Homeಮುಖಪುಟಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದ ಸಚಿವನನ್ನೆ ವಜಾ ಮಾಡಿದ ಗೋವಾ ಬಿಜೆಪಿ ಸರ್ಕಾರ!

ಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದ ಸಚಿವನನ್ನೆ ವಜಾ ಮಾಡಿದ ಗೋವಾ ಬಿಜೆಪಿ ಸರ್ಕಾರ!

- Advertisement -
- Advertisement -

ಬುಡಕಟ್ಟು ಕಲ್ಯಾಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳನ್ನು ಮಾಡಿದ್ದ ಗೋವಾ ಸಚಿವ ಗೋವಿಂದ್ ಗೌಡೆ ಅವರನ್ನು ಮೂರು ವಾರಗಳ ನಂತರ ಬುಧವಾರ ರಾಜ್ಯ ಸಚಿವ ಸಂಪುಟದಿಂದ ತೆಗೆದುಹಾಕಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಬುಡಕಟ್ಟು ಕಲ್ಯಾಣ ಖಾತೆಯನ್ನು ಹೊಂದಿದ್ದಾರೆ. ಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ

ಕಲೆ ಮತ್ತು ಸಂಸ್ಕೃತಿ ಸಚಿವರಾದ ಗೌಡೆ ಅವರನ್ನು ಸಂಪುಟದಿಂದ ಕೈಬಿಡುವ ನಿರ್ಧಾರವನ್ನು ಸರ್ವಾನುಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಗೋವಾ ಬಿಜೆಪಿ ಮುಖ್ಯಸ್ಥ ದಾಮು ನಾಯಕ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. “ಸರ್ಕಾರ, ಪಕ್ಷ ಮತ್ತು ಪಕ್ಷದ ಕೇಂದ್ರ ನಾಯಕತ್ವದ ಸಮಾಲೋಚನೆಯ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ, ಪಕ್ಷದ ಶಿಸ್ತು ಅತ್ಯಗತ್ಯ.” ಎಂದು ಅವರು ಹೇಳಿದ್ದಾರೆ.

ಗೌಡೆ ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಮುಖ್ಯಮಂತ್ರಿ ಮಾಡಿದ ಶಿಫಾರಸನ್ನು ರಾಜ್ಯಪಾಲ ಪಿ.ಎಸ್. ಶ್ರೀಧರನ್ ಪಿಳ್ಳೈ ಅಂಗೀಕರಿಸಿದ್ದಾರೆ ಎಂದು ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಜೂನ್ 18 ರಂದು ಆಚರಿಸಲಾಗುವ ಗೋವಾ ವಿಮೋಚನಾ ದಿನದಂದು ಸಮಾಜದ ತಳಮಟ್ಟದಲ್ಲಿರುವ ವರ್ಗಗಳ ಪರವಾಗಿ ನಿಂತಿದ್ದಕ್ಕಾಗಿ “ಈ ಭಾಗ್ಯವನ್ನು” ನಾನು ಪಡೆದಿದ್ದೇನೆ ಎಂದು ಗೌಡೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಮೇ 26 ರಂದು ನಡೆದ ರಾಜ್ಯ ಮಟ್ಟದ ಸಮಾರಂಭದಲ್ಲಿ ಮಾತನಾಡಿದ್ದ ಗೌಡೆ ಅವರು ರಾಜ್ಯ ಬುಡಕಟ್ಟು ಕಲ್ಯಾಣ ಇಲಾಖೆಯು ಅಸಮರ್ಥವಾಗಿದೆ ಎಂದು ಆರೋಪಿಸಿದ್ದರು ಮತ್ತು ಫೈಲ್‌ಗಳಿಗೆ ಸಹಿ ಹಾಕಲು ಅದರ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂದು ಹೇಳಿದ್ದರು.

ಆದಿವಾಸಿ ನಾಯಕರೂ ಆಗಿರುವ ಗೌಡೆ ಅವರು, ರಾಜ್ಯದಲ್ಲಿ “ಬುಡಕಟ್ಟು ಭವನ” ನಿರ್ಮಾಣ ಏಕೆ ಸ್ಥಗಿತಗೊಂಡಿದೆ ಎಂದು ಪ್ರಶ್ನಿಸಿದ್ದರು.ಈ ಯೋಜನೆಗಾಗಿ ಅನೇಕ ಆದಿವಾಸಿಗಳು ತಮ್ಮ ಭೂಮಿಯನ್ನು ಬಿಟ್ಟುಕೊಟ್ಟಿದ್ದಾರೆ ಎಂದು ಹೇಳಿದ್ದರು. “ನಾನು ಬುಡಕಟ್ಟು ಕಲ್ಯಾಣ ಸಚಿವನಾಗಿದ್ದಾಗ ಅಡಿಪಾಯ ಹಾಕಲಾಯಿತು. ಆದರೆ ಈಗ ಯೋಜನೆ ಸ್ಥಗಿತಗೊಂಡಿದೆ. ಯೋಜನೆಯಲ್ಲಿ ಏಕೆ ಪ್ರಗತಿಯಿಲ್ಲ?” ಎಂದು ಗೌಡೆ ಹೇಳಿದ್ದರು.

ಸಚಿವ ಗೌಡೆ ಅವರ “ಬೇಜವಾಬ್ದಾರಿ ಹೇಳಿಕೆಗಳಿಗಾಗಿ” ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಾವಂತ್ ಹೇಳಿದ್ದರು. ಗೌಡೆ ಅವರ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ರಾಜ್ಯದಲ್ಲಿ “ವಿಪರೀತ ಭ್ರಷ್ಟಾಚಾರ” ನಡೆಯುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಉಲ್ಲೇಖಿಸಿ ರಾಜ್ಯಪಾಲರನ್ನು ಕಾಂಗ್ರೆಸ್ ಒತ್ತಾಯಿಸಿದೆ.

ವಿರೋಧ ಪಕ್ಷದ ನಾಯಕ, ಗೋವಾ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ಸರ್ದೇಸಾಯಿ ಪ್ರತಿಕ್ರಿಯಿಸಿ, “ಗೌಡೆ ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಬಂದಾಗ ಅವರನ್ನು ತೆಗೆದುಹಾಕಲಾಗಿಲ್ಲ. ಆದರೆ, ಈಗ ಅವರು ಬುಡಕಟ್ಟು ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಎತ್ತಿದಾಗ, ಸರ್ಕಾರ ಅವರ ವಿರುದ್ಧ ಕ್ರಮ ಕೈಗೊಂಡಿದೆ” ಎಂದು ರು ಹೇಳಿದ್ದಾರೆ. ಸಿಎಂ ಇಲಾಖೆಯಲ್ಲಿ ಭ್ರಷ್ಟಾಚಾರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ | ರಾಂಚಿ, ಪಾಟ್ನಾದಲ್ಲಿ ಇಡಿ ದಾಳಿ

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ | ರಾಂಚಿ, ಪಾಟ್ನಾದಲ್ಲಿ ಇಡಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...