Homeಮುಖಪುಟಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

ಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

- Advertisement -
- Advertisement -

ಸಂಭಾಲ್: ಇಲ್ಲಿನ ಆಲಂ ಸರಾಯ್‌ನಲ್ಲಿರುವ ಸುದೀರ್ಘ ಇತಿಹಾಸವಿರುವ ಶಿಕ್ಷಣ ಸಂಸ್ಥೆ ಆಜಾದ್ ಜನ್ನತ್ ನಿಶಾ ಶಾಲೆಯ ಕಟ್ಟಡವನ್ನು ನೆಲಸಮಗೊಳಿಸದಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.

46 ವರ್ಷಗಳ ಹಿಂದೆ ಭೂಮಿ ಮಾರಾಟ ಮಾಡಿದವರ ಕಾನೂನುಬದ್ಧ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸಿ, ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ಈ ದಾವೆಗೆ ಸ್ಥಳೀಯ ಹಿಂದೂತ್ವ ಗುಂಪುಗಳ ಬೆಂಬಲವೂ ಇತ್ತು ಎಂದು ಹಿಂದಿನ ಮೂಲಗಳಿಂದ ತಿಳಿದುಬಂದಿದೆ.

ಆಲಂ ಸರಾಯ್‌ನಲ್ಲಿರುವ ಆಜಾದ್ ಜನ್ನತ್ ನಿಶಾ ಶಾಲೆಯ ವ್ಯವಸ್ಥಾಪಕ ಮೊಹಮ್ಮದ್ ಶಹವೇಜ್ ಆಲಂ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 1979ರಿಂದ ತಾನೇ ಭೂಮಿಯ ನಿಜವಾದ ಮಾಲೀಕ ಎಂದು ಅವರು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದರು.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಹರ್ವೀರ್ ಸಿಂಗ್ ಅವರನ್ನೊಳಗೊಂಡ ಪೀಠವು ಶಾಲಾ ಕಟ್ಟಡವನ್ನು ನೆಲಸಮಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು, ಸಂಸ್ಥೆಯ ಶಾಂತಿಯುತ ಕಾರ್ಯನಿರ್ವಹಣೆಗೆ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶಿಸಿದೆ.

ಈ ಸಮಸ್ಯೆಯು 2025ರ ಜನವರಿ 13ರಂದು ಪ್ರಾರಂಭವಾಯಿತು. ಅಂದು ಜಿಲ್ಲಾಧಿಕಾರಿ, ಉಪವಿಭಾಗೀಯ ದಂಡಾಧಿಕಾರಿ, ಪೊಲೀಸ್ ಪಡೆ ಮತ್ತು ತಹಸೀಲ್ದಾರ್, ಲೇಖಪಾಲ್, ನಾಯಬ್ ಲೇಖಪಾಲ್ ಸೇರಿದಂತೆ ಸ್ಥಳೀಯ ಅಧಿಕಾರಿಗಳು, ಭೂಮಿಯ ಮಾಲೀಕತ್ವವನ್ನು ಪ್ರತಿಪಾದಿಸಿದವರೊಂದಿಗೆ ಶಾಲಾ ಆವರಣಕ್ಕೆ ಆಗಮಿಸಿ, ಮಾಲೀಕರಿಗೆ ಬೆದರಿಕೆ ಹಾಕಲು ಮುಂದಾದರು.

ತಮ್ಮ ತಂದೆ 1979ರ ಜನವರಿ 8ರಂದು ನೋಂದಾಯಿತ ಮಾರಾಟ ಪತ್ರದ ಮೂಲಕ ಗಂಗಾ ಪ್ರಸಾದ್ ಮತ್ತು ಹರ್ ಪ್ರಸಾದ್ ಅವರಿಂದ ಭೂಮಿಯನ್ನು ಖರೀದಿಸಿದ್ದರು. ಆದರೆ ಈಗ ಅವರ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ಶಾಲಾ ವ್ಯವಸ್ಥಾಪಕರು ವಾದಿಸಿದ್ದಾರೆ.

ಉತ್ತರಪ್ರದೇಶ ಮಂಡಳಿಗೆ ಸಂಯೋಜಿತವಾಗಿರುವ ಈ ಶಾಲೆಯು ಪ್ರಸ್ತುತ ನರ್ಸರಿಯಿಂದ 10ನೇ ತರಗತಿಯವರೆಗೆ ತರಗತಿಗಳನ್ನು ನಡೆಸುತ್ತಿದೆ. ದಶಕಗಳಿಂದ ಶಾಂತಿಯುತವಾಗಿ, ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುತ್ತಿದೆ.

2025ರ ಜನವರಿಯಿಂದ ಜೂನ್‌ವರೆಗೆ ಸ್ಥಳೀಯ ನಾಯಕರು ಮತ್ತು ಅಧಿಕಾರಿಗಳು ಯಾವುದೇ ಕಾನೂನುಬದ್ಧ ಆದೇಶವಿಲ್ಲದೆ ಶಾಲಾ ಆವರಣಕ್ಕೆ ಭೇಟಿ ನೀಡಿ, ಕಾಲಕಾಲಕ್ಕೆ ಮಾಲೀಕರಿಗೆ ಬೆದರಿಕೆ ಹಾಕುವುದನ್ನು ಮುಂದುವರೆಸಿದ್ದರು ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ಹೊರಡಿಸಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.

2025ರ ಮೇ 15ರಂದು ಆಡಳಿತವು ಶಾಲೆಯ ಮುಖ್ಯ ದ್ವಾರದ ಜೊತೆಗೆ ಹಲವು ತರಗತಿ ಕೊಠಡಿಗಳನ್ನು ನೆಲಸಮಗೊಳಿಸಿದ್ದು, ಇದರಿಂದ ಸುಮಾರು ₹30 ಲಕ್ಷ ರೂ. ಮೌಲ್ಯದ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಅರ್ಜಿದಾರರ ಮಾಲೀಕತ್ವದಲ್ಲಿರುವ ಶಾಲೆಗೆ ಹೋಗುವ ದಾರಿಯನ್ನೂ ಒಳಗೊಂಡಂತೆ ಶಾಲಾ ಭೂಮಿಯ ಕೆಲವು ಭಾಗಗಳನ್ನು ವಶಪಡಿಸಿಕೊಳ್ಳಲಾಗಿತ್ತು.

2024ರ ನವೆಂಬರ್‌ನಲ್ಲಿ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ ನಂತರ ಕೋಮು ಉದ್ವಿಗ್ನತೆಗಳು ಹೆಚ್ಚಾದಾಗ ಈ ವಿವಾದ ಮತ್ತಷ್ಟು ಉಲ್ಬಣಗೊಂಡಿದೆ ಎಂದು APCR ಪ್ರತಿಪಾದಿಸಿದೆ.

ಶಾಲಾ ಕಟ್ಟಡವನ್ನು ನೆಲಸಮಗೊಳಿಸುವ ಯಾವುದೇ ಯೋಜನೆ ಪ್ರಸ್ತುತ ಇಲ್ಲ ಎಂದು ರಾಜ್ಯದ ಪರ ವಾದ ಮಂಡಿಸಿದ ವಕೀಲ ಗೋಪಾಲ್ ಸಕ್ಸೇನಾ ಅವರು ಸ್ಪಷ್ಟಪಡಿಸಿದರು. ಭವಿಷ್ಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಬೇಕಾದರೂ ಕಾನೂನುಬದ್ಧ ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು ಎಂದು ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....