Homeಅಂತರಾಷ್ಟ್ರೀಯಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಭಾರತ-ಪಾಕ್ ಸಂಘರ್ಷ ಶಮನ: ಟ್ರಂಪ್‌ಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಲು ಪಾಕ್ ನಾಮನಿರ್ದೇಶನ!

ಅಮೆರಿಕ ಅಧ್ಯಕ್ಷ ಏನಂದ್ರು?

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಭಾರತ-ಪಾಕಿಸ್ತಾನ ನಡುವೆ ಏರ್ಪಟ್ಟಿದ್ದ ಸಂಘರ್ಷವನ್ನು ಶಮನ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು 2026ರ ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಪಾಕಿಸ್ತಾನ ನಾಮನಿರ್ದೇಶನ ಮಾಡಿದೆ ಎಂದು ವರದಿಯಾಗಿದೆ.

ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಹಾಕಲಾಗಿದೆ ಎಂದು ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.

“ಪಾಕಿಸ್ತಾನ ಸರ್ಕಾರ 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಶಿಫಾರಸ್ಸು ಮಾಡುತ್ತಿದೆ. ಭಾರತ-ಪಾಕ್ ಸಂಘರ್ಷದ ಸಂದರ್ಭದಲ್ಲಿ ಟ್ರಂಪ್ ವಹಿಸಿದ ಪ್ರಮುಖ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಪರಿವರ್ತನಾಶೀಲ ನಾಯಕತ್ವ ಪ್ರದರ್ಶಿಸಿದ್ದನ್ನು ಗುರುತಿಸಿ ಪಾಕಿಸ್ತಾನ ಸರ್ಕಾರವು 2026ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಡೊನಾಲ್ಡ್ ಜೆ.ಟ್ರಂಪ್ ಅವರ ಹೆಸರನ್ನು ಅಧಿಕೃತವಾಗಿ ಶಿಫಾರಸ್ಸು ಮಾಡುತ್ತಿದೆ” ಎಂದು ಪೋಸ್ಟ್‌ನಲ್ಲಿ ಹೇಳಿರುವುದಾಗಿ ವರದಿಗಳು ವಿವರಿಸಿವೆ.

ಭಾರತ- ಪಾಕಿಸ್ತಾನದ ಸಂಘರ್ಷದ ಬಳಿಕ ಮೊದಲ ಬಾರಿಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಪಾಕಿಸ್ತಾನ ಸೇನೆಯ ಮುಖ್ಯಸ್ಥ ಅಸೀಮ್ ಮುನೀರ್ ಅವರಿಗೆ, ಅಧ್ಯಕ್ಷ ಟ್ರಂಪ್ ಜೂನ್ 18ರಂದು ಶ್ವೇತಭವನದಲ್ಲಿ ವಿಶೇಷ ಔತಣಕೂಟ ಆಯೋಜಿಸಿದ್ದರು. ಇದರ ಮರುದಿನವೇ ಪಾಕಿಸ್ತಾನದಿಂದ ಈ ಅಚ್ಚರಿಯ ಹೇಳಿಕೆ ಹೊರಬಿದ್ದಿದೆ.

ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನ ಪ್ರೇರಿತ ಮತ್ತು ಇತರ ರೀತಿಯ ಭಯೋತ್ಪಾದನೆಯ ಕುರಿತ ಭಾರತದ ನಿಲುವನ್ನು ಜಗತ್ತಿಗೆ ತಿಳಿಸಲು ಭಾರತ ಸರ್ಕಾರ ಸರ್ವಪಕ್ಷ ಸಂಸದರ ಸುಮಾರು 7 ನಿಯೋಗಗಳನ್ನು ವಿವಿಧ ರಾಷ್ಟ್ರಗಳಿಗೆ ಕಳುಹಿಸಿತ್ತು.

ಈ ನಿಯೋಗಗಳು ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನದ ಬಣ್ಣ ಬಯಲು ಮಾಡಿದೆ ಎಂದು ಹೇಳಲಾಗಿತ್ತು. ಇದಾಗಿ ಕೆಲ ದಿನಗಳಲ್ಲೇ ಅಮೆರಿಕ ಅಧ್ಯಕ್ಷ ಪಾಕಿಸ್ತಾನದ ಸೇನಾ ಮುಖ್ಯಸ್ಥರಿಗೆ ಔತಣಕೂಟ ಆಯೋಜಿಸಿ ಗೌರವಿಸಿರುವುದು ಭಾರತಕ್ಕೆ ಒಂದು ರೀತಿಯಲ್ಲಿ ರಾಜತಾಂತ್ರಿಕ ಹಿನ್ನಡೆ ಎನ್ನಬಹುದು.

ಟ್ರಂಪ್ ಮಧ್ಯಸ್ಥಿಕೆ ಅಲ್ಲಗಳೆದ ಭಾರತ

ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಏರ್ಪಟಿದ್ದಾಗ, ಆರಂಭದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, “ಅದು ಆ ಎರಡು ರಾಷ್ಟ್ರಗಳ ನಡುವಿನ ಸಂಘರ್ಷ. ಈ ರೀತಿಯ ಸಂಘರ್ಷ ಭಾರತ-ಪಾಕಿಸ್ತಾನ ನಡುವೆ ಸುದೀರ್ಘ ಸಮಯದಿಂದ ಇದೆ. ನಮಗೆ ಭಾರತ-ಪಾಕಿಸ್ತಾನ ಎರಡೂ ಮಿತ್ರ ರಾಷ್ಟ್ರಗಳೇ. ಅವರ ಸಮಸ್ಯೆಯನ್ನು ಅವರು ಬಗೆ ಹರಿಸಿಕೊಳ್ಳುತ್ತಾರೆ. ನಾವು ಅದರಲ್ಲಿ ತಲೆ ಹಾಕಲು ಹೋಗುವುದಿಲ್ಲ” ಎಂದಿದ್ದರು.

ಆದರೆ, ಮೇ 10ರಂದು ಸಂಜೆ 5.33ರ (ಭಾರತೀಯ ಕಾಲಮಾನ) ಸುಮಾರಿಗೆ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಮೊದಲು ಪೋಸ್ಟ್ ಮಾಡಿದ್ದರು. ಆ ಬಳಿಕವಾಗಿದೆ. ಭಾರತದ ವಿದೇಶಾಂಗ ಕಾರ್ಯದರ್ಶಿ ಮತ್ತು ವಿದೇಶಾಂಗ ಇಲಾಖೆ ಸಚಿವರು ಕದನ ವಿರಾಮದ ಕುರಿತು ಘೋಷಣೆ ಮಾಡಿರುವುದು.

ಈ ಬೆಳವಣಿಗೆ ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ಒಪ್ಪಂದಲ್ಲಿ ಟ್ರಂಪ್ ಅಥವಾ ಅಮೆರಿಕ ಮಧ್ಯಸ್ಥಿಕೆ ವಹಿಸಿರುವುದನ್ನು ಡೃಢಪಡಿಸಿತ್ತು. ಅಲ್ಲದೆ, ಟ್ರಂಪ್ ತಮ್ಮ ಪೋಸ್ಟ್‌ನಲ್ಲಿ ಕೂಡ ಅಮೆರಿಕ ಮಧ್ಯಸ್ಥಿಕೆಯಿಂದಲೇ ಕದನ ವಿರಾಮ ಏರ್ಪಟ್ಟಿದೆ ಎಂದಿದ್ದರು. (ಟ್ರಂಪ್‌ ಪೋಸ್ಟ್‌ನಲ್ಲಿ ‘Mediate by the United States’ ಎಂದು ಬರೆದಿರುವುದನ್ನು ನೋಡಬಹುದು)

ಸೌದಿಯಲ್ಲಿ ನಡೆದ ಹೂಡಿಕೆ ಸಮಾವೇಶದಲ್ಲಿ ಮಾತನಾಡಿದ್ದ ಟ್ರಂಪ್, ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಮಾಡಿಸಿದೆ ಎಂದು ಹೇಳಿಕೊಂಡಿದ್ದರು. ಆದರೆ, ಭಾರತ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿತ್ತು.

ಟ್ರಂಪ್ ಈಗಲೂ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾವೇ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಭಾರತ ಅದನ್ನು ನಿರಾಕರಿಸುತ್ತಲೇ ಇದೆ. ಈ ನಡುವೆ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಕ್ಕೆ ಟ್ರಂಪ್‌ಗೆ ನೊಬೆಲ್ ಕೊಡುವಂತೆ ಅಮೆರಿಕ ಶಿಫಾರಸ್ಸು ಮಾಡಿರುವುದು ಚರ್ಚೆಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ.

ಟ್ರಂಪ್ ಪ್ರತಿಕ್ರಿಯೆ ಏನು?

ನೋಬೆಲ್‌ಗೆ ಶಿಫಾರಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಟ್ರಂಪ್, “ಹಿಂಸಾತ್ಮಕ ರಕ್ತಪಾತ, ಸಾವಿಗೆ ಹೆಸರುವಾಸಿಯಾಗಿರುವ ಮತ್ತು ದಶಕಗಳಿಂದ ಯುದ್ಧ ನಡೆಯುತ್ತಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಮತ್ತು ರುವಾಂಡಾ ಗಣರಾಜ್ಯದ ನಡುವೆ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಸೇರಿ ಒಪ್ಪಂದ ಮಾಡಿಕೊಂಡಿದ್ದೇನೆ ಎಂದು ತಿಳಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಈ ಯುದ್ಧವು ಇತರ ಯುದ್ಧಗಳಿಗಿಂತ ಹೆಚ್ಚಾಗಿ ಹಿಂಸಾತ್ಮಕ ರಕ್ತಪಾತ ಮತ್ತು ಸಾವಿಗೆ ಹೆಸರುವಾಸಿಯಾಗಿತ್ತು ಮತ್ತು ದಶಕಗಳಿಂದ ನಡೆಯುತ್ತಿತ್ತು. ದಾಖಲೆಗಳಿಗೆ ಸಹಿ ಹಾಕಲು ರುವಾಂಡಾ ಮತ್ತು ಕಾಂಗೋದ ಪ್ರತಿನಿಧಿಗಳು ಸೋಮವಾರ ವಾಷಿಂಗ್ಟನ್‌ ಆಗಮಿಸಲಿದ್ದಾರೆ. ಇದು ಆಫ್ರಿಕಾಕ್ಕೆ ಮತ್ತು ಸ್ಪಷ್ಟವಾಗಿ ಹೇಳುವುದಾದರೆ, ಜಗತ್ತಿಗೆ ಶ್ರೇಷ್ಠ ದಿನ!. ಇದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

“ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ, ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವೆ ಶಾಂತಿ ಕಾಪಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. (ಯುಎಸ್‌ ಮೂರ್ಖತನದಿಂದ ಹಣಕಾಸು ಒದಗಿಸಿದ ಇಥಿಯೋಪಿಯನ್ ನಿರ್ಮಿಸಿದ ಬೃಹತ್ ಅಣೆಕಟ್ಟು, ನೈಲ್ ನದಿಗೆ ಹರಿಯುವ ನೀರನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ) ಮತ್ತು ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದಿದ್ದಾರೆ.

“ಎಲ್ಲವೂ ಸರಿಯಾಗಿ ನಡೆದರೆ, ಇನ್ನಷ್ಟು ದೇಶಗಳು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿವೆ. ಈ ಮೂಲಕ ಈ ಯುಗದಲ್ಲೇ ಮೊದಲ ಬಾರಿಗೆ ಮಧ್ಯಪ್ರಾಚ್ಯ ಒಂದಾಗಲಿದೆ. ಇಲ್ಲ, ರಷ್ಯಾ-ಉಕ್ರೇನ್ ಮತ್ತು ಇಸ್ರೇಲ್-ಇರಾನ್ ಸೇರಿದಂತೆ ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ನನ್ನ ಶ್ರಮದ ಫಲಿತಾಂಶಗಳು ಏನೇ ಇರಲಿ. ಅದು ಜನರಿಗೆ ತಿಳಿದಿದೆ. ನನಗೆ ಅಷ್ಟೇ ಮುಖ್ಯ” ಎಂದು ಟ್ರಂಪ್ ಹೇಳಿದ್ದಾರೆ.

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...