Homeಕರ್ನಾಟಕಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

- Advertisement -
- Advertisement -

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ತೆರೆದರೆ ರಾಮಾಯಣ, ಮಹಾಭಾರತ, ಭಗವದ್ಗೀತೆ ಎನ್ನುವ ಅವರು, ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎನ್ನುವುದು ಇಡೀ ಕರ್ನಾಟಕದ ಜನತೆಗೆ ಗೊತ್ತು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಕುಂದಾಪುರದಲ್ಲಿ ಹಮ್ಮಿಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮದ ಆಯೋಜಕರಿಗೆ ಪೊಲೀಸರು ನೋಟಿಸ್‌ ನೀಡಿರುವ ಕುರಿತು ಉಡುಪಿಯಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, “ಚಕ್ರವರ್ತಿ ಸೂಲಿಬೆಲೆ ಕಪ್ಪಿಗಿರೋದನ್ನು ಬೆಳ್ಳಗೆ ಮಾಡೋದರಲ್ಲಿ, ಬೆಳ್ಳಗಿರುವುದನ್ನು ಕಪ್ಪಗೆ ಮಾಡೋದರಲ್ಲಿ ಬಹಳಷ್ಟು ನಿಸ್ಸೀಮರು” ಎಂದು ವಾಗ್ದಾಳಿ ನಡೆಸಿದ್ದಾರೆ.

ವಾಕ್‌ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ವಾಕ್‌ಸ್ವಾತಂತ್ರ್ಯ ಸೇರಿದಂತೆ ಎಲ್ಲಾ ರೀತಿಯ ಸ್ವಾತಂತ್ರ್ಯ ಇದೆ. ಕರ್ನಾಟಕ ಮಾತ್ರವಲ್ಲದೆ ಇಡೀ ದೇಶದಲ್ಲಿ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ನಾವು ಚಕ್ರವರ್ತಿ ಸೂಲಿಬೆಲೆಯಿಂದ ಪಾಠ ಕೇಳಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಅವರು ಮೂರು ದಿನಗಳ ಕಾಲ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಾರೆ ಎಂಬುವುದರ ಬಗ್ಗೆ ನನಗೆ ಮಾಹಿತಿಯಿದೆ. ಎಸ್ಪಿ ಈ ವಿಚಾರವನ್ನು ನನ್ನ ಗಮನಕ್ಕೆ ತಂದಿದ್ದಾರೆ. ಅವರು (ಸೂಲಿಬೆಲೆ) ತಮ್ಮ ಪ್ರವಾಸ ಮಾಡಲಿ. ಆದರೆ, ಕೋಮು ಸೌಹಾರ್ದತೆ ಕೆಡಿಸುವುದು, ಸುಳ್ಳು-ದ್ವೇಷ ಬಿತ್ತುವುದನ್ನು ಅವರು ಮಾಡಬಾರದು. ಏಕೆಂದರೆ, ಉಡುಪಿ ಜಿಲ್ಲೆಯ ಜನ ಶಾಂತಿ ಪ್ರಿಯರು ಎಂದಿದ್ದಾರೆ.

ಕೋಮು ನಿಗ್ರಹ ದಳಕ್ಕೆ ಉಡುಪಿಯ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಪತ್ರಕರ್ತರ ಮಾತಿಗೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್, “ಒಂದು ಕಡೆ ಕೋಮುವಾದಕ್ಕೆ ಪ್ರಚೋದನೆ ಮಾಡಿಕೊಂಡು ನಾವು ಮಾಡುತ್ತಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ಕೋಮು ದ್ವೇಷ ನಿಗ್ರಹ ದಳಕ್ಕೆ ವಿರೋಧ ವ್ಯಕ್ತಪಡಿಸುತ್ತಾರೆ. ಬಿಜೆಪಿ ಶಾಸಕರ ಈ ನಡವಳಿಕೆ ನೋಡಿ, ಅವರ ಮನಸ್ಥಿತಿ ಏನು ಎಂಬುವುದನ್ನು ಉಡುಪಿಯ ಜನರು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಕುಂದಾಪುರದ ಮೊಗವೀರ ಸಭಾಭವನದಲ್ಲಿ ಜೂ.20ರಿಂದ 22ರವರೆಗೆ ‘ಇನ್ನೀಗ ಅಖಂಡ ಭಾರತ ನಿರ್ಮಿಸಿಯೇ ವಿಶ್ರಾಂತಿ’ ಎಂಬ ವಿಷಯದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಆಯೋಜಕರಿಗೆ 14 ಅಂಶಗಳ ಸೂಚನೆಗಳನ್ನು ನೀಡಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಆರೋಪ: ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಅಸ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...