Homeಕರ್ನಾಟಕಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

ಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

- Advertisement -
- Advertisement -

ಕರ್ನಾಟಕದ ಶಿಶು ಮರಣ ಪ್ರಮಾಣ (IMR) 2021 ರಲ್ಲಿ 17 ರಿಂದ 2022 ರಲ್ಲಿ 15 ಕ್ಕೆ ಎರಡು ಅಂಕಗಳಷ್ಟು ಕುಸಿದಿದೆ ಎಂದು ಕಳೆದ ವಾರ ಬಿಡುಗಡೆಯಾದ ಮಾದರಿ ನೋಂದಣಿ ವ್ಯವಸ್ಥೆಯ ಬುಲೆಟಿನ್ ಹೇಳಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಮಾದರಿ ನೋಂದಣಿ ವ್ಯವಸ್ಥೆ (SRS) ಎನ್ನುವುದು ಭಾರತದಲ್ಲಿ ಜನನ ಮತ್ತು ಮರಣಗಳ ದರಗಳನ್ನು ಅಂದಾಜು ಮಾಡಲು ಬಳಸುವ ಒಂದು ದೊಡ್ಡ ಪ್ರಮಾಣದ ಜನಸಂಖ್ಯಾ ಸಮೀಕ್ಷೆಯಾಗಿದೆ. ಶಿಶು ಮರಣ ಪ್ರಮಾಣ (IMR) ಎಂದರೆ 1,000 ಜೀವಂತ ಜನನಗಳಿಗೆ ಒಂದು ವರ್ಷದೊಳಗಿನ ಶಿಶುಗಳ ಸಾವಿನ ಸಂಖ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ

ಕರ್ನಾಟಕದಲ್ಲಿ, IMR 2020-22 ರಲ್ಲಿ ಹಿಂದಿನ ದಶಕಕ್ಕೆ ಹೋಲಿಸಿದರೆ ಶೇಕಡಾ 50.4 ರಷ್ಟು ಕುಸಿತ ಕಂಡಿದೆ ಎಂದು ವರದಿ ಹೇಳಿದೆ. 2010-12 ರಲ್ಲಿ 34.9 ಇದ್ದ ಐಎಂಆರ್‌ ಸರಾಸರಿ 17.3 ಕ್ಕೆ ಇಳಿದಿದೆ. ಕರ್ನಾಟಕದ ನಗರ ಮತ್ತು ಗ್ರಾಮೀಣ ಪ್ರದೇಶಗಳು ಇದೇ ರೀತಿಯ ಬೆಳವಣಿಗೆಯನ್ನು ಕಂಡಿವೆ, ಸುಮಾರು ಶೇಕಡಾ 50 ರಷ್ಟು ಕುಸಿತ ಕಂಡಿವೆ. ವೈದ್ಯರು ಇದಕ್ಕೆ ಉತ್ತಮ ಆರೋಗ್ಯ ನಿರ್ವಹಣೆ ಮತ್ತು ರಾಜ್ಯದಲ್ಲಿ ಸುಧಾರಿತ ನವಜಾತ ಶಿಶು ಆರೈಕೆ ಕಾರಣ ಎಂದು ಹೇಳುತ್ತಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಪ್ರಮುಖ ನವಜಾತ ಶಿಶುಶಾಸ್ತ್ರಜ್ಞ ಮತ್ತು ಹಿರಿಯ ಸಲಹೆಗಾರ ಡಾ. ರಜತ್ ಆತ್ರೇಯ, ಸರ್ಕಾರಿ ಮತ್ತು ಖಾಸಗಿ ಅರೋಗ್ಯ ಕೇಂದ್ರಗಳು ಇದಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

“ಕಳೆದ ಕೆಲವು ವರ್ಷಗಳಿಂದ, ಸಾಂಸ್ಥಿಕ ಹೆರಿಗೆಗಳು ಮತ್ತು ಸುರಕ್ಷಿತ ಹೆರಿಗೆ ಪದ್ಧತಿಗಳು ಹೆಚ್ಚಿವೆ. ಅನೇಕ ಸರ್ಕಾರಿ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಮತ್ತು ವಿಶೇಷ ನವಜಾತ ಶಿಶು ಆರೈಕೆ ಘಟಕಗಳನ್ನು (SNCU) ಸ್ಥಾಪಿಸಲಾಗಿದೆ. ತಂತ್ರಜ್ಞಾನ ಮತ್ತು ಮೂಲಸೌಕರ್ಯಗಳು ಸಹ ಸುಧಾರಿಸಿವೆ” ಎಂದು ಅವರು ಹೇಳಿದ್ದಾರೆ.

ಸೋಂಕು, ಅಕಾಲಿಕ ಜನನಗಳು ಮತ್ತು ಜನ್ಮಜಾತ ದೋಷಗಳು ಶಿಶು ಮರಣದ ಪ್ರಮುಖ ಕಾರಣಗಳು ಇನ್ನೂ ಸವಾಲುಗಳಾಗಿ ಉಳಿದಿವೆ ಎಂದು ಅವರು ಹೇಳಿದ್ದಾರೆ. “ಸೋಂಕುಗಳನ್ನು ನಿಯಂತ್ರಿಸುವ ಮೂಲಕ ಮತ್ತು ಅಕಾಲಿಕ ಶಿಶುಗಳಿಗೆ ಉತ್ತಮ ಆರೈಕೆಯನ್ನು ನೀಡುವ ಮೂಲಕ ಸಾವುಗಳು ಕಡಿಮೆಯಾಗುತ್ತಿವೆ. ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳಲ್ಲಿ ಖಾಸಗಿ ಸೌಲಭ್ಯಗಳಿಗೆ ಜನರಿಗೆ ಪ್ರವೇಶ ಸುಧಾರಿಸಿದೆ ಮತ್ತು ಲಸಿಕೆ ವ್ಯಾಪ್ತಿಯೂ ಸುಧಾರಿಸಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಾದೇಶಿಕ ಅಸಮಾನತೆಯನ್ನು ಕಡಿಮೆ ಮಾಡುವುದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿ ಮಾಡಿರುವುದನ್ನು ಪುನರಾವರ್ತಿಸುವ ಮೂಲಕ ಮಾನವ ಸಂಪನ್ಮೂಲ ಮತ್ತು ಮೂಲಸೌಕರ್ಯವನ್ನು ಸುಧಾರಿಸುವುದು ಮತ್ತು ಲಭ್ಯವಿರುವ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವುದು ಸುಧಾರಣೆಯ ಕ್ಷೇತ್ರಗಳಾಗಿರಬೇಕು ಎಂದು ಅವರು ಹೇಳಿದ್ದಾರೆ ಎಂದು ವರದಿ ಹೇಳಿದೆ.

ನವಜಾತ ಶಿಶು ಮರಣವು ಅತ್ಯಂತ ದೊಡ್ಡ ಕಳವಳಕಾರಿ ವಿಷಯವಾಗಿದೆ ಎಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನವಜಾತ ಶಿಶುಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಮನ್ ರಾವ್ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. 2030 ರ ವೇಳೆಗೆ ನವಜಾತ ಶಿಶು ಮರಣವನ್ನು ಒಂದೇ ಅಂಕಿಗೆ ಇಳಿಸುವ ಗುರಿಯನ್ನು ಸಾಧಿಸಲು ಸರ್ಕಾರದೊಂದಿಗೆ ಸಹಭಾಗಿತ್ವ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನವಜಾತ ಶಿಶು ಮರಣ ಪ್ರಮಾಣ, ಅಂದರೆ ಜನನದ 28 ದಿನಗಳಲ್ಲಿ ಸಾಯುವ ಶಿಶುಗಳ ಸಂಖ್ಯೆ, ಒಂದು ಪ್ರಮುಖ ಕಳವಳಕಾರಿ ವಿಷಯವಾಗಿದೆ. 2021 ರಲ್ಲಿ ಭಾರತದ ನವಜಾತ ಶಿಶು ಮರಣ ಪ್ರಮಾಣ(NMR) 19 ರಷ್ಟಿತ್ತು, ಆದರೆ ಕರ್ನಾಟಕದ ಪ್ರಮಾಣ 13 ರಷ್ಟಿತ್ತು. 2022ರಲ್ಲಿ ಇದು ಭಾರತದಾದ್ಯಂತ ಸರಾಸರಿ 19 ರಷ್ಟಿದ್ದರೆ, ಕರ್ನಾಟಕದಲ್ಲಿ 12 ಕ್ಕೆ ಇಳಿದಿದೆ.

ರಾಜ್ಯದಲ್ಲಿ ಕಾಂಗರೂ ತಾಯಿಯ ಆರೈಕೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಆರೈಕೆಯ ಗುಣಮಟ್ಟದಲ್ಲಿನ ಒಟ್ಟಾರೆ ಸುಧಾರಣೆಯು ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಕಾಂಗರೂ ಆರೈಕೆ ಅಥವಾ ಕಾಂಗರೂ ತಾಯಿಯ ಆರೈಕೆ ಎಂದರೆ ನವಜಾತ ಶಿಶುಗಳನ್ನು ತಾಯಿಯ ಎದೆಯ ಮೇಲೆ ಇರಿಸಿ ಬೆಚ್ಚಗೆ ಇಡುವ ವಿಧಾನ. ಇದು ವಿಶೇಷವಾಗಿ ಕಡಿಮೆ ತೂಕದ ಅಥವಾ ಅಕಾಲಿಕವಾಗಿ ಜನಿಸಿದ ಶಿಶುಗಳಿಗೆ ಬಹಳ ಮುಖ್ಯವಾಗಿದೆ.

“ಅವಧಿಪೂರ್ವ ಜನನವಾದ ಮಹಿಳೆಯರಿಗೆ ಪ್ರಸವಪೂರ್ವ ಕಾರ್ಟಿಕೊಸ್ಟೆರಾಯ್ಡ್‌ಗಳನ್ನು ಸರಿಯಾದ ಸಮದಯದಲ್ಲಿ ನೀಡುವುದನ್ನು ನಾವು ಸುಧಾರಿಸಬೇಕಾಗಿದೆ. ಇದರಿಂದಾಗಿ ಶಿಶುಗಳು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಜನನದ ಸಮಯದಲ್ಲಿ ನವಜಾತ ಶಿಶುಗಳಿಗೆ ನೀಡಲಾಗುವ ಆರೈಕೆ ಸುಧಾರಿಸಬೇಕಾಗಿದೆ. ಪ್ರತಿಯೊಂದು ಹೆರಿಗೆ ಸೌಲಭ್ಯದಲ್ಲಿ ಕನಿಷ್ಠ ಒಬ್ಬ ವ್ಯಕ್ತಿಯಾದರೂ ಮೂಲಭೂತ ನವಜಾತ ಶಿಶು ಪುನರುಜ್ಜೀವನದಲ್ಲಿ ತರಬೇತಿ ಪಡೆಯುವ ಗುರಿಯನ್ನು ನಾವು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕಾರ್ಟಿಕೊಸ್ಟೆರಾಯ್ಡ್‌ಗಳು ಗರ್ಭಿಣಿಯರಿಗೆ ನೀಡಲಾಗುವ ಔಷಧಿಗಳಾಗಿದ್ದು, ಸಾಮಾನ್ಯವಾಗಿ ಇಂಜೆಕ್ಷನ್ ಮೂಲಕ ಇದನ್ನು ನೀಡಲಾಗುತ್ತದೆ. ವಿಶೇಷವಾಗಿ ಅವಧಿಪೂರ್ವ ಜನನದ ಅಪಾಯವಿದ್ದಾಗ, ಇದು ಭ್ರೂಣದಲ್ಲಿ ಶ್ವಾಸಕೋಶದ ಬೆಳವಣಿಗೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ. ಈ ಸ್ಟೀರಾಯ್ಡ್‌ಗಳು ಅವಧಿಪೂರ್ವ ಜನನವಾಗುವ ಶಿಶುಗಳಿಗೆ ಉಸಿರಾಟದ ತೊಂದರೆಗಳು ಮತ್ತು ಇತರ ತೊಡಕುಗಳ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಕಳೆದ 10 ವರ್ಷಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯುಪಿ | ಎಕೆ-47ನ 70 ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸೈನಿಕನ ಬಂಧನ

ಯುಪಿ | ಎಕೆ-47ನ 70 ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸೈನಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...