Homeಮುಖಪುಟಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

ಆಪರೇಷನ್ ಸಿಂಧು: ಸಂಘರ್ಷ ಪೀಡಿತ ಇರಾನ್‌ನಿಂದ ಭಾರತಕ್ಕೆ ಮರಳಿದ 110 ವಿದ್ಯಾರ್ಥಿಗಳು

- Advertisement -
- Advertisement -

ಸಂಘರ್ಷ ಪೀಡಿತ ಇರಾನ್‌ನಿಂದ ಅರ್ಮೇನಿಯಾಗೆ ಸ್ಥಳಾಂತರಿಸಲ್ಪಟ್ಟಿದ್ದ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಗುರುವಾರ (ಜೂ.19) ಮುಂಜಾನೆ ದೆಹಲಿಯಲ್ಲಿ ಬಂದಿಳಿದಿದೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಟೆಹ್ರಾನ್‌ನಲ್ಲಿದ್ದ ಭಾರತೀಯ ವಿದ್ಯಾರ್ಥಿಗಳನ್ನು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು. ಅವರಲ್ಲಿ 110 ಮಂದಿ ಗಡಿಯನ್ನು ದಾಟಿ ಅರ್ಮೇನಿಯಾಗೆ ತೆರಳಿದ್ದರು. ಮಂಗಳವಾರ ಭಾರತೀಯ ರಾಯಭಾರ ಕಚೇರಿಯು ‘ಆಪರೇಷನ್ ಸಿಂಧು’ ಅಡಿಯಲ್ಲಿ ಮಾಡಿದ ವ್ಯವಸ್ಥೆಗಳ ಮೂಲಕ ಅವರು ಭಾರತಕ್ಕೆ ಮರಳಿದ್ದಾರೆ.

ಹೆಚ್ಚಿನ ಜನರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಹೇಳಿದ್ದಾರೆ.

“ನಮ್ಮಲ್ಲಿ ವಿಮಾನಗಳು ಸಿದ್ಧವಾಗಿವೆ. ಇಂದು ನಾವು ಮತ್ತೊಂದು ವಿಮಾನವನ್ನು ಕಳುಹಿಸುತ್ತೇವೆ. ನಾವು ತುರ್ಕಮೆನಿಸ್ತಾನದಿಂದ ಇನ್ನೂ ಕೆಲವು ಜನರನ್ನು ಸ್ಥಳಾಂತರಿಸುತ್ತಿದ್ದೇವೆ. ಸ್ಥಳಾಂತಗೊಳ್ಳಲು ಬಯಸುವ ಜನರು ಯಾವುದೇ ಮನವಿಗಾಗಿ ನಮ್ಮ 24 ಗಂಟೆಗಳು ಕಾರ್ಯಾಚರಿಸುವ ಸಹಾಯವಾಣಿಯನ್ನು ಸಂಪರ್ಕಿಸಬಹುದು. ಪರಿಸ್ಥಿತಿ ಬಿಗಡಾಯಿಸಿದರೆ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ನಾವು ಹೆಚ್ಚಿನ ವಿಮಾನಗಳನ್ನು ಕಳುಹಿಸುತ್ತೇವೆ” ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಯ ರಾಜ್ಯ ಸಚಿವರೂ ಆಗಿರುವ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತುರ್ಕಮೆನಿಸ್ತಾನ್ ಮತ್ತು ಅರ್ಮೇನಿಯಾ ಸರ್ಕಾರಗಳು ನೀಡಿದ ಬೆಂಬಲಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ.

ದೆಹಲಿಗೆ ಬಂದಿಳಿದವರಲ್ಲಿ ಒಬ್ಬರಾದ ಕಾಶ್ಮೀರದ ವಿದ್ಯಾರ್ಥಿನಿ ವರ್ತಾ, “ಇರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಮೊದಲ ವ್ಯಕ್ತಿಗಳು ನಾವು. ಅಲ್ಲಿ ಪರಿಸ್ಥಿತಿ ತುಂಬಾ ಗಂಭೀರವಾಗಿತ್ತು. ನಾವು ಭಯಭೀತರಾಗಿದ್ದೆವು. ನಮ್ಮನ್ನು ಇಲ್ಲಿಗೆ ಕರೆತರಲು ಅತ್ಯಂತ ತ್ವರಿತವಾಗಿ ಕೆಲಸ ಮಾಡಿದ ಭಾರತ ಸರ್ಕಾರ ಮತ್ತು ಭಾರತೀಯ ರಾಯಭಾರ ಕಚೇರಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಮೇನಿಯನ್ ಅಧಿಕಾರಿಗಳು ಕೂಡ ತುಂಬಾ ಸಹಾಯಕ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.

ಜೂನ್ 13ರಂದು ಪ್ರಾರಂಭಗೊಂಡ ಇರಾನ್ ಮತ್ತು ಇಸ್ರೇಲ್ ಸಂಘರ್ಷ ಮುಂದುವರಿದಿದೆ. ಇತ್ತೀಚಿನ ವರದಿಗಳ ಪ್ರಕಾರ, ಟೆಹ್ರಾನ್‌ನಲ್ಲಿರುವ ಇರಾನ್‌ನ ಆಂತರಿಕ ಭದ್ರತಾ ಪ್ರಧಾನ ಕಚೇರಿಯನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿದೆ.

ಇರಾನ್‌ ಕೂಡ ಇಸ್ರೇಲ್ ಕಡೆಗೆ ಹೆಚ್ಚಿನ ಕ್ಷಿಪಣಿಗಳು ಹಾರಿಬಿಟ್ಟಿವೆ ಎಂದು ವರದಿಯಾಗಿದೆ.

ಎರಡೂ ದೇಶಗಳ ಸಂಘರ್ಷದಲ್ಲಿ ಅಮೆರಿಕದ ಮಿಲಿಟರಿ ಹಸ್ತಕ್ಷೇಪದ ಆಯ್ಕೆಗಳ ಬಗ್ಗೆ ಇನ್ನೂ ಯೋಚಿಸುತ್ತಿದ್ದೇವೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದಕ್ಕೂ ಮೊದಲು ಹೇಳಿಕೆ ನೀಡಿರುವ ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ, “ಇರಾನ್ ತನ್ನ ಮೇಲೆ ಹೇರಲ್ಪಟ್ಟ ಯುದ್ದವನ್ನು ಒಪ್ಪಿಕೊಳ್ಳುವುದಿಲ್ಲ. ನಮ್ಮ ಮೇಲಿನ ಯಾವುದೇ ದಾಳಿಯು ಸರಿಪಡಿಸಲಾಗದ ಪರಿಣಾಮಗಳನ್ನು ಉಂಟು ಮಾಡಬಹುದು” ಎಂದು ಅಮೆರಿಕಕ್ಕೆ ಎಚ್ಚರಿಸಿದ್ದಾರೆ.

ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 240 ದಾಟಿದೆ. ಇದರಲ್ಲಿ 70 ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಇಸ್ರೇಲ್ ಮೇಲಿನ ಇರಾನ್ ದಾಳಿಯಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...