Homeಮುಖಪುಟದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. 

- Advertisement -
- Advertisement -

ಉಚಿತ ವಿದ್ಯುತ್, ನೀರು, ಬಸ್, ಸಿಸಿಟಿವಿ, ಈಗ ಉಚಿತ ವೈಫೈ …. ಹೀಗೆ 2015ರ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ್ದ ಪ್ರಣಾಳಿಕೆಗಳಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

2015 ರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ 70 ಭರವಸೆಗಳನ್ನು ನೀಡಿದ್ದೆವು. ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ ಎಲ್ಲವನ್ನು ಈಡೇರಿಸಿದ್ದೇವೆ ಈಗ ಫ್ರಿ ವೈಫೈ ಕೊಡುವುದು ಕೊನೆಯದಾಗಿದೆ. ಆ ಮೂಲಕ ಪೂರ್ಣ ಉಚಿತ ವೈಫೈ ಪಡೆದ ಜಗತ್ತಿನ ಮೊದಲ ನಗರ ದೆಹಲಿಯಾಗಲಿದೆ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ನಮ್ಮ ದೇಶದಲ್ಲಿ ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಯಾವ ಭರವಸೆಗಳನ್ನು ನೀಡಿದ್ದರು ಎಂಬುದನ್ನು ರಾಜಕಾರಣಿಗಳಿರಲಿ ಜನರೇ ಮರೆತುಬಿಡುತ್ತಿದ್ದಾರೆ. ಅದೇ ಸಮಯದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಈ ಸಮಯದಲ್ಲಿ ಕೇಜ್ರಿವಾಲ್, ತಮ್ಮ ಸರ್ಕಾರವು ತನ್ನ ಪ್ರಣಾಳಿಕೆಯ ಕೊನೆಯ ಚುನಾವಣಾ ಭರವಸೆಯಾದ ದೆಹಲಿಯ ಎಲ್ಲರಿಗೂ ಉಚಿತ ಇಂಟರ್‌ನೆಟ್‌ ನೀಡುವುದು ಸಹ ಈಡೇರಿಸಿದೆ ಮತ್ತು ಅವರ ಎಲ್ಲಾ ಭರವಸೆಗಳನ್ನು ಈಡೇರಿಸಿದ ಮೊದಲ ಸರ್ಕಾರ ತಮ್ಮದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಪತ್ರಿಕಾಗೊಷ್ಟಿಯಲ್ಲಿ ಘೋಷಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಇಂಟರ್ನೆಟ್ ಇಂದು ಮೂಲಭೂತ ಅಗತ್ಯವಾಗಿದೆ’ ಎಂದು ಹೇಳಿದ್ದಾರೆ.

ಪಾಂಚ್‌ಸಾಲ್‌ ಕೇಜ್ರಿವಾಲ್‌ ಜೊತೆಗೆ ಪಾನಿ ಮಾಫ್‌, ಬಿಜಿಲಿ ಆಫ್‌ ಎಂಬ ಘೋಷಣೆಯನ್ನು ಸಹ ಚುನಾವಣಾ ಪೂರ್ವದಲ್ಲಿ ಆಮ್‌ ಆದ್ಮಿ ಸರ್ಕಾರ ಘೋಷಿಸಿತ್ತು. ಈಗ ಅದರಂತೆ ನಡೆದುಕೊಂಡಿದೆ. ಪಾನಿ ಮಾಫ್‌ ಎಂಬ ಘೋಷಣೆಯಂತೆ ದೆಹಲಿ ಸರ್ಕಾರವು ಪ್ರತಿ ಮನೆಗೆ 20 ಕಿಲೋಲಿಟರ್ (20,000 ಲೀಟರ್) ಉಚಿತ ನೀರನ್ನು ಜಲ ಮಂಡಳಿಯ ಮೀಟರ್ ಮೂಲಕ ಒದಗಿಸುತ್ತಿದೆ.

ಬಿಜಿಲಿ ಆಫ್‌ ವಿಚಾರಕ್ಕೆ ಬಂದರೆ 200 ಯೂನಿಟ್‌ವರೆಗೆ ದೆಹಲಿಯ ಪ್ರತಿಮನೆಗೆ ಉಚಿತ್‌ ವಿದ್ಯುತ್‌ ಒದಗಿಸುತ್ತಿದೆ. 200 ಯೂನಿಟ್‌ ಗೂ ಹೆಚ್ಚು ಬಳಕೆದಾರರಿಗೆ ಮಾತ್ರ ಶುಲ್ಕ ವಿಧಿಸುತ್ತಿದೆ. ಸುಮಾರು 35 ಲಕ್ಷ ಕುಟುಂಬಗಳು ಇದರ ಪ್ರಯೋಜನ ಪಡೆದಿವೆ ಎಂದು ವಿದ್ಯುತ್ ಸರಬರಾಜು ಕಂಪನಿಗಳಾದ ಬಿಎಸ್‌ಇಎಸ್ ಮತ್ತು ಟಾಟಾ ಪವರ್-ಡಿಡಿಎಲ್ ದತ್ತಾಂಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ದೆಹಲಿಯ 14 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್‌ ಕೊಟ್ಟ ಕೇಜ್ರಿವಾಲ್‌ ಸರ್ಕಾರ!!

ಐದು ವರ್ಷಗಳ ಅವಧಿಯಲ್ಲಿ ದೆಹಲಿಗೆ 5,000 ಹೊಸ ಬಸ್‌ಗಳನ್ನು ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ‌ಆದರೆ ಈ ವಿಷಯವು ಟೆಂಡರ್‌ನಲ್ಲಿ ಸಿಲುಕಿಕೊಳ್ಳುತ್ತಲೇ ಇತ್ತು. ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಕಂಪನಿಗಳು ವಹಿಸಿಕೊಳ್ಳಬೇಕು ಎಂದು ಸರ್ಕಾರ ವಾದಿಸಿತು. ಅದೇ ಸಮಯದಲ್ಲಿ ದೆಹಲಿ ಸರ್ಕಾರವು ಇದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂಬ ಕಂಪನಿಗಳ ಬೇಡಿಕೆ ಇತ್ತು. ಈ ಘರ್ಷಣೆಯಿಂದಾಗಿ ದೆಹಲಿಗೆ ಹೊಸ ಬಸ್‌ಗಳನ್ನು ತರಲು ವಿಳಂಬವಾಯಿತು. ಹಾಗಾಗಿ ಇದುವರೆಗೆ ಸಾವಿರಕ್ಕೂ ಹೆಚ್ಚು ಬಸ್‌ಗಳನ್ನು ತರಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಯೋಜನೆಗೆ ಜಗನ್‌ ಸರ್ಕಾರ ಒಪ್ಪಿಗೆ

ದೆಹಲಿಯಲ್ಲಿ ಅಪರಾಧಗಳ ತಡೆಗಟ್ಟುವಿಕೆಗಾಗಿ, ಸಾರ್ವಜನಿಕ ಸ್ಥಳಗಳು ಮತ್ತು ಬಸ್‌ಗಳಲ್ಲಿ ಮೊದಲ ಹಂತದಲ್ಲಿ 1,40,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈಗ ಎರಡನೇ ಹಂತದಲ್ಲಿ 140,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಪ್ರಗತಿಯಲ್ಲಿದೆ.

ದೆಹಲಿಯ ಮೊಹಲ್ಲಾ ಕ್ಲಿನಿಕ್‌ಗಳು ಉಚಿತ ವೈದ್ಯಕೀಯ ಸೇವೆ ನೀಡುವುದರಲ್ಲಿ ಖ್ಯಾತಿ ಗಳಿಸಿವೆ. ಹಾಗೆಯೇ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಸ್ಪರ್ಶ ನೀಡಿದ್ದರಿಂದ ಅವುಗಳು ಮಿಂಚುವುದರ ಜೊತೆಗೆ ಹ್ಯಾಪಿನೆಸ್‌ ಪಠ್ಯಕ್ರಮ ಎಲ್ಲವೂ ದೆಹಲಿ ಸರ್ಕಾರಕ್ಕೆ ಕ್ರೆಡಿಟ್‌ ತಂದುಕೊಟ್ಟಿವೆ. ಇವು ಫಲಿತಾಂಶಗಳಲ್ಲಿಯೂ ಸಕರಾತ್ಮಕ ಬದಲಾವಣೆ ತಂದಿವೆ.

ಈಗ ಉಚಿತ ಇಂಟರ್ನೆಟ್‌ ನೀಡಲು ಕೇಜ್ರಿವಾಲ್ ಸರ್ಕಾರ ಮೊದಲ ಹಂತದಲ್ಲಿ 11 ಸಾವಿರ ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಿದೆ. ಈ ಯೋಜನೆಗೆ 100 ಕೋಟಿ ರೂ ಖರ್ಚಾಗಲಿದ್ದು ಇದರಿಂದಾಗಿ 22 ಲಕ್ಷ ಜನರಿಗೆ ಏಕಕಾಲದಲ್ಲಿ ಇಂಟರ್ನೆಟ್ ಬಳಸಲು ಸಾಧ್ಯವಾಗುತ್ತದೆ.

ಡಿಸೆಂಬರ್ 16 ರಿಂದ ಉಚಿತ ವೈ-ಫೈ ಸೌಲಭ್ಯಗಳು ಲಭ್ಯವಾಗಲಿವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ಆರಂಭದಲ್ಲಿ 100 ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅವುಗಳ  ಸಂಖ್ಯೆ 11 ಸಾವಿರ ತಲುಪಲಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...