Homeಕರ್ನಾಟಕಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ

ಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ

- Advertisement -
- Advertisement -

ಕರ್ನಾಟಕ ಸರ್ಕಾರವು 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ದೈನಂದಿನ ಕೆಲಸದ ಅವಧಿಯನ್ನು ಪ್ರಸ್ತುತ ಇರುವ 9 ಗಂಟೆಗಳಿಂದ 10 ಗಂಟೆಗಳಿಗೆ ಹೆಚ್ಚಿಸಲು ಮತ್ತು ಹೆಚ್ಚಿನ ಅಧಿಕಾವದಿ ಕೆಲಸದ ಸಮಯವನ್ನು (More overtime hours) ಅನುಮತಿಸಲು ಮುಂದಾಗಿದೆ.

ಏನಿದು ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961?

ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961 ರಾಜ್ಯದ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸದ ಅವಧಿ ಮತ್ತು ಕಾರ್ಮಿಕ ಪರಿಸ್ಥಿತಿಗಳನ್ನು ನಿಯಂತ್ರಿಸುವ ಕಾನೂನಾಗಿದೆ. ಇದು ನೌಕರರು ಎಷ್ಟು ಸಮಯ ಕೆಲಸ ಮಾಡಬಹುದು, ಅಧಿಕಾವಧಿ ಕೆಲಸ, ದಾಖಲೆಗಳ ನಿರ್ವಹಣೆ ಮತ್ತು ನಿಯಮಗಳ ಪಾಲನೆಗೆ ಕಾನೂನು ಚೌಕಟ್ಟನ್ನು ನಿಗದಿಪಡಿಸುತ್ತದೆ.

ಹೊಸ ತಿದ್ದುಪಡಿಯ ಉದ್ದೇಶವೇನು?

ಹೊಸ ತಿದ್ದುಪಡಿಯು ದಾಖಲೆ ನಿರ್ವಹಣೆ ಮತ್ತು ಪ್ರಮಾಣೀಕರಣದಂತಹ ಕಾರ್ಯವಿಧಾನಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಸಣ್ಣ ಸಂಸ್ಥೆಗಳಿಗೆ. ಈ ಕ್ರಮವು ವ್ಯವಹಾರ ಮಾಡುವ ಸುಲಭತೆಯನ್ನು ಹೆಚ್ಚಿಸುತ್ತದೆ. ಈಗಾಗಲೇ ಚಾಲ್ತಿಯಲ್ಲಿರುವ ಕೆಲಸದ ಸಮಯದ ಮಾದರಿಗಳನ್ನು ಕಾನೂನುಬದ್ಧಗೊಳಿಸುತ್ತದೆ ಎಂದು ಹೇಳಲಾಗುತ್ತಿದೆ.

ಕೆಲಸದ ಸಮಯವನ್ನು ದಿನಕ್ಕೆ 10 ಗಂಟೆಗಳಿಗೆ ಮತ್ತು ವಾರಕ್ಕೆ 48 ಗಂಟೆಗಳವರೆಗೆ ಹೆಚ್ಚಿಸುವುದು. ಓವರ್‌ಟೈಮ್ ಸೇರಿದಂತೆ ಒಟ್ಟು ಕೆಲಸದ ಅವಧಿಯನ್ನು ದಿನಕ್ಕೆ 12 ಗಂಟೆಗಳಿಗಿಂತ ನಿಗದಿಗೊಳಿಸುವುದು ತಿದ್ದುಪಡಿಯ ಪ್ರಮುಖ ಉದ್ದೇಶವಾಗಿದೆ.

ಒಬ್ಬ ಉದ್ಯೋಗಿ ಮೂರು ತಿಂಗಳ ನಿರಂತರ ಅವಧಿಯಲ್ಲಿ 144 ಗಂಟೆಗಳ ಕಾಲ ಅಧಿಕಾವಧಿ ಕೆಲಸ ಮಾಡಬಹುದು. ಪ್ರಸ್ತುತ ಇದು 50 ಗಂಟೆಗಳ ಅವಧಿಯನ್ನು ಹೊಂದಿದೆ. ಆದರೆ, 10 ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳು ಈ ಕಾಯ್ದೆಯಿಂದ ವಿನಾಯಿತಿ ಪಡೆಯಲಿವೆ.

ತಿದ್ದುಪಡಿಯಿಂದ ಯಾರಿಗೆ ಲಾಭ?

ಪ್ರಸ್ತಾವಿತ ತಿದ್ದುಪಡಿಯ ಅತಿದೊಡ್ಡ ಫಲಾನುಭವಿಗಳು ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ-ಸಕ್ರಿಯಗೊಳಿಸಿದ ಸೇವೆಗಳು (ಐಟಿ ಮತ್ತು ಐಟಿಇಎಸ್) ವಲಯದ ಕಂಪನಿಗಳಾಗಿರುತ್ತವೆ.

ಇವುಗಳಲ್ಲಿ ಸಾಫ್ಟ್‌ವೇರ್ ಸರ್ವಿಸ್, ಬ್ಯಾಕೆಂಡ್ ಐಟಿ ಆಪರೇಷನ್ಸ್, ಹಾರ್ಡ್‌ವೇರ್ ಸೇಲ್ಸ್ ಮತ್ತು ಅಂತಹುದೇ ಸೇವೆಗಳನ್ನು ನೀಡುವ ವ್ಯವಹಾರಗಳು ಸೇರಿವೆ. ಈ ಕಂಪನಿಗಳು ಕೆಲಸದ ಸಮಯದ ಔಪಚಾರಿಕ ವಿಸ್ತರಣೆ ಮತ್ತು ನಿಯಮಗಳ ಅನುಸರಣೆ ಹೊರೆಗಳನ್ನು ಸರಾಗಗೊಳಿಸುವುದರಿಂದ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

ಬೇರೆ ಯಾವ ರಾಜ್ಯಗಳು 10 ಗಂಟೆಗಳ ಕೆಲಸದ ಅವಧಿಯನ್ನು ಹೊಂದಿವೆ?

2019 ಮತ್ತು 2020ರಲ್ಲಿ ಕೇಂದ್ರ ಸರ್ಕಾರವು ಕೆಲಸದ ಅವಧಿಯನ್ನು ಹೆಚ್ಚಿಸಲು ಅವಕಾಶ ನೀಡುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಅಂಗೀಕರಿಸಿದ ನಂತರ, ಬಿಜೆಪಿ ಆಡಳಿತವಿರುವ ಛತ್ತೀಸ್‌ಗಢ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳು ಶಾಸನಗಳನ್ನು ಅಂಗೀಕರಿಸಿವೆ. ಇತ್ತೀಚೆಗೆ, ಆಂಧ್ರಪ್ರದೇಶ ಸಚಿವ ಸಂಪುಟವು ದೈನಂದಿನ ಕೆಲಸದ ಸಮಯವನ್ನು 10 ಗಂಟೆಗಳಿಗೆ ಹೆಚ್ಚಿಸಲು ಅನುಮೋದನೆ ನೀಡಿದೆ.

ಕಳವಳಗಳೇನು?

ಕಾನೂನಿಗೆ ತಿದ್ದುಪಡಿ ತರುವುದರಿಂದ, ಈಗ ಏನು ಕಾನೂನಿನ ಉಲ್ಲಂಘನೆಗಳು ಆಗುತ್ತಿವೆಯೂ ಅವುಗಳನ್ನು ಕಾನೂನುಬದ್ದಗೊಳಿಸದಂತೆ ಆಗುತ್ತದೆ. ಕಾರ್ಮಿಕ ಇಲಾಖೆಯಲ್ಲಿನ ಕಳಪೆ ಜಾರಿ ಕಾರ್ಯವಿಧಾನಗಳು ಮತ್ತು ಸಿಬ್ಬಂದಿ ಕೊರತೆಯಿಂದಾಗಿ ವೇತನ ಕಳ್ಳತನ ಸೇರಿದಂತೆ ಕಾರ್ಮಿಕರ ಶೋಷಣೆಗೆ ಕಾರಣವಾಗಬಹುದು ಎಂದು ಕಾರ್ಮಿಕ ಸಂಘಗಳು ವಾದಿಸುತ್ತಿವೆ.

ಹೆಚ್ಚಿದ ಕೆಲಸದ ಸಮಯಕ್ಕೆ ಅನುಗುಣವಾಗಿ ವೇತನವನ್ನು ಹೆಚ್ಚಿಸುವ ಬಗ್ಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿ ಸ್ಪಷ್ಟತೆ ಇಲ್ಲ ಎಂದು ಹೇಳಿವೆ.

ಕೆಐಟಿಯು ತೀವ್ರ ವಿರೋಧ

ಕೆಲಸ ಅವಧಿಯನ್ನು ಹೆಚ್ಚಿಸುವುದು ಸೇರಿದಂತೆ ಉದ್ಯೋಗಿಗಳು/ ಕಾರ್ಮಿಕರನ್ನು ಶೋಷಣೆ ಮಾಡಲು ಅನುವು ಮಾಡಿಕೊಡುವ ಪ್ರಸ್ತಾವಿತ ತಿದ್ದುಪಡಿಯನ್ನು ಕರ್ನಾಟಕ ರಾಜ್ಯ ಐಟಿ ಮತ್ತು ಐಟಿಇಎಸ್ ನೌಕರರ ಸಂಘ (ಕೆಐಟಿಯು) ತೀವ್ರವಾಗಿ ವಿರೋಧಿಸಿದೆ.

ಕೇಂದ್ರ ಸರ್ಕಾರ ಕೆಲಸದ ಅವಧಿಯನ್ನು ಹೆಚ್ಚಿಸಲು ಕಾನೂನಿಗೆ ತಿದ್ದುಪಡಿ ತಂದಾಗಿನಿಂದಲೂ ಕೆಐಟಿಯು ಅದನ್ನು ವಿರೋಧಿಸಿಕೊಂಡು ಬಂದಿತ್ತು. ಇದೀಗ ಕರ್ನಾಟಕ ಸರ್ಕಾರ ಕಾನೂನಿಗೆ ತಿದ್ದುಪಡಲು ಮುಂದಾಗಿರುವ ಹಿನ್ನೆಲೆ, ಕೆಐಟಿಯು ಹೇಳಿಕೆ ಬಿಡುಗಡೆ ಮಾಡಿದೆ. ಅದು ಹೀಗಿದೆ…

“ಕರ್ನಾಟಕ ರಾಜ್ಯ ಐಟಿ/ಐಟಿಇಎಸ್/ಬಿಪಿಒ ವಲಯದಲ್ಲಿ ಕೆಲಸದ ಸಮಯವನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸುವ ಕರ್ನಾಟಕ ಸರ್ಕಾರದ ಕ್ರಮವನ್ನು ವಿರೋಧಿಸಲು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಇಡೀ ಕಾರ್ಮಿಕ ವರ್ಗಕ್ಕೆ ಕರೆ ನೀಡಿದೆ.

“12ಗಂಟೆಗಳಿಗೆ ಕೆಲಸದ ಅವಧಿಯನ್ನು ಹೆಚ್ಚಿಸಲು ಅನುವು ಮಾಡಿಕೊಡುವ ಸಲುವಾಗಿ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯನ್ನು ತಿದ್ದುಪಡಿ ಮಾಡುವ ಪ್ರಸ್ತಾವನೆಯನ್ನು ಜೂನ್ 18 ರಂದು ಕಾರ್ಮಿಕ ಇಲಾಖೆಯು ಉದ್ಯಮದ ವಿವಿಧ ಪಾಲುದಾರರೊಂದಿಗೆ ನಡೆಸಿದ ಸಭೆಯಲ್ಲಿ ಮಂಡಿಸಲಾಗಿದೆ.”

“ಕಾರ್ಮಿಕ ಕಾರ್ಯದರ್ಶಿ ಮತ್ತು ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಐಟಿ/ಐಟಿಇಎಸ್‌ ವಲಯದ ಉದ್ಯೋಗಿಗಳನ್ನು ಪ್ರತಿನಿಧಿಸಿ, ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸುಹಾಸ್ ಅಡಿಗ, ಅಧ್ಯಕ್ಷ ವಿಜೆಕೆ ಮತ್ತು ಕಾರ್ಯದರ್ಶಿ ಲೆನಿಲ್ ಬಾಬು ಸಭೆಯಲ್ಲಿ ಭಾಗವಹಿಸಿದ್ದರು. ಯಾವುದೇ ಕಾರ್ಮಿಕನ ವೈಯಕ್ತಿಕ ಜೀವನವನ್ನು ಹೊಂದುವ ಮೂಲಭೂತ ಹಕ್ಕಿನ ಮೇಲೆ ದಾಳಿ ಮಾಡುವ ಪ್ರಸ್ತಾವಿತ ತಿದ್ದುಪಡಿಗೆ ಕೆಐಟಿಯು ಪ್ರತಿನಿಧಿಗಳು ಬಲವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.”

“ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯು 12 ಗಂಟೆಗಳ ಕೆಲಸದ ಅವಧಿಯನ್ನು ಸಾಮಾನ್ಯೀಕರಿಸಲು ಪ್ರಯತ್ನಿಸುತ್ತದೆ. ಅಸ್ತಿತ್ವದಲ್ಲಿರುವ ಕಾಯ್ದೆಯು ಅಧಿಕಾವಧಿ ಸೇರಿದಂತೆ ದಿನಕ್ಕೆ ಗರಿಷ್ಠ 10 ಗಂಟೆಗಳ ಕೆಲಸವನ್ನು ಮಾತ್ರ ಅನುಮತಿಸುತ್ತದೆ.”

“ಈ ತಿದ್ದುಪಡಿಯು ಕಂಪನಿಗಳು ಪ್ರಸ್ತುತ ಅಸ್ತಿತ್ವದಲ್ಲಿರುವ ಮೂರು ಶಿಫ್ಟ್ ವ್ಯವಸ್ಥೆಯ ಬದಲಿಗೆ ಎರಡು ಶಿಫ್ಟ್ ವ್ಯವಸ್ಥೆ ಅಳವಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಮತ್ತು ಮೂರನೇ ಒಂದು ಭಾಗದಷ್ಟು ಉದ್ಯೋಗಿಗಳನ್ನು ಅವರ ಉದ್ಯೋಗದಿಂದ ಹೊರಹಾಕಲಾಗುತ್ತದೆ.”

“ಸಭೆಯಲ್ಲಿ ಕೆಐಟಿಯು ಐಟಿ ಉದ್ಯೋಗಿಗಳಲ್ಲಿ ಹೆಚ್ಚಿನ ಕೆಲಸದ ಅವಧಿಯಿಂದ ಆರೋಗ್ಯದ ಮೇಲಿನ ಪರಿಣಾಮದ ಅಧ್ಯಯನಗಳನ್ನು ಎತ್ತಿ ತೋರಿಸಿದೆ. ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯದ ಕುರಿತಾದ ‘ರಾಜ್ಯ ಭಾವನಾತ್ಮಕ ಯೋಗಕ್ಷೇಮ ವರದಿ 2024’ ಭಾರತದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 90% ಕಾರ್ಪೊರೇಟ್ ಉದ್ಯೋಗಿಗಳು ಆತಂಕದಿಂದ ಹೋರಾಡುತ್ತಿದ್ದಾರೆ ಎಂದು ಬಹಿರಂಗಪಡಿಸಿದೆ.”

“ಐಟಿ ವಲಯದಲ್ಲಿ ಅತಿಯಾದ ಕೆಲಸದ ಒತ್ತಡದಿಂದಾಗಿ ಸಾವುಗಳು ಮತ್ತು ಆತ್ಮಹತ್ಯೆಗಳು ಸಾಮಾನ್ಯವಾಗುತ್ತಿವೆ. ಬೆಂಗಳೂರಿನಲ್ಲಿರುವ ಓಎಲ್ಎಯ ಕೃತಕ ಬುದ್ಧಿಮತ್ತೆ ಘಟಕದಲ್ಲಿ ಇತ್ತೀಚೆಗೆ ನಡೆದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರ ಆತ್ಮಹತ್ಯೆಯು ಈ ಪರಿಸ್ಥಿತಿಯನ್ನು ಒತ್ತಿಹೇಳುತ್ತದೆ. ಕೆಲಸದ ಸಮಯವನ್ನು ಹೆಚ್ಚಿಸುವುದರಿಂದ ಈ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಕರ್ನಾಟಕ ಸರ್ಕಾರವು ತನ್ನ ಕಾರ್ಪೊರೇಟ್ ಮುಖ್ಯಸ್ಥರನ್ನು ಮೆಚ್ಚಿಸುವ ಉನ್ಮಾದಲ್ಲಿ ದುಡಿಯು ಜನರ ಮೂಲಭೂತ ಹಕ್ಕನ್ನು, ಬದುಕುವ ಹಕ್ಕನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ.”

“ಕರ್ನಾಟಕ ಸರ್ಕಾರದ ಈ ತಿದ್ದುಪಡಿಯು, ಕಾರ್ಮಿಕರನ್ನು ಬದುಕಲು ವೈಯಕ್ತಿಕ ಮತ್ತು ಸಾಮಾಜಿಕ ಜೀವನದ ಅಗತ್ಯವಿರುವ ಮನುಷ್ಯರೆಂದು ಗುರುತಿಸಲು ಇಚ್ಛಿಸುವುದಿಲ್ಲ ಎಂಬುದನ್ನು ತೋರಿಸುತ್ತದೆ. ಬದಲಾಗಿ, ಅದು ಅವರನ್ನು ತಾನು ಸೇವೆ ಸಲ್ಲಿಸುವ ಕಾರ್ಪೊರೇಟ್‌ಗಳ ಲಾಭವನ್ನು ಹೆಚ್ಚಿಸುವ ಯಂತ್ರಗಳಾಗಿ ಮಾತ್ರ ನೋಡುತ್ತಿದೆ.”

“ಹೆಚ್ಚಿದ ಕೆಲಸದ ಸಮಯ ಉತ್ಪಾದಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಜಗತ್ತು ಒಪ್ಪಿಕೊಳ್ಳಲು ಪ್ರಾರಂಭಿಸಿರುವ ಸಮಯದಲ್ಲಿ ಈ ತಿದ್ದುಪಡಿ ಬಂದಿದೆ. ಹೆಚ್ಚಿನ ದೇಶಗಳು ಸಂಪರ್ಕ ಕಡಿತಗೊಳಿಸುವ ಹಕ್ಕನ್ನು (right to disconnect) ಪ್ರತಿಯೊಬ್ಬ ಉದ್ಯೋಗಿಯ ಮೂಲಭೂತ ಹಕ್ಕಾಗಿ ಗುರುತಿಸಲು ಕಾನೂನನ್ನು ಪರಿಚಯಿಸುತ್ತಿವೆ.”

“2024 ರಲ್ಲಿಯೂ ಸಹ, ಕರ್ನಾಟಕ ಸರ್ಕಾರವು ಐಟಿ ವಲಯದಲ್ಲಿ 14 ಗಂಟೆಗಳ ಕೆಲಸದ ಅವಧಿಯನ್ನು ಅನುಮತಿಸಲು ತಿದ್ದುಪಡಿಯನ್ನು ಪರಿಚಯಿಸುವ ಮೂಲಕ ಕೆಲಸದ ಸಮಯವನ್ನು ಹೆಚ್ಚಿಸಲು ಪ್ರಯತ್ನಿಸಿತ್ತು. ಆದರೆ, ಈ ಕ್ರಮವನ್ನು ಕೆಐಟಿಯು ಯಶಸ್ವಿಯಾಗಿ ವಿರೋಧಿಸಿತ್ತು. ಕೆಲಸದ ಅವಧಿಯನ್ನು ವಿಸ್ತರಿಸುವ ಹೊಸ ಒತ್ತಡವು ಕಾರ್ಮಿಕರ ಹಕ್ಕುಗಳಿಗಿಂತ ಕಾರ್ಪೊರೇಟ್ ಹಿತಾಸಕ್ತಿಗಳನ್ನು ಪೂರೈಸಲು ಸರ್ಕಾರದ ನಿರಂತರ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ.”

“ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಸರ್ಕಾರವು ಈ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸುತ್ತದೆ ಮತ್ತು ತಿದ್ದುಪಡಿಯನ್ನು ಮುಂದುವರಿಸುವ ಯಾವುದೇ ಪ್ರಯತ್ನವನ್ನು ಕರ್ನಾಟಕದ ಐಟಿ/ಐಟಿಇಎಸ್ ವಲಯದಲ್ಲಿ ಕೆಲಸ ಮಾಡುತ್ತಿರುವ 20 ಲಕ್ಷ ಉದ್ಯೋಗಿಗಳಿಗೆ ನೇರ ಸವಾಲಾಗಿ ನೋಡಲಾಗುತ್ತದೆ ಎಂದು ಎಚ್ಚರಿಸಿದೆ. ಆಧುನಿಕ ಗುಲಾಮಗಿರಿಯನ್ನು ನಮ್ಮ ಮೇಲೆ ಹೇರುವ ಈ ಅಮಾನವೀಯ ಪ್ರಯತ್ನವನ್ನು ವಿರೋಧಿಸಲು ಎಲ್ಲಾ ಐಟಿ/ಐಟಿಇಎಸ್ ಉದ್ಯೋಗಿಗಳು ಒಗ್ಗೂಡಿ ಒಟ್ಟಾಗಿ ನಿಲ್ಲಬೇಕೆಂದು ಕೆಐಟಿಯು ಕರೆ ನೀಡುತ್ತದೆ.”

ಸಿಐಟಿಯು ಖಂಡನೆ 

ಸರ್ಕಾರದ ಪ್ರಸ್ತಾವನೆಯನ್ನು ಸೆಂಟರ್ ಫಾರ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ವಿರೋಧಿಸಿದೆ. ಸಿಐಟಿಯು ಕೂಡ ಕೆಐಟಿಯು ರೀತಿ ಕೆಲಸದ ಅವಧಿಯನ್ನು ಆರಂಭದಿಂದಲೂ ವಿರೋಧಿಸಿಕೊಂಡು ಬಂದಿದೆ.

ನಾನುಗೌರಿ. ಕಾಂಗೆ ಪ್ರತಿಕ್ರಿಯೆ ನೀಡಿರುವ ಸಿಐಟಿಯು ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷೆ ಎಸ್‌. ವರಲಕ್ಷಿ ಅವರು, “ಕರ್ನಾಟಕ ಸರ್ಕಾರದ ನಡೆಯು ಐಟಿ/ಬಿಟಿ ಕಂಪನಿಗಳು ಸೇರಿದಂತೆ ವಾಣಿಜ್ಯ ಸಂಸ್ಥೆಗಳು ಪ್ರಸ್ತುತ ಕಾನೂನುಬಾಹಿರವಾಗಿ ಹೆಚ್ಚಿನ ಅವಧಿ ನೌಕರರನ್ನು ದುಡಿಸಿಕೊಳ್ಳುತ್ತಿದೆ. ಇದನ್ನು ಕಾನೂನು ಅನ್ವಯ ಮಾಡುತ್ತದೆ. ಓವರ್ ಡ್ಯೂಟಿ ಸೇರಿದಂತೆ 12 ಗಂಟೆಗಳ ಕೆಲಸದ ಅವಧಿ ಮೂರು ಶಿಫ್ಟ್‌ಗಳ ವ್ಯವಸ್ಥೆಯನ್ನು ಎರಡು ಶಿಫ್ಟ್‌ಗಳಿಗೆ ಬದಲಾಯಿಸುತ್ತದೆ. ಈ ಮೂಲಕ ಒಂದು ಶಿಫ್ಟಿನ ನೌಕರರು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಸರ್ಕಾರದ ಕರೆದ ಸಭೆಯಲ್ಲಿ ಎಲ್ಲಾ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ನಾವು ಸಿಐಟಿಯು ಕಡೆಯಿಂದ ಪ್ರಸ್ತಾವಿತ ತಿದ್ದುಪಡಿಗೆ ನಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದೇವೆ. ಜುಲೈ 9ರಂದು ನಡೆಯಲಿರುವ ಕಾರ್ಮಿಕ ಸಂಘಟನೆಗಳ ಪ್ರತಿಭಟನೆಯಲ್ಲಿ ನಾವು ಈ ವಿಷಯವನ್ನು ಸೇರಿಸಿದ್ದೇವೆ. ಅಲ್ಲದೆ, ಸರ್ಕಾರಕ್ಕೆ ನಮ್ಮ ಸಂಘಟನೆಯಿಂದ ಪತ್ರವನ್ನು ಬರೆದಿದ್ದೇವೆ ಎಂದು ತಿಳಿಸಿದ್ದಾರೆ.

ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...