Homeಮುಖಪುಟಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

ಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

- Advertisement -
- Advertisement -

ಭೋಪಾಲ್: ಸುಮಾರು ಎರಡು ವಾರಗಳ ಹಿಂದೆ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಜುನೈದ್ ಶಹಜಾದ್ (21) ಮಂಗಳವಾರ ಸಾವನ್ನಪ್ಪಿದ್ದಾನೆ.  ಇದೇ ಸಂದರ್ಭದಲ್ಲಿ ಹಲ್ಲೆಗೊಳಗಾಗಿದ್ದ ಅರ್ಮಾನ್ ಕೂಡ ಭೋಪಾಲ್‌ನ ಹಮೀದಿಯಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

ಇದೇ ಜೂನ್ 5ರಂದು ಜುನೈದ್ ಮತ್ತು ಅರ್ಮಾನ್ ಅವರು ರಾಯ್ಸೇನ್ ಜಿಲ್ಲೆಯ ಸਾਂಚಿಯ ಮೆಹ್‌ಗಾವ್ ಗ್ರಾಮದ ಬಳಿ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಗೆ ಸಿಕ್ಕಿಬಿದ್ದಿದ್ದರು. ಆಗ ಇವರಿಂದ ಥಳಿಸಲ್ಪಟ್ಟರು ಎಂದು ರಾಯ್ಸೇನ್ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಪಾಂಡೆ ಹೇಳಿದ್ದಾರೆ.

ನಾವು ಜುನೈದ್ ಮತ್ತು ಹಮೀದಿಯಾ ವಿರುದ್ಧ ಗೋ ಕಳ್ಳಸಾಗಣೆ ಪ್ರಕರಣ ದಾಖಲಿಸಿದ್ದೇವೆ. ಹಾಗೆಯೇ ಇವರನ್ನು ಥಳಿಸಿದ ಮೂರು ವ್ಯಕ್ತಿಗಳ ವಿರುದ್ಧ ಜೂನ್ 9ರಂದು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದೇವೆ. ಇದುವರೆಗಿನ ನಮ್ಮ ತನಿಖೆಯಲ್ಲಿ ಬಂಧಿತ ಮೂವರು ಬಜರಂಗದಳದೊಂದಿಗೆ ಯಾವುದೇ ಸಂಬಂಧ ಹೊಂದಿದ್ದಾರೆ ಎಂದು ಬೆಳಕಿಗೆ ಬಂದಿಲ್ಲ ಎಂದು ಪಾಂಡೆ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾವು ಈಗ ಸಾವನ್ನಪ್ಪಿರುವ ಜುನೈದ್‌ನ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಅದು ದೊರೆತ ಕೂಡಲೇ ಕೊಲೆ ಆರೋಪಗಳನ್ನು ಅನ್ವಯಿಸಲಾಗುವುದು. ಈಗ ಸಾವನ್ನಪ್ಪಿರುವ ಜುನೈದ್ ವಿರುದ್ಧ ಈ ಹಿಂದೆ ಗೋ ಕಳ್ಳಸಾಗಣೆಯ ಎರಡು ಪ್ರಕರಣಗಳು ದಾಖಲಾಗಿದ್ದವು ಎಂದು ಪಾಂಡೆ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರ್ಮಾನ್ ಡೈರಿ ನಡೆಸುತ್ತಿದ್ದಾನೆ. ನನ್ನ ಮಗ ಜುನೈದ್ ಪೊಲೀಸರು ಆರೋಪಿಸಿರುವಂತೆ ಗೋ ಕಳ್ಳಸಾಗಣೆ ಮಾಡುತ್ತಿರಲಿಲ್ಲ. ಬದಲಾಗಿ ಜಾನುವಾರು ವ್ಯಾಪಾರ ಮಾಡುತ್ತಿದ್ದನು ಎಂದು ಅರ್ಮಾನ್ ತಂದೆ ಜಾಫರುದ್ದೀನ್ ಹೇಳಿದ್ದಾರೆ.

ಜೂನ್ 5ರಂದು ಸುಮಾರು 2:30 ಕ್ಕೆ ಅರ್ಮಾನ್ ಮತ್ತು ನಾನು ವಿದಿಶಾದ ಧನೋರಾ ಗ್ರಾಮದಲ್ಲಿದ್ದೆವು. ಅಲ್ಲಿ ನಾವು ಅವನ ವ್ಯಾನಿಗೆ ಜಾನುವಾರುಗಳನ್ನು ತುಂಬಿಸಿ ಭೋಪಾಲ್‌ಗೆ ಹಿಂತಿರುಗುತ್ತಿದ್ದೆವು. ಮೆಹ್‌ಗಾವ್ ಬಳಿಯ ವಿದಿಶಾ-ಕೌಡಿ ರಸ್ತೆಯಲ್ಲಿರುವ ಶಾಲೆಯನ್ನು ದಾಟುತ್ತಿದ್ದಾಗ, ಸುಮಾರು 10-15 ಜನರು ನಮ್ಮ ವಾಹನವನ್ನು ಹಿಂದಿಕ್ಕಿ ನಿಲ್ಲಿಸಿದರು ಎಂದು ಘಟನೆಯ ನಂತರ ಸಾಂಚಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಜುನೈದ್ ಹೇಳಿದ್ದರು.

ಈ ಜನರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು. ಅವರಲ್ಲಿ ಕೆಲವರು ಅವರ ವಾಹನಗಳಲ್ಲಿ ದೊಣ್ಣೆಗಳನ್ನು ಸಹ ಇಟ್ಟುಕೊಂಡಿದ್ದರು. ಅವರು ಅರ್ಮಾನ್ ಮತ್ತು ನನ್ನನ್ನು ನಮ್ಮ ವಾಹನದಿಂದ ಹೊರಗೆ ಎಳೆದು, ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದೀರಿ ಎಂದು ಆರೋಪಿಸಿ, ಥಳಿಸಿದರು. ನಮ್ಮನ್ನು ಗುಂಪು ಥಳಿಸುತ್ತಲೇ ಘಟನೆಯನ್ನು ಚಿತ್ರೀಕರಿಸಿದೆ.  ಆ ನಂತರ ಗುಂಪು ನಮ್ಮನ್ನು ಅವರ ವ್ಯಾನಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಜುನೈದ್ ಹೇಳಿಕೆಯಲ್ಲಿ ತಿಳಿಸಿದ್ದರು.

ಈ ಘಟನೆಯ ವಿಡಿಯೋ ತುಣುಕುಗಳು ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ವಿಡಿಯೋ ತುಣುಕುಗಳಲ್ಲಿ ಜುನೈದ್ ಮತ್ತು ಅರ್ಮಾನ್ ಅವರನ್ನು ಗುಂಪೊಂದು ಥಳಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದ್ದರೂ ಮತ್ತು ಜುನೈದ್‌ನ ಹೇಳಿಕೆಯಲ್ಲಿ “ಜನರ ಗುಂಪು” ಎಂದು ಉಲ್ಲೇಖಿಸಿದ್ದರೂ ಕೇವಲ ಮೂವರು ಆರೋಪಿಗಳು ಮಾತ್ರ ಭಾಗಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...