Homeಮುಖಪುಟಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

ಗಾಝಾ, ಇರಾನ್ ವಿಷಯದಲ್ಲಿ ಭಾರತದ ಮೌನವು ಕಳವಳಕಾರಿಯಾಗಿದೆ: ಸೋನಿಯಾ ಗಾಂಧಿ

- Advertisement -
- Advertisement -

ಗಾಝಾ ಮತ್ತು ಇರಾನ್ ಮೇಲಿನ ಇಸ್ರೇಲ್ ಆಕ್ರಮಣದ ಬಗ್ಗೆ ಭಾರತದ ಮೌನವು “ತನ್ನ ಧ್ವನಿಯ ನಷ್ಟ ಮಾತ್ರವಲ್ಲ, ಮೌಲ್ಯಗಳ ಶರಣಾಗತಿಯೂ ಆಗಿದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ.

“ಭಾರತದ ಧ್ವನಿ ಕೇಳಲು ಇನ್ನೂ ತಡವಾಗಿಲ್ಲ” ಎಂಬ ಲೇಖನದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಿದ ಸೋನಿಯಾ ಗಾಂಧಿ, ಮೋದಿ ಸರ್ಕಾರವು ಇಸ್ರೇಲ್ ಜೊತೆಗೆ ಸ್ವತಂತ್ರ ಪ್ಯಾಲೆಸ್ತೀನ್ ಅನ್ನು ಕಲ್ಪಿಸಿಕೊಳ್ಳುವ ಶಾಂತಿಯುತ ದ್ವಿರಾಷ್ಟ್ರ ಪರಿಹಾರದ ಕುರಿತು ಭಾರತದ ದೀರ್ಘಕಾಲೀನ ಬದ್ಧತೆಯನ್ನು ಕೈಬಿಟ್ಟಿದೆ ಎಂದು ಆರೋಪಿಸಿದ್ದಾರೆ.

ಅಮೆರಿಕದ ಅಂತ್ಯವಿಲ್ಲದ ಯುದ್ಧಗಳ ವಿರುದ್ಧ ಮಾತನಾಡಿದ ಸೋನಿಯಾ ಗಾಂಧಿ, ಪಶ್ಚಿಮ ಏಷ್ಯಾದಲ್ಲಿ ‘ವಿನಾಶಕಾರಿ ಮಾರ್ಗ’ ಅನುಸರಿಸುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಲೇಖನದಲ್ಲಿ ಟೀಕಿಸಿದ್ದಾರೆ.

“ಗಾಝಾದಲ್ಲಿನ ವಿನಾಶದ ಬಗ್ಗೆ ಮತ್ತು ಈಗ ಇರಾನ್ ವಿರುದ್ಧದ ಅಪ್ರಚೋದಿತ ದಾಳಿ ಬಗ್ಗೆ ಹೊಸದಿಲ್ಲಿಯ ಮೌನವು ನಮ್ಮ ನೈತಿಕ ಮತ್ತು ರಾಜತಾಂತ್ರಿಕ ಸಂಪ್ರದಾಯಗಳಿಂದ ಕಳವಳಕಾರಿ ನಿರ್ಗಮನವನ್ನು ಪ್ರತಿಬಿಂಬಿಸುತ್ತದೆ. ಇದು ಕೇವಲ ಧ್ವನಿಯ ನಷ್ಟ ಮಾತ್ರವಲ್ಲ, ಬದಲಾಗಿ, ಮೌಲ್ಯಗಳ ಶರಣಾಗತಿಯೂ ಹೌದು” ಎಂದು ‘ದಿ ಹಿಂದೂ’ ದಲ್ಲಿನ ತಮ್ಮ ಲೇಖನದಲ್ಲಿ ಸೋನಿಯಾ ಗಾಂಧಿ ಹೇಳಿದ್ದಾರೆ.

“ಇನ್ನೂ ತಡವಾಗಿಲ್ಲ. ಭಾರತವು ಸ್ಪಷ್ಟವಾಗಿ ಮಾತನಾಡಬೇಕು, ಜವಾಬ್ದಾರಿಯುತವಾಗಿ ವರ್ತಿಸಬೇಕು. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಯನ್ನು ಶಮನಗೊಳಿಸಲು ಮತ್ತು ಪರಸ್ಪಪರ ಮಾತುಕತೆಗೆ ಮರಳಲು ಉತ್ತೇಜಿಸಲು ಲಭ್ಯವಿರುವ ಪ್ರತಿಯೊಂದು ರಾಜತಾಂತ್ರಿಕ ಮಾರ್ಗವನ್ನು ಬಳಸಬೇಕು” ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

ಈ ಮಾನವೀಯ ದುರಂತದ ಸಂದರ್ಭದಲ್ಲಿ, “ನರೇಂದ್ರ ಮೋದಿ ಸರ್ಕಾರವು ಶಾಂತಿಯುತ ದ್ವಿ-ರಾಷ್ಟ್ರ ಪರಿಹಾರದ ಕುರಿತಂತೆ ಭಾರತದ ದೀರ್ಘಕಾಲೀನ ಮತ್ತು ತತ್ವಬದ್ಧ ಬದ್ಧತೆಯನ್ನು ಬಹುತೇಕ ಕೈಬಿಟ್ಟಿದೆ, ದ್ವಿ-ರಾಷ್ಟ್ರ ಪರಿಹಾರವು ಸಾರ್ವಭೌಮ, ಸ್ವತಂತ್ರ ಪ್ಯಾಲೆಸ್ತೀನ್ ಅನ್ನು ಇಸ್ರೇಲ್ ಜೊತೆ ಪರಸ್ಪರ ಭದ್ರತೆ ಮತ್ತು ಘನತೆಯಿಂದ ಬದುಕುವ ಕಲ್ಪನೆಯನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ.

ಜೂನ್ 13, 2025 ರಂದು, ಇಸ್ರೇಲ್ ಇರಾನ್ ಮತ್ತು ಅದರ ಸಾರ್ವಭೌಮತ್ವದ ವಿರುದ್ಧ ತೊಂದರೆ ಕೊಡುವ ಮತ್ತು ಕಾನೂನುಬಾಹಿರ ದಾಳಿಯನ್ನು ಪ್ರಾರಂಭಿಸಿದ ಬಳಿಕ ಏಕಪಕ್ಷೀಯ ಮಿಲಿಟರಿಸಂನ ಅಪಾಯಕಾರಿ ಪರಿಣಾಮಗಳನ್ನು ಜಗತ್ತು ಮತ್ತೊಮ್ಮೆ ಕಂಡಿದೆ ಎಂದು ಸೋನಿಯಾ ಗಾಂಧಿ ಬೊಟ್ಟು ಮಾಡಿದ್ದಾರೆ.

ಇರಾನ್ ನೆಲದಲ್ಲಿ ನಡೆದ ಈ ಬಾಂಬ್ ದಾಳಿಗಳು ಮತ್ತು ಗುರಿಯಿಟ್ಟು ನಡೆದ ಹತ್ಯೆಗಳನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಖಂಡಿಸಿದೆ. ಇದು ಗಂಭೀರ ಪ್ರಾದೇಶಿಕ ಮತ್ತು ಜಾಗತಿಕ ಪರಿಣಾಮಗಳೊಂದಿಗೆ ಅಪಾಯಕಾರಿ ಅಸ್ತಿರತೆಯನ್ನು ಉಂಟು ಮಾಡಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಗಾಝಾದಲ್ಲಿ ಕ್ರೂರ ಆಕ್ರಮಣ ಸೇರಿದಂತೆ ಇಸ್ರೇಲ್‌ನ ಇತ್ತೀಚಿನ ಹಲವು ಕ್ರಮಗಳಂತೆ, ಈ ಕಾರ್ಯಾಚರಣೆಯನ್ನು ನಾಗರಿಕ ಜೀವನ ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಸಂಪೂರ್ಣವಾಗಿ ಕಡೆಗಣಿಸಿ ನಡೆಸಲಾಗಿದೆ. ಈ ಕ್ರಮಗಳು ಅಸ್ಥಿರತೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಮತ್ತಷ್ಟು ಸಂಘರ್ಷದ ಬೀಜಗಳನ್ನು ಬಿತ್ತುತ್ತದೆ” ಎಂದಿದ್ದಾರೆ.

ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಪ್ರಸ್ತುತ ಇಸ್ರೇಲಿ ನಾಯಕತ್ವವು “ಶಾಂತಿಯನ್ನು ದುರ್ಬಲಗೊಳಿಸುವ ಮತ್ತು ಉಗ್ರವಾದವನ್ನು ಪೋಷಿಸುವ ದೀರ್ಘ ಮತ್ತು ದುರದೃಷ್ಟಕರ ದಾಖಲೆಯನ್ನು ಹೊಂದಿದೆ” ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ದಾಖಲೆಯನ್ನು ಗಮನಿಸಿದರೆ, “ನೆತನ್ಯಾಹು ಅವರು ಒಪ್ಪಂದಕ್ಕಿಂತ ಉದ್ವಿಗ್ನತೆಯನ್ನು ಹೆಚ್ಚಿಸಿಕೊಳ್ಳುವುದರಲ್ಲಿ ಆಶ್ಚರ್ಯವೇನಿಲ್ಲ” ಎಂದಿದ್ದಾರೆ.

ಅಮೆರಿಕ ಅಧ್ಯಕ್ಷರನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, ಜೂನ್ 17 ರಂದು ತನ್ನ ಸ್ವಂತ ಗುಪ್ತಚರ ಮುಖ್ಯಸ್ಥರ ಮೌಲ್ಯಮಾಪನವನ್ನು ತಳ್ಳಿಹಾಕಿ, ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ಸ್ವಾಧೀನಪಡಿಸಿಕೊಳ್ಳಲು ತುಂಬಾ ಹತ್ತಿರದಲ್ಲಿದೆ ಎಂದು ಟ್ರಂಪ್ ಹೇಳಿರುವುದು ತೀವ್ರ ನಿರಾಶಾದಾಯಕ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಜಗತ್ತು ನಿರೀಕ್ಷಿಸುತ್ತಿರುವುದು ಮತ್ತು ಜಗತ್ತಿಗೆ ಬೇಕಾಗಿರುವುದು ಸತ್ಯಗಳನ್ನು ಆಧರಿಸಿದ ರಾಜತಾಂತ್ರಿಕತೆಯಿಂದ ದೇಶ ನಡೆಸಲ್ಪಡುವ ನಾಯಕತ್ವ ಆಗಿದೆ. ಅಲ್ಲದೆ, ಬಲವಂತ ಅಥವಾ ಸುಳ್ಳುಗಳಿಂದಲ್ಲ ದೇಶ ನಡೆಸುವವರು ಅಲ್ಲ. ಇರಾನ್ ಭಾರತದ ದೀರ್ಘಕಾಲದ ಸ್ನೇಹಿತನಾಗಿದ್ದು, ದೊಡ್ಡ ಮಟ್ಟದ ನಾಗರಿಕ ಸಂಬಂಧಗಳೊಂದಿಗೆ ಅದು ನಮ್ಮೊಂದಿಗೆ ಇದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ನಿರ್ಣಾಯಕ ಸಂದರ್ಭಗಳಲ್ಲಿ ಭಾರತಕ್ಕೆ ದೃಢ ಬೆಂಬಲ ನೀಡಿದ ಇತಿಹಾಸ ಇರಾನ್‌ಗೆ ಇದೆ. 1994 ರಲ್ಲಿ, ಕಾಶ್ಮೀರ ವಿಷಯದ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಆಯೋಗದಲ್ಲಿ ಭಾರತವನ್ನು ಟೀಕಿಸುವ ನಿರ್ಣಯವನ್ನು ತಡೆಯಲು ಇರಾನ್ ಸಹಾಯ ಮಾಡಿತ್ತು” ಎಂದು ತಿಳಿಸಿದ್ದಾರೆ.

“ವಾಸ್ತವವಾಗಿ, ಇಸ್ಲಾಮಿಕ್ ಗಣರಾಜ್ಯ ಇರಾನ್ ಭಾರತದೊಂದಿಗೆ ಹೆಚ್ಚು ಸಹಕಾರಿಯಾಗಿದೆ. ಅದರ ಪೂರ್ವವರ್ತಿ ಇರಾನ್ ಸಾಮ್ರಾಜ್ಯಶಾಹಿ ರಾಜ್ಯವು 1965 ಮತ್ತು 1971 ರ ಯುದ್ಧಗಳಲ್ಲಿ ಪಾಕಿಸ್ತಾನದ ಕಡೆಗೆ ವಾಲಿತ್ತು” ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ದಶಕಗಳಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಸಂಬಂಧಗಳನ್ನು ಉಲ್ಲೇಖಿಸಿದ ಸೋನಿಯಾ ಗಾಂಧಿ, “ಈ ವಿಶಿಷ್ಟ ಸ್ಥಾನವು ನಮ್ಮ ದೇಶಕ್ಕೆ ನೈತಿಕ ಜವಾಬ್ದಾರಿ ಮತ್ತು ರಾಜತಾಂತ್ರಿಕ ಚೌಕಟ್ಟನ್ನು ಒದಗಿಸುತ್ತದೆ. ಇದು ಉದ್ವಿಗ್ನತೆ ಮತ್ತು ಶಾಂತಿಗೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಹೇಳಿದ್ದಾರೆ.

“ಇದು ಕೇವಲ ಅಮೂರ್ತ ತತ್ವವಲ್ಲ. ಲಕ್ಷಾಂತರ ಭಾರತೀಯ ನಾಗರಿಕರು ಪಶ್ಚಿಮ ಏಷ್ಯಾದಾದ್ಯಂತ ವಾಸಿಸುತ್ತಿದ್ದಾರೆ ಮತ್ತು ಕೆಲಸ ಮಾಡುತ್ತಿದ್ದಾರೆ. ಇದು ಈ ಪ್ರದೇಶದಲ್ಲಿ ಶಾಂತಿಯನ್ನು ಪ್ರಮುಖ ರಾಷ್ಟ್ರೀಯ ಹಿತಾಸಕ್ತಿಯ ವಿಷಯವನ್ನಾಗಿ ಮಾಡುತ್ತದೆ.”

ಅಂತರ್ಜಾತಿ ಮದುವೆಗೆ ವಿರೋಧ: ತಲೆ ಬೋಳಿಸಿಕೊಂಡ ಯುವತಿ ಕುಟುಂಬದ 40 ಸದಸ್ಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...