Homeಮುಖಪುಟಆಡುಕಾಯುವ ಹುಡುಗಿ ಗೋದಾವರಿ ಗಂಟಿಚೋರ ಸಮುದಾಯದ ಧ್ವನಿಯಾದದ್ದು..

ಆಡುಕಾಯುವ ಹುಡುಗಿ ಗೋದಾವರಿ ಗಂಟಿಚೋರ ಸಮುದಾಯದ ಧ್ವನಿಯಾದದ್ದು..

- Advertisement -
- Advertisement -

| ಎಲೆಮರೆ-10 |

ನಾನಿಲ್ಲಿ ಪರಿಚಯಿಸುತ್ತಿರುವ ಗೋದಾವರಿ ಅವರದು ದೊಡ್ಡ ಹೆಸರೇನಲ್ಲ. ಯಾವ ಹೋರಾಟಗಾರರ ಪಟ್ಟಿಯಲ್ಲಿಯೂ ಅವರ ಹೆಸರು ಸಿಗುವುದಿಲ್ಲ, ಬದಲಾಗಿ ತೀರಾ ಸಾಮಾನ್ಯ ಸಾದಾಸೀದಾ ಮಹಿಳೆ. ವಯಸ್ಸು ಮಾಗಿದರೂ, ಗಂಟಿಚೋರ ಸಮುದಾಯವನ್ನು ಅಪರಾಧಿಗಳಂತೆ ಕಾಣುವ ಸಮಾಜದ ಬಗೆಗಿನ ಸಿಟ್ಟು ಅವರನ್ನು ಹೆಚ್ಚು ಕ್ರಿಯಾಶೀಲವಾಗಿಟ್ಟಿದೆ. 65 ವರ್ಷದ ಆಸುಪಾಸಿನ ಗೋದಾವರಿ ಅವರು ಏಳೆಂಟು ವರ್ಷಗಳಿಂದ ತಮ್ಮ ಊರಾದ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಬೆಂಡವಾಡದಲ್ಲಿ ನೆಲೆಸಿ ತನ್ನ ಗಂಟಿಚೋರ ಸಮುದಾಯದಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಬದುಕು ಕಲಿಸಿದ ಪಾಠವೇ ಅವರಲ್ಲಿ ಹೋರಾಟದ ಪ್ರಜ್ಞೆಯನ್ನು ರೂಪಿಸಿದೆ. ನಮ್ಮ ಹಕ್ಕುಗಳನ್ನು ಹೋರಾಟ ಮಾಡಿಯೇ ಪಡೆಯಬೇಕಿದೆ ಎನ್ನುವ ಅರಿವನ್ನು ಸಮುದಾಯದ ಮಹಿಳೆಯರಲ್ಲಿ ಯುವ ಜನತೆಯಲ್ಲಿ ಬಿತ್ತಲು ಶ್ರಮಿಸುತ್ತಿದ್ದಾರೆ.

ಗೋದಾವರಿ ಪುಟ್ಟ ಹುಡುಗಿಯಾಗಿದ್ದಾಗ ಗಂಟಿಚೋರ ಸಮುದಾಯ ದಟ್ಟ ದಾರಿದ್ರ್ಯ ಸ್ಥಿತಿಯಲ್ಲಿತ್ತು. ಈ ದಾರಿದ್ರ್ಯವೇ ಕುಲಕಸಬಾಗಿದ್ದ `ತುಡುಗು’(ಕಳ್ಳತನ) ಮಾಡಲು ಹಚ್ಚುತ್ತಿತ್ತು. ತುಡುಗು ಮಾಡುವ ಇವರ ಚಾಕಚಕ್ಯತೆ ಬೆರಗು ಹುಟ್ಟಿಸುವಂತಿತ್ತು. ತುಡುಗು ಮಾಡಿ ಸಿಕ್ಕಾಗ ಪೊಲೀಸರ ಹೊಡೆತ ಹಿಂಸೆ ಅವರ ಕುಟುಂಬವನ್ನು ದುಃಖದ ಕಡಲಲ್ಲಿ ತೇಲಿಸುತ್ತಿತ್ತು. ಇಂತಹ ಎಲ್ಲಾ ಸಂಗತಿಗಳನ್ನು ಕಣ್ತುಂಬಿಕೊಳ್ಳುತ್ತಲೇ ಗೋದಾವರಿ ಅವರು ಬೆಂಡವಾದಲ್ಲಿ ತನ್ನ ಬಾಲ್ಯ ಕಳೆದರು. ಮನೆ ಪರಿಸ್ಥಿತಿ ಸಹಕರಿಸದಿದ್ದರೂ 2ನೇ ತರಗತಿಯವರೆಗೆ ಶಾಲೆಗೆ ಹೋಗುತ್ತಿದ್ದ ಹುಡುಗಿಯನ್ನು ಶಾಲೆ ಬಿಡಿಸಿ ಆಡು ಕುರಿ ಕಾಯಲು ಹಚ್ಚಿದರು. ಆಗ ಗೋದಾವರಿ ಬಿಸಿಲು ಮಳೆ ಚಳಿಯೆನ್ನದೆ ಆಡು ಕಾಯುವ ಹುಡುಗಿಯಾಗಿ ಹೊಲ, ಕಾಡುಮೇಡುಗಳನ್ನು ಅಲೆದಳು. ಆದಾಗ್ಯೂ ಓದಬೇಕೆನ್ನುವ ಒಡಲೊಳಗಣ ಕಿಚ್ಚು ನಿಧಾನಕ್ಕೆ ಜಾಗೃತವಾಗತೊಡಗಿತು.

ಇಂತಹ ಸಂದರ್ಭದಲ್ಲಿ ಹತ್ತು ವರ್ಷ ತುಂಬುವ ಹೊತ್ತಿಗಾಗಲೆ ಮನೆಯವರು ಮದುವೆಗೆ ತಯಾರಿ ನಡೆಸಿದರು. ಮದುವೆಯಾಗಿ ಮಕ್ಕಳಿದ್ದ ಮಹಾರಾಷ್ಟ್ರದ ಗಂಡಿನೊಂದಿಗೆ ಬಾಲ್ಯವಿವಾಹ ನಡೆಯಿತು. ಕಿತ್ತು ತಿನ್ನುವ ಬಡತನದ ನೆರಳಲ್ಲಿ ಈ ಮದುವೆಯನ್ನು ತಿರಸ್ಕರಿಸುವ ಶಕ್ತಿಯಾಗಲಿ ತಿಳಿವಳಿಕೆಯಾಗಲಿ ಗೋದಾವರಿಗಿನ್ನೂ ಬಂದಿರಲಿಲ್ಲ. ಅದೇಕೋ ಹೊಂದಾಣಿಕೆಯಾಗದೆ ಗೋದಾವರಿ ಮದುವೆಯಾದವನ ಜತೆ ಬಾಳಲಿಕ್ಕಾಗದೆ ತನ್ನೂರಲ್ಲೇ ಉಳಿದರು. ಈ ಹೊತ್ತಿನಲ್ಲಿ ಕಲಿಯಬೇಕೆನ್ನುವ ತನ್ನೊಳಗಿನ ಹಂಬಲ ಮತ್ತೆ ಚಿಗುರೊಡೆಯಿತು. ಇಂತಹ ಸಂದರ್ಭದಲ್ಲಿ ಗೋದಾವರಿಯ ತಾಯಿಯೆ ಬೆಳಗಾವಿಯ ಅನಾಥ ಹೆಣ್ಣುಮಕ್ಕಳ ರಕ್ಷಣೆಯ ತಾಣವಾಗಿದ್ದ ಸ್ತ್ರೀಸೇವಾನಿಕೇತನಕ್ಕೆ ಸೇರಿದರು. ಹೀಗಿರುವಾಗ ಇಲ್ಲಿ ಆಶ್ರಯ ಪಡೆದ ಹುಡುಗಿಯರನ್ನು ಅವರ ಆಸಕ್ತಿಗನುಸಾರವಾಗಿ ಬೇರೆಬೇರೆ ಜಿಲ್ಲಾ ಸ್ತ್ರೀಸೇವಾನಿಕೇತನ ಕೇಂದ್ರಗಳಿಗೆ ವರ್ಗ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಬಳ್ಳಾರಿಯ ಹಾಸ್ಟೆಲ್ ಚೆನ್ನಾಗಿದೆ, ಓದಿಸುತ್ತಾರೆ, ಕಸೂತಿ ಟೈಲರಿಂಗ್ ಕಲಿಸುತ್ತಾರೆ, ವಾರ್ಡನ್ ಒಳ್ಳೆಯವರು ಇತ್ಯಾದಿ ಸಂಗತಿಗಳ ಕೇಳಿತಿಳಿದಿದ್ದ ಗೋದಾವರಿ ಬಳ್ಳಾರಿಯನ್ನು ಆಯ್ಕೆ ಮಾಡಿಕೊಂಡು ವರ್ಗವಾದರು. ಬಳ್ಳಾರಿಗೆ ಬಂದದ್ದು ಕೂಡ ಗೋದಾವರಿ ಅವರ ಜೀವನದಲ್ಲಿ ಮತ್ತೊಂದು ತಿರುವು. ಕಾರಣ ಬಳ್ಳಾರಿಯ ಸ್ತ್ರೀಸೇವಾನಿಕೇತನದಲ್ಲಿಯೇ ಅರ್ಧಕ್ಕೆ ನಿಂತ ಶಿಕ್ಷಣವನ್ನು ಮುಂದುವರೆಸಿದರು. ಇನ್ನು ಏಳನೆ ತರಗತಿ ಮುಗಿಸುವ ಹೊತ್ತಿಗೆ ಡಿ ದರ್ಜೆ ನೌಕರರೊಬ್ಬರ ಅಕಾಲಿಕ ಮರಣದಿಂದ ತೆರವಾದ ಪಿ.ಸಿ.ಡಬ್ಲು ಎನ್ನುವ (ಪ್ಯಾಕಿಂಗ್ ಕ್ಲೀನಿಂಗ್ ವಾಚಿಂಗ್) ಎಂಬ ನೌಕರಿಯೂ ಸಿಕ್ಕಿತು.

ಗೋದಾವರಿ ಅವರು ಕೆಲಸ ಮಾಡುತ್ತಿದ್ದ ಸ್ತ್ರೀಸೇವಾನಿಕೇತನ ಬುದ್ಧಿಹೀನ ಹುಡುಗಿಯರು, ಗಂಡ ಸತ್ತವರು, ಜೈಲುಗಳಿಂದ ಬಿಡುಗಡೆಗೊಂಡ ತನ್ನವರಿಂದ ತಿರಸ್ಕøತರಾದ ಮಹಿಳೆಯರು, ಮನೆಬಿಟ್ಟು ಪ್ರೀತಿಸಿ ಮದುವೆಯಾಗಿ ಹುಡುಗರಿಂದ ವಂಚಿತರಾದವರು. ಹೀಗೆ ಅನಾಥ ಮಹಿಳೆಯರಿಗೆ ಆಶ್ರಯತಾಣವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸ್ತ್ರೀ ಸೇವಾನಿಕೇತನದಲ್ಲಿ ಇಂತಹ ನೊಂದ ಮಹಿಳೆಯರ ಸಂಗಾತಿಯಾಗಿ ಗೋದಾವರಿ ಅವರು ಕೆಲಸ ಮಾಡಿದರು. ಒಂದು ರೀತಿಯಲ್ಲಿ ಪರಿತ್ಯಕ್ತ ಅನಾಥ ಮಹಿಳೆಯರಿಗೆ ತಾಯಿಯ ಹಾಗೆ ಅವರ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತರು. ಯಾವ ಬಗೆಯ ನಿರ್ಗತಿಕ ಸ್ಥಿತಿಯ ಕಾರಣಕ್ಕೆ ಗೋದಾವರಿ ಬೆಳಗಾವಿಯ ಸ್ತ್ರೀ ಸೇವಾನಿಕೇತನದಲ್ಲಿ ಸೇರಿದ್ದರೋ ಅಂತಹದ್ದೇ ಅನಾಥ ಮಹಿಳೆಯರ ಪೋಷಣೆಯ ಕೆಲಸಕ್ಕಾಗಿಯೇ ಅವರು ತನ್ನ ಜೀವನವನ್ನು ಮುಡುಪಾಗಿಟ್ಟರು.

ಗೋದಾವರಿ ಅವರಿಗೆ ಕೆಲಸ ಕೊಟ್ಟು ಆಶ್ರಯ ನೀಡಿದವರು ಆಗಿನ ಸ್ತ್ರೀಸೇವಾನಿಕೇತನದ ವಾರ್ಡನ್ ಆಗಿದ್ದ ಕಾವೇರಿ. ಇವರು ಕೊಡಗಿನ ಜನರಲ್ ಕಾರಿಯಪ್ಪ ಅವರ ಸೊಸೆ. ಇವರು ಮಹಿಳೆಯರಲ್ಲಿ ಸದಾ ಧೈರ್ಯ ತುಂಬುವ, ಉತ್ಸಾಹ ಹೆಚ್ಚಿಸುವ ಮಾತುಗಳನ್ನು ಆಡುತ್ತಿದ್ದರು. ಅವರು ಮಹಿಳೆಯರ ಒಳಗೆ ಒಂದು ಬಗೆಯ ಧೈರ್ಯವನ್ನು ತುಂಬುವ ಮಾತುಗಳನ್ನು ಆಡುತ್ತಿದ್ದರು. ಜಗತ್ತಿನ ಮಹಿಳಾ ಸಾಧಕಿಯರ ಬಗ್ಗೆ ಪರಿಚಯಿಸುತ್ತಿದ್ದರು. ಮಹಿಳೆಯರಿಗಿರುವ ಸಂವಿಧಾನಿಕ ಹಕ್ಕುಗಳ ಬಗ್ಗೆ ಪರಿಚಯಿಸುತ್ತಿದ್ದರು. ಈ ಮಾತುಗಳನ್ನು ಕೇಳುತ್ತಾ ಗೋದಾವರಿ ಒಳಗೊಂದು ಜಾಗೃತ ಮನಸ್ಸು ರೂಪುಗೊಳ್ಳತೊಡಗಿತು. ಈ ಮೂಲಕ ಅಂಬೇಡ್ಕರ್ ಮೊದಲಾದವರ ವಿಚಾರಗಳು ಓದದೆಯೂ ಗೋದಾವರಿ ಅವರ ಒಳಗೆ ವೈಚಾರಿಕತೆಯನ್ನು ರೂಪಿಸತೊಡಗಿತು. ಇವರ ಸೇವೆಯನ್ನು ಗುರುತಿಸಿ 2008 ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಳ್ಳಾರಿಯ ಜಿಲ್ಲಾ ಪಂಚಾಯಿತಿಯು ಕಿತ್ತೂರುರಾಣಿ ಚೆನ್ನಮ್ಮನ ಹೆಸರಿನ ಪ್ರಶಸ್ತಿ ನೀಡಿ ಗೌರವಿಸಿತು. ಸ್ವಂತಕ್ಕೆ ಮಕ್ಕಳಿಲ್ಲದ ಬೇಸರ ಎಂದೂ ಕಾಡಲಿಲ್ಲ. ಬಳ್ಳಾರಿಯಲ್ಲಿರುವಷ್ಟು ದಿನ ಸೇವಾನಿಕೇತನದ ಹುಡುಗಿಯರೇ ನನಗೂ ಮಕ್ಕಳಾಗಿದ್ದರು. ಇದೀಗ ಬೆಂಡವಾಡದ ಗಂಟಿಚೋರ ಸಮುದಾಯವೇ ನನ್ನ ಕುಟುಂಬ ಇದ್ದಹಾಗೆ ಎಂದು ಭಾವಿಸುತ್ತಾರೆ.

ಹಿಂದೆ ಗಂಟಿಚೋರ ಸಮುದಾಯದವರು ಪಟ್ಟ ಪಡಿಪಾಟಲನ್ನು ಹೇಳುವಾಗ ಗೋದಾವರಿ ಅವರ ಕಣ್ಣು ನೀರಾಗುತ್ತವೆ. ತನ್ನ ಸಮುದಾಯ ಪಟ್ಟಿರಬಹುದಾದ ಪಾಡನ್ನು ಹೇಳುವಾಗ ದುಃಖದ ಕಡಲೊಡೆದಂತೆ ಬಿಕ್ಕಳಿಸುತ್ತಾರೆ. ಈಚೆಗೆ ಬಾಲೆಹೊಸೂರಲ್ಲಿ ಸವರ್ಣೀಯರ ಗಲಭೆಯಲ್ಲಿ ಗಂಟಿಚೋರ ಸಮುದಾಯದ ವ್ಯಕ್ತಿಯ ಕೊಲೆಯಾಗಿ ಸಮುದಾಯವನ್ನು ಹಿಂಸೆಗೆ ಒಳಗುಮಾಡಿದ್ದನ್ನು ವಿರೋಧಿಸಿ ಈ ಸಮುದಾಯ ಒಗ್ಗಟ್ಟಾಗಿ ಪ್ರತಿಭಟಿಸಿತು. ಬೆಳಗಾವಿಯ ಅಧಿವೇಶನ ನಡೆಯುವ ಸಂದರ್ಭದಲ್ಲಿ ಈ ಸಮುದಾಯ ಒಟ್ಟಾಗಿ ತನ್ನ ಪ್ರತಿರೋಧವನ್ನು ದಾಖಲಿಸಿತು. ಈ ಸಂದರ್ಭದಲ್ಲಿ ಗೋದಾವರಿ ಅವರು ಸಮುದಾಯದ ಪ್ರತಿನಿಧಿಯಾಗಿ ಗಟ್ಟಿಧ್ವನಿಯಲ್ಲಿ ಪ್ರಭುತ್ವವನ್ನು ಪ್ರಶ್ನಿಸಿದ್ದರು.

ಗೋದಾವರಿ ನಿವೃತ್ತಿ ನಂತರ ತಾನು ಬೆಳೆದ ತನ್ನ ಹುಟ್ಟೂರಾದ ಬೆಂಡವಾಡಕ್ಕೆ ಮರಳಿ ಬಂದು ನೆಲೆಸಿದ್ದೂ ಕೂಡ ಪ್ರತಿಭಟನೆಯ ಸಂಕೇತವೆ ಎನ್ನುತ್ತಾರೆ. ನೀವು ಬಳ್ಳಾರಿಯಿಂದ ಹಳ್ಳಿಗೆ ಮರಳಿದ್ಯಾಕೆ ಎಂದರೆ, `ನನ್ನ ತಂದೆಯ ಊರಿನಲ್ಲಿಯೇ ನೆಲೆಯೂರಬೇಕೆಂಬ ಆಸೆ ಒಂದಾದರೆ ನಮ್ಮ ಗಂಟಿಚೋರ ಸಮುದಾಯವನ್ನು ಜಾಗೃತಗೊಳಿಸಬೇಕು. ನಿರಂತರ ಅನ್ಯಾಯಕ್ಕೆ ಒಳಗಾಗುವ ಈ ಸಮುದಾಯದಲ್ಲಿ ಹೋರಾಟದ ಮನೋಭಾವವನ್ನು ಮೂಡಿಸಬೇಕು ಎನ್ನುತ್ತಾರೆ. ಗಂಟಿಚೋರ ಸಮುದಾಯದಲ್ಲೂ ಕೂಡ ಸ್ಥಿತಿವಂತರಿದ್ದಾರೆ ಎನ್ನುವುದು ಬೇರೆ ಮೇಲಿನ ಜಾತಿಗಳವರಿಗೆ ತಿಳಿಯಲಿ ಎಂದೇ ನನ್ನ ಹೊಸ ಮನೆಯನ್ನು ಇಲ್ಲಿ ಕಟ್ಟಿಸಿದ್ದು. ಈಗ ನನ್ನ ಮನೆಯೇ ಇಲ್ಲಿನ ಗಂಟಿಚೋರ ಸಮುದಾಯದ ಹೋರಾಟಕ್ಕೆ ಒಂದು ಕೇಂದ್ರವಾಗಿದೆ. ನಮ್ಮ `ಗಂಟಿಚೋರ ಸಮಾಜ ಕ್ಷೇಮಾಭಿವೃದ್ಧಿ ಸೇವಾ ಸಂಘ’ ರೂಪುಗೊಂಡದ್ದು ಈ ಮನೆಯಲ್ಲಿಯೇ ಎನ್ನುತ್ತಾರೆ. ಹೀಗೆ ಅಕ್ಷರದ ಬೆಳಕಿನಲ್ಲಿ ಪುಟ್ಟ ಸರಕಾರಿ ಕೆಲಸ ಮಾಡಿ ನಿವೃತ್ತಿ ಹೊಂದಿ, ಮರಳಿ ತನ್ನದೇ ಸಮುದಾಯದ ಹಕ್ಕೊತ್ತಾಯಕ್ಕಾಗಿ ದುಡಿಯುವವರ ಸಂಖ್ಯೆ ವಿರಳ. ಹೀಗಾಗಿ ಗೋದಾವರಿ ಅವರ ಸಮುದಾಯ ಪರವಾದ ಈ ಚಟುವಟಿಕೆಗಳಿಗೆ ಮಹತ್ವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...