Homeಕರ್ನಾಟಕಉತ್ತರ ಕನ್ನಡ ಬಿಜೆಪಿಗೆ ಯಾರಾಗ್ತಾರೆ ಅಧ್ಯಕ್ಷ?!

ಉತ್ತರ ಕನ್ನಡ ಬಿಜೆಪಿಗೆ ಯಾರಾಗ್ತಾರೆ ಅಧ್ಯಕ್ಷ?!

- Advertisement -
- Advertisement -

ಉತ್ತರ ಕನ್ನಡದ ಕೇಸರಿ ಪಾಳೆಯದ ಒಳರಾಜಕಾರಣಕ್ಕೆ ಒಂದೇ ಸಮನೆ ಕಾವೇರುತ್ತಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರಿ ಶಿವರಾಮ ಹೆಬ್ಬಾರರನ್ನು ಗೆಲ್ಲಿಸುವುದಕ್ಕಿಂತಲೂ ನಿಷ್ಠಾವಂತ ಅನುಯಾಯಿ ಒಬ್ಬರನ್ನು ಜಿಲ್ಲಾ ಬಿಜೆಪಿ ಪೀಠದಲ್ಲಿ ಪ್ರತಿಷ್ಠಾಪಿಸುವ ತಂತ್ರಗಾರಿಕೆ ಬಗ್ಗೆಯೇ ಸಂಘಿ ಸರದಾರರು ತಲೆಕೆಡಿಸಿಕೊಂಡಿದ್ದಾರೆ. ಹೆಬ್ಬಾರ್ ಗೆಲ್ಲಬೇಕಾಗಿರುವುದು ಸಿಎಂ ಯಡ್ಡಿ ಮಹಾತ್ಮರಿಗೆ ಮಾತ್ರ. ನಿಷ್ಠಾವಂತ ಸಂಘ ಸೈನಿಕರಿಗೆ ಆತ ಗೆದ್ದರೂ ಸೋತರೂ ಫರಕೇನೂ ಬೀಳುವುದಿಲ್ಲ. ಸ್ಪೀಕರ್ ಕಾಗೇರಿ, ಸಂಸದ ಅನಂತ್ಮಾಣಿ, ಎಡಬಿಡಂಗಿ ವಕ್ತಾರ ಪ್ರಮೋದ್ ಹೆಗಡೆ ವಗೈರೆ ಬಿಜೆಪಿಯ ಘಟಾನುಘಟಿಗಳಿಗೆ ಹೆಬ್ಬಾರ್ ಸೋತರೇನೇ ಸುಗ್ಗಿ ಸಂಭ್ರಮ!!

ಬಿಜೆಪಿಯಲ್ಲೀಗ ಸಾಂಸ್ಥಿಕ ಚುನಾವಣೆ ನಡೆಯುತ್ತಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹಿಂದೂತ್ವದ ಗುಣಧರ್ಮದ ಜತೆಗೆ ದುಡ್ಡು ದಂಡಿಯಾಗಿರುವ ಆಸಾಮಿಯನ್ನು ತರಲು ಆರೆಸ್ಸೆಸ್‍ನ ಹಿರಿ ತಲೆಗಳು ತಲಾಶ್ ನಡೆಸಿದ್ದಾರೆ. ವಿಧಾನಸಭಾಧ್ಯಕ್ಷ, ಸಂಸದ, ಭಾವಿ ಮಂತ್ರಿಗಿರಿಯಂಥ ಆಯಕಟ್ಟಿನ ಸ್ಥಾನ ಮತ್ತು ನಿಗಮ-ಮಂಡಳಿ ಅಧಿಕಾರವೆಲ್ಲ ಹವ್ಯಕ ಬ್ರಾಹ್ಮಣ ಬಳಗಕ್ಕೇ ದಕ್ಕುತ್ತಿರುವುದು ಹಿಂದುಳಿದ ವರ್ಗದ ಕಾರ್ಯಕರ್ತರಲ್ಲಿ ರೊಚ್ಚು ಮೂಡಿಸಿದೆ. ಬಿಜೆಪಿಯ ಹಾರವ ಲೀಡರ್‍ಗಳು ಧರ್ಮ, ದೇವರ ಹೆಸರಲ್ಲಿ ಶೂದ್ರರನ್ನು ಮುಂದೆ ನಿಲ್ಲಿಸಿ ಹಿಂದಿನಿಂದ ಅಧಿಕಾರ-ಸುಖ ಸಂಪತ್ತು ಪಡೆಯುತ್ತಿದ್ದಾರೆಂಬ ‘ತಿಳಿವಳಿಕೆ’ ಈಗೀಗ ಹಿಂದುಳಿದ ವರ್ಗದ ಮುಖಂಡರಿಗೆ ಬರತೊಡಗಿದೆ. ಈ ಆತೃಪ್ತ ಶೂದ್ರ ಸಂಕುಲ ಒಂದಾಗದಂತೆ ಜನಿವಾರ ಮಂತ್ರ ಪ್ರಯತ್ನಿಸುತ್ತಿದೆ.

ಅಸಮಾಧಾನಗೊಂಡಿರುವ ಹಿಂದುಳಿದವರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನ ಕೊಟ್ಟು ಬಾಯಿ ಮುಚ್ಚಿಸಿ ತಾವು ನಿಗಮ-ಮಂಡಳಿ-ಮಂತ್ರಿ-ಸಂಸದರಂತಹ ಲಾಭದಾಯಕ ಹುದ್ದೆಯಲ್ಲಿ ಮುಂದುವರಿಯಬೇಕೆಂಬ ಹಿಕಮತ್ತು ಸಂಘಪರಿವಾರದ ರಿಂಗ್‍ಮಾಸ್ಟರ್‍ಗಳು ಹೊಸ ಪ್ಲಾನು ಮಾಡಿದ್ದಾರೆ. ಈಚೆಗೆ ನೇಮಕವಾದ ಎರಡು ನಿಗಮ-ಮಂಡಳಿ ಮುಖ್ಯಸ್ಥರು ಹವ್ಯಕ ಬ್ರಾಹ್ಮಣರು. ಜೀವ ವೈವಿಧ್ಯ ಮಂಡಳಿಗೆ ಅನಂತ ಅಶೀಸರ ನೆಗೆದು ಕೂತಿದ್ದಾರೆ. ಎಂ.ಎ.ಹೆಗಡೆ ಎರಡನೇ ಅವಧಿಗೆ ಯಕ್ಷಗಾನ ಮಂಡಳಿಗೆ ವಕ್ಕರಿಸಿದ್ದಾರೆ. ಮಜಾ ಎಂದರೆ ಈ ಎಂ.ಎ.ಹೆಗಡೆ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗಲೇ ಯಕ್ಷಗಾನ ಮಂಡಳಿಗೆ ಗದ್ದುಗೆ ಗಿಟ್ಟಿಸಿದ್ದರು. ಈಗ ಚೆಡ್ಡಿಬಿಡಾರದಲ್ಲಿರುವ ಕುಲಬಂಧು ಭೂತದ ಮೂಲಕ ಲಾಬಿ ಮಾಡಿಸಿ ಅದೇ ಕುರ್ಚಿಯಲ್ಲಿ ಫೆವಿಕಾಲ್ ಹಾಕಿ ಕುಂತಿದ್ದಾರೆ. ಇದು ಅಬ್ರಾಹ್ಮಣರ ಕಣ್ಣು ಕುಕ್ಕುತ್ತಿದೆ ಎಂಬ ವಾಸ್ತವ ಅರಿತಿರುವ ಚೆಡ್ಡಿ ಚೆತುರರು ಜಿಲ್ಲಾ ಬಿಜೆಪಿ ಅಧ್ಯಕ್ಷತೆಗೆ ಹಿಂದುಳಿದವರ ತರಲು ಹವಣಿಸುತ್ತಿದ್ದಾರೆ.

ಆರೆಸ್ಸೆಸ್ ಆಯ್ಕೆ ಕುಮಟಾ ಮೂಲದ ಬೆಳಗಾವಿ-ಮುಂಬೈನ ನಿಗೂಢ ಉದ್ಯಮಿ ಸುಬ್ರಿಯ ವಾಳ್ಕೆ. ಈತ ಸಂಘಪರಿವಾರದ ಸಿದ್ಧಾಂತಿಯೆಂದು ಆರೆಸ್ಸೆಸ್ ಸೂತ್ರಧಾರರು ಹೇಳುತ್ತಿದ್ದಾರೆ. ಆದರೆ ಕಳೆದ ಬಾರಿಯ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಕುಮಟೆಯಿಂದ ಬಿಜೆಪಿ ಹುರಿಯಾಳಾಗಲು ತಿಪ್ಪರಲಾಗ ಹಾಕಿದ್ದ ವಾಳ್ಕೆ ಆರೆಸೆಸ್ ಹಿನ್ನಲೆಯಾತನಲ್ಲ. ಬಡ ಮಾಲ್ಕರಿ (ಹೋಟೇಲುಗಳ ತಿಂಡಿ ಕರಿಯುವವ) ಮಗನಾದ ವಾಳ್ಕೆ ಬದುಕಲು ಕಷ್ಟಪಟ್ಟವನು. ಹೊಟ್ಟೆ ಪಾಡಿಗಾಗಿ ಬೆಳಗಾವಿ ಸೇರಿದ್ದ ವಾಳ್ಕೆ ಪರಿಚಯ ಹೀಗಿದೆ. ಕುಮಟೆಯಲ್ಲಿ ಆತನ ಹೆಂಡತಿ ನಿಗೂಢ ಅಪಘಾತದಲ್ಲಿ ಸತ್ತು ಹೋದಾಗ ಮತ್ತು ಆತ ತನ್ನ ಉದ್ಯಮದಲ್ಲಿ ಸಹಾಯಕಿಯಾಗಿದ್ದ ಹುಡುಗಿಯನ್ನೇ ಮರುಮದುವೆ ಆದಾಗ ವಾಳ್ಕೆ ‘ಪ್ರಸಿದ್ಧಿ’ ಕುಮಟೆಯಲ್ಲಾಗಿತ್ತು!! ಆತನಲ್ಲಿರುವ ಅಪಾರ ಹಣದ ಗಂಟಿನ ಮೇಲೆ ಕಣ್ಣು ಹಾಕಿದ ಚೆಡ್ಡಿ ದೊರೆಗಳು ಆತನೇ ಜಿಲ್ಲಾ ಬಿಜೆಪಿ ಅಧ್ಯಕ್ಷತೆಗೆ ಯೋಗ್ಯನೆಂದು ಬಿಂಬಿಸುತ್ತಿದ್ದಾರೆ.

ಮುಂಬೈನ ಬಿಜೆಪಿಯ ಟಾಪ್ ಲೀಡರ್‍ಗಳನ್ನು ಹಿಡಿದು ಲಾಬಿ ಮಾಡಿದರೂ ಕುಮಟೆ ಎಮ್ಮೆಲ್ಲೆಗಿರಿಗೆ ನಿಲ್ಲುವ ಛಾನ್ಸ್ ವಾಳ್ಕೆಗೆ ಸಿಕ್ಕಿರಲಿಲ್ಲ. ಈಗ ತನ್ನ ಮೇಲೆ ಏಕಾಏಕಿ ಜಿಲ್ಲಾಧ್ಯಕ್ಷನಾಗಿ ಮಾಡುವ ಮಮಕಾರ ಬಿಜೆಪಿ ಹಿರಿಯರಿಗೆ ಬಂದಿದ್ದೇಕೆಂಬುದು ವಾಳ್ಕೆಗೆ ಅರ್ಥವಾಗಿದೆ. ತನ್ನಲ್ಲಿರುವ ಹಣ ಪಕ್ಷದ ಸಂಘಟನೆಗೆ ಬಳಸಿ ಕಡೆಗೊಂದು ದಿನ ಈ ದೊಡ್ಡವರು ಕೈಗೆ ಗೆರಟೆ ಕೊಟ್ಟು ಕಳಿಸುತ್ತಾರೆಂಬ ಅರಿವು ಪಕ್ಕಾ ವ್ಯಾಪಾರಿಯಾದ ವಾಳ್ಕೆಗಿದೆ. ಹಾಗಾಗಿ ಆತ ಅಧ್ಯಕ್ಷತೆ ತಾನೊಲ್ಲೆ ಅಂತಿದ್ದಾನೆ. ಬೇಕಿದ್ದರೆ ಮುಂದಿನ ಸಾರಿ ಕುಮಟೆಯಲ್ಲಿ ಕ್ಯಾಂಡಿಡೇಟ್ ಮಾಡಿ; ಈ ಖಾಲಿ ಪುಕ್ಕಟ್ಟೆ ಅಧ್ಯಕ್ಷತೆ ನಂಗೆ ಬೇಡ ಎಂದು ಖಡಾಖಂಡಿತ ವಾಳ್ಕೆ ಹೇಳಿದ್ದಾನೆ. ಎಮ್ಮೆಲ್ಲಿಗಿರಿ ಆಸೆ ತೋರಿಸಿ ಈ ಹಿಂದುಳಿದ ವೈಶ್ಯ ಸಮುದಾಯದ ಬಿಸ್ನೆಸ್‍ಮನ್‍ನ ಹಿಂಡುವ ಪ್ಲಾನು ಹಾಕಿದ್ದ ಚೆಡ್ಡಿಗಳೀಗ ಹೊಸ ಹಣವಂತ ಶೂದ್ರನ ಹುಡುಕಾಟಕ್ಕೆ ಇಳಿದಿದ್ದಾರೆ.

ಈಗಿನ ಅಧ್ಯಕ್ಷ ಕೆ.ಜಿ.ನಾಯ್ಕನಂಥ ದುಡ್ಡಿಲ್ಲದವರು ಸಿಗುತ್ತಿದ್ದಾರೆಯೇ ವಿನಃ ಹಣಕಾಸು ಹರಿಸುವ ಪುಢಾರಿ ಕಾಣಿಸುತ್ತಿಲ್ಲ. ಜಿಲ್ಲಾಧ್ಯಕ್ಷನಾಗುವ ಉಮೇದಿನಲ್ಲಿರುವ ಹಳಿಯಾಳದ ಮಾಜಿ ಶಾಸಕ ಸುನೀಲ್ ಹೆಗಡೆ ಆರೆಸ್ಸೆಸ್ ರಿಂಗ್‍ಮಾಸ್ತರ್‍ಗಳಿಗೆ ಒಪ್ಪಿಗೆ ಆಗುತ್ತಿಲ್ಲ. ಊರು ತುಂಬ ಸಾಲ ಮಾಡಿಕೊಂಡು ಪಾಪರ್ ಆಗಿರುವ ಜಿಲ್ಲಾ ಹೈಕಮಾಂಡ್ ವಿನೋದ್ ಪ್ರಭು, ಅನಂತ್ಮಾಣಿ, ಹನ್ಮಂತ ಶಾನಭಾಗ್ ವಗೈರೆ ಪರಮು ಚೆಡ್ಡಿಗಳದು. ಆದರೆ ಸುನಿಲ್ ಪಟ್ಟು ಸಡಿಲಿಸುತ್ತಿಲ್ಲ. ದೇಶಪಾಂಡೆ ಕ್ಷೇತ್ರದವನಾದ ತಾನು ಜಿಲ್ಲಾ ಬಿಜೆಪಿ ಅಧ್ಯಕ್ಷನಾದರೆ ಹಳಿಯಾಳದಲ್ಲೂ ಕಮಲ ಅರಳಿಸಬಹುದೆಂದು ಕೇಶವಕೃಪಾದಲ್ಲಿ ರಚ್ಚೆ ಹಿಡಿದು ಕುಂತಿದ್ದಾನೆ ಸುನೀಲ್. ಹಣ ಮತ್ತು ಹಿಂದೂತ್ವದ ಕಾಂಬಿನೇಷನ್ ಇರುವಾತ ಸಿಗದೆ ಆರೆಸ್ಸೆಸ್ ಗ್ಯಾಂಗ್ ಗೊಂದಲಕ್ಕೆ ಬಿದ್ದಿದೆ; ಗತಿಯಿಲ್ಲದೆ ಸುನೀಲ್ ಹೆಗಡೆಗೆ ಅಧ್ಯಕ್ಷಗಿರಿ ದೀಕ್ಷೆ ಕೊಡಬೇಕಾದ ಅನಿವಾರ್ಯಕ್ಕೆ ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...