Homeಮುಖಪುಟಆಡುಕಾಯುವ ಹುಡುಗಿ ಗೋದಾವರಿ ಗಂಟಿಚೋರ ಸಮುದಾಯದ ಧ್ವನಿಯಾದದ್ದು..

ಆಡುಕಾಯುವ ಹುಡುಗಿ ಗೋದಾವರಿ ಗಂಟಿಚೋರ ಸಮುದಾಯದ ಧ್ವನಿಯಾದದ್ದು..

- Advertisement -
- Advertisement -

| ಎಲೆಮರೆ-10 |

ನಾನಿಲ್ಲಿ ಪರಿಚಯಿಸುತ್ತಿರುವ ಗೋದಾವರಿ ಅವರದು ದೊಡ್ಡ ಹೆಸರೇನಲ್ಲ. ಯಾವ ಹೋರಾಟಗಾರರ ಪಟ್ಟಿಯಲ್ಲಿಯೂ ಅವರ ಹೆಸರು ಸಿಗುವುದಿಲ್ಲ, ಬದಲಾಗಿ ತೀರಾ ಸಾಮಾನ್ಯ ಸಾದಾಸೀದಾ ಮಹಿಳೆ. ವಯಸ್ಸು ಮಾಗಿದರೂ, ಗಂಟಿಚೋರ ಸಮುದಾಯವನ್ನು ಅಪರಾಧಿಗಳಂತೆ ಕಾಣುವ ಸಮಾಜದ ಬಗೆಗಿನ ಸಿಟ್ಟು ಅವರನ್ನು ಹೆಚ್ಚು ಕ್ರಿಯಾಶೀಲವಾಗಿಟ್ಟಿದೆ. 65 ವರ್ಷದ ಆಸುಪಾಸಿನ ಗೋದಾವರಿ ಅವರು ಏಳೆಂಟು ವರ್ಷಗಳಿಂದ ತಮ್ಮ ಊರಾದ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಬೆಂಡವಾಡದಲ್ಲಿ ನೆಲೆಸಿ ತನ್ನ ಗಂಟಿಚೋರ ಸಮುದಾಯದಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಬದುಕು ಕಲಿಸಿದ ಪಾಠವೇ ಅವರಲ್ಲಿ ಹೋರಾಟದ ಪ್ರಜ್ಞೆಯನ್ನು ರೂಪಿಸಿದೆ. ನಮ್ಮ ಹಕ್ಕುಗಳನ್ನು ಹೋರಾಟ ಮಾಡಿಯೇ ಪಡೆಯಬೇಕಿದೆ ಎನ್ನುವ ಅರಿವನ್ನು ಸಮುದಾಯದ ಮಹಿಳೆಯರಲ್ಲಿ ಯುವ ಜನತೆಯಲ್ಲಿ ಬಿತ್ತಲು ಶ್ರಮಿಸುತ್ತಿದ್ದಾರೆ.

ಗೋದಾವರಿ ಪುಟ್ಟ ಹುಡುಗಿಯಾಗಿದ್ದಾಗ ಗಂಟಿಚೋರ ಸಮುದಾಯ ದಟ್ಟ ದಾರಿದ್ರ್ಯ ಸ್ಥಿತಿಯಲ್ಲಿತ್ತು. ಈ ದಾರಿದ್ರ್ಯವೇ ಕುಲಕಸಬಾಗಿದ್ದ `ತುಡುಗು’(ಕಳ್ಳತನ) ಮಾಡಲು ಹಚ್ಚುತ್ತಿತ್ತು. ತುಡುಗು ಮಾಡುವ ಇವರ ಚಾಕಚಕ್ಯತೆ ಬೆರಗು ಹುಟ್ಟಿಸುವಂತಿತ್ತು. ತುಡುಗು ಮಾಡಿ ಸಿಕ್ಕಾಗ ಪೊಲೀಸರ ಹೊಡೆತ ಹಿಂಸೆ ಅವರ ಕುಟುಂಬವನ್ನು ದುಃಖದ ಕಡಲಲ್ಲಿ ತೇಲಿಸುತ್ತಿತ್ತು. ಇಂತಹ ಎಲ್ಲಾ ಸಂಗತಿಗಳನ್ನು ಕಣ್ತುಂಬಿಕೊಳ್ಳುತ್ತಲೇ ಗೋದಾವರಿ ಅವರು ಬೆಂಡವಾದಲ್ಲಿ ತನ್ನ ಬಾಲ್ಯ ಕಳೆದರು. ಮನೆ ಪರಿಸ್ಥಿತಿ ಸಹಕರಿಸದಿದ್ದರೂ 2ನೇ ತರಗತಿಯವರೆಗೆ ಶಾಲೆಗೆ ಹೋಗುತ್ತಿದ್ದ ಹುಡುಗಿಯನ್ನು ಶಾಲೆ ಬಿಡಿಸಿ ಆಡು ಕುರಿ ಕಾಯಲು ಹಚ್ಚಿದರು. ಆಗ ಗೋದಾವರಿ ಬಿಸಿಲು ಮಳೆ ಚಳಿಯೆನ್ನದೆ ಆಡು ಕಾಯುವ ಹುಡುಗಿಯಾಗಿ ಹೊಲ, ಕಾಡುಮೇಡುಗಳನ್ನು ಅಲೆದಳು. ಆದಾಗ್ಯೂ ಓದಬೇಕೆನ್ನುವ ಒಡಲೊಳಗಣ ಕಿಚ್ಚು ನಿಧಾನಕ್ಕೆ ಜಾಗೃತವಾಗತೊಡಗಿತು.

ಇಂತಹ ಸಂದರ್ಭದಲ್ಲಿ ಹತ್ತು ವರ್ಷ ತುಂಬುವ ಹೊತ್ತಿಗಾಗಲೆ ಮನೆಯವರು ಮದುವೆಗೆ ತಯಾರಿ ನಡೆಸಿದರು. ಮದುವೆಯಾಗಿ ಮಕ್ಕಳಿದ್ದ ಮಹಾರಾಷ್ಟ್ರದ ಗಂಡಿನೊಂದಿಗೆ ಬಾಲ್ಯವಿವಾಹ ನಡೆಯಿತು. ಕಿತ್ತು ತಿನ್ನುವ ಬಡತನದ ನೆರಳಲ್ಲಿ ಈ ಮದುವೆಯನ್ನು ತಿರಸ್ಕರಿಸುವ ಶಕ್ತಿಯಾಗಲಿ ತಿಳಿವಳಿಕೆಯಾಗಲಿ ಗೋದಾವರಿಗಿನ್ನೂ ಬಂದಿರಲಿಲ್ಲ. ಅದೇಕೋ ಹೊಂದಾಣಿಕೆಯಾಗದೆ ಗೋದಾವರಿ ಮದುವೆಯಾದವನ ಜತೆ ಬಾಳಲಿಕ್ಕಾಗದೆ ತನ್ನೂರಲ್ಲೇ ಉಳಿದರು. ಈ ಹೊತ್ತಿನಲ್ಲಿ ಕಲಿಯಬೇಕೆನ್ನುವ ತನ್ನೊಳಗಿನ ಹಂಬಲ ಮತ್ತೆ ಚಿಗುರೊಡೆಯಿತು. ಇಂತಹ ಸಂದರ್ಭದಲ್ಲಿ ಗೋದಾವರಿಯ ತಾಯಿಯೆ ಬೆಳಗಾವಿಯ ಅನಾಥ ಹೆಣ್ಣುಮಕ್ಕಳ ರಕ್ಷಣೆಯ ತಾಣವಾಗಿದ್ದ ಸ್ತ್ರೀಸೇವಾನಿಕೇತನಕ್ಕೆ ಸೇರಿದರು. ಹೀಗಿರುವಾಗ ಇಲ್ಲಿ ಆಶ್ರಯ ಪಡೆದ ಹುಡುಗಿಯರನ್ನು ಅವರ ಆಸಕ್ತಿಗನುಸಾರವಾಗಿ ಬೇರೆಬೇರೆ ಜಿಲ್ಲಾ ಸ್ತ್ರೀಸೇವಾನಿಕೇತನ ಕೇಂದ್ರಗಳಿಗೆ ವರ್ಗ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಬಳ್ಳಾರಿಯ ಹಾಸ್ಟೆಲ್ ಚೆನ್ನಾಗಿದೆ, ಓದಿಸುತ್ತಾರೆ, ಕಸೂತಿ ಟೈಲರಿಂಗ್ ಕಲಿಸುತ್ತಾರೆ, ವಾರ್ಡನ್ ಒಳ್ಳೆಯವರು ಇತ್ಯಾದಿ ಸಂಗತಿಗಳ ಕೇಳಿತಿಳಿದಿದ್ದ ಗೋದಾವರಿ ಬಳ್ಳಾರಿಯನ್ನು ಆಯ್ಕೆ ಮಾಡಿಕೊಂಡು ವರ್ಗವಾದರು. ಬಳ್ಳಾರಿಗೆ ಬಂದದ್ದು ಕೂಡ ಗೋದಾವರಿ ಅವರ ಜೀವನದಲ್ಲಿ ಮತ್ತೊಂದು ತಿರುವು. ಕಾರಣ ಬಳ್ಳಾರಿಯ ಸ್ತ್ರೀಸೇವಾನಿಕೇತನದಲ್ಲಿಯೇ ಅರ್ಧಕ್ಕೆ ನಿಂತ ಶಿಕ್ಷಣವನ್ನು ಮುಂದುವರೆಸಿದರು. ಇನ್ನು ಏಳನೆ ತರಗತಿ ಮುಗಿಸುವ ಹೊತ್ತಿಗೆ ಡಿ ದರ್ಜೆ ನೌಕರರೊಬ್ಬರ ಅಕಾಲಿಕ ಮರಣದಿಂದ ತೆರವಾದ ಪಿ.ಸಿ.ಡಬ್ಲು ಎನ್ನುವ (ಪ್ಯಾಕಿಂಗ್ ಕ್ಲೀನಿಂಗ್ ವಾಚಿಂಗ್) ಎಂಬ ನೌಕರಿಯೂ ಸಿಕ್ಕಿತು.

ಗೋದಾವರಿ ಅವರು ಕೆಲಸ ಮಾಡುತ್ತಿದ್ದ ಸ್ತ್ರೀಸೇವಾನಿಕೇತನ ಬುದ್ಧಿಹೀನ ಹುಡುಗಿಯರು, ಗಂಡ ಸತ್ತವರು, ಜೈಲುಗಳಿಂದ ಬಿಡುಗಡೆಗೊಂಡ ತನ್ನವರಿಂದ ತಿರಸ್ಕøತರಾದ ಮಹಿಳೆಯರು, ಮನೆಬಿಟ್ಟು ಪ್ರೀತಿಸಿ ಮದುವೆಯಾಗಿ ಹುಡುಗರಿಂದ ವಂಚಿತರಾದವರು. ಹೀಗೆ ಅನಾಥ ಮಹಿಳೆಯರಿಗೆ ಆಶ್ರಯತಾಣವಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಸ್ತ್ರೀ ಸೇವಾನಿಕೇತನದಲ್ಲಿ ಇಂತಹ ನೊಂದ ಮಹಿಳೆಯರ ಸಂಗಾತಿಯಾಗಿ ಗೋದಾವರಿ ಅವರು ಕೆಲಸ ಮಾಡಿದರು. ಒಂದು ರೀತಿಯಲ್ಲಿ ಪರಿತ್ಯಕ್ತ ಅನಾಥ ಮಹಿಳೆಯರಿಗೆ ತಾಯಿಯ ಹಾಗೆ ಅವರ ರಕ್ಷಣೆಯ ಜವಾಬ್ದಾರಿಯನ್ನು ಹೊತ್ತರು. ಯಾವ ಬಗೆಯ ನಿರ್ಗತಿಕ ಸ್ಥಿತಿಯ ಕಾರಣಕ್ಕೆ ಗೋದಾವರಿ ಬೆಳಗಾವಿಯ ಸ್ತ್ರೀ ಸೇವಾನಿಕೇತನದಲ್ಲಿ ಸೇರಿದ್ದರೋ ಅಂತಹದ್ದೇ ಅನಾಥ ಮಹಿಳೆಯರ ಪೋಷಣೆಯ ಕೆಲಸಕ್ಕಾಗಿಯೇ ಅವರು ತನ್ನ ಜೀವನವನ್ನು ಮುಡುಪಾಗಿಟ್ಟರು.

ಗೋದಾವರಿ ಅವರಿಗೆ ಕೆಲಸ ಕೊಟ್ಟು ಆಶ್ರಯ ನೀಡಿದವರು ಆಗಿನ ಸ್ತ್ರೀಸೇವಾನಿಕೇತನದ ವಾರ್ಡನ್ ಆಗಿದ್ದ ಕಾವೇರಿ. ಇವರು ಕೊಡಗಿನ ಜನರಲ್ ಕಾರಿಯಪ್ಪ ಅವರ ಸೊಸೆ. ಇವರು ಮಹಿಳೆಯರಲ್ಲಿ ಸದಾ ಧೈರ್ಯ ತುಂಬುವ, ಉತ್ಸಾಹ ಹೆಚ್ಚಿಸುವ ಮಾತುಗಳನ್ನು ಆಡುತ್ತಿದ್ದರು. ಅವರು ಮಹಿಳೆಯರ ಒಳಗೆ ಒಂದು ಬಗೆಯ ಧೈರ್ಯವನ್ನು ತುಂಬುವ ಮಾತುಗಳನ್ನು ಆಡುತ್ತಿದ್ದರು. ಜಗತ್ತಿನ ಮಹಿಳಾ ಸಾಧಕಿಯರ ಬಗ್ಗೆ ಪರಿಚಯಿಸುತ್ತಿದ್ದರು. ಮಹಿಳೆಯರಿಗಿರುವ ಸಂವಿಧಾನಿಕ ಹಕ್ಕುಗಳ ಬಗ್ಗೆ ಪರಿಚಯಿಸುತ್ತಿದ್ದರು. ಈ ಮಾತುಗಳನ್ನು ಕೇಳುತ್ತಾ ಗೋದಾವರಿ ಒಳಗೊಂದು ಜಾಗೃತ ಮನಸ್ಸು ರೂಪುಗೊಳ್ಳತೊಡಗಿತು. ಈ ಮೂಲಕ ಅಂಬೇಡ್ಕರ್ ಮೊದಲಾದವರ ವಿಚಾರಗಳು ಓದದೆಯೂ ಗೋದಾವರಿ ಅವರ ಒಳಗೆ ವೈಚಾರಿಕತೆಯನ್ನು ರೂಪಿಸತೊಡಗಿತು. ಇವರ ಸೇವೆಯನ್ನು ಗುರುತಿಸಿ 2008 ರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬಳ್ಳಾರಿಯ ಜಿಲ್ಲಾ ಪಂಚಾಯಿತಿಯು ಕಿತ್ತೂರುರಾಣಿ ಚೆನ್ನಮ್ಮನ ಹೆಸರಿನ ಪ್ರಶಸ್ತಿ ನೀಡಿ ಗೌರವಿಸಿತು. ಸ್ವಂತಕ್ಕೆ ಮಕ್ಕಳಿಲ್ಲದ ಬೇಸರ ಎಂದೂ ಕಾಡಲಿಲ್ಲ. ಬಳ್ಳಾರಿಯಲ್ಲಿರುವಷ್ಟು ದಿನ ಸೇವಾನಿಕೇತನದ ಹುಡುಗಿಯರೇ ನನಗೂ ಮಕ್ಕಳಾಗಿದ್ದರು. ಇದೀಗ ಬೆಂಡವಾಡದ ಗಂಟಿಚೋರ ಸಮುದಾಯವೇ ನನ್ನ ಕುಟುಂಬ ಇದ್ದಹಾಗೆ ಎಂದು ಭಾವಿಸುತ್ತಾರೆ.

ಹಿಂದೆ ಗಂಟಿಚೋರ ಸಮುದಾಯದವರು ಪಟ್ಟ ಪಡಿಪಾಟಲನ್ನು ಹೇಳುವಾಗ ಗೋದಾವರಿ ಅವರ ಕಣ್ಣು ನೀರಾಗುತ್ತವೆ. ತನ್ನ ಸಮುದಾಯ ಪಟ್ಟಿರಬಹುದಾದ ಪಾಡನ್ನು ಹೇಳುವಾಗ ದುಃಖದ ಕಡಲೊಡೆದಂತೆ ಬಿಕ್ಕಳಿಸುತ್ತಾರೆ. ಈಚೆಗೆ ಬಾಲೆಹೊಸೂರಲ್ಲಿ ಸವರ್ಣೀಯರ ಗಲಭೆಯಲ್ಲಿ ಗಂಟಿಚೋರ ಸಮುದಾಯದ ವ್ಯಕ್ತಿಯ ಕೊಲೆಯಾಗಿ ಸಮುದಾಯವನ್ನು ಹಿಂಸೆಗೆ ಒಳಗುಮಾಡಿದ್ದನ್ನು ವಿರೋಧಿಸಿ ಈ ಸಮುದಾಯ ಒಗ್ಗಟ್ಟಾಗಿ ಪ್ರತಿಭಟಿಸಿತು. ಬೆಳಗಾವಿಯ ಅಧಿವೇಶನ ನಡೆಯುವ ಸಂದರ್ಭದಲ್ಲಿ ಈ ಸಮುದಾಯ ಒಟ್ಟಾಗಿ ತನ್ನ ಪ್ರತಿರೋಧವನ್ನು ದಾಖಲಿಸಿತು. ಈ ಸಂದರ್ಭದಲ್ಲಿ ಗೋದಾವರಿ ಅವರು ಸಮುದಾಯದ ಪ್ರತಿನಿಧಿಯಾಗಿ ಗಟ್ಟಿಧ್ವನಿಯಲ್ಲಿ ಪ್ರಭುತ್ವವನ್ನು ಪ್ರಶ್ನಿಸಿದ್ದರು.

ಗೋದಾವರಿ ನಿವೃತ್ತಿ ನಂತರ ತಾನು ಬೆಳೆದ ತನ್ನ ಹುಟ್ಟೂರಾದ ಬೆಂಡವಾಡಕ್ಕೆ ಮರಳಿ ಬಂದು ನೆಲೆಸಿದ್ದೂ ಕೂಡ ಪ್ರತಿಭಟನೆಯ ಸಂಕೇತವೆ ಎನ್ನುತ್ತಾರೆ. ನೀವು ಬಳ್ಳಾರಿಯಿಂದ ಹಳ್ಳಿಗೆ ಮರಳಿದ್ಯಾಕೆ ಎಂದರೆ, `ನನ್ನ ತಂದೆಯ ಊರಿನಲ್ಲಿಯೇ ನೆಲೆಯೂರಬೇಕೆಂಬ ಆಸೆ ಒಂದಾದರೆ ನಮ್ಮ ಗಂಟಿಚೋರ ಸಮುದಾಯವನ್ನು ಜಾಗೃತಗೊಳಿಸಬೇಕು. ನಿರಂತರ ಅನ್ಯಾಯಕ್ಕೆ ಒಳಗಾಗುವ ಈ ಸಮುದಾಯದಲ್ಲಿ ಹೋರಾಟದ ಮನೋಭಾವವನ್ನು ಮೂಡಿಸಬೇಕು ಎನ್ನುತ್ತಾರೆ. ಗಂಟಿಚೋರ ಸಮುದಾಯದಲ್ಲೂ ಕೂಡ ಸ್ಥಿತಿವಂತರಿದ್ದಾರೆ ಎನ್ನುವುದು ಬೇರೆ ಮೇಲಿನ ಜಾತಿಗಳವರಿಗೆ ತಿಳಿಯಲಿ ಎಂದೇ ನನ್ನ ಹೊಸ ಮನೆಯನ್ನು ಇಲ್ಲಿ ಕಟ್ಟಿಸಿದ್ದು. ಈಗ ನನ್ನ ಮನೆಯೇ ಇಲ್ಲಿನ ಗಂಟಿಚೋರ ಸಮುದಾಯದ ಹೋರಾಟಕ್ಕೆ ಒಂದು ಕೇಂದ್ರವಾಗಿದೆ. ನಮ್ಮ `ಗಂಟಿಚೋರ ಸಮಾಜ ಕ್ಷೇಮಾಭಿವೃದ್ಧಿ ಸೇವಾ ಸಂಘ’ ರೂಪುಗೊಂಡದ್ದು ಈ ಮನೆಯಲ್ಲಿಯೇ ಎನ್ನುತ್ತಾರೆ. ಹೀಗೆ ಅಕ್ಷರದ ಬೆಳಕಿನಲ್ಲಿ ಪುಟ್ಟ ಸರಕಾರಿ ಕೆಲಸ ಮಾಡಿ ನಿವೃತ್ತಿ ಹೊಂದಿ, ಮರಳಿ ತನ್ನದೇ ಸಮುದಾಯದ ಹಕ್ಕೊತ್ತಾಯಕ್ಕಾಗಿ ದುಡಿಯುವವರ ಸಂಖ್ಯೆ ವಿರಳ. ಹೀಗಾಗಿ ಗೋದಾವರಿ ಅವರ ಸಮುದಾಯ ಪರವಾದ ಈ ಚಟುವಟಿಕೆಗಳಿಗೆ ಮಹತ್ವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...