Homeಅಂತರಾಷ್ಟ್ರೀಯಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

- Advertisement -
- Advertisement -

ಉತ್ತರಪ್ರದೇಶದ ಬಾರಾಬಂಕಿ ಜಿಲ್ಲೆಯಿಂದ ಸುಮಾರು 20ರಿಂದ 25 ಯುವಕರು ಇಸ್ರೇಲ್‌ನಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಈಗ ಅವರು ಇಸ್ರೇಲ್ -ಇರಾನ್ ಸಂಘರ್ಷದಿಂದಾಗಿ ಪ್ರತಿದಿನ ಕ್ಷಿಪಣಿ ದಾಳಿಯ ಅಪಾಯವನ್ನು ಎದುರಿಸಬೇಕಾಗಿದೆ. ಭಾರತದಲ್ಲಿರುವ ಈ ಕಾರ್ಮಿಕರ ಕುಟುಂಬಗಳು ಕೂಡ ಈಗ ಆತಂಕದೊಂದಿಗೆ ಬದುಕು ದೂಡುವಂತಾಗಿದೆ.

ಪ್ರತಿ ಬಾರಿ ಇಸ್ರೆಲ್‌ನಲ್ಲಿರುವ ತಮ್ಮವರಿಗೆ ಕರೆ ಮಾಡುವಾಗ ಅಲ್ಲಿನ ಸೈರನ್‌ಗಳು ಅಥವಾ ಸ್ಫೋಟಗಳು ಕೇಳುತ್ತವೆ. ಇದರಿಂದಾಗಿ ನಮಗೆ ಭಯವಾಗುತ್ತಿದೆ ಎಂದು ದಿವಾನ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾಲೆಹ್ ನಗರ ಕಾಲೋನಿಯ ನಿವಾಸಿ ರಾಜು ಸಿಂಗ್ ಹೇಳಿದರು.

ಇಸ್ರೇಲ್‌ನಲ್ಲಿ ಕೆಲಸಮಾಡುತ್ತಿರುವವರಲ್ಲಿ ಸಾಲೆಹ್ ನಗರದಿಂದ ರಾಜು ಸಿಂಗ್ ಅವರ ಸೋದರಳಿಯ ಕೆ.ಪಿ.ಸಿಂಗ್, ಜನೀಂದ್ರ ಪ್ರತಾಪ್‌ ಸಿಂಗ್ (ಅವರ ಚಿಕ್ಕಪ್ಪನ ಮಗ), ಲಲಿತ್ ಸಿಂಗ್ (ಅವರ ಅಣ್ಣನ ಮಗ), ಮತ್ತು ನೆರೆಹೊರೆಯವರಾದ ಮೋನೋ, ಸಂಜಯ್, ಮಂಗಳ್ ಸಿಂಗ್ ಮತ್ತು ದಿನೇಶ್ ಸಿಂಗ್‌ ಸೇರಿದಂತೆ ಇತರರು ಇದ್ದಾರೆ. ಒಟ್ಟಾರೆ ಗ್ರಾಮದಿಂದ ಸುಮಾರು 20ರಿಂದ 25 ಯುವಕರು ಕಳೆದ ಒಂದು ವರ್ಷದಿಂದ ಕಾರ್ಮಿಕರಾಗಿ ಇಸ್ರೇಲ್‌ನಲ್ಲಿದ್ದಾರೆ.

ಅವರ ಮಾಸಿಕ ಸಂಬಳ 1 ಲಕ್ಷದಿಂದ 1.5 ಲಕ್ಷ ರೂಪಾಯಿಗಳವರೆಗೆ ಇದೆ. ಸಂಪಾದನೆ ಚೆನ್ನಾಗಿದೆ. ಆದರೆ ಪರಿಸ್ಥಿತಿ ತುಂಬಾ ಅಪಾಯಕಾರಿಯಾಗಿದೆ ಎಂದು ರಾಜು ಸಿಂಗ್ ವಿವರಿಸುತ್ತಾರೆ.

ತಮ್ಮ ಮಗ ರಾಕೇಶ್ ಕೂಡ ಸುಮಾರು ಒಂದು ವರ್ಷದಿಂದ ಇಸ್ರೇಲ್‌ನಲ್ಲಿದ್ದಾನೆ ಎಂದು ಕಾಲೋನಿಯ ಮತ್ತೊಬ್ಬ ನಿವಾಸಿ ವಿನೋದ್ ಸಿಂಗ್‌ ಹೇಳಿದರು.

ನನ್ನ ಮಗ ರಾಕೇಶ್ ನನಗೆ ಕರೆ ಮಾಡಿ ತಾವು ಎಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾನೆ ಎಂದು ವಿನೋದ್ ಸಿಂಗ್‌ ಹೇಳಿದರು. “ಸೈರನ್‌ಗಳು ಮೊಳಗಿದಾಗಲೆಲ್ಲಾ ನಾವು ತಕ್ಷಣ ಬಂಕರ್‌ಗಳಿಗೆ ಓಡುತ್ತೇವೆ. ಇಲ್ಲಿ ಪ್ರತಿದಿನ ಸುಮಾರು150ರಿಂದ 200 ಕ್ಷಿಪಣಿಗಳು ಬೀಳುತ್ತಿವೆ ಎಂದು ತನ್ನ ಮಗ ತಿಳಿಸಿದ್ದಾನೆ” ಎಂದು ವಿನೋದ್‌ ಮಾಹಿತಿ ನೀಡಿದರು.

ರಾಕೇಶ್‌ ಅವರು ಭಾರತದಲ್ಲಿರುವ ತನ್ನ ಕುಟುಂಬದೊಂದಿಗೆ ಕೆಲವು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಅವರ ಇಸ್ರೇಲ್‌ನ ಉದ್ಯೋಗದಾತರು ಕೆಲಸ ಸ್ಥಳದಿಂದ ವಿಡಿಯೋಗಳನ್ನು ಕಳುಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದಾರೆ. ಇವರು ಕಳುಹಿಸಿರುವ ಕೆಲ ವಿಡಿಯೋಗಳಲ್ಲಿ ಬಾಂಬ್‌ ದಾಳಿಗಳು ಮತ್ತು ಕ್ಷಿಪಣಿ ದಾಳಿ ನಡೆಯುತ್ತಿರುವುದು ನೋಡಬಹುದಾಗಿದೆ.

ಇವರೆಲ್ಲಾ ಕಳೆದ 4 ದಿನಗಳಿಂದ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದ್ದಾರೆ. ಯುದ್ದ ಎಂದರೆ ಯುದ್ಧ. ಅವರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದರೂ, ನಮಗೆ ನಮ್ಮದೆ ಆದ ಭಯವಿದೆ ಎಂದು ರಾಜು ಸಿಂಗ್ ಹೇಳಿದರು.

ಇಸ್ರೇಲ್‌ಗೆ ಭಾರತದ ಈ ಯುವ ಕಾರ್ಮಿಕರು ಹೋಗಿರುವುದು ಭಾರತ ಮತ್ತು ಇಸ್ರೇಲ್‌ ಸರಕಾರಗಳ ನಡುವಿನ ದೊಡ್ಡ ಒಪ್ಪಂದದ ಭಾಗವಾಗಿದೆ. ಇಸ್ರೇಲ್‌ನಲ್ಲಿ ಭಾರತೀಯ ನಿರ್ಮಾಣ ಕಾರ್ಮಿಕರನ್ನುನೇಮಿಸಿಕೊಳ್ಳಲು ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಭಾರತದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ಉತ್ತರಪ್ರದೇಶದ ಹಲವಾರು ಜಿಲ್ಲೆಗಳಿಂದ ನುರಿತ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸಿದೆ.

ತಮ್ಮ ಮಕ್ಕಳು ಅಲ್ಲಿ ಉತ್ತಮ ಸಂಬಳವನ್ನು ಗಳಿಸುತ್ತಾರೆ ಎಂದು ಕುಟಂಬಗಳು ಹೆಮ್ಮೆಪಡುತ್ತಿದ್ದರೂ, ನಡೆಯುತ್ತಿರುವ ಸಂಘರ್ಷದ ನಡುವೆ ಅವರ ಸುರಕ್ಷತೆಯ ಬಗ್ಗೆ ಚಿಂತಿಸುತ್ತಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...