Homeಕರ್ನಾಟಕಯಾದಗಿರಿ | ರಸ್ತೆಯ ಮಧ್ಯೆ ಅಡ್ಡಗಟ್ಟಿ ದಲಿತ ಯುವಕರಿಗೆ ಥಳಿತ; ಜಾತಿ ನಿಂದನೆ

ಯಾದಗಿರಿ | ರಸ್ತೆಯ ಮಧ್ಯೆ ಅಡ್ಡಗಟ್ಟಿ ದಲಿತ ಯುವಕರಿಗೆ ಥಳಿತ; ಜಾತಿ ನಿಂದನೆ

- Advertisement -
- Advertisement -

ದಲಿತ ಯುವಕರಿಬ್ಬರನ್ನು ರಸ್ತೆಯ ಮಧ್ಯೆ ಅಡ್ಡಗಟ್ಟಿ ಜಾತಿ ನಿಂದನೆ ಮಾಡಿರುವ ಘಟನೆ ಯಾದರಿಗಿ ಜಿಲ್ಲೆಯ ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 17ರ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಇಬ್ಬರು ದುಷ್ಕರ್ಮಿಗಳ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಾಗಿದೆ. ಅಲ್ಲದೆ, ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಯಾದಗಿರಿ | ರಸ್ತೆಯ ಮಧ್ಯೆ

ವೈರಲ್ ವಿಡಿಯೊದಲ್ಲಿ ದುಷ್ಕರ್ಮಿಗಳು ದಲಿತ ಯುವಕರಿಬ್ಬರನ್ನು ಅಡ್ಡಗಟ್ಟಿ, “ನಿನ್ ಜಾತಿ ಯಾವ್ದು..? ನಿನ್ನ ಜಾತಿ ಯಾವ್ದು ಹೇಳಲೇ? ನೀನು ಮಾದಾರನ್ (ಮಾದಿಗ) ಹೌದೋ, ಅಲ್ವೋ? ನಾವು ಕುರುಬರು” ಎಂದು ಹೇಳುವುದು ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ದಾಖಲಾದ ಎಫ್‌ಐಅರ್ ನಾನುಗೌರಿ.ಕಾಂಗೆ ಲಭ್ಯವಾಗಿದ್ದು, ಆರೋಪಿಗಳನ್ನು ಕುರುಬ ಸಮುದಾಯದ ಮಲ್ಲಯ್ಯ ಮತ್ತು ಅರ್ಜಿನ ಎಂದು ಎಫ್‌ಐಆರ್‌ನಲ್ಲಿ ಗುರುತಿಸಲಾಗಿದೆ.

ಏನಿದು ಘಟನೆ?

ವೃತ್ತಿಯಲ್ಲಿ ವಕೀಲರಾಗಿದ್ದು, ಮಾದಿಗ ಸಮುದಾಯಕ್ಕೆ ಸೇರಿದ ದುರ್ಗಪ್ಪ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಸುರಪುರ ತಾಲ್ಲೂಕಿನ ನಾಗರಾಳ ಗ್ರಾಮದ ನಿವಾಸಿಯಾದ ದುರ್ಗಪ್ಪ ಅವರು 17ನೇ ತಾರೀಖಿನಂದು ತಮ್ಮ ಗ್ರಾಮಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದುರ್ಗಪ್ಪ ಅವರ ಜೊತೆಗೆ ಅವರ ಮಾವ ವಿಜಯಕುಮಾರ್‌ ಕೂಡಾ ಜೊತೆಯಲ್ಲಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಲಾಗಿದೆ. “ಊರಿನ ಕ್ರಾಸ್ ಹತ್ತಿರದಲ್ಲಿನ ಬಲಭೀಮ ಎಂಬವರ ಅಂಗಡಿ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಕುರುಬ ಜಾತಿಗೆ ಸೇರಿದ ಮಲ್ಲಯ್ಯ ಮತ್ತು ಅರ್ಜುನ್ ಎಂಬವರು ತಮ್ಮನ್ನು ಕಂಡ ಕೂಡಲೇ ದಾರಿಗೆ ಅಡ್ಡಗಟ್ಟಿ ನಿಂತು ಜಾತಿ ನಿಂದನೆ ಮಾಡಿದ್ದಾರೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಯು, “ನಮ್ಮ ಎದುರಿಗೆ ಹೋಗುವುದಕ್ಕೆ ಎಷ್ಟು ಸೊಕ್ಕು? …. ಮಕ್ಕಳೇ ಇಲ್ಲಿ ತಿರುಗಾಡಿದರೆ ನಿಮ್ಮ ಕಾಲು ಕಡಿಯುತ್ತೇವೆ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ” ಎಂದು ದುರ್ಗಪ್ಪ ಅವರು ಹೇಳಿದ್ದಾರೆ.

ಅಲ್ಲದೆ, ಆರೋಪಿ ಅರ್ಜುನ, ನನ್ನ ಶರ್ಟ್ ಹಿಡಿದು ದೈಹಿಕ ಹಲ್ಲೆ ಕೂಡಾ ಮಾಡಿದ್ದು, ಮತ್ತೊಬ್ಬ ಆರೋಪಿ ಮಲ್ಲಯ್ಯ ತನ್ನ ಎಡಗಾಲಿನ ಚಪ್ಪಲಿ ಬಿಚ್ಚಿ ತಲೆಗೆ ಹೊಡೆದಿದ್ದಾರೆ ಎಂದು ದುರ್ಗಪ್ಪ ಅವರು ಹೇಳಿದ್ದಾರೆ. ದುರ್ಗಪ್ಪ ಅವರ ಜೊತೆಯಲ್ಲಿದ್ದ ವಿಜಯಕುಮಾರ್ ಅವರು ಬಿಡಿಸಲು ಹೋದಾಗ, ಮಲ್ಲಯ್ಯ ಅವರು ವಿಜಯಕುಮಾರ್ ಅವರ ಶರ್ಟ್ ಹಿಡಿದು ಹರಿದು ಹಾಕಿದ್ದಾರೆ ಎಂದು ದುರ್ಗಪ್ಪ ಅವರು ದೂರಿದ್ದಾರೆ.

ಘಟನೆ ಬಳಿಕ ಸಂತ್ರಸ್ತರು ಸುರಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚೇತರಿಸಿಕೊಂಡ ನಂತರ ಸುರಪುರ ಠಾಣೆಗೆ ಹಾಜರಾಗಿ ದೂರು ಕೊಟ್ಟಿದ್ದಾರೆ. ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115(2), 118(1), 126(2), 133, 352, 351(2), 3(5) ಮತ್ತು ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 3(1)(s), 3(2)(v-a) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

“ಇನ್ನೂ ಜಾತಿ ವೈಷಮ್ಯಗಳು ಭಾರತದಲ್ಲಿ ಜೀವಂತವಾಗಿವೆ ಎಂಬುದನ್ನು ಇಂತಹ ಘಟನೆಗಳು ತೋರಿಸುತ್ತವೆ. ಸರ್ಕಾರ ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮತ್ತಷ್ಟು ಬಿಗಿಯಾದ ಕಾನೂನನ್ನು ತರಬೇಕು. ವಕೀಲನಾದ ನನಗೆಯೇ ಈ ರೀತಿ ಆಗುತ್ತಿದೆ ಅಂದರೆ, ಜನಸಾಮಾನ್ಯರ ಗತಿ ಏನಾಗಬಹುದು?” ಎಂದು ಸಂತ್ರಸ್ತ ದುರ್ಗಪ್ಪ ಹೇಳಿರುವುದಾಗಿ ‘ಈ ದಿನ ಡಾಟ್ ಕಾಮ್’ ವರದಿ ಮಾಡಿದೆ.

“ಹಿಂದುಳಿದ ಯಾದಗಿರಿ ಜಿಲ್ಲೆಯಲ್ಲಿ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ಈ ಅಸ್ಪೃಶ್ಯತೆಯನ್ನು ಬೇರು ಸಹಿತ ಕಿತ್ತು ಹಾಕಬೇಕಾದರೆ ಎಲ್ಲರ ಸಹಕಾರ ಬೇಕು. ಆರೋಪಿಗಳನ್ನು ಬಂಧಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂಬ ಮಾಹಿತಿಯೂ ಇದೆ” ಎಂದು ಅವರು ಹೇಳಿದ್ದಾರೆ ಎಂದು ವರದಿ ಹೇಳಿದೆ. ಯಾದಗಿರಿ | ರಸ್ತೆಯ ಮಧ್ಯೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮಿತ್ ಶಾ ಇಂಗ್ಲಿಷ್ ವಿರೋಧಿ ಹೇಳಿಕೆ | ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನ ಎಂದ ಕೇರಳ ಸಚಿವರು

ಅಮಿತ್ ಶಾ ಇಂಗ್ಲಿಷ್ ವಿರೋಧಿ ಹೇಳಿಕೆ | ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನ ಎಂದ ಕೇರಳ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....