Homeಮುಖಪುಟಇಸ್ರೇಲ್‌ನ ಆಸ್ಪತ್ರೆ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ; ರೋಗಿಗಳು-ಸಿಬ್ಬಂದಿಗೆ ಗಂಭೀರ ಗಾಯ

ಇಸ್ರೇಲ್‌ನ ಆಸ್ಪತ್ರೆ ಮೇಲೆ ಇರಾನ್‌ನಿಂದ ಕ್ಷಿಪಣಿ ದಾಳಿ; ರೋಗಿಗಳು-ಸಿಬ್ಬಂದಿಗೆ ಗಂಭೀರ ಗಾಯ

- Advertisement -
- Advertisement -

ಇಂದಿಗೆ ಇಸ್ರೇಲ್-ಇರಾನ್ ಸಂಘರ್ಷ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಇರಾನಿನ ಬ್ಯಾಲಿಸ್ಟಿಕ್ ಕ್ಷಿಪಣಿ ಇಸ್ರೇಲ್‌ನ ಬೀರ್‌ಶೆಬಾದ ಸೊರೊಕಾ ಆಸ್ಪತ್ರೆ ಮೇಲೆ ಅಪ್ಪಳಿಸಿದೆ. ದಾಳಿಯಿಂದ ಹಲವಾರು ರೋಗಿಗಳು, ವೈದ್ಯರು ಮತ್ತು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಆಸ್ಪತ್ರೆಯ ಮೇಲೆ ನೇರವಾಗಿ ದಾಳಿ ಮಾಡಿರುವುದನ್ನು ಇರಾನ್ ನಿರಾಕರಿಸಿದೆ.

ವರದಿಗಳ ಪ್ರಕಾರ, ಇರಾನಿನ ಕ್ರಾಂತಿಕಾರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ದಾಳಿಯ ಹೊಣೆಯನ್ನು ಹೊತ್ತಿದೆ. ಹತ್ತಿರದ ಪ್ರದೇಶವನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಆಸ್ಪತ್ರೆಗೆ ಹಾನಿಯಾಗಿದೆ ಎಂದು ಅದು ಸ್ಪಷ್ಟಪಡಿಸಿದೆ. “ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿಲ್ಲ; ಹತ್ತಿರದ ಸ್ಥಳದ ಮೇಲಿನ ದಾಳಿಯಿಂದ ಆಸ್ಪತ್ರೆ ಹಾನಿಗೊಳಗಾಗಿದೆ” ಎಂದು ಹೇಳಿದೆ.

ಇಸ್ರೇಲಿ ರಕ್ಷಣಾ ಪಡೆಗಳ (ಐಡಿಎಫ್‌) ಪ್ರಕಾರ, ಇರಾನ್ ಗುರುವಾರ ಇಸ್ರೇಲ್ ಮೇಲೆ ಸುಮಾರು 30 ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ. ಅವುಗಳಲ್ಲಿ ಒಂದು ಬೀರ್‌ಶೆಬಾದ ಆಸ್ಪತ್ರೆಯನ್ನು ಹೊಡೆದಿದೆ.

“ಯಹೂದಿಗಳು, ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಅರಬ್ ಬೆಡೋಯಿನ್‌ಗಳು ಆರೈಕೆ ಪಡೆಯುವ ಬೀರ್‌ಶೆಬಾದ ಸೊರೊಕಾ ಆಸ್ಪತ್ರೆ ಮೇಲೆ ಇರಾನಿನ ಬ್ಯಾಲಿಸ್ಟಿಕ್ ಕ್ಷಿಪಣಿ ಅಪ್ಪಳಿಸಿತು. ಇಸ್ರೇಲ್ ತನ್ನ ಎಲ್ಲ ವರ್ಗದ ಜನರನ್ನು ರಕ್ಷಿಸಲು ಏನು ಮಾಡಬೇಕೋ ಅದನ್ನು ಮುಂದುವರಿಸುತ್ತದೆ” ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

ನಾಗರಿಕರ ಮೇಲಿನ ದಾಳಿಯ ನಂತರ ಆಸ್ಪತ್ರೆಯಲ್ಲಿನ ಭಯಾನಕ ದೃಶ್ಯಗಳನ್ನು ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ವಿವರಿಸಿದ್ದಾರೆ.

“ತೀವ್ರ ನಿಗಾ ಘಟಕದಲ್ಲಿರುವ ಮಗು. ಅವರ ಹಾಸಿಗೆಯ ಪಕ್ಕದಲ್ಲಿ ತಾಯಿ. ಹಾಸಿಗೆಗಳ ನಡುವೆ ವೈದ್ಯರು ಓಡುತ್ತಿದ್ದಾರೆ. ನರ್ಸಿಂಗ್ ಹೋಂನಲ್ಲಿರುವ ವೃದ್ಧ ನಿವಾಸಿ. ಇಂದು ಬೆಳಿಗ್ಗೆ ಇಸ್ರೇಲಿ ನಾಗರಿಕರ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯ ಕೆಲವು ಗುರಿಯಾಗಿದ್ದರು ಇವರು. ಬೀರ್ ಶೆವಾದಲ್ಲಿರುವ ಸೊರೊಕಾ ಆಸ್ಪತ್ರೆ ಇಸ್ರೇಲ್‌ನ ಅತ್ಯುತ್ತಮ ಆಸ್ಪತ್ರೆಗಳಲ್ಲಿ ಒಂದಾಗಿದೆ. ಇಡೀ ನೆಗೆವ್ ಪ್ರದೇಶಕ್ಕೆ ಸೇವೆ ಸಲ್ಲಿಸುತ್ತಿದೆ, ಎಲ್ಲಾ ಧರ್ಮದ ಇಸ್ರೇಲಿಗಳು ಮತ್ತು ನಮ್ಮ ನೆರೆಹೊರೆಯವರನ್ನು, ವಿಶೇಷವಾಗಿ ಅಲ್ಲಿ ಚಿಕಿತ್ಸೆ ಪಡೆಯಲು ಬರುವ ಪ್ಯಾಲೆಸ್ತೀನಿಯನ್ನರನ್ನು ನೋಡಿಕೊಳ್ಳುತ್ತಿದೆ. ಅದರ ನಿಷ್ಠಾವಂತ ಸಿಬ್ಬಂದಿ, ಯಹೂದಿಗಳು ಮತ್ತು ಅರಬ್ಬರು. ಅಸಾಧಾರಣ ಸಾಮರಸ್ಯದಿಂದ ಪಕ್ಕಪಕ್ಕದಲ್ಲಿ ಕೆಲಸ ಮಾಡುತ್ತಾರೆ, ಗುಣಪಡಿಸುವ ಧ್ಯೇಯದಿಂದ ಒಗ್ಗೂಡಿದ್ದಾರೆ” ಎಂದು ಅಧ್ಯಕ್ಷರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ವೈದ್ಯಕೀಯ ತಂಡಗಳು, ರೋಗಿಗಳು ಮತ್ತು ಬೀರ್ ಶೆವಾ ಮತ್ತು ಇಂದು ಬೆಳಿಗ್ಗೆ ಇಸ್ರೇಲ್‌ನಾದ್ಯಂತ ದಾಳಿಗೊಳಗಾದ ಎಲ್ಲಾ ನಗರಗಳ ನಿವಾಸಿಗಳಿಗೆ ನಾನು ಶಕ್ತಿ ಮತ್ತು ಬೆಂಬಲವನ್ನು ಬಯಸುತ್ತೇನೆ. ಇಂತಹ ಕ್ಷಣಗಳಲ್ಲಿ, ನಿಜವಾಗಿಯೂ ಅಪಾಯದಲ್ಲಿರುವುದನ್ನು ಮತ್ತು ನಾವು ರಕ್ಷಿಸುತ್ತಿರುವ ಮೌಲ್ಯಗಳನ್ನು ನಾವು ನೆನಪಿಸಿಕೊಳ್ಳುತ್ತೇವೆ” ಎಂದು ಪೋಸ್ಟ್‌ನಲ್ಲಿ ಸೇರಿಸಿದ್ದಾರೆ.

ಆಸ್ಪತ್ರೆಯ ಮೇಲಿನ ದಾಳಿಯನ್ನು ಖಂಡಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, “ಇಂದು ಬೆಳಿಗ್ಗೆ, ಇರಾನ್‌ನ ಭಯೋತ್ಪಾದಕ ನಿರಂಕುಶಾಧಿಕಾರಿಗಳು ಬೀರ್‌ಶೆಬಾದ ಸೊರೊಕಾ ಆಸ್ಪತ್ರೆ ಮತ್ತು ದೇಶದ ಮಧ್ಯಭಾಗದಲ್ಲಿರುವ ನಾಗರಿಕ ಜನಸಂಖ್ಯೆಯ ಮೇಲೆ ಕ್ಷಿಪಣಿಗಳನ್ನು ಹಾರಿಸಿದರು. ನಾವು ಟೆಹ್ರಾನ್‌ನಲ್ಲಿರುವ ನಿರಂಕುಶಾಧಿಕಾರಿಗಳಿಂದ ಸಂಪೂರ್ಣ ಬೆಲೆಯನ್ನು ವಸೂಲಿ ಮಾಡುತ್ತೇವೆ” ಎಂದು ಹೇಳಿದರು.

ಇಸ್ರೇಲ್ ವಿರುದ್ಧ ಮೊದಲ ಬಾರಿಗೆ ಅತಿ ಭಾರವಾದ ಸೆಜ್ಜಿಲ್ ಕ್ಷಿಪಣಿ ಬಳಸಿದ ಇರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...