Homeಕರ್ನಾಟಕಉತ್ತರ ಕನ್ನಡ ಬಿಜೆಪಿಗೆ ಯಾರಾಗ್ತಾರೆ ಅಧ್ಯಕ್ಷ?!

ಉತ್ತರ ಕನ್ನಡ ಬಿಜೆಪಿಗೆ ಯಾರಾಗ್ತಾರೆ ಅಧ್ಯಕ್ಷ?!

- Advertisement -
- Advertisement -

ಉತ್ತರ ಕನ್ನಡದ ಕೇಸರಿ ಪಾಳೆಯದ ಒಳರಾಜಕಾರಣಕ್ಕೆ ಒಂದೇ ಸಮನೆ ಕಾವೇರುತ್ತಿದೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರಿ ಶಿವರಾಮ ಹೆಬ್ಬಾರರನ್ನು ಗೆಲ್ಲಿಸುವುದಕ್ಕಿಂತಲೂ ನಿಷ್ಠಾವಂತ ಅನುಯಾಯಿ ಒಬ್ಬರನ್ನು ಜಿಲ್ಲಾ ಬಿಜೆಪಿ ಪೀಠದಲ್ಲಿ ಪ್ರತಿಷ್ಠಾಪಿಸುವ ತಂತ್ರಗಾರಿಕೆ ಬಗ್ಗೆಯೇ ಸಂಘಿ ಸರದಾರರು ತಲೆಕೆಡಿಸಿಕೊಂಡಿದ್ದಾರೆ. ಹೆಬ್ಬಾರ್ ಗೆಲ್ಲಬೇಕಾಗಿರುವುದು ಸಿಎಂ ಯಡ್ಡಿ ಮಹಾತ್ಮರಿಗೆ ಮಾತ್ರ. ನಿಷ್ಠಾವಂತ ಸಂಘ ಸೈನಿಕರಿಗೆ ಆತ ಗೆದ್ದರೂ ಸೋತರೂ ಫರಕೇನೂ ಬೀಳುವುದಿಲ್ಲ. ಸ್ಪೀಕರ್ ಕಾಗೇರಿ, ಸಂಸದ ಅನಂತ್ಮಾಣಿ, ಎಡಬಿಡಂಗಿ ವಕ್ತಾರ ಪ್ರಮೋದ್ ಹೆಗಡೆ ವಗೈರೆ ಬಿಜೆಪಿಯ ಘಟಾನುಘಟಿಗಳಿಗೆ ಹೆಬ್ಬಾರ್ ಸೋತರೇನೇ ಸುಗ್ಗಿ ಸಂಭ್ರಮ!!

ಬಿಜೆಪಿಯಲ್ಲೀಗ ಸಾಂಸ್ಥಿಕ ಚುನಾವಣೆ ನಡೆಯುತ್ತಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಹಿಂದೂತ್ವದ ಗುಣಧರ್ಮದ ಜತೆಗೆ ದುಡ್ಡು ದಂಡಿಯಾಗಿರುವ ಆಸಾಮಿಯನ್ನು ತರಲು ಆರೆಸ್ಸೆಸ್‍ನ ಹಿರಿ ತಲೆಗಳು ತಲಾಶ್ ನಡೆಸಿದ್ದಾರೆ. ವಿಧಾನಸಭಾಧ್ಯಕ್ಷ, ಸಂಸದ, ಭಾವಿ ಮಂತ್ರಿಗಿರಿಯಂಥ ಆಯಕಟ್ಟಿನ ಸ್ಥಾನ ಮತ್ತು ನಿಗಮ-ಮಂಡಳಿ ಅಧಿಕಾರವೆಲ್ಲ ಹವ್ಯಕ ಬ್ರಾಹ್ಮಣ ಬಳಗಕ್ಕೇ ದಕ್ಕುತ್ತಿರುವುದು ಹಿಂದುಳಿದ ವರ್ಗದ ಕಾರ್ಯಕರ್ತರಲ್ಲಿ ರೊಚ್ಚು ಮೂಡಿಸಿದೆ. ಬಿಜೆಪಿಯ ಹಾರವ ಲೀಡರ್‍ಗಳು ಧರ್ಮ, ದೇವರ ಹೆಸರಲ್ಲಿ ಶೂದ್ರರನ್ನು ಮುಂದೆ ನಿಲ್ಲಿಸಿ ಹಿಂದಿನಿಂದ ಅಧಿಕಾರ-ಸುಖ ಸಂಪತ್ತು ಪಡೆಯುತ್ತಿದ್ದಾರೆಂಬ ‘ತಿಳಿವಳಿಕೆ’ ಈಗೀಗ ಹಿಂದುಳಿದ ವರ್ಗದ ಮುಖಂಡರಿಗೆ ಬರತೊಡಗಿದೆ. ಈ ಆತೃಪ್ತ ಶೂದ್ರ ಸಂಕುಲ ಒಂದಾಗದಂತೆ ಜನಿವಾರ ಮಂತ್ರ ಪ್ರಯತ್ನಿಸುತ್ತಿದೆ.

ಅಸಮಾಧಾನಗೊಂಡಿರುವ ಹಿಂದುಳಿದವರಿಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನ ಕೊಟ್ಟು ಬಾಯಿ ಮುಚ್ಚಿಸಿ ತಾವು ನಿಗಮ-ಮಂಡಳಿ-ಮಂತ್ರಿ-ಸಂಸದರಂತಹ ಲಾಭದಾಯಕ ಹುದ್ದೆಯಲ್ಲಿ ಮುಂದುವರಿಯಬೇಕೆಂಬ ಹಿಕಮತ್ತು ಸಂಘಪರಿವಾರದ ರಿಂಗ್‍ಮಾಸ್ಟರ್‍ಗಳು ಹೊಸ ಪ್ಲಾನು ಮಾಡಿದ್ದಾರೆ. ಈಚೆಗೆ ನೇಮಕವಾದ ಎರಡು ನಿಗಮ-ಮಂಡಳಿ ಮುಖ್ಯಸ್ಥರು ಹವ್ಯಕ ಬ್ರಾಹ್ಮಣರು. ಜೀವ ವೈವಿಧ್ಯ ಮಂಡಳಿಗೆ ಅನಂತ ಅಶೀಸರ ನೆಗೆದು ಕೂತಿದ್ದಾರೆ. ಎಂ.ಎ.ಹೆಗಡೆ ಎರಡನೇ ಅವಧಿಗೆ ಯಕ್ಷಗಾನ ಮಂಡಳಿಗೆ ವಕ್ಕರಿಸಿದ್ದಾರೆ. ಮಜಾ ಎಂದರೆ ಈ ಎಂ.ಎ.ಹೆಗಡೆ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗಲೇ ಯಕ್ಷಗಾನ ಮಂಡಳಿಗೆ ಗದ್ದುಗೆ ಗಿಟ್ಟಿಸಿದ್ದರು. ಈಗ ಚೆಡ್ಡಿಬಿಡಾರದಲ್ಲಿರುವ ಕುಲಬಂಧು ಭೂತದ ಮೂಲಕ ಲಾಬಿ ಮಾಡಿಸಿ ಅದೇ ಕುರ್ಚಿಯಲ್ಲಿ ಫೆವಿಕಾಲ್ ಹಾಕಿ ಕುಂತಿದ್ದಾರೆ. ಇದು ಅಬ್ರಾಹ್ಮಣರ ಕಣ್ಣು ಕುಕ್ಕುತ್ತಿದೆ ಎಂಬ ವಾಸ್ತವ ಅರಿತಿರುವ ಚೆಡ್ಡಿ ಚೆತುರರು ಜಿಲ್ಲಾ ಬಿಜೆಪಿ ಅಧ್ಯಕ್ಷತೆಗೆ ಹಿಂದುಳಿದವರ ತರಲು ಹವಣಿಸುತ್ತಿದ್ದಾರೆ.

ಆರೆಸ್ಸೆಸ್ ಆಯ್ಕೆ ಕುಮಟಾ ಮೂಲದ ಬೆಳಗಾವಿ-ಮುಂಬೈನ ನಿಗೂಢ ಉದ್ಯಮಿ ಸುಬ್ರಿಯ ವಾಳ್ಕೆ. ಈತ ಸಂಘಪರಿವಾರದ ಸಿದ್ಧಾಂತಿಯೆಂದು ಆರೆಸ್ಸೆಸ್ ಸೂತ್ರಧಾರರು ಹೇಳುತ್ತಿದ್ದಾರೆ. ಆದರೆ ಕಳೆದ ಬಾರಿಯ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಕುಮಟೆಯಿಂದ ಬಿಜೆಪಿ ಹುರಿಯಾಳಾಗಲು ತಿಪ್ಪರಲಾಗ ಹಾಕಿದ್ದ ವಾಳ್ಕೆ ಆರೆಸೆಸ್ ಹಿನ್ನಲೆಯಾತನಲ್ಲ. ಬಡ ಮಾಲ್ಕರಿ (ಹೋಟೇಲುಗಳ ತಿಂಡಿ ಕರಿಯುವವ) ಮಗನಾದ ವಾಳ್ಕೆ ಬದುಕಲು ಕಷ್ಟಪಟ್ಟವನು. ಹೊಟ್ಟೆ ಪಾಡಿಗಾಗಿ ಬೆಳಗಾವಿ ಸೇರಿದ್ದ ವಾಳ್ಕೆ ಪರಿಚಯ ಹೀಗಿದೆ. ಕುಮಟೆಯಲ್ಲಿ ಆತನ ಹೆಂಡತಿ ನಿಗೂಢ ಅಪಘಾತದಲ್ಲಿ ಸತ್ತು ಹೋದಾಗ ಮತ್ತು ಆತ ತನ್ನ ಉದ್ಯಮದಲ್ಲಿ ಸಹಾಯಕಿಯಾಗಿದ್ದ ಹುಡುಗಿಯನ್ನೇ ಮರುಮದುವೆ ಆದಾಗ ವಾಳ್ಕೆ ‘ಪ್ರಸಿದ್ಧಿ’ ಕುಮಟೆಯಲ್ಲಾಗಿತ್ತು!! ಆತನಲ್ಲಿರುವ ಅಪಾರ ಹಣದ ಗಂಟಿನ ಮೇಲೆ ಕಣ್ಣು ಹಾಕಿದ ಚೆಡ್ಡಿ ದೊರೆಗಳು ಆತನೇ ಜಿಲ್ಲಾ ಬಿಜೆಪಿ ಅಧ್ಯಕ್ಷತೆಗೆ ಯೋಗ್ಯನೆಂದು ಬಿಂಬಿಸುತ್ತಿದ್ದಾರೆ.

ಮುಂಬೈನ ಬಿಜೆಪಿಯ ಟಾಪ್ ಲೀಡರ್‍ಗಳನ್ನು ಹಿಡಿದು ಲಾಬಿ ಮಾಡಿದರೂ ಕುಮಟೆ ಎಮ್ಮೆಲ್ಲೆಗಿರಿಗೆ ನಿಲ್ಲುವ ಛಾನ್ಸ್ ವಾಳ್ಕೆಗೆ ಸಿಕ್ಕಿರಲಿಲ್ಲ. ಈಗ ತನ್ನ ಮೇಲೆ ಏಕಾಏಕಿ ಜಿಲ್ಲಾಧ್ಯಕ್ಷನಾಗಿ ಮಾಡುವ ಮಮಕಾರ ಬಿಜೆಪಿ ಹಿರಿಯರಿಗೆ ಬಂದಿದ್ದೇಕೆಂಬುದು ವಾಳ್ಕೆಗೆ ಅರ್ಥವಾಗಿದೆ. ತನ್ನಲ್ಲಿರುವ ಹಣ ಪಕ್ಷದ ಸಂಘಟನೆಗೆ ಬಳಸಿ ಕಡೆಗೊಂದು ದಿನ ಈ ದೊಡ್ಡವರು ಕೈಗೆ ಗೆರಟೆ ಕೊಟ್ಟು ಕಳಿಸುತ್ತಾರೆಂಬ ಅರಿವು ಪಕ್ಕಾ ವ್ಯಾಪಾರಿಯಾದ ವಾಳ್ಕೆಗಿದೆ. ಹಾಗಾಗಿ ಆತ ಅಧ್ಯಕ್ಷತೆ ತಾನೊಲ್ಲೆ ಅಂತಿದ್ದಾನೆ. ಬೇಕಿದ್ದರೆ ಮುಂದಿನ ಸಾರಿ ಕುಮಟೆಯಲ್ಲಿ ಕ್ಯಾಂಡಿಡೇಟ್ ಮಾಡಿ; ಈ ಖಾಲಿ ಪುಕ್ಕಟ್ಟೆ ಅಧ್ಯಕ್ಷತೆ ನಂಗೆ ಬೇಡ ಎಂದು ಖಡಾಖಂಡಿತ ವಾಳ್ಕೆ ಹೇಳಿದ್ದಾನೆ. ಎಮ್ಮೆಲ್ಲಿಗಿರಿ ಆಸೆ ತೋರಿಸಿ ಈ ಹಿಂದುಳಿದ ವೈಶ್ಯ ಸಮುದಾಯದ ಬಿಸ್ನೆಸ್‍ಮನ್‍ನ ಹಿಂಡುವ ಪ್ಲಾನು ಹಾಕಿದ್ದ ಚೆಡ್ಡಿಗಳೀಗ ಹೊಸ ಹಣವಂತ ಶೂದ್ರನ ಹುಡುಕಾಟಕ್ಕೆ ಇಳಿದಿದ್ದಾರೆ.

ಈಗಿನ ಅಧ್ಯಕ್ಷ ಕೆ.ಜಿ.ನಾಯ್ಕನಂಥ ದುಡ್ಡಿಲ್ಲದವರು ಸಿಗುತ್ತಿದ್ದಾರೆಯೇ ವಿನಃ ಹಣಕಾಸು ಹರಿಸುವ ಪುಢಾರಿ ಕಾಣಿಸುತ್ತಿಲ್ಲ. ಜಿಲ್ಲಾಧ್ಯಕ್ಷನಾಗುವ ಉಮೇದಿನಲ್ಲಿರುವ ಹಳಿಯಾಳದ ಮಾಜಿ ಶಾಸಕ ಸುನೀಲ್ ಹೆಗಡೆ ಆರೆಸ್ಸೆಸ್ ರಿಂಗ್‍ಮಾಸ್ತರ್‍ಗಳಿಗೆ ಒಪ್ಪಿಗೆ ಆಗುತ್ತಿಲ್ಲ. ಊರು ತುಂಬ ಸಾಲ ಮಾಡಿಕೊಂಡು ಪಾಪರ್ ಆಗಿರುವ ಜಿಲ್ಲಾ ಹೈಕಮಾಂಡ್ ವಿನೋದ್ ಪ್ರಭು, ಅನಂತ್ಮಾಣಿ, ಹನ್ಮಂತ ಶಾನಭಾಗ್ ವಗೈರೆ ಪರಮು ಚೆಡ್ಡಿಗಳದು. ಆದರೆ ಸುನಿಲ್ ಪಟ್ಟು ಸಡಿಲಿಸುತ್ತಿಲ್ಲ. ದೇಶಪಾಂಡೆ ಕ್ಷೇತ್ರದವನಾದ ತಾನು ಜಿಲ್ಲಾ ಬಿಜೆಪಿ ಅಧ್ಯಕ್ಷನಾದರೆ ಹಳಿಯಾಳದಲ್ಲೂ ಕಮಲ ಅರಳಿಸಬಹುದೆಂದು ಕೇಶವಕೃಪಾದಲ್ಲಿ ರಚ್ಚೆ ಹಿಡಿದು ಕುಂತಿದ್ದಾನೆ ಸುನೀಲ್. ಹಣ ಮತ್ತು ಹಿಂದೂತ್ವದ ಕಾಂಬಿನೇಷನ್ ಇರುವಾತ ಸಿಗದೆ ಆರೆಸ್ಸೆಸ್ ಗ್ಯಾಂಗ್ ಗೊಂದಲಕ್ಕೆ ಬಿದ್ದಿದೆ; ಗತಿಯಿಲ್ಲದೆ ಸುನೀಲ್ ಹೆಗಡೆಗೆ ಅಧ್ಯಕ್ಷಗಿರಿ ದೀಕ್ಷೆ ಕೊಡಬೇಕಾದ ಅನಿವಾರ್ಯಕ್ಕೆ ಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...