Homeಅಂತರಾಷ್ಟ್ರೀಯಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

- Advertisement -
- Advertisement -

ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಲು ಭಾನುವಾರ ಮಾಸ್ಕೋಗೆ ಪ್ರಯಾಣಿಸಲಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. “ಸೋಮವಾರ ಪುಟಿನ್ ಅವರನ್ನು ಭೇಟಿ ಮಾಡಲು ಬಯಸುತ್ತೇನೆ ಎಂದು ಅರಘ್ಚಿ ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿಯನ್ನು ಉಲ್ಲೇಖಿಸಿ ಅದು ಹೇಳಿದೆ. ಅಮೆರಿಕದಿಂದ ಬಾಂಬ್ ದಾಳಿ

ಅಂತರರಾಷ್ಟ್ರೀಯ ಕಾನೂನಿನ ಬಗ್ಗೆ ಅಮೆರಿಕಕ್ಕೆ ಗೌರವವಿಲ್ಲ ಎಂದು ತೋರಿಸಿದೆ ಮತ್ತು ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ದಾಳಿ ಮಾಡುವ ಮೂಲಕ “ಬಹಳ ದೊಡ್ಡ ರೆಡ್‌ ಲೈನ್‌” ಅನ್ನು ದಾಟಿದೆ ಎಂದು ಅರಘ್ಚಿ ಅವರು ಹೇಳಿದ್ದಾರೆ. “ಅವರು ಬೆದರಿಕೆ ಮತ್ತು ಶಕ್ತಿಯ ಭಾಷೆಯನ್ನು ಮಾತ್ರ ಅರ್ಥಮಾಡಿಕೊಳ್ಳುತ್ತಾರೆ” ಎಂದು ಅವರು ಹೇಳಿದ್ದಾರೆ.

ಟರ್ಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ್ದ ಅರಘ್ಚಿ, “ಇರಾನ್ ತನ್ನ ಭದ್ರತೆ, ಹಿತಾಸಕ್ತಿ ಮತ್ತು ಜನರನ್ನು ರಕ್ಷಿಸಲು ಎಲ್ಲಾ ಆಯ್ಕೆಗಳನ್ನು ಕಾಯ್ದಿರಿಸಿದೆ. ದೇಶದ ಸಶಸ್ತ್ರ ಪಡೆಗಳು ಸಂಪೂರ್ಣ ಜಾಗರೂಕತೆಯಿಂದ ಇವೆ. ಮೊದಲು ನಮ್ಮ ಪ್ರತಿಕ್ರಿಯೆಗಾಗಿ ಕಾಯಿರಿ. ಆಕ್ರಮಣಶೀಲತೆ ಕೊನೆಗೊಂಡಾಗ, ಈ ಬಗ್ಗೆ ನಾವು ನಿರ್ಧರಿಸಲಿದ್ದೇವೆ” ಎಂದು ಹೇಳಿದ್ದಾರೆ.

ಭಾನುವಾರ ಅಮೆರಿಕದ ದಾಳಿಯ ನಂತರ ಪ್ರತಿಕ್ರಿಯಿಸಿದ್ದ ಇರಾನ್‌ನ ಪರಮಾಣು ಶಕ್ತಿ ಸಂಸ್ಥೆಯ ವಕ್ತಾರ ಬೆಹ್ರೌಜ್ ಕಮಲ್ವಾಂಡಿ, ಪರಮಾಣು ಕ್ಷೇತ್ರದಲ್ಲಿನ ತನ್ನ ಜ್ಞಾನವನ್ನು “ನಾಶಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಈ ಉದ್ಯಮವು ನಮ್ಮ ದೇಶದಲ್ಲಿ ಬೇರುಗಳನ್ನು ಹೊಂದಿದೆ. ಈ ರಾಷ್ಟ್ರೀಯ ಉದ್ಯಮದ ಬೇರುಗಳನ್ನು ನಾಶಮಾಡಲು ಸಾಧ್ಯವಿಲ್ಲ ಎಂದು ಅವರು ತಿಳಿದಿರಬೇಕು. ಖಂಡಿತ, ನಾವು ಹಾನಿಯನ್ನು ಅನುಭವಿಸಿದ್ದೇವೆ, ಆದರೆ ಉದ್ಯಮವು ಹಾನಿಯನ್ನು ಅನುಭವಿಸುತ್ತಿರುವುದು ಇದೇ ಮೊದಲಲ್ಲ” ಎಂದು ಅವರು ತಿಳಿಸಿದ್ದಾರೆ ಎಂದು ತಸ್ನಿಮ್ ಸುದ್ದಿ ಸಂಸ್ಥೆ ಏಜೆನ್ಸಿ ಫ್ರಾನ್ಸ್-ಪ್ರೆಸ್ ವರದಿ ಮಾಡಿದೆ.

ಈ ನಡುವೆ ಇರಾನ್ ಸಂಸತ್ತು ಹಾರ್ಮುಜ್ ಹಡಗು ಮಾರ್ಗದ ಪ್ರಮುಖ ಜಲಸಂಧಿಯನ್ನು ಮುಚ್ಚಲು ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಇರಾನ್ ಮತ್ತು ಒಮಾನ್ ನಡುವಿನ ಕಿರಿದಾದ ಮಾರ್ಗವನ್ನು ಮುಚ್ಚುವ ಮೂಲಕ ಜಾಗತಿಕ ವ್ಯಾಪಾರವನ್ನು ಕುಂಠಿತಗೊಳಿಸುವ ಈ ಕ್ರಮದ ಕುರಿತು ಇರಾನ್‌ನ ಸರ್ವೋಚ್ಚ ರಾಷ್ಟ್ರೀಯ ಭದ್ರತಾ ಮಂಡಳಿಯು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಜಾಗತಿಕ ತೈಲ ಮತ್ತು ಅನಿಲ ಬೇಡಿಕೆಯ ಸುಮಾರು 20% ವ್ಯಾಪಾರ ನಡೆಯುವ ಜಲಸಂಧಿಯನ್ನು ಮುಚ್ಚುವ ನಿರ್ಧಾರ ಇನ್ನೂ ಅಂತಿಮವಾಗಿಲ್ಲ. ಆದಾಗ್ಯೂ, ಸಂಸದ, ಕ್ರಾಂತಿಕಾರಿ ಗಾರ್ಡ್‌ಗಳ ಕಮಾಂಡರ್ ಎಸ್ಮಾಯಿಲ್ ಕೊಸಾರಿ ಪ್ರತಿಕ್ರಿಯಿಸಿ, ಹೀಗೆ ಮಾಡುವುದು ಕಾರ್ಯಸೂಚಿಯಲ್ಲಿದೆ ಮತ್ತು ಅಗತ್ಯವಿದ್ದಾಗಲೆಲ್ಲಾ ಅದನ್ನು ಮಾಡಲಾಗುತ್ತದೆ ಎಂದು ಹೇಳಿದ್ದಾಗಿ ರಾಯಿಟರ್ಸ್ ವರದಿ ಮಾಡಿದೆ.

ಇರಾನ್‌ ಮೇಲೆ ದಾಳಿ ಮಾಡಿರುವ ಕುರಿತು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಭಾನುವಾರ ಮಾಹಿತಿ ನೀಡಿದ್ದು, “ಅಮೆರಿಕದ ಪಡೆಗಳು ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್‌ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ‘ಅತ್ಯಂತ ಯಶಸ್ವಿ’ ದಾಳಿಗಳನ್ನು ನಡೆಸಿವೆ. ಎಲ್ಲಾ ಅಮೆರಿಕನ್ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ” ಎಂದು ತಿಳಿಸಿದ್ದಾರೆ.

“ಪ್ರಾಥಮಿಕ ತಾಣವಾದ ಫೋರ್ಡೋದಲ್ಲಿ ಪೂರ್ಣ ಪ್ರಮಾಣದಲ್ಲಿ ಬಾಂಬ್ ದಾಳಿ ಮಾಡಲಾಗಿದೆ. ಎಲ್ಲಾ ವಿಮಾನಗಳು ಸುರಕ್ಷಿತವಾಗಿ ವಾಪಸ್ ನೆಲೆಗಳಿಗೆ ಹೋಗುತ್ತಿವೆ. ನಮ್ಮ ಅಮೆರಿಕದ ಮಹಾನ್ ಯೋಧರಿಗೆ ಅಭಿನಂದನೆಗಳು. ಈ ರೀತಿ ಕಾರ್ಯಾಚರಣೆ ಮಾಡಬಹುದಾದ ಮತ್ತೊಂದು ಸೇನೆಯು ಜಗತ್ತಿನಲ್ಲಿ ಇಲ್ಲ. ಇದು ಶಾಂತಿಯ ಸಮಯ! ಈ ಬೆಳವಣಿಗೆಯ ಬಗ್ಗೆ ನೀವು ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು,” ಎಂದು ಅವರು ಉಲ್ಲೇಖಿಸಿದ್ದಾರೆ.

ಇರಾನ್‌ನ ಮೂರು ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ ನಡೆಸಿದ ಬಳಿಕ, ಪಶ್ಚಿಮ ಏಷ್ಯಾದ ಪ್ರತಿಯೊಬ್ಬ ಅಮೆರಿಕನ್ ನಾಗರಿಕ ಅಥವಾ ಮಿಲಿಟರಿ ಸಿಬ್ಬಂದಿ ಈಗ ನಮ್ಮ ಗುರಿ ಎಂದು ಇರಾನ್‌ನ ಸರ್ಕಾರಿ ದೂರದರ್ಶನವು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿರುವುದಾಗಿ news18.com ವರದಿ ಮಾಡಿದೆ.

“ಇರಾನ್‌ನ ವಾಯುಪ್ರದೇಶವನ್ನು ಉಲ್ಲಂಘಿಸುವ ಮೂಲಕ ಅಮೆರಿಕ ಇರಾನ್ ವಿರುದ್ಧ ಅಪರಾಧ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಇದಕ್ಕೆ ಅವಕಾಶವಿಲ್ಲ. ಅಮೆರಿಕದ ಅಧ್ಯಕ್ಷರೇ, ನೀವು ದಾಳಿ ಪ್ರಾರಂಭಿಸಿದ್ದೀರಿ, ನಾವು ಕೊನೆಗೊಳಿಸುತ್ತೇವೆ” ಎಂದು ಇರಾನ್ ದೂರದರ್ಶನ ಯುಎಸ್ ನೆಲೆಗಳ ಗ್ರಾಫಿಕ್ ಅನ್ನು ಪ್ರದರ್ಶಿಸುತ್ತಾ ಹೇಳಿದೆ” ಎಂದು ವರದಿ ವಿವರಿಸಿದೆ.

ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ ದೇಶದಲ್ಲಿ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಇರಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ ಎಂದು ಶನಿವಾರ ಅಜ್‌ಜಝೀರಾ ವರದಿ ಮಾಡಿದೆ. ಇಸ್ರೇಲ್‌ನ “ಆಕ್ರಮಣ” ಕ್ಕೆ ಅಮೆರಿಕ ಸೇರಿಕೊಂಡರೆ ಅದು “ಎಲ್ಲರಿಗೂ ತುಂಬಾ ಅಪಾಯಕಾರಿ” ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

ಇರಾನ್‌ನ ಆರೋಗ್ಯ ಸಚಿವಾಲಯದ ಸಾರ್ವಜನಿಕ ಸಂಪರ್ಕ ವಿಭಾಗದ ಮುಖ್ಯಸ್ಥ ಹೊಸೈನ್ ಕೆರ್ಮನ್‌ಪೋರ್, ದೇಶದ ಮೇಲೆ ಇಸ್ರೇಲಿ ನಡೆಸಿದ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಇಸ್ರೇಲ್ ಮತ್ತು ಇರಾನ್ ನಡುವಿನ ಇತ್ತೀಚಿನ ಸುತ್ತಿನ ಸಂಘರ್ಷ ಜೂನ್ 13 ರಂದು ಪ್ರಾರಂಭವಾಯಿತು. ಇಸ್ರೇಲ್ ಸೇನೆಯು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ಉದ್ದೇಶದಿಂದ ಇರಾನ್‌ನಲ್ಲಿ ಪರಮಾಣು ಗುರಿಗಳೆಂದು ಹೇಳಿಕೊಂಡ ಸ್ಥಳಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡಿತು. ಇದಕ್ಕೆ ಪ್ರತಿಯಾಗಿ ಇರಾನ್ ಸೇನೆಯು ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಯ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ನಿರಂತರ ದಾಳಿಗಳು ಈ ಪ್ರದೇಶದಲ್ಲಿ ವ್ಯಾಪಕ ಸಂಘರ್ಷದ ಆತಂಕಗಳಿಗೆ ಕಾರಣವಾಗಿವೆ. ಅಮೆರಿಕದಿಂದ ಬಾಂಬ್ ದಾಳಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶ | ಸೀಟಿನ ವಿಚಾರದಲ್ಲಿ ಜಗಳ: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯ ಗುಂಪು ಹತ್ಯೆ

ಉತ್ತರ ಪ್ರದೇಶ | ಸೀಟಿನ ವಿಚಾರದಲ್ಲಿ ಜಗಳ: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯ ಗುಂಪು ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...