ಇಂತಹ ಕ್ರೌರ್ಯವನ್ನು ನಾವು ಸಹಿಸುವುದಿಲ್ಲ” ಎಂದಿದ್ದಾರೆ.

ಘಟನೆ ಕುರಿತು ಗೃಹ ಸಚಿವೆ ವಂಗಲಪುಡಿ ಅನಿತಾ ಮತ್ತು ಟಿಡಿಪಿ ಎಂಎಲ್‌ಸಿ ಕಂಚರ್ಲ ಶ್ರೀಕಾಂತ್  ಪ್ರತಿಕ್ರಿಯಿಸಿದ್ದಾರೆ.

ಗೃಹ ಸಚಿವರು ಸಂತ್ರಸ್ತೆ ಜೊತೆ ವಿಡಿಯೋ ಕರೆಯ ಮೂಲಕ ಮಾತನಾಡಿದ್ದು, ಆಕೆಗೆ ಧೈರ್ಯ ಹೇಳಿದ್ದಾರೆ. ಅಮಾನವೀಯ ಕೃತ್ಯವನ್ನು ಅವರು ಬಲವಾಗಿ ಖಂಡಿಸಿದ್ದಾರೆ. ಸರ್ಕಾರದಿಂದ ಆಕೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: 10 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...