Homeಮುಖಪುಟಆಡುಕಾಯುವ ಹುಡುಗಿ ಗೋದಾವರಿ ಗಂಟಿಚೋರ ಸಮುದಾಯದ ಧ್ವನಿಯಾದದ್ದು..

ಆಡುಕಾಯುವ ಹುಡುಗಿ ಗೋದಾವರಿ ಗಂಟಿಚೋರ ಸಮುದಾಯದ ಧ್ವನಿಯಾದದ್ದು..

- Advertisement -
- Advertisement -

| ಎಲೆಮರೆ-10 |

ನಾನಿಲ್ಲಿ ಪರಿಚಯಿಸುತ್ತಿರುವ ಗೋದಾವರಿ ಅವರದು ದೊಡ್ಡ ಹೆಸರೇನಲ್ಲ. ಯಾವ ಹೋರಾಟಗಾರರ ಪಟ್ಟಿಯಲ್ಲಿಯೂ ಅವರ ಹೆಸರು ಸಿಗುವುದಿಲ್ಲ, ಬದಲಾಗಿ ತೀರಾ ಸಾಮಾನ್ಯ ಸಾದಾಸೀದಾ ಮಹಿಳೆ. ವಯಸ್ಸು ಮಾಗಿದರೂ, ಗಂಟಿಚೋರ ಸಮುದಾಯವನ್ನು ಅಪರಾಧಿಗಳಂತೆ ಕಾಣುವ ಸಮಾಜದ ಬಗೆಗಿನ ಸಿಟ್ಟು ಅವರನ್ನು ಹೆಚ್ಚು ಕ್ರಿಯಾಶೀಲವಾಗಿಟ್ಟಿದೆ. 65 ವರ್ಷದ ಆಸುಪಾಸಿನ ಗೋದಾವರಿ ಅವರು ಏಳೆಂಟು ವರ್ಷಗಳಿಂದ ತಮ್ಮ ಊರಾದ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಬೆಂಡವಾಡದಲ್ಲಿ ನೆಲೆಸಿ ತನ್ನ ಗಂಟಿಚೋರ ಸಮುದಾಯದಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಬದುಕು ಕಲಿಸಿದ ಪಾಠವೇ ಅವರಲ್ಲಿ ಹೋರಾಟದ ಪ್ರಜ್ಞೆಯನ್ನು ರೂಪಿಸಿದೆ. ನಮ್ಮ ಹಕ್ಕುಗಳನ್ನು ಹೋರಾಟ ಮಾಡಿಯೇ ಪಡೆಯಬೇಕಿದೆ ಎನ್ನುವ ಅರಿವನ್ನು ಸಮುದಾಯದ ಮಹಿಳೆಯರಲ್ಲಿ ಯುವ ಜನತೆಯಲ್ಲಿ ಬಿತ್ತಲು ಶ್ರಮಿಸುತ್ತಿದ್ದಾರೆ.

ಗೋದಾವರಿ ಪುಟ್ಟ ಹುಡುಗಿಯಾಗಿದ್ದಾಗ ಗಂಟಿಚೋರ ಸಮುದಾಯ ದಟ್ಟ ದಾರಿದ್ರ್ಯ ಸ್ಥಿತಿಯಲ್ಲಿತ್ತು. ಈ ದಾರಿದ್ರ್ಯವೇ ಕುಲಕಸಬಾಗಿದ್ದ `ತುಡುಗು’(ಕಳ್ಳತನ) ಮಾಡಲು ಹಚ್ಚುತ್ತಿತ್ತು. ತುಡುಗು ಮಾಡುವ ಇವರ ಚಾಕಚಕ್ಯತೆ ಬೆರಗು ಹುಟ್ಟಿಸುವಂತಿತ್ತು. ತುಡುಗು ಮಾಡಿ ಸಿಕ್ಕಾಗ ಪೊಲೀಸರ ಹೊಡೆತ ಹಿಂಸೆ ಅವರ ಕುಟುಂಬವನ್ನು ದುಃಖದ ಕಡಲಲ್ಲಿ ತೇಲಿಸುತ್ತಿತ್ತು. ಇಂತಹ ಎಲ್ಲಾ ಸಂಗತಿಗಳನ್ನು ಕಣ್ತುಂಬಿಕೊಳ್ಳುತ್ತಲೇ ಗೋದಾವರಿ ಅವರು ಬೆಂಡವಾದಲ್ಲಿ ತನ್ನ ಬಾಲ್ಯ ಕಳೆದರು. ಮನೆ ಪರಿಸ್ಥಿತಿ ಸಹಕರಿಸದಿದ್ದರೂ 2ನೇ ತರಗತಿಯವರೆಗೆ ಶಾಲೆಗೆ ಹೋಗುತ್ತಿದ್ದ ಹುಡುಗಿಯನ್ನು ಶಾಲೆ ಬಿಡಿಸಿ ಆಡು ಕುರಿ ಕಾಯಲು ಹಚ್ಚಿದರು. ಆಗ ಗೋದಾವರಿ ಬಿಸಿಲು ಮಳೆ ಚಳಿಯೆನ್ನದೆ ಆಡು ಕಾಯುವ ಹುಡುಗಿಯಾಗಿ ಹೊಲ, ಕಾಡುಮೇಡುಗಳನ್ನು ಅಲೆದಳು. ಆದಾಗ್ಯೂ ಓದಬೇಕೆನ್ನುವ ಒಡಲೊಳಗಣ ಕಿಚ್ಚು ನಿಧಾನಕ್ಕೆ ಜಾಗೃತವಾಗತೊಡಗಿತು.

ಇಂತಹ ಸಂದರ್ಭದಲ್ಲಿ ಹತ್ತು ವರ್ಷ ತುಂಬುವ ಹೊತ್ತಿಗಾಗಲೆ ಮನೆಯವರು ಮದುವೆಗೆ ತಯಾರಿ ನಡೆಸಿದರು. ಮದುವೆಯಾಗಿ ಮಕ್ಕಳಿದ್ದ ಮಹಾರಾಷ್ಟ್ರದ ಗಂಡಿನೊಂದಿಗೆ ಬಾಲ್ಯವಿವಾಹ ನಡೆಯಿತು. ಕಿತ್ತು ತಿನ್ನುವ ಬಡತನದ ನೆರಳಲ್ಲಿ ಈ ಮದುವೆಯನ್ನು ತಿರಸ್ಕರಿಸುವ ಶಕ್ತಿಯಾಗಲಿ ತಿಳಿವಳಿಕೆಯಾಗಲಿ ಗೋದಾವರಿಗಿನ್ನೂ ಬಂದಿರಲಿಲ್ಲ. ಅದೇಕೋ ಹೊಂದಾಣಿಕೆಯಾಗದೆ ಗೋದಾವರಿ ಮದುವೆಯಾದವನ ಜತೆ ಬಾಳಲಿಕ್ಕಾಗದೆ ತನ್ನೂರಲ್ಲೇ ಉಳಿದರು. ಈ ಹೊತ್ತಿನಲ್ಲಿ ಕಲಿಯಬೇಕೆನ್ನುವ ತನ್ನೊಳಗಿನ ಹಂಬಲ ಮತ್ತೆ ಚಿಗುರೊಡೆಯಿತು. ಇಂತಹ ಸಂದರ್ಭದಲ್ಲಿ ಗೋದಾವರಿಯ ತಾಯಿಯೆ ಬೆಳಗಾವಿಯ ಅನಾಥ ಹೆಣ್ಣುಮಕ್ಕಳ ರಕ್ಷಣೆಯ ತಾಣವಾಗಿದ್ದ ಸ್ತ್ರೀಸೇವಾನಿಕೇತನಕ್ಕೆ ಸೇರಿದರು. ಹೀಗಿರುವಾಗ ಇಲ್ಲಿ ಆಶ್ರಯ ಪಡೆದ ಹುಡುಗಿಯರನ್ನು ಅವರ ಆಸಕ್ತಿಗನುಸಾರವಾಗಿ ಬೇರೆಬೇರೆ ಜಿಲ್ಲಾ ಸ್ತ್ರೀಸೇವಾನಿಕೇತನ ಕೇಂದ್ರಗಳಿಗೆ ವರ್ಗ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಬಳ್ಳಾರಿಯ ಹಾಸ್ಟೆಲ್ ಚೆನ್ನಾಗಿದೆ, ಓದಿಸುತ್ತಾರೆ, ಕಸೂತಿ ಟೈಲರಿಂಗ್ ಕಲಿಸುತ್ತಾರೆ, ವಾರ್ಡನ್ ಒಳ್ಳೆಯವರು ಇತ್ಯಾದಿ ಸಂಗತಿಗಳ ಕೇಳಿತಿಳಿದಿದ್ದ ಗೋದಾವರಿ ಬಳ್ಳಾರಿಯನ್ನು ಆಯ್ಕೆ ಮಾಡಿಕೊಂಡು ವರ್ಗವಾದರು. ಬಳ್ಳಾರಿಗೆ ಬಂದದ್ದು ಕೂಡ ಗೋದಾವರಿ ಅವರ ಜೀವನದಲ್ಲಿ ಮತ್ತೊಂದು ತಿರುವು. ಕಾರಣ ಬಳ್ಳಾರಿಯ ಸ್ತ್ರೀಸೇವಾನಿಕೇತನದಲ್ಲಿಯೇ ಅರ್ಧಕ್ಕೆ ನಿಂತ ಶಿಕ್ಷಣವನ್ನು ಮುಂದುವರೆಸಿದರು. ಇನ್ನು ಏಳನೆ ತರಗತಿ ಮುಗಿಸುವ ಹೊತ್ತಿಗೆ ಡಿ ದರ್ಜೆ ನೌಕರರೊಬ್ಬರ ಅಕಾಲಿಕ ಮರಣದಿಂದ ತೆರವಾದ ಪಿ.ಸಿ.ಡಬ್ಲು ಎನ್ನುವ (ಪ್ಯಾಕಿಂಗ್ ಕ್ಲೀನಿಂಗ್ ವಾಚಿಂಗ್) ಎಂಬ ನೌಕರಿಯೂ ಸಿಕ್ಕಿತು.

ಗೋದಾವರಿ ಅವರು ಕೆಲಸ ಮಾಡುತ್ತಿದ್ದ ಸ್ತ್ರೀಸೇವಾನಿಕೇತನ ಬುದ್ಧಿಹೀನ ಹುಡುಗಿಯರು, ಗಂಡ ಸತ್ತವರು, ಜೈಲುಗಳಿಂದ ಬಿಡುಗಡೆಗೊಂಡ ತನ್ನವರಿಂದ ತಿರಸ್ಕøತರಾದ ಮಹಿಳೆಯರು, ಮನೆಬಿಟ್ಟು ಪ್ರೀತಿಸಿ ಮದುವೆಯಾಗಿ ಹುಡುಗರಿಂದ ವಂಚಿತರಾದವರು. ಹೀಗೆ ಅನಾಥ ಮಹಿಳೆಯರಿಗೆ ಆಶ್ರಯತಾಣವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸ್ತ್ರೀ ಸೇವಾನಿಕೇತನದಲ್ಲಿ ಇಂತಹ ನೊಂದ ಮಹಿಳೆಯರ ಸಂಗಾತಿಯಾಗಿ ಗೋದಾವರಿ ಅವರು ಕೆಲಸ ಮಾಡಿದರು. ಒಂದು ರೀತಿಯಲ್ಲಿ ಪರಿತ್ಯಕ್ತ ಅನಾಥ ಮಹಿಳೆಯರಿಗೆ ತಾಯಿಯ ಹಾಗೆ ಅವರ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತರು. ಯಾವ ಬಗೆಯ ನಿರ್ಗತಿಕ ಸ್ಥಿತಿಯ ಕಾರಣಕ್ಕೆ ಗೋದಾವರಿ ಬೆಳಗಾವಿಯ ಸ್ತ್ರೀ ಸೇವಾನಿಕೇತನದಲ್ಲಿ ಸೇರಿದ್ದರೋ ಅಂತಹದ್ದೇ ಅನಾಥ ಮಹಿಳೆಯರ ಪೋಷಣೆಯ ಕೆಲಸಕ್ಕಾಗಿಯೇ ಅವರು ತನ್ನ ಜೀವನವನ್ನು ಮುಡುಪಾಗಿಟ್ಟರು.

ಗೋದಾವರಿ ಅವರಿಗೆ ಕೆಲಸ ಕೊಟ್ಟು ಆಶ್ರಯ ನೀಡಿದವರು ಆಗಿನ ಸ್ತ್ರೀಸೇವಾನಿಕೇತನದ ವಾರ್ಡನ್ ಆಗಿದ್ದ ಕಾವೇರಿ. ಇವರು ಕೊಡಗಿನ ಜನರಲ್ ಕಾರಿಯಪ್ಪ ಅವರ ಸೊಸೆ. ಇವರು ಮಹಿಳೆಯರಲ್ಲಿ ಸದಾ ಧೈರ್ಯ ತುಂಬುವ, ಉತ್ಸಾಹ ಹೆಚ್ಚಿಸುವ ಮಾತುಗಳನ್ನು ಆಡುತ್ತಿದ್ದರು. ಅವರು ಮಹಿಳೆಯರ ಒಳಗೆ ಒಂದು ಬಗೆಯ ಧೈರ್ಯವನ್ನು ತುಂಬುವ ಮಾತುಗಳನ್ನು ಆಡುತ್ತಿದ್ದರು. ಜಗತ್ತಿನ ಮಹಿಳಾ ಸಾಧಕಿಯರ ಬಗ್ಗೆ ಪರಿಚಯಿಸುತ್ತಿದ್ದರು. ಮಹಿಳೆಯರಿಗಿರುವ ಸಂವಿಧಾನಿಕ ಹಕ್ಕುಗಳ ಬಗ್ಗೆ ಪರಿಚಯಿಸುತ್ತಿದ್ದರು. ಈ ಮಾತುಗಳನ್ನು ಕೇಳುತ್ತಾ ಗೋದಾವರಿ ಒಳಗೊಂದು ಜಾಗೃತ ಮನಸ್ಸು ರೂಪುಗೊಳ್ಳತೊಡಗಿತು. ಈ ಮೂಲಕ ಅಂಬೇಡ್ಕರ್ ಮೊದಲಾದವರ ವಿಚಾರಗಳು ಓದದೆಯೂ ಗೋದಾವರಿ ಅವರ ಒಳಗೆ ವೈಚಾರಿಕತೆಯನ್ನು ರೂಪಿಸತೊಡಗಿತು. ಇವರ ಸೇವೆಯನ್ನು ಗುರುತಿಸಿ 2008 ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಳ್ಳಾರಿಯ ಜಿಲ್ಲಾ ಪಂಚಾಯಿತಿಯು ಕಿತ್ತೂರುರಾಣಿ ಚೆನ್ನಮ್ಮನ ಹೆಸರಿನ ಪ್ರಶಸ್ತಿ ನೀಡಿ ಗೌರವಿಸಿತು. ಸ್ವಂತಕ್ಕೆ ಮಕ್ಕಳಿಲ್ಲದ ಬೇಸರ ಎಂದೂ ಕಾಡಲಿಲ್ಲ. ಬಳ್ಳಾರಿಯಲ್ಲಿರುವಷ್ಟು ದಿನ ಸೇವಾನಿಕೇತನದ ಹುಡುಗಿಯರೇ ನನಗೂ ಮಕ್ಕಳಾಗಿದ್ದರು. ಇದೀಗ ಬೆಂಡವಾಡದ ಗಂಟಿಚೋರ ಸಮುದಾಯವೇ ನನ್ನ ಕುಟುಂಬ ಇದ್ದಹಾಗೆ ಎಂದು ಭಾವಿಸುತ್ತಾರೆ.

ಹಿಂದೆ ಗಂಟಿಚೋರ ಸಮುದಾಯದವರು ಪಟ್ಟ ಪಡಿಪಾಟಲನ್ನು ಹೇಳುವಾಗ ಗೋದಾವರಿ ಅವರ ಕಣ್ಣು ನೀರಾಗುತ್ತವೆ. ತನ್ನ ಸಮುದಾಯ ಪಟ್ಟಿರಬಹುದಾದ ಪಾಡನ್ನು ಹೇಳುವಾಗ ದುಃಖದ ಕಡಲೊಡೆದಂತೆ ಬಿಕ್ಕಳಿಸುತ್ತಾರೆ. ಈಚೆಗೆ ಬಾಲೆಹೊಸೂರಲ್ಲಿ ಸವರ್ಣೀಯರ ಗಲಭೆಯಲ್ಲಿ ಗಂಟಿಚೋರ ಸಮುದಾಯದ ವ್ಯಕ್ತಿಯ ಕೊಲೆಯಾಗಿ ಸಮುದಾಯವನ್ನು ಹಿಂಸೆಗೆ ಒಳಗುಮಾಡಿದ್ದನ್ನು ವಿರೋಧಿಸಿ ಈ ಸಮುದಾಯ ಒಗ್ಗಟ್ಟಾಗಿ ಪ್ರತಿಭಟಿಸಿತು. ಬೆಳಗಾವಿಯ ಅಧಿವೇಶನ ನಡೆಯುವ ಸಂದರ್ಭದಲ್ಲಿ ಈ ಸಮುದಾಯ ಒಟ್ಟಾಗಿ ತನ್ನ ಪ್ರತಿರೋಧವನ್ನು ದಾಖಲಿಸಿತು. ಈ ಸಂದರ್ಭದಲ್ಲಿ ಗೋದಾವರಿ ಅವರು ಸಮುದಾಯದ ಪ್ರತಿನಿಧಿಯಾಗಿ ಗಟ್ಟಿಧ್ವನಿಯಲ್ಲಿ ಪ್ರಭುತ್ವವನ್ನು ಪ್ರಶ್ನಿಸಿದ್ದರು.

ಗೋದಾವರಿ ನಿವೃತ್ತಿ ನಂತರ ತಾನು ಬೆಳೆದ ತನ್ನ ಹುಟ್ಟೂರಾದ ಬೆಂಡವಾಡಕ್ಕೆ ಮರಳಿ ಬಂದು ನೆಲೆಸಿದ್ದೂ ಕೂಡ ಪ್ರತಿಭಟನೆಯ ಸಂಕೇತವೆ ಎನ್ನುತ್ತಾರೆ. ನೀವು ಬಳ್ಳಾರಿಯಿಂದ ಹಳ್ಳಿಗೆ ಮರಳಿದ್ಯಾಕೆ ಎಂದರೆ, `ನನ್ನ ತಂದೆಯ ಊರಿನಲ್ಲಿಯೇ ನೆಲೆಯೂರಬೇಕೆಂಬ ಆಸೆ ಒಂದಾದರೆ ನಮ್ಮ ಗಂಟಿಚೋರ ಸಮುದಾಯವನ್ನು ಜಾಗೃತಗೊಳಿಸಬೇಕು. ನಿರಂತರ ಅನ್ಯಾಯಕ್ಕೆ ಒಳಗಾಗುವ ಈ ಸಮುದಾಯದಲ್ಲಿ ಹೋರಾಟದ ಮನೋಭಾವವನ್ನು ಮೂಡಿಸಬೇಕು ಎನ್ನುತ್ತಾರೆ. ಗಂಟಿಚೋರ ಸಮುದಾಯದಲ್ಲೂ ಕೂಡ ಸ್ಥಿತಿವಂತರಿದ್ದಾರೆ ಎನ್ನುವುದು ಬೇರೆ ಮೇಲಿನ ಜಾತಿಗಳವರಿಗೆ ತಿಳಿಯಲಿ ಎಂದೇ ನನ್ನ ಹೊಸ ಮನೆಯನ್ನು ಇಲ್ಲಿ ಕಟ್ಟಿಸಿದ್ದು. ಈಗ ನನ್ನ ಮನೆಯೇ ಇಲ್ಲಿನ ಗಂಟಿಚೋರ ಸಮುದಾಯದ ಹೋರಾಟಕ್ಕೆ ಒಂದು ಕೇಂದ್ರವಾಗಿದೆ. ನಮ್ಮ `ಗಂಟಿಚೋರ ಸಮಾಜ ಕ್ಷೇಮಾಭಿವೃದ್ಧಿ ಸೇವಾ ಸಂಘ’ ರೂಪುಗೊಂಡದ್ದು ಈ ಮನೆಯಲ್ಲಿಯೇ ಎನ್ನುತ್ತಾರೆ. ಹೀಗೆ ಅಕ್ಷರದ ಬೆಳಕಿನಲ್ಲಿ ಪುಟ್ಟ ಸರಕಾರಿ ಕೆಲಸ ಮಾಡಿ ನಿವೃತ್ತಿ ಹೊಂದಿ, ಮರಳಿ ತನ್ನದೇ ಸಮುದಾಯದ ಹಕ್ಕೊತ್ತಾಯಕ್ಕಾಗಿ ದುಡಿಯುವವರ ಸಂಖ್ಯೆ ವಿರಳ. ಹೀಗಾಗಿ ಗೋದಾವರಿ ಅವರ ಸಮುದಾಯ ಪರವಾದ ಈ ಚಟುವಟಿಕೆಗಳಿಗೆ ಮಹತ್ವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...