Homeಮುಖಪುಟತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

ತಮಿಳುನಾಡು: ಅಪ್ರಾಪ್ತ ಬಾಲಕಿಯರ ವಿವಾಹಕ್ಕಾಗಿ ನಕಲಿ ಆಧಾರ್ ಕಾರ್ಡ್‌ ಬಳಸುತ್ತಿರುವ ಪೋಷಕರು

- Advertisement -
- Advertisement -

ಬಾಲ್ಯ ವಿವಾಹಕ್ಕಾಗಿ ವಯಸ್ಸು ಹೆಚ್ಚಿಸುವುದು ಮತ್ತು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯರ ಕುಟುಂಬಗಳು ಆಧಾರ್ ಕಾರ್ಡ್ ವಿವರಗಳನ್ನು ತಿರುಚಿರುವ ಕನಿಷ್ಠ ಆರು ಪ್ರಕರಣಗಳನ್ನು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಕಳೆದ ಆರು ತಿಂಗಳಲ್ಲಿಹಲವು ಪ್ರಕರಣಗಳು ಕೆಲಮಂಗಲಂ ಬ್ಲಾಕ್‌ನಿಂದ ವರದಿಯಾಗಿವೆ.

ಗರ್ಭಿಣಿಯರನ್ನು ಮೇಲ್ವಿಚಾರಣೆ ಮಾಡಲು ರಾಜ್ಯ ಆರೋಗ್ಯ ಇಲಾಖೆಯು ಬಳಸುವ ಡಿಜಿಟಲ್ ಟ್ರ್ಯಾಕಿಂಗ್ ವೇದಿಕೆಯಾದ ಪ್ರೆಗ್ನೆನ್ಸಿ ಮತ್ತು ಇನ್‌ಫೆಂಟ್ ಕೋಹಾರ್ಟ್ ಮಾನಿಟರಿಂಗ್ ಮತ್ತು ಮೌಲ್ಯಮಾಪನ (PICME) ವ್ಯವಸ್ಥೆಯ ಮೂಲಕ ಪೋಷಕರು ಎಸಗಿರುವ ವಂಚನೆ ಬೆಳಕಿಗೆ ಬಂದಿದೆ.

ಆರೋಗ್ಯ ಇಲಾಖೆ ಸಿಬ್ಬಂದಿಗಳು ದಿನನಿತ್ಯದ ಮಾಃಇತಿ ನಮೂದು ಮಾಡುವ ಸಮಯದಲ್ಲಿ, ಹುಡುಗಿಯರ ಆಧಾರ್-ಲಿಂಕ್ಡ್ ದಾಖಲೆಗಳು ಮತ್ತು ಅವರು ಹೊಂದಿರುವ ಭೌತಿಕ ಆಧಾರ್ ಕಾರ್ಡ್‌ಗಳ ನಡುವಿನ ವ್ಯತ್ಯಾಸಗಳನ್ನು ಕಂಡುಕೊಂಡಿದ್ದಾರೆ.

ಒಂದು ಪ್ರಕರಣದಲ್ಲಿ, 29 ವರ್ಷದ ವ್ಯಕ್ತಿಯನ್ನು ಮದುವೆಯಾದ 14 ವರ್ಷದ ಬಾಲಕಿಯೊಬ್ಬಳು ಮೇ ಅಂತ್ಯದಲ್ಲಿ ತನ್ನ ಗರ್ಭಧಾರಣೆಯನ್ನು ನೋಂದಾಯಿಸಲು ನಾಗಮಂಗಲಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದಳು. ಆಕೆಯ ಆಧಾರ್ ಕಾರ್ಡ್‌ನಲ್ಲಿ ಆಕೆಯ ವಯಸ್ಸು 20 ಎಂದು ನಮೂದಿಸಲಾಗಿದ್ದರೂ, ಪಿಐಸಿಎಂಇ ದಾಖಲೆಗಳ ಪ್ರಕಾರ ಆಕೆಯ ನಿಜವಾದ ವಯಸ್ಸು 14 ಎಂದು ತೋರಿಸಿದೆ. ತನಿಖೆಯ ನಂತರ, ಬಾಲಕಿ ಮತ್ತು ಆಕೆಯ ಪತಿ ಬಾಲ್ಯವಿವಾಹ ಕಾನೂನುಗಳ ಅಡಿ ಕ್ರಮದಿಂದ ತಪ್ಪಿಸಿಕೊಳ್ಳಲು ಡೆಂಕಣಿಕೋಟೆಯಲ್ಲಿರುವ ಸ್ಥಳೀಯ ಬ್ರೌಸಿಂಗ್ ಕೇಂದ್ರದಲ್ಲಿ ಆಧಾರ್ ಜನ್ಮ ದಿನಾಂಕವನ್ನು 200 ರೂ ಕೊಟ್ಟು ಬದಲಾಯಿಸಿದ್ದರು ಎಂದು ಒಪ್ಪಿಕೊಂಡರು.

ಕೂಡಲೇ ಅಧಿಕಾರಿಗಳು ಬಾಲಕಿಯನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅಪಘಾತ ನೋಂದಣಿ (ಎಆರ್‌) ನಮೂದು ಮಾಡಿಸಿದ್ದಾರೆ. ಈ ಸಮಸ್ಯೆಯನ್ನು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಗೆ ವರದಿ ಮಾಡಲಾಯಿತು. ಹೆಚ್ಚಿನ ವಿಚಾರಣೆ ಬಳಿಕ, ರಾಯಕೊಟ್ಟೈ ಮತ್ತು ಡೆಂಕಣಿಕೋಟೆಯಲ್ಲಿರುವ ವಿವಿಧ ಬ್ರೌಸಿಂಗ್ ಕೇಂದ್ರಗಳು, ಫೋಟೋ ಸ್ಟುಡಿಯೋಗಳಲ್ಲಿ 500 ರೂ.ಗೆ ನಕಲಿ ಆಧಾರ್ ಕಾರ್ಡ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಆಘಾತಕಾರಿಯಾಗಿ, ಕೆಲವು ಆರೋಗ್ಯ ಇಲಾಖೆಯ ಸಿಬ್ಬಂದಿ ವಂಚನೆಗೆ ಸಹಕರಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಲಮಂಗಲಂ ಬ್ಲಾಕ್ ವೈದ್ಯಕೀಯ ಅಧಿಕಾರಿ ಡಾ. ಸಿ. ರಾಜೇಶ್ ಕುಮಾರ್ ಮಾತನಾಡಿ, ಮಾಹಿತಿ ತಿರುಚುತ್ತಿವೆ ಎಂದು ಗುರುತಿಸಲಾದ ಬ್ರೌಸಿಂಗ್ ಕೇಂದ್ರಗಳು ಮತ್ತು ಸ್ಟುಡಿಯೋಗಳನ್ನು ನಮ್ಮ ತಂಡವು ಪರಿಶೀಲಿಸುತ್ತದೆ. ಗ್ರಾಮ ಆರೋಗ್ಯ ದಾದಿಯರು ಅಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಸಹಾಯ ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದರು.

ಆಧಾರ್ ತಿರುಚುವಿಕೆಯನ್ನು ಬೆಂಬಲಿಸಿದ್ದಕ್ಕಾಗಿ ಬೆಟ್ಟಮುಗಿಲಲಂ ಪಂಚಾಯತ್‌ನ ಆರೋಗ್ಯ ಕಾರ್ಯಕರ್ತರನ್ನು ಈಗಾಗಲೇ ವಜಾಗೊಳಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜಿ. ರಮೇಶ್ ಕುಮಾರ್ ಮಾತನಾಡಿ, “ಇಂತಹ ಪ್ರಕರಣಗಳನ್ನು ವರದಿ ಮಾಡಲು ಎಲ್ಲ ಸಿಬ್ಬಂದಿಗೆ ಜಾಗೃತಿ ಮೂಡಿಸಲಾಗುವುದು. ಯಾವುದೇ ರೂಪದಲ್ಲಿ ಬಾಲ್ಯವಿವಾಹವನ್ನು ಬೆಂಬಲಿಸುವುದನ್ನು ಸಹಿಸಲಾಗುವುದಿಲ್ಲ” ಎಂದು ಹೇಳಿದರು.

ಏಪ್ರಿಲ್ 2024 ರಿಂದ ಮಾರ್ಚ್ 2025 ರವರೆಗೆ, ಕೃಷ್ಣಗಿರಿ ಜಿಲ್ಲೆಯಲ್ಲಿ ಒಟ್ಟು 545 ಹದಿಹರೆಯದ ಗರ್ಭಧಾರಣೆಯ ವರದಿಯಾಗಿದೆ. ಶೂಲಗಿರಿ (81), ಕೃಷ್ಣಗಿರಿ ಗ್ರಾಮೀಣ (72) ಮತ್ತು ಕೆಲಮಂಗಲಂ (66) ನಲ್ಲಿ ಅತಿ ಹೆಚ್ಚು ಸಂಖ್ಯೆಗಳು ದಾಖಲಾಗಿವೆ.

ಆಧಾರ್ ತಿರುಚುವಿಕೆ ಮತ್ತು ಬಾಲ್ಯವಿವಾಹದಲ್ಲಿ ಭಾಗಿಯಾಗಿರುವವರ ವಿರುದ್ಧ ತನಿಖೆ ನಡೆಸಲು ಮತ್ತು ಕ್ರಮ ಕೈಗೊಳ್ಳಲು ವಿಶೇಷ ತಂಡವನ್ನು ರಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿ. ದಿನೇಶ್ ಹೇಳಿದರು.

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ: ಸಿಎಂ ಕ್ಷೇತ್ರದಲ್ಲಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...