Homeಮುಖಪುಟದೆಹಲಿ ವಿಶ್ವವಿದ್ಯಾಲಯ: 'ಮಾತೃಭಾಷೆ' ವಿಭಾಗದಲ್ಲಿ 'ಉರ್ದು' ಕೈಬಿಟ್ಟು, 'ಮುಸ್ಲಿಂ' ಸೇರಿಸಿದ್ದಕ್ಕೆ ತೀವ್ರ ಆಕ್ರೋಶ

ದೆಹಲಿ ವಿಶ್ವವಿದ್ಯಾಲಯ: ‘ಮಾತೃಭಾಷೆ’ ವಿಭಾಗದಲ್ಲಿ ‘ಉರ್ದು’ ಕೈಬಿಟ್ಟು, ‘ಮುಸ್ಲಿಂ’ ಸೇರಿಸಿದ್ದಕ್ಕೆ ತೀವ್ರ ಆಕ್ರೋಶ

- Advertisement -
- Advertisement -

ಹೊಸದಿಲ್ಲಿ: ದೆಹಲಿ ವಿಶ್ವವಿದ್ಯಾಲಯದ (ಡಿ.ಯು.) ಪದವಿಪೂರ್ವ ಪ್ರವೇಶ ಪೋರ್ಟಲ್ ಗುರುವಾರದಿಂದ ಲಭ್ಯವಾಗಿದ್ದು, ‘ಮಾತೃಭಾಷೆ’ ವಿಭಾಗದಲ್ಲಿ ‘ಉರ್ದು’ ಭಾಷೆಯನ್ನು ಕೈಬಿಟ್ಟು ‘ಮುಸ್ಲಿಂ’ ಅನ್ನು ಒಂದು ಆಯ್ಕೆಯಾಗಿ ಪಟ್ಟಿ ಮಾಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಇದನ್ನು ವಾಸ್ತವಿಕವಾಗಿ ತಪ್ಪು ಮತ್ತು ಕೋಮು ಸಂವೇದನಾರಹಿತ ನಡೆಯಾಗಿದೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.

ಲಕ್ಷಾಂತರ ಜನರು, ವಿಶೇಷವಾಗಿ ಉತ್ತರ ಭಾರತದ ಮುಸ್ಲಿಂ ಸಮುದಾಯಗಳಲ್ಲಿ ವ್ಯಾಪಕವಾಗಿ ಮಾತನಾಡುವ, ಮತ್ತು ಸಂವಿಧಾನದ ಎಂಟನೇ ಅನುಸೂಚಿಯ ಅಡಿಯಲ್ಲಿ ಅಧಿಕೃತವಾಗಿ ಗುರುತಿಸಲ್ಪಟ್ಟ ಭಾಷೆಯಾದ ಉರ್ದುವನ್ನು ಪಟ್ಟಿಯಿಂದ ತೆಗೆದುಹಾಕಿರುವ ಹಿನ್ನೆಲೆಯಲ್ಲಿ ಈ ವಿವಾದ ಮತ್ತಷ್ಟು ತೀವ್ರಗೊಂಡಿದೆ.

ಅಲ್ಲದೆ, ಅರ್ಜಿ ನಮೂನೆಯಲ್ಲಿ ‘ಮಾತೃಭಾಷೆ’ ವಿಭಾಗದ ಅಡಿಯಲ್ಲಿ ‘ಬಿಹಾರಿ’, ‘ಚಮಾರ್’, ‘ಮಜ್ದೂರ್’, ‘ದೇಹಾತಿ’, ‘ಮೋಚಿ’ ಮತ್ತು ‘ಕುರ್ಮಿ’ ನಂತಹ ಜಾತಿ ಮತ್ತು ಉದ್ಯೋಗ ಸಂಬಂಧಿತ ಪದಗಳನ್ನು ಸಹ ಸೇರಿಸಲಾಗಿದೆ. ಇದು ಅರ್ಜಿ ನಮೂನೆಯ ರಚನೆಯ ಹಿಂದಿನ ತರ್ಕ ಮತ್ತು ಉದ್ದೇಶದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಡಿಟಿಎಫ್‌ನ ಪ್ರಧಾನ ಕಾರ್ಯದರ್ಶಿ ಆಭಾ ದೇವ್ ಹಬೀಬ್, ಈ ವಿಷಯವನ್ನು ಖಂಡಿಸಿದ್ದಾರೆ. ಉರ್ದು ಭಾರತದ ಮಾನ್ಯತೆ ಪಡೆದ ಭಾಷೆಗಳಲ್ಲಿ ಒಂದಾಗಿ ಸಾಂವಿಧಾನಿಕ ಸ್ಥಾನಮಾನವನ್ನು ಹೊಂದಿದೆ ಮತ್ತು ಮುಸ್ಲಿಮರು ತಮ್ಮ ಪ್ರದೇಶಗಳ ಇತರರಂತೆ ವಿವಿಧ ಭಾಷೆಗಳನ್ನು ಮಾತನಾಡುತ್ತಾರೆ ಎಂದು ಅವರು ಒತ್ತಿ ಹೇಳಿದರು.

“ಪದವಿಪೂರ್ವ ಪ್ರವೇಶಕ್ಕಾಗಿ ವಿಶ್ವವಿದ್ಯಾಲಯದ ನೋಂದಣಿ ನಮೂನೆ ಇದಕ್ಕಿಂತ ಹೆಚ್ಚು ಇಸ್ಲಾಮೊಫೋಬಿಕ್ ಆಗಲು ಸಾಧ್ಯವಿಲ್ಲ” ಎಂದು ಅವರು ಅಭಿಪ್ರಾಯಪಟ್ಟರು.

“ಕೇಂದ್ರ ವಿಶ್ವವಿದ್ಯಾಲಯವು ಇಂತಹ ನಮೂನೆಯನ್ನು ಹೇಗೆ ಪ್ರಕಟಿಸಬಹುದು? ಇದು ಕೋಮು ಮನಸ್ಥಿತಿಯಿಂದ ಕೂಡಿದೆ. ಇದನ್ನು ಖಂಡಿಸಬೇಕು ಮತ್ತು ಇದಕ್ಕೆ ಸಂಬಂಧಪಟ್ಟವರು ತಕ್ಷಣವೇ ಕ್ಷಮೆಯಾಚಿಸುವುದರೊಂದಿಗೆ ತಿದ್ದುಪಡಿ ಮಾಡಬೇಕು” ಎಂದು ಅವರು ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ಒತ್ತಾಯಿಸಿದ್ದಾರೆ.

ಇಂತಹ ಪ್ರಮುಖ ವಿಶ್ವವಿದ್ಯಾಲಯವು ಈ ರೀತಿ ತಪ್ಪುಗಳನ್ನು ಮಾಡುತ್ತಿರುವುದು ಖೇದಕರ. ಯಾವುದೇ ವಿವಿಯು ಬಹುಭಾಷಾತ್ವವನ್ನು ಗೌರವಿಸಬೇಕು ಎಂದು ವಿವಿಯ ಕಾರ್ಯಕಾರಿ ಮಂಡಳಿಯ ಸದಸ್ಯ ಡಾ. ಮಿಥುರಾಜ್ ಧುಸಿಯಾ ಹೇಳಿದ್ದಾರೆ.

ಕಿರೂರಿ ಮಾಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರುದ್ರಾಶಿಶ್ ಚಕ್ರವರ್ತಿ ಅವರು ಪ್ರವೇಶ ನಮೂನೆಯನ್ನು ಕೋಮುಪ್ರಚೋದನೆಯ ಯೋಜಿತ ಕೃತ್ಯ ಎಂದು ಟೀಕಿಸಿದ್ದಾರೆ.

“ವಿವಿ ಆಡಳಿತದ ಈ ಕೃತ್ಯವು ಭಾರತದ ಸಂವಿಧಾನಕ್ಕೆ ಗಂಭೀರ ಬೆದರಿಕೆಯಾಗಿದೆ. ಏಕೆಂದರೆ ಇದು ಸಂವಿಧಾನದ ಎಂಟನೇ ಅನುಸೂಚಿಯನ್ನು ಉಲ್ಲಂಘಿಸುತ್ತದೆ ಮತ್ತು ಇದು ಕೇಂದ್ರೀಯ ವಿಶ್ವವಿದ್ಯಾಲಯದ ಸಮಗ್ರ ಮತ್ತು ಒಳಗೊಳ್ಳುವ ಮನೋಭಾವವನ್ನು ದುರ್ಬಲಗೊಳಿಸುತ್ತದೆ” ಎಂದು ಅವರು ಹೇಳಿದರು.

ವಿವಿಯ ಅಧಿಕಾರಿಗಳು ದೋಷವನ್ನು ಸರಿಪಡಿಸಿದ್ದರೂ, ಈ ಕುರಿತು ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಅಮಿತ್ ಶಾ ಇಂಗ್ಲಿಷ್ ವಿರೋಧಿ ಹೇಳಿಕೆ | ಸಂಕುಚಿತ ಮನಸ್ಸಿನ ರಾಜಕೀಯ ದೃಷ್ಟಿಕೋನ ಎಂದ ಕೇರಳ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...