Homeಮುಖಪುಟಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್

ಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್

- Advertisement -
- Advertisement -

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ರಮೇಶ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಅವರೊಂದಿಗೆ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮೃತ ಸಹೋದರನ ಅಂತ್ಯಸಂಸ್ಕಾರದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

40 ವರ್ಷದ ಬ್ರಿಟಿಷ್ ಉದ್ಯಮಿಯಾಗಿರುವ ವಿಶ್ವಾಸ್, ಮಂಗಳವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ತಾನು ಬದುಕುಳಿದಿದ್ದು ಹೇಗೆಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಶ್ವಾಸ್ ಅವರು ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ, ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ ವಿಮಾನ ನಿಲ್ದಾಣಕ್ಕೆ 9 ತಾಸುಗಳ ಪ್ರಯಾಣ ಮಾಡಬೇಕಾಗಿದ್ದ ವಿಮಾನವು ಟೇಕ್‌ಆಫ್‌ ಆದ ಕೆಲವೇ ಸೆಕೆಂಡ್‌ ಗಳಲ್ಲಿ ನಿಂತುಹೋಗಿತ್ತು (stalled) ಎಂದು ಹೇಳಿದ್ದರು.

ನನ್ನ ಆಸನ ಸಂಖ್ಯೆ 11ಎ, ವಿಮಾನದ ಎಡಭಾಗದಲ್ಲಿರುವ ತುರ್ತು ನಿರ್ಗಮನ ದ್ವಾರದ(ಎಮರ್ಜೆನ್ಸಿ ಡೋರ್) ಹತ್ತಿರವಿತ್ತು.  ಅದೃಷ್ಟವಶಾತ್, ನಾನು ಕುಳಿತಿದ್ದ ವಿಮಾನದ ಭಾಗವು ವಿಮಾನ ತುರ್ತು ಭೂಸ್ಪರ್ಶ ಮಾಡಿದ ನಂತರ ಹಾಸ್ಟೆಲ್ ಆವರಣದ ನೆಲಮಹಡಿಗೆ ಬಿದ್ದಿತು. ಅಲ್ಲಿ ವಿಮಾನದ ಬಾಗಿಲು ಮುರಿದಿರುವುದನ್ನು ನಾನು ನೋಡಿದೆ. ಆದರ ಮೂಲಕ ಹೊರಹೋಗಲು ಪ್ರಯತ್ನಿಸಬಹುದು ಎಂದು ನನಗೆ ನಾನೇ ಹೇಳಿಕೊಂಡೆ. ಕೊನೆಗೆ ನಾನು ವಿಮಾನದಿಂದ ಪಾರಾಗಿ ಹೊರಬಂದೆ ಎಂದು ವಿಶ್ವಾಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಮಾನ ಅಪಘಾತವಾದ ತಕ್ಷಣ ಸ್ಥಳೀಯರು ಚಿತ್ರೀಕರಿಸಿದ ವೈರಲ್ ವಿಡಿಯೋದಲ್ಲಿ ವಿಶ್ವಾಸ್ ಅವರು ಅಪಘಾತದಲ್ಲಿ ಗಾಯಗೊಂಡ ನಂತರ ಆಂಬ್ಯುಲೆನ್ಸ್ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಾಣುತ್ತದೆ.

ವಿಶ್ವಾಸ ಅವರ ಸಹೋದರ ಅಜಯ್ ಅವರ ಪಾರ್ಥಿವ ಶರೀರವನ್ನು ಡಿಎನ್‌ಎ ಪರೀಕ್ಷೆಯ ಮೂಲಕ ಗುರುತು ದೃಢಪಡಿಸಿದ ನಂತರ ಬುಧವಾರ ಮುಂಜಾನೆ ಕುಟುಂಬಕ್ಕೆ ಹಸ್ತಾಂತರಿಸಲಾಯಿತು ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಕೇಶ್ ಜೋಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಶ್ವಾಸ್ ಅವರ ಕುಟುಂಬವು ಈಗಾಗಲೇ ಇಂಗ್ಲೆಂಡಿನಿಂದ ಭಾರತಕ್ಕೆ ಬಂದಿಳಿದಿದೆ.  ವಿಶ್ವಾಸ್ ಅವರು ಚೇತರಿಸಿಕೊಂಡ ನಂತರ ಮಂಗಳವಾರ ಸಂಜೆ 7:30ಕ್ಕೆ ನಾವು ಅವರನ್ನುಬಿಡುಗಡೆಗೊಳಿಸಿದೆವು ಮತ್ತು ಅವರ ಸಹೋದರನ ಪಾರ್ಥಿವ ಶರೀರವನ್ನು ಡಿಎನ್‌ಎ ಹೊಂದಾಣಿಕೆಯಿಂದ ಗುರುತಿಸಿ, ನಂತರ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು ಎಂದು ಅವರು ಹೇಳಿದರು.

ದಿಯು ಕೇಂದ್ರಾಡಳಿತ ಪ್ರದೇಶದವರಾದ ವಿಶ್ವಾಸ್ ಮತ್ತು ಅಜಯ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ಸಮಯ ಕಳೆದ ನಂತರ ಲಂಡನ್‌ಗೆ ಹಿಂದಿರುಗುತ್ತಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ವಿಡಿಯೋದಲ್ಲಿ ದಿಯು ಜಿಲ್ಲೆಯ ಸ್ಮಶಾನಭೂಮಿಗೆ ತನ್ನ ಸಹೋದರನ ಪಾರ್ಥಿವ ಶರೀರವನ್ನು ವಿಶ್ವಾಸ್ ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಾಣುತ್ತದೆ.

ಅಜಯ್ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಳಿಗ್ಗೆ ದಿಯುನಲ್ಲಿ ಅವರ ಕುಟುಂಬ ನಡೆಸಿತು ಮತ್ತು ವಿಶ್ವಾಸ್ ಕೂಡ ಅಲ್ಲಿ ಉಪಸ್ಥಿತರಿದ್ದರು ಎಂದು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಜೂನ್ 12ರಂದು ಮಧ್ಯಾಹ್ನ 1:39 ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 242 ಪ್ರಯಾಣಿಕರೊಂದಿಗೆ ಹೊರಟ ಕೆಲವೇ ಕ್ಷಣಗಳಲ್ಲಿ ಅಹಮದಾಬಾದ್‌ನ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತು.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...