Homeಮುಖಪುಟಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್

ಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್

- Advertisement -
- Advertisement -

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ರಮೇಶ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಅವರೊಂದಿಗೆ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮೃತ ಸಹೋದರನ ಅಂತ್ಯಸಂಸ್ಕಾರದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

40 ವರ್ಷದ ಬ್ರಿಟಿಷ್ ಉದ್ಯಮಿಯಾಗಿರುವ ವಿಶ್ವಾಸ್, ಮಂಗಳವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ತಾನು ಬದುಕುಳಿದಿದ್ದು ಹೇಗೆಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಶ್ವಾಸ್ ಅವರು ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ, ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ ವಿಮಾನ ನಿಲ್ದಾಣಕ್ಕೆ 9 ತಾಸುಗಳ ಪ್ರಯಾಣ ಮಾಡಬೇಕಾಗಿದ್ದ ವಿಮಾನವು ಟೇಕ್‌ಆಫ್‌ ಆದ ಕೆಲವೇ ಸೆಕೆಂಡ್‌ ಗಳಲ್ಲಿ ನಿಂತುಹೋಗಿತ್ತು (stalled) ಎಂದು ಹೇಳಿದ್ದರು.

ನನ್ನ ಆಸನ ಸಂಖ್ಯೆ 11ಎ, ವಿಮಾನದ ಎಡಭಾಗದಲ್ಲಿರುವ ತುರ್ತು ನಿರ್ಗಮನ ದ್ವಾರದ(ಎಮರ್ಜೆನ್ಸಿ ಡೋರ್) ಹತ್ತಿರವಿತ್ತು.  ಅದೃಷ್ಟವಶಾತ್, ನಾನು ಕುಳಿತಿದ್ದ ವಿಮಾನದ ಭಾಗವು ವಿಮಾನ ತುರ್ತು ಭೂಸ್ಪರ್ಶ ಮಾಡಿದ ನಂತರ ಹಾಸ್ಟೆಲ್ ಆವರಣದ ನೆಲಮಹಡಿಗೆ ಬಿದ್ದಿತು. ಅಲ್ಲಿ ವಿಮಾನದ ಬಾಗಿಲು ಮುರಿದಿರುವುದನ್ನು ನಾನು ನೋಡಿದೆ. ಆದರ ಮೂಲಕ ಹೊರಹೋಗಲು ಪ್ರಯತ್ನಿಸಬಹುದು ಎಂದು ನನಗೆ ನಾನೇ ಹೇಳಿಕೊಂಡೆ. ಕೊನೆಗೆ ನಾನು ವಿಮಾನದಿಂದ ಪಾರಾಗಿ ಹೊರಬಂದೆ ಎಂದು ವಿಶ್ವಾಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಮಾನ ಅಪಘಾತವಾದ ತಕ್ಷಣ ಸ್ಥಳೀಯರು ಚಿತ್ರೀಕರಿಸಿದ ವೈರಲ್ ವಿಡಿಯೋದಲ್ಲಿ ವಿಶ್ವಾಸ್ ಅವರು ಅಪಘಾತದಲ್ಲಿ ಗಾಯಗೊಂಡ ನಂತರ ಆಂಬ್ಯುಲೆನ್ಸ್ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಾಣುತ್ತದೆ.

ವಿಶ್ವಾಸ ಅವರ ಸಹೋದರ ಅಜಯ್ ಅವರ ಪಾರ್ಥಿವ ಶರೀರವನ್ನು ಡಿಎನ್‌ಎ ಪರೀಕ್ಷೆಯ ಮೂಲಕ ಗುರುತು ದೃಢಪಡಿಸಿದ ನಂತರ ಬುಧವಾರ ಮುಂಜಾನೆ ಕುಟುಂಬಕ್ಕೆ ಹಸ್ತಾಂತರಿಸಲಾಯಿತು ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಕೇಶ್ ಜೋಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಶ್ವಾಸ್ ಅವರ ಕುಟುಂಬವು ಈಗಾಗಲೇ ಇಂಗ್ಲೆಂಡಿನಿಂದ ಭಾರತಕ್ಕೆ ಬಂದಿಳಿದಿದೆ.  ವಿಶ್ವಾಸ್ ಅವರು ಚೇತರಿಸಿಕೊಂಡ ನಂತರ ಮಂಗಳವಾರ ಸಂಜೆ 7:30ಕ್ಕೆ ನಾವು ಅವರನ್ನುಬಿಡುಗಡೆಗೊಳಿಸಿದೆವು ಮತ್ತು ಅವರ ಸಹೋದರನ ಪಾರ್ಥಿವ ಶರೀರವನ್ನು ಡಿಎನ್‌ಎ ಹೊಂದಾಣಿಕೆಯಿಂದ ಗುರುತಿಸಿ, ನಂತರ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು ಎಂದು ಅವರು ಹೇಳಿದರು.

ದಿಯು ಕೇಂದ್ರಾಡಳಿತ ಪ್ರದೇಶದವರಾದ ವಿಶ್ವಾಸ್ ಮತ್ತು ಅಜಯ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ಸಮಯ ಕಳೆದ ನಂತರ ಲಂಡನ್‌ಗೆ ಹಿಂದಿರುಗುತ್ತಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ವಿಡಿಯೋದಲ್ಲಿ ದಿಯು ಜಿಲ್ಲೆಯ ಸ್ಮಶಾನಭೂಮಿಗೆ ತನ್ನ ಸಹೋದರನ ಪಾರ್ಥಿವ ಶರೀರವನ್ನು ವಿಶ್ವಾಸ್ ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಾಣುತ್ತದೆ.

ಅಜಯ್ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಳಿಗ್ಗೆ ದಿಯುನಲ್ಲಿ ಅವರ ಕುಟುಂಬ ನಡೆಸಿತು ಮತ್ತು ವಿಶ್ವಾಸ್ ಕೂಡ ಅಲ್ಲಿ ಉಪಸ್ಥಿತರಿದ್ದರು ಎಂದು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಜೂನ್ 12ರಂದು ಮಧ್ಯಾಹ್ನ 1:39 ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 242 ಪ್ರಯಾಣಿಕರೊಂದಿಗೆ ಹೊರಟ ಕೆಲವೇ ಕ್ಷಣಗಳಲ್ಲಿ ಅಹಮದಾಬಾದ್‌ನ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತು.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...