HomeUncategorizedಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

ಉತ್ತರಪ್ರದೇಶ: ಶ್ರಾವಸ್ತಿಯಲ್ಲಿ 65 ವರ್ಷ ಹಳೆಯ ಮದರಸಾ ನೆಲಸಮ: ವ್ಯಾಪಕ ಆಕ್ರೋಶ-ವೀಡಿಯೋ

- Advertisement -
- Advertisement -

ಉತ್ತರಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಫತೇಹ್‌ಪುರ್ ಬಂಗೈ ಗ್ರಾಮದಲ್ಲಿರುವ 65 ವರ್ಷಗಳ ಹಳೆಯ ಇಸ್ಲಾಮಿಯಾ ಅರೇಬಿಯಾ ಅನ್ವರುಲ್ ಉಲೂಮ್ ಮದರಸಾವನ್ನು ಸ್ಥಳೀಯ ಆಡಳಿತವು ನೆಲಸಮಗೊಳಿಸಿದೆ. ಈ ಕುರಿತು ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ (ಜೂನ್ 19) ಸ್ಥಳೀಯ ತಹಸೀಲ್ದಾರ್ ಜಮುನ್ಹಾ ಅವರ ಆದೇಶದ ಮೇರೆಗೆ ಈ ಮದರಸಾದ ನೆಲಸಮಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಗಿದೆ. ‘ಮದರಸಾವನ್ನು ಗ್ರಾಮಸಭಾ ಭೂಮಿಯಲ್ಲಿ  ಅನುಮತಿಯಿಲ್ಲದೆ ಕಟ್ಟಲಾಗಿತ್ತು. ಈ ಭೂಮಿ ಸರ್ಕಾರಕ್ಕೆ ಸೇರಿದ್ದಾಗಿದೆ. ಇದಕ್ಕೂ ಮೊದಲು ಮದರಸಾ ಸಂಸ್ಥೆಗೆ ಅನೇಕ ನೋಟಿಸ್‌ಗಳನ್ನು ನೀಡಲಾಗಿದೆ’ ಎಂದು ತಹಸೀಲ್ದಾರ್ ಹೇಳಿದರು.

ಸ್ಥಳೀಯ ಗ್ರಾಮಸ್ಥರು ಮತ್ತು ಮುಸ್ಲಿಂ ಮುಖಂಡರು ತಹಶೀಲ್ದಾರ್ ಅವರ ಈ ಹೇಳಿಕೆಯನ್ನು ಆಕ್ಷೇಪಿಸಿದ್ದಾರೆ.  “ಈ ಮದರಸಾ ಆರು ದಶಕಗಳಿಂದ ನಮ್ಮ ಮಕ್ಕಳಿಗೆ ಶಿಕ್ಷಣ ನೀಡುತ್ತಿದೆ” ಎಂದು ಸ್ಥಳೀಯ ನಿವಾಸಿ ಅಬ್ದುಲ್ ರಶೀದ್ ಹೇಳುತ್ತಾರೆ.

ಶ್ರಾವಸ್ತಿಯಲ್ಲಿರುವ 297 ಮದರಸಾಗಳಲ್ಲಿ ಕೇವಲ 105 ಮಾತ್ರ ಉತ್ತರಪ್ರದೇಶ ಮದರಸಾ ಮಂಡಳಿಯಿಂದ ಅಧಿಕೃತವಾಗಿ ಗುರುತಿಸಲ್ಪಟ್ಟಿವೆ. ಉಳಿದವುಗಳನ್ನು ಅಕ್ರಮ ಎಂದು ಸರಕಾರವು ಹಣೆಪಟ್ಟಿ ಹಚ್ಚಿ ಅವುಗಳನ್ನು ನೆಲಸಮಗೊಳಿಸುತ್ತಿದೆ.

ಈ 65 ವರ್ಷಗಳ ಹಳೆಯ ಮದರಸಾದ ಕೆಡವಿದ ದಿನವೇ, ಹರ್ದತ್ತ್ ನಗರ ಗಿರಂಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗಂಪುರ್ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ಇನ್ನೂ ಎರಡು ಮದರಸಾಗಳನ್ನು ನೆಲಸಮಗೊಳಿಸಲಾಗಿದೆ.

ಅದು ಯಾರೇ ಭಾಗಿಯಾಗಿರಲಿ, ಸರ್ಕಾರಿ ಭೂಮಿಯ ಮೇಲಿನ ಅತಿಕ್ರಮಣವನ್ನು ಸಹಿಸಲಾಗುವುದಿಲ್ಲ ಎಂದು ಸ್ಥಳೀಯ ಆಡಳಿತದ ಅಧಿಕಾರಿಗಳು ಹೇಳಿದ್ದಾರೆ.

 ಸರ್ಕಾರದ ಈ ಬುಲ್ಡೋಜರ್ ನೀತಿಯು ಮುಸ್ಲಿಂ ಸಮುದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಮದರಸಾಗಳು ಕಲಿಕೆ ಮತ್ತು ಶಾಂತಿಯ ಕೇಂದ್ರಗಳಾಗಿವೆ ಎಂದು ಶ್ರಾವಸ್ತಿಯ ಧಾರ್ಮಿಕ ವಿದ್ವಾಂಸ ಮೌಲಾನಾ ಇಮ್ರಾನ್ ಖುರೇಶಿ ಹೇಳಿದರು.

ದೇಶದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಸೀದಿಗಳು, ಮದರಸಾಗಳು, ಈದ್ಗಾಗಳು ಮತ್ತು ಸ್ಮಶಾನಗಳನ್ನು ವ್ಯಾಪಕವಾಗಿ ಗುರಿಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ರಾಜಕೀಯ ಒತ್ತಡದಲ್ಲಿ ಶತಮಾನಗಳಷ್ಟು ಹಳೆಯ ಮದರಸಾಗಳನ್ನು ಬುಲ್ಡೋಜರ್‌ನಿಂದ ಕೆಡವುದು ನಮ್ಮ ಗುರುತಿನ ಮೇಲೆ ನಡೆಸಿದ ದಾಳಿಯಾಗಿದೆ ಎಂದು ಸಮುದಾಯದ ನಾಯಕ ರಹೀಮ್ ಖಾನ್ ಅವರು ಕಳವಳ ವ್ಯಕ್ತಪಡಿಸಿದರು.

ನಾನು ಕಾನೂನು ಮತ್ತು ಸುವ್ಯವಸ್ಥೆಯನ್ನು ವಿರೋಧಿಸುವುದಿಲ್ಲ. ಆದರೆ ಏಕೆ ಕೇವಲ ಮುಸ್ಲಿಂ ಸಂಸ್ಥೆಗಳನ್ನು ಮಾತ್ರ ಗುರಿಪಡಿಸಲಾಗುತ್ತಿದೆ? ಎಂದು ಸಾಮಾಜಿಕ ಕಾರ್ಯಕರ್ತ ಫೈಜಾನ್ ಅಹ್ಮದ್ ಪ್ರಶ್ನಿಸಿದರು.

ಜಿಲ್ಲೆಯಾದ್ಯಂತ ಹೆಚ್ಚಿನ ಮದರಸಾಗಳ ಕುರಿತ ತನಿಖೆಗಳು ಮುಂದುವರಿಯುತ್ತಿವೆ. ಸಮುದಾಯವು ಇಂತಹ ನೆಲಸಮ ಕಾರ್ಯಾಚರಣೆಯ ಬದಲು ನ್ಯಾಯಕ್ಕಾಗಿ ಆಶಿಸುತ್ತಿದೆ. ನಮಗೆ ಶಾಂತಿ, ಗೌರವ ಮತ್ತು ಮಕ್ಕಳಿಗೆ ಶಿಕ್ಷಣ ನೀಡುವ ಹಕ್ಕು ಬೇಕು ಎಂದು ಅಬ್ದುಲ್ ರಶೀದ್ ಹೇಳಿದರು.

ಇನ್ನು ಮುಂದೆ ನೆಲಸಮಗೊಳಿಸಬೇಕೆಂದು ಗುರುತಿಸಲ್ಪಟ್ಟ ಮದರಸಾಗಳನ್ನು ರಕ್ಷಿಸಲು ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಮಧ್ಯಪ್ರವೇಶಿಸುವಂತೆ ಮನವಿ ಸಲ್ಲಿಸಲು ಯೋಜಿಸಿವೆ.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...