Homeಕರ್ನಾಟಕನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಲಿ: ಬಸವರಾಜ್ ಕೌತಾಳ್

ನಾಗಮೋಹನ್ ದಾಸ್ ಆಯೋಗವು ಸಮೀಕ್ಷೆ ಅವಧಿ ವಿಸ್ತರಿಸದೆ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಲಿ: ಬಸವರಾಜ್ ಕೌತಾಳ್

- Advertisement -
- Advertisement -

ಬೆಂಗಳೂರು: ನಾಗಮೋಹನ್ ದಾಸ್ ಆಯೋಗವು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅನುಷ್ಠಾನಕ್ಕಾಗಿ ನಡೆಸುತ್ತಿರುವ ಸಮೀಕ್ಷೆ ಅವಧಿಯನ್ನು ವಿಸ್ತರಿಸದೆ ಅದಷ್ಟು ಬೇಗ ವರದಿ ನೀಡಿ, ಒಳಮೀಸಲಾತಿ ಅನುಷ್ಠಾನಗೊಳಿಸಬೇಕೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಬಸವರಾಜ್‌ ಕೌತಾಳ್‌ ಒತ್ತಾಯಿಸಿದ್ದಾರೆ.

ಇಂದು (ಜೂ.20) ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 2025ರ ಮೇ 5ರಂದು ಹೊಸ ತಂತ್ರಜ್ಞಾನ ಸಹಾಯದಿಂದ ಜಿಪಿಎಸ್‌ ಬಳಸಿ ವೈಜ್ಞಾನಿಕವಾಗಿ ಸಮೀಕ್ಷೆ ಕೆಲಸ ಆರಂಭಿಸಿದ ಆಯೋಗವು ಎರಡು ಬಾರಿ ಅವದಿಯನ್ನು ವಿಸ್ತರಣೆ ಮಾಡಿದೆ. 2011ರ ಜನಗಣತಿಯ ಆಧಾರದಲ್ಲಿ ಆಯಾ ಜಿಲ್ಲೆಗಳ ಪರಿಶಿಷ್ಟರ ಜನಗಣತಿಯನ್ನು ನಡೆಸಿದೆ. ಸಮೀಕ್ಷೆಯಲ್ಲಿ ಕೆಲವು ಜಿಲ್ಲೆಗಳಲ್ಲಿ 100ರಷ್ಟು ಸಮೀಕ್ಷೆಯಲ್ಲಿ ಪಾಲ್ಗೊಂಡು ಮಾಹಿತಿಯನ್ನು ಒದಗಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ 100ರಷ್ಟು ಸಮೀಕ್ಷೆ ನಡೆಸಲು ಸಾಧ್ಯವಾಗಲಿಲ್ಲ. ಒಟ್ಟಾರೆಯಾಗಿ ಶೇ.91-92ರಷ್ಟು ಸಮೀಕ್ಷೆ ಮುಗಿದಿದೆ ಎಂದು ಆಯೋಗವು ಹೇಳುತ್ತಿದೆ. ಇದರ ಕುರಿತೂ ಆಯೋಗವು ಸಮುದಾಯಗಳ ಮುಖಂಡರನ್ನು ಸಮೀಕ್ಷೆಯಲ್ಲಿ ಸಹಕರಿಸುವಂತೆ ಕೋರಿತ್ತು. ಈಗ ಸಮೀಕ್ಷೆಯ ಕಾಲಾವಧಿಯು ಮುಗಿಯುತ್ತಿದ್ದು, ಅವಧಿಯನ್ನು ವಿಸ್ತರಿಸಬೇಕೆಂಬ ಕೂಗು ಕೇಳಿಬರುತ್ತಿದೆ. ಈ ಅವಧಿಯನ್ನು ವಿಸ್ತರಿಸಬಾರದು ಎಂದು ಕೌತಾಳ್ ಆಗ್ರಹಿಸಿದರು.

ಒಳಮೀಸಲಾತಿ ಅನುಷ್ಠಾನ ಸಂಬಂಧ 2024ರ ನವೆಂಬರ್‌ 13ರಂದು ಸರ್ಕಾರದ ಸಚಿವ ಸಂಪುಟ ಸಭೆಯು ಜಸ್ಟೀಸ್‌ ನಾಗಮೋಹನ್‌ ದಾಸ್‌ರವರ ಏಕಸದಸ್ಯ ಆಯೋಗವನ್ನು ನೇಮಿಸಿ 2 ತಿಂಗಳ ಕಾಲಾವಕಾಶ ನೀಡಿತ್ತು. ಅಲ್ಲದೇ ವರದಿ ಬರುವವರೆಗೂ, ಒಳಮೀಸಲಾತಿ ಜಾರಿಯಾಗುವವರೆಗೂ ಯಾವುದೇ ಹೊಸ ನೇಮಕಾತಿಯನ್ನು ನಡೆಸದಂತೆ ತೀರ್ಮಾನಿಸಿತ್ತು. 3 ತಿಂಗಳ ಕಾಲಾವಧಿಯ ನಂತರದಲ್ಲಿ ಪರಿಶಿಷ್ಟ ಜಾತಿಗಳ ಒತ್ತಡ ಹೆಚ್ಚಾದ ಕಾರಣ ಜಸ್ಟೀಸ್‌ ನಾಗಮೋಹನ್‌ ದಾಸ್‌ ಏಕಸದಸ್ಯ ಆಯೋಗವು ಮಧ್ಯಂತರ ವರದಿಯನ್ನು 2025ರ ಮಾ.27ರಂದು ಸರ್ಕಾರಕ್ಕೆ ಸಲ್ಲಿಸಿತ್ತು ಎಂದು ಹೇಳಿದರು.

ಈ ಮಧ್ಯಂತರ ವರದಿಯ ಶಿಫಾರಸ್ಸುಗಳಲ್ಲಿ ಮುಖ್ಯವಾಗಿ ಈಗ ಲಭ್ಯವಿರುವ ಯಾವುದೇ ವರದಿ, ದತ್ತಾಂಶಗಳಲ್ಲಿ ವೈಜ್ಞಾನಿಕ ಜನಸಂಖ್ಯೆಯ ಮಾಹಿತಿ ಇಲ್ಲದ ಕಾರಣ ಪರಿಶಿಷ್ಟ ಜಾತಿಗಳ ಸಮೀಕ್ಷೆ ನಡೆಸಬೇಕೆಂದು ತಿಳಿಸಿತ್ತು. ಇದಕ್ಕೆ ಶಾಶ್ವತ ಪರಿಹಾರವೆಂದೇ ಅರಿತಿದ್ದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ನಿರಂತರವಾಗಿ ವೈಜ್ಞಾನಿಕ ಸಮೀಕ್ಷೆ ನಡೆಸಿ 101 ಜಾತಿಗಳಿಗೂ ಜನಸಂಖ್ಯೆಯ ಆಧಾರದಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡುವಂತೆ ಒತ್ತಾಯಿಸಿತ್ತು. ಸರ್ಕಾರವು ಜಸ್ಟೀಸ್‌ ನಾಗಮೋಹನ್‌ ದಾಸ್‌ ನೇತೃತ್ವದಲ್ಲಿ 60 ದಿನಗಳ ಕಾಲಾವಕಾಶ ನೀಡಿ ಸಮೀಕ್ಷೆ ನಡೆಸಲು ಆದೇಶ ನೀಡಿತ್ತು ಎಂದು ಮಾಹಿತಿ ನೀಡಿದರು.

ಈಗಾಗಲೇ ಸರ್ವೋಚ್ಚ ನ್ಯಾಯಾಲಯವು ಆದೇಶ ನೀಡಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ವಿಳಂಬವನ್ನು ಮಾಡದೆ, ಒಳಮೀಸಲಾತಿ ಜಾರಿ ಮಾಡಲು ಸರ್ಕಾರ ಮುಂದಾಗಬೇಕಿದೆ. ಯಾವ ಕಾರಣಕ್ಕೂ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಬಾರದೆಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟವು ಸರ್ಕಾರವನ್ನೂ ಹಾಗೂ ಜಸ್ಟೀಸ್‌ ನಾಗಮೋಹನ್‌ದಾಸ್‌ ಆಯೋಗವನ್ನು ಒತ್ತಾಯಿಸುತ್ತದೆ ಎಂದು ಅವರು ಹೇಳಿದರು.

30 ವರ್ಷಗಳ ಒಳಮೀಸಲಾತಿಗಾಗಿ ನಡೆದ ಹೋರಾಟವನ್ನು ಪರಿಗಣಿಸಿ  ಸರ್ವೋಚ್ಚ ನ್ಯಾಯಾಲಯವು 2024ರ ಆಗಸ್ಟ್ 1ರಂದು ಒಳಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿ ತೀರ್ಪು ನೀಡಿದೆ. ಅಲ್ಲದೇ ಸೂಕ್ತ ದತ್ತಾಂಶಗಳ ಸಹಾಯದಿಂದ ಒಳಮೀಸಲಾತಿಯನ್ನು ಜಾರಿ ಮಾಡುವಂತೆಯೂ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿದೆ. ಕರ್ನಾಟಕದಲ್ಲಿ ಈಗಾಗಲೇ ಪರಿಶಿಷ್ಟ ಜಾತಿಗಳ ಜನಸಂಖ್ಯೆಯನ್ನು ಅಧ್ಯಯನ ಮಾಡಲು ನೇಮಿಸಿದ್ದ ನ್ಯಾ. ಎ.ಜೆ ಸದಾಶಿವ ಆಯೋಗದ ವರದಿಯನ್ನು ಸರಿಯಾದ ವೈಜ್ಞಾನಿಕ ದತ್ತಾಂಶಗಳು ಇಲ್ಲದ ಕಾರಣ ಹಲವು ಪರಿಶಿಷ್ಟ ಜಾತಿಗಳು ವಿರೋಧಿಸಿದ್ದವು. ಒತ್ತಡಕ್ಕೆ ಮಣಿದ ಸರ್ಕಾರ ನಿವೃತ್ತ ನ್ಯಾಯಾಧೀಶರಾದ ನಾಗಮೋಹನ್‌ ದಾಸ್‌ ರವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಆದೇಶಿಸಿತ್ತು. ಆಯೋಗಕ್ಕೆ ಸೂಕ್ತ ಕಾರ್ಯಸೂಚಿ ನೀಡಲು, ಕಛೇರಿಯನ್ನು ಒದಗಿಸಲೂ ಹೋರಾಟ ನಡೆಸಬೇಕಾಗಿಯಿತು ಎಂದು ಮಾಹಿತಿ ಕೌತಳ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಕನಕಪುರ, ಚಂದ್ರು ತರಹುಣಿಸೆ, ವೇಣುಗೋಪಾಲ್‌ ಮೌರ್ಯ ಉಪಸ್ಥಿತರಿದ್ದರು.

ಗಾಜಾ ನರಮೇಧ: ಹೈದರಾಬಾದ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಎದುರು ಪ್ರತಿಭಟನೆ; ವಿದ್ಯಾರ್ಥಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...