Homeಮುಖಪುಟತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

ತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

- Advertisement -
- Advertisement -

ಬಾಲ್ಯ ವಿವಾಹಕ್ಕಾಗಿ ವಯಸ್ಸು ಹೆಚ್ಚಿಸುವುದು ಮತ್ತು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯರ ಕುಟುಂಬಗಳು ಆಧಾರ್ ಕಾರ್ಡ್ ವಿವರಗಳನ್ನು ತಿರುಚಿರುವ ಕನಿಷ್ಠ ಆರು ಪ್ರಕರಣಗಳನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿಹಲವು ಪ್ರಕರಣಗಳು ಕೆಲಮಂಗಲಂ ಬ್ಲಾಕ್‌ನಿಂದ ವರದಿಯಾಗಿವೆ.

ಗರ್ಭಿಣಿಯರನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಆರೋಗ್ಯ ಇಲಾಖೆಯು ಬಳಸುವ ಡಿಜಿಟಲ್ ಟ್ರ್ಯಾಕಿಂಗ್ ವೇದಿಕೆಯಾದ ಪ್ರೆಗ್ನೆನ್ಸಿ ಮತ್ತು ಇನ್‌ಫೆಂಟ್ ಕೋಹಾರ್ಟ್ ಮಾನಿಟರಿಂಗ್ ಮತ್ತು ಮೌಲ್ಯಮಾಪನ (PICME) ವ್ಯವಸ್ಥೆಯ ಮೂಲಕ ಪೋಷಕರು ಎಸಗಿರುವ ವಂಚನೆ ಬೆಳಕಿಗೆ ಬಂದಿದೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳು ದಿನನಿತ್ಯದ ಮಾಃಇತಿ ನಮೂದು ಮಾಡುವ ಸಮಯದಲ್ಲಿ, ಹುಡುಗಿಯರ ಆಧಾರ್-ಲಿಂಕ್ಡ್ ದಾಖಲೆಗಳು ಮತ್ತು ಅವರು ಹೊಂದಿರುವ ಭೌತಿಕ ಆಧಾರ್ ಕಾರ್ಡ್‌ಗಳ ನಡುವಿನ ವ್ಯತ್ಯಾಸಗಳನ್ನು ಕಂಡುಕೊಂಡಿದ್ದಾರೆ.

ಒಂದು ಪ್ರಕರಣದಲ್ಲಿ, 29 ವರ್ಷದ ವ್ಯಕ್ತಿಯನ್ನು ಮದುವೆಯಾದ 14 ವರ್ಷದ ಬಾಲಕಿಯೊಬ್ಬಳು ಮೇ ಅಂತ್ಯದಲ್ಲಿ ತನ್ನ ಗರ್ಭಧಾರಣೆಯನ್ನು ನೋಂದಾಯಿಸಲು ನಾಗಮಂಗಲಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದಳು. ಆಕೆಯ ಆಧಾರ್ ಕಾರ್ಡ್‌ನಲ್ಲಿ ಆಕೆಯ ವಯಸ್ಸು 20 ಎಂದು ನಮೂದಿಸಲಾಗಿದ್ದರೂ, ಪಿಐಸಿಎಂಇ ದಾಖಲೆಗಳ ಪ್ರಕಾರ ಆಕೆಯ ನಿಜವಾದ ವಯಸ್ಸು 14 ಎಂದು ತೋರಿಸಿದೆ. ತನಿಖೆಯ ನಂತರ, ಬಾಲಕಿ ಮತ್ತು ಆಕೆಯ ಪತಿ ಬಾಲ್ಯವಿವಾಹ ಕಾನೂನುಗಳ ಅಡಿ ಕ್ರಮದಿಂದ ತಪ್ಪಿಸಿಕೊಳ್ಳಲು ಡೆಂಕಣಿಕೋಟೆಯಲ್ಲಿರುವ ಸ್ಥಳೀಯ ಬ್ರೌಸಿಂಗ್ ಕೇಂದ್ರದಲ್ಲಿ ಆಧಾರ್ ಜನ್ಮ ದಿನಾಂಕವನ್ನು 200 ರೂ ಕೊಟ್ಟು ಬದಲಾಯಿಸಿದ್ದರು ಎಂದು ಒಪ್ಪಿಕೊಂಡರು.

ಕೂಡಲೇ ಅಧಿಕಾರಿಗಳು ಬಾಲಕಿಯನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅಪಘಾತ ನೋಂದಣಿ (ಎಆರ್‌) ನಮೂದು ಮಾಡಿಸಿದ್ದಾರೆ. ಈ ಸಮಸ್ಯೆಯನ್ನು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಗೆ ವರದಿ ಮಾಡಲಾಯಿತು. ಹೆಚ್ಚಿನ ವಿಚಾರಣೆ ಬಳಿಕ, ರಾಯಕೊಟ್ಟೈ ಮತ್ತು ಡೆಂಕಣಿಕೋಟೆಯಲ್ಲಿರುವ ವಿವಿಧ ಬ್ರೌಸಿಂಗ್ ಕೇಂದ್ರಗಳು, ಫೋಟೋ ಸ್ಟುಡಿಯೋಗಳಲ್ಲಿ 500 ರೂ.ಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಘಾತಕಾರಿಯಾಗಿ, ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ವಂಚನೆಗೆ ಸಹಕರಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲಮಂಗಲಂ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ. ಸಿ. ರಾಜೇಶ್ ಕುಮಾರ್ ಮಾತನಾಡಿ, ಮಾಹಿತಿ ತಿರುಚುತ್ತಿವೆ ಎಂದು ಗುರುತಿಸಲಾದ ಬ್ರೌಸಿಂಗ್ ಕೇಂದ್ರಗಳು ಮತ್ತು ಸ್ಟುಡಿಯೋಗಳನ್ನು ನಮ್ಮ ತಂಡವು ಪರಿಶೀಲಿಸುತ್ತದೆ. ಗ್ರಾಮ ಆರೋಗ್ಯ ದಾದಿಯರು ಅಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಸಹಾಯ ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಆಧಾರ್ ತಿರುಚುವಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಬೆಟ್ಟಮುಗಿಲಲಂ ಪಂಚಾಯತ್‌ನ ಆರೋಗ್ಯ ಕಾರ್ಯಕರ್ತರನ್ನು ಈಗಾಗಲೇ ವಜಾಗೊಳಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಿ. ರಮೇಶ್ ಕುಮಾರ್ ಮಾತನಾಡಿ, “ಇಂತಹ ಪ್ರಕರಣಗಳನ್ನು ವರದಿ ಮಾಡಲು ಎಲ್ಲ ಸಿಬ್ಬಂದಿಗೆ ಜಾಗೃತಿ ಮೂಡಿಸಲಾಗುವುದು. ಯಾವುದೇ ರೂಪದಲ್ಲಿ ಬಾಲ್ಯವಿವಾಹವನ್ನು ಬೆಂಬಲಿಸುವುದನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದರು.

ಏಪ್ರಿಲ್ 2024 ರಿಂದ ಮಾರ್ಚ್ 2025 ರವರೆಗೆ, ಕೃಷ್ಣಗಿರಿ ಜಿಲ್ಲೆಯಲ್ಲಿ ಒಟ್ಟು 545 ಹದಿಹರೆಯದ ಗರ್ಭಧಾರಣೆಯ ವರದಿಯಾಗಿದೆ. ಶೂಲಗಿರಿ (81), ಕೃಷ್ಣಗಿರಿ ಗ್ರಾಮೀಣ (72) ಮತ್ತು ಕೆಲಮಂಗಲಂ (66) ನಲ್ಲಿ ಅತಿ ಹೆಚ್ಚು ಸಂಖ್ಯೆಗಳು ದಾಖಲಾಗಿವೆ.

ಆಧಾರ್ ತಿರುಚುವಿಕೆ ಮತ್ತು ಬಾಲ್ಯವಿವಾಹದಲ್ಲಿ ಭಾಗಿಯಾಗಿರುವವರ ವಿರುದ್ಧ ತನಿಖೆ ನಡೆಸಲು ಮತ್ತು ಕ್ರಮ ಕೈಗೊಳ್ಳಲು ವಿಶೇಷ ತಂಡವನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ. ದಿನೇಶ್ ಹೇಳಿದರು.

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...