Homeಅಂತರಾಷ್ಟ್ರೀಯಇರಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ: ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ವಿಸ್ತರಣೆ

ಇರಾನ್ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ: ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ವಿಸ್ತರಣೆ

ಪ್ರತೀಕಾರದ ಘೋಷಣೆ ಮಾಡಿದ ಇರಾನ್: ವರದಿ

- Advertisement -
- Advertisement -

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷಕ್ಕೆ ಅಮೆರಿಕ ಅಧಿಕೃತವಾಗಿ ಎಂಟ್ರಿಯಾಗಿದೆ. ಇರಾನ್‌ನ ಮೂರು ಪರಮಾಣು ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿರುವುದಾಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ (ಜೂ.22) ಹೇಳಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಪೋಸ್ಟ್ ಹಾಕಿರುವ ಅವರು, “ಅಮೆರಿಕದ ಪಡೆಗಳು ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ‘ಅತ್ಯಂತ ಯಶಸ್ವಿ’ ದಾಳಿಗಳನ್ನು ನಡೆಸಿವೆ. ಎಲ್ಲಾ ಅಮೆರಿಕನ್ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ” ಎಂದು ತಿಳಿಸಿದ್ದಾರೆ.

“ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ! ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರತೀಕಾರದ ಘೋಷಣೆ ಮಾಡಿದ ಇರಾನ್

ಇರಾನ್‌ನ ಮೂರು ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಬಳಿಕ, ಪಶ್ಚಿಮ ಏಷ್ಯಾದ ಪ್ರತಿಯೊಬ್ಬ ಅಮೆರಿಕನ್ ನಾಗರಿಕ ಅಥವಾ ಮಿಲಿಟರಿ ಸಿಬ್ಬಂದಿ ಈಗ ನಮ್ಮ ಗುರಿ ಎಂದು ಇರಾನ್‌ನ ಸರ್ಕಾರಿ ದೂರದರ್ಶನವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿರುವುದಾಗಿ news18.com ವರದಿ ಮಾಡಿದೆ.

“ಇರಾನ್‌ನ ವಾಯುಪ್ರದೇಶವನ್ನು ಉಲ್ಲಂಘಿಸುವ ಮೂಲಕ ಅಮೆರಿಕ ಇರಾನ್ ವಿರುದ್ಧ ಅಪರಾಧ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮೆರಿಕದ ಅಧ್ಯಕ್ಷರೇ, ನೀವು ದಾಳಿ ಪ್ರಾರಂಭಿಸಿದ್ದೀರಿ, ನಾವು ಕೊನೆಗೊಳಿಸುತ್ತೇವೆ” ಎಂದು ಇರಾನ್ ದೂರದರ್ಶನ ಯುಎಸ್ ನೆಲೆಗಳ ಗ್ರಾಫಿಕ್ ಅನ್ನು ಪ್ರದರ್ಶಿಸುತ್ತಾ ಹೇಳಿದೆ” ಎಂದು ವರದಿ ವಿವರಿಸಿದೆ.

ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ವಿಸ್ತರಣೆ

ಅಮೆರಿಕ ಇರಾನ್ ಮೇಲೆ ದಾಳಿ ನಡೆಸಿದ ಬಳಿಕ ಇಸ್ರೇಲ್‌ನಲ್ಲಿ ತುರ್ತು ಪರಿಸ್ಥಿತಿ ವಿಸ್ತರಿಸಲಾಗಿದೆ ಎಂದು timesofisrael.com ವರದಿ ಮಾಡಿದೆ.

ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಶುಕ್ರವಾರ ಘೋಷಿಸಿದ ರಾಷ್ಟ್ರವ್ಯಾಪಿ ತುರ್ತು ಪರಿಸ್ಥಿತಿಯನ್ನು ಜೂನ್ 30 ರವರೆಗೆ ವಿಸ್ತರಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ವರದಿ ಹೇಳಿದೆ.

ಈ ವಿಸ್ತರಣೆಗೆ ಲಿಕುಡ್ ಎಂಕೆ ಯುಲಿ ಎಡೆಲ್‌ಸ್ಟೈನ್ ಅಧ್ಯಕ್ಷತೆಯ ನೆಸ್ಸೆಟ್ ವಿದೇಶಾಂಗ ವ್ಯವಹಾರ ಮತ್ತು ಭದ್ರತಾ ಸಮಿತಿಯ ಮತ್ತಷ್ಟು ಅನುಮೋದನೆಯ ಅಗತ್ಯವಿದೆ. ತುರ್ತು ಪರಿಸ್ಥಿತಿಯು ಸಚಿವ ಸಂಪುಟಕ್ಕೆ ನೆಸ್ಸೆಟ್ ಶಾಸನವನ್ನು ಉಲ್ಲಂಘಿಸಿ ನಿಯಮಗಳನ್ನು ಹೊರಡಿಸಲು ಅನುವು ಮಾಡಿಕೊಡುತ್ತದೆ ಎಂದು ವರದಿ ವಿವರಿಸಿದೆ.

9 ದಿನಗಳ ಇಸ್ರೇಲ್ ದಾಳಿಯಲ್ಲಿ 400 ಕ್ಕೂ ಹೆಚ್ಚು ಜನರು ಸಾವು – ಇರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...