Homeಮುಖಪುಟಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

ಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

- Advertisement -
- Advertisement -

ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟಿದ್ದ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಗುರುವಾರ (ಜೂ.19) ಮುಂಜಾನೆ ದೆಹಲಿಯಲ್ಲಿ ಬಂದಿಳಿದಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಟೆಹ್ರಾನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು. ಅವರಲ್ಲಿ 110 ಮಂದಿ ಗಡಿಯನ್ನು ದಾಟಿ ಅರ್ಮೇನಿಯಾಗೆ ತೆರಳಿದ್ದರು. ಮಂಗಳವಾರ ಭಾರತೀಯ ರಾಯಭಾರ ಕಚೇರಿಯು ‘ಆಪರೇಷನ್ ಸಿಂಧು’ ಅಡಿಯಲ್ಲಿ ಮಾಡಿದ ವ್ಯವಸ್ಥೆಗಳ ಮೂಲಕ ಅವರು ಭಾರತಕ್ಕೆ ಮರಳಿದ್ದಾರೆ.

ಹೆಚ್ಚಿನ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಹೇಳಿದ್ದಾರೆ.

“ನಮ್ಮಲ್ಲಿ ವಿಮಾನಗಳು ಸಿದ್ಧವಾಗಿವೆ. ಇಂದು ನಾವು ಮತ್ತೊಂದು ವಿಮಾನವನ್ನು ಕಳುಹಿಸುತ್ತೇವೆ. ನಾವು ತುರ್ಕಮೆನಿಸ್ತಾನದಿಂದ ಇನ್ನೂ ಕೆಲವು ಜನರನ್ನು ಸ್ಥಳಾಂತರಿಸುತ್ತಿದ್ದೇವೆ. ಸ್ಥಳಾಂತಗೊಳ್ಳಲು ಬಯಸುವ ಜನರು ಯಾವುದೇ ಮನವಿಗಾಗಿ ನಮ್ಮ 24 ಗಂಟೆಗಳು ಕಾರ್ಯಾಚರಿಸುವ ಸಹಾಯವಾಣಿಯನ್ನು ಸಂಪರ್ಕಿಸಬಹುದು. ಪರಿಸ್ಥಿತಿ ಬಿಗಡಾಯಿಸಿದರೆ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನಾವು ಹೆಚ್ಚಿನ ವಿಮಾನಗಳನ್ನು ಕಳುಹಿಸುತ್ತೇವೆ” ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರೂ ಆಗಿರುವ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತುರ್ಕಮೆನಿಸ್ತಾನ್ ಮತ್ತು ಅರ್ಮೇನಿಯಾ ಸರ್ಕಾರಗಳು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ದೆಹಲಿಗೆ ಬಂದಿಳಿದವರಲ್ಲಿ ಒಬ್ಬರಾದ ಕಾಶ್ಮೀರದ ವಿದ್ಯಾರ್ಥಿನಿ ವರ್ತಾ, “ಇರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಮೊದಲ ವ್ಯಕ್ತಿಗಳು ನಾವು. ಅಲ್ಲಿ ಪರಿಸ್ಥಿತಿ ತುಂಬಾ ಗಂಭೀರವಾಗಿತ್ತು. ನಾವು ಭಯಭೀತರಾಗಿದ್ದೆವು. ನಮ್ಮನ್ನು ಇಲ್ಲಿಗೆ ಕರೆತರಲು ಅತ್ಯಂತ ತ್ವರಿತವಾಗಿ ಕೆಲಸ ಮಾಡಿದ ಭಾರತ ಸರ್ಕಾರ ಮತ್ತು ಭಾರತೀಯ ರಾಯಭಾರ ಕಚೇರಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಮೇನಿಯನ್ ಅಧಿಕಾರಿಗಳು ಕೂಡ ತುಂಬಾ ಸಹಾಯಕ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.

ಜೂನ್ 13ರಂದು ಪ್ರಾರಂಭಗೊಂಡ ಇರಾನ್ ಮತ್ತು ಇಸ್ರೇಲ್ ಸಂಘರ್ಷ ಮುಂದುವರಿದಿದೆ. ಇತ್ತೀಚಿನ ವರದಿಗಳ ಪ್ರಕಾರ, ಟೆಹ್ರಾನ್‌ನಲ್ಲಿರುವ ಇರಾನ್‌ನ ಆಂತರಿಕ ಭದ್ರತಾ ಪ್ರಧಾನ ಕಚೇರಿಯನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಇರಾನ್‌ ಕೂಡ ಇಸ್ರೇಲ್ ಕಡೆಗೆ ಹೆಚ್ಚಿನ ಕ್ಷಿಪಣಿಗಳು ಹಾರಿಬಿಟ್ಟಿವೆ ಎಂದು ವರದಿಯಾಗಿದೆ.

ಎರಡೂ ದೇಶಗಳ ಸಂಘರ್ಷದಲ್ಲಿ ಅಮೆರಿಕದ ಮಿಲಿಟರಿ ಹಸ್ತಕ್ಷೇಪದ ಆಯ್ಕೆಗಳ ಬಗ್ಗೆ ಇನ್ನೂ ಯೋಚಿಸುತ್ತಿದ್ದೇವೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದಕ್ಕೂ ಮೊದಲು ಹೇಳಿಕೆ ನೀಡಿರುವ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ, “ಇರಾನ್ ತನ್ನ ಮೇಲೆ ಹೇರಲ್ಪಟ್ಟ ಯುದ್ದವನ್ನು ಒಪ್ಪಿಕೊಳ್ಳುವುದಿಲ್ಲ. ನಮ್ಮ ಮೇಲಿನ ಯಾವುದೇ ದಾಳಿಯು ಸರಿಪಡಿಸಲಾಗದ ಪರಿಣಾಮಗಳನ್ನು ಉಂಟು ಮಾಡಬಹುದು” ಎಂದು ಅಮೆರಿಕಕ್ಕೆ ಎಚ್ಚರಿಸಿದ್ದಾರೆ.

ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 240 ದಾಟಿದೆ. ಇದರಲ್ಲಿ 70 ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಇಸ್ರೇಲ್ ಮೇಲಿನ ಇರಾನ್ ದಾಳಿಯಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...