Homeಮುಖಪುಟಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡಲಿದ್ದಾರೆ: ಅಮಿತ್ ಶಾ

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡಲಿದ್ದಾರೆ: ಅಮಿತ್ ಶಾ

- Advertisement -
- Advertisement -

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುವಂತೆ ಆಗಲಿದ್ದು, ಅಂತಹ ಸಮಾಜ ಸೃಷ್ಟಿಯಾಗುವ ದಿನ ದೂರವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ ಎಂದು ಗುರುವಾರ ಮಾಧ್ಯಮಗಳು ವರದಿ ಮಾಡಿವೆ. “ನಮ್ಮ ಸಂಸ್ಕೃತಿ, ನಮ್ಮ ಇತಿಹಾಸ ಮತ್ತು ನಮ್ಮ ಧರ್ಮವನ್ನು ವಿದೇಶಿ ಭಾಷೆಗಳಲ್ಲಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ. ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು

“ಆಧಿ-ಅಧುರಿ [ಅಪೂರ್ಣ] ಆಗಿರುವ ವಿದೇಶಿ ಭಾಷೆಗಳಿಂದ ಸಂಪೂರ್ಣ ಭಾರತವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ. ಅದು ಭಾರತೀಯತೆ, ಭಾರತೀಯ ಭಾಷೆಗಳೊಂದಿಗೆ ಮಾತ್ರ ಸಾಧ್ಯ” ಎಂದು ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅಮಿತ್‌ ಶಾ ಹೇಳಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಭಾಷೆಗಳನ್ನು “ನಮ್ಮ ಸಂಸ್ಕೃತಿಯ ರತ್ನಗಳು” ಎಂದು ಕರೆದ ಅವರು, ಅವುಗಳಿಲ್ಲದೆ, “ನಾವು ಭಾರತೀಯರಾಗುವುದನ್ನು ನಿಲ್ಲಿಸಿ ಬಿಡುತ್ತೇವೆ” ಎಂದು ಹೇಳಿದ್ದಾರೆ.

ಅಮಿತ್‌ ಶಾ ಅವರು ಜೂನ್ 6 ರಂದು ಭಾರತೀಯ ಭಾಷಾ ಅನುಭಾಗ್ ಅಥವಾ ಭಾರತೀಯ ಭಾಷಾ ವಿಭಾಗವನ್ನು ಪ್ರಾರಂಭಿಸಿದ್ದರು. ಈ ಉಪಕ್ರಮವು ಎಲ್ಲಾ ಭಾರತೀಯ ಭಾಷೆಗಳಿಗೆ ಸಂಘಟಿತ ವೇದಿಕೆಯನ್ನು ರಚಿಸುವ ಗುರಿಯನ್ನು ಹೊಂದಿದ್ದು, ಇದು “ಆಡಳಿತವನ್ನು ವಿದೇಶಿ ಭಾಷೆಗಳ ಪ್ರಭಾವದಿಂದ ಮುಕ್ತಗೊಳಿಸುವ” ಉದ್ದೇಶವನ್ನು ಹೊಂದಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯ ತ್ರಿಭಾಷಾ ಸೂತ್ರದ ಮೂಲಕ ಕೇಂದ್ರ ಸರ್ಕಾರವು ಹಿಂದಿಯನ್ನು ಹೇರುತ್ತಿದೆ ಎಂದು ಹಲವಾರು ರಾಜ್ಯ ಸರ್ಕಾರಗಳು ಮತ್ತು ಪ್ರಾದೇಶಿಕ ಪಕ್ಷಗಳು ಆರೋಪಿಸುತ್ತಿರುವ ಮಧ್ಯೆಯೆ ಗೃಹ ಸಚಿವ ಅಮಿತ್ ಶಾ ಈ ಹೇಳಿಕೆ ಗುರುವಾರ ನೀಡಿದ್ದಾರೆ.

ಮಂಗಳವಾರವಷ್ಟೆ, ಮಹಾರಾಷ್ಟ್ರ ಸರ್ಕಾರವು ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯನ್ನು “ಸಾಮಾನ್ಯವಾಗಿ” ಕಲಿಸುವ ಮೂರನೇ ಭಾಷೆ ಎಂದು ಆದೇಶ ಹೊರಡಿಸಿತ್ತು. ಮರಾಠಿ ಭಾಷಾ ಪರ ಹೋರಾಟಗಾರರು ಈ ಕ್ರಮವನ್ನು ಟೀಕಿಸಿದ್ದು, ಸರ್ಕಾರವು “ಹಿಂಬಾಗಿಲಿನ” ಮೂಲಕ ತ್ರಿಭಾಷಾ ಸೂತ್ರವನ್ನು ಮತ್ತೆ ಪರಿಚಯಿಸುತ್ತಿದೆ ಎಂದು ಆರೋಪಿಸಿದ್ದಾರೆ.

ತಮಿಳುನಾಡು ಮತ್ತು ಕರ್ನಾಟಕ ಕೂಡ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆಗಳನ್ನು ಮಾಡುತ್ತಲೆ ಇವೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಸೂತ್ರವನ್ನು ತಮಿಳುನಾಡು ನಿರಂತರವಾಗಿ ವಿರೋಧಿಸಿತ್ತಿದೆ. ರಾಜ್ಯದಲ್ಲಿ ತಮಿಳು ಮತ್ತು ಇಂಗ್ಲಿಷ್ ಭಾಷೆಯನ್ನು ಮಾತ್ರ ವಿದ್ಯಾರ್ಥಿಗಳಿಗೆ ಕಲಿಸುವ ದಶಕಗಳಷ್ಟು ಹಳೆಯದಾದ ದ್ವಿಭಾಷಾ ನೀತಿಯನ್ನು ತಾನು ಬದಲಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2 ಲಕ್ಷ ಇರಾಕಿಗಳ ಹತ್ಯೆ ಮಾಡಿದ್ದ ಅಮೆರಿಕ: ಈ ಯುದ್ಧದ ಇತಿಹಾಸ ಮರುಕಳಿಸದಿರಲಿ

2 ಲಕ್ಷ ಇರಾಕಿಗಳ ಹತ್ಯೆ ಮಾಡಿದ್ದ ಅಮೆರಿಕ: ಈ ಯುದ್ಧದ ಇತಿಹಾಸ ಮರುಕಳಿಸದಿರಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...