Homeಅಂತರಾಷ್ಟ್ರೀಯಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

- Advertisement -
- Advertisement -

ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಇರಾನ್‌ನೊಂದಿಗಿನ ಇಸ್ರೇಲ್‌ನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದರೂ, ಗಾಝಾದಲ್ಲಿ ಪ್ರತಿದಿನ ಇಸ್ರೇಲಿ ದಾಳಿಗಳಿಂದ ನೂರಾರು ಜನರು ಹತ್ಯೆಯಾಗುತ್ತಿದ್ದು ಮತ್ತು ಗಾಯಗೊಳ್ಳುತ್ತಿದ್ದಾರೆ. ಈ ನಡುವೆ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪರಮೋಚ್ಚ ನಾಯಕ ಪೋಪ್ ಲಿಯೋ, “ಗಾಜಾದಲ್ಲಿನ ನೋವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಜನತೆಗೆ ಕರೆ ನೀಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

“ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ಅನ್ನು ಒಳಗೊಂಡಿರುವ ಈ ನಾಟಕೀಯ ಸನ್ನಿವೇಶದಲ್ಲಿ, ವಿಶೇಷವಾಗಿ ಗಾಝಾ ಮತ್ತು ಇತರ ಪ್ರದೇಶಗಳಲ್ಲಿ ಜನರ ದೈನಂದಿನ ನೋವನ್ನು ಮರೆತುಬಿಡುವ ಅಪಾಯವಿದೆ. ಅಲ್ಲಿ ಸಾಕಷ್ಟು ಮಾನವೀಯ ಬೆಂಬಲದ ಅಗತ್ಯದ ತುರ್ತಿದೆ” ಎಂದು ಪೋಪ್ ಲಿಯೋ ಪವಿತ್ರ ಯಾತ್ರೆಗೆ ಬಂದವರೊಂದಿಗೆ ವಾರದ ಪ್ರಾರ್ಥನೆಯಲ್ಲಿ ಹೇಳಿದ್ದಾರೆ.

ರಾಜತಾಂತ್ರಿಕತೆಯು ಶಸ್ತ್ರಾಸ್ತ್ರಗಳನ್ನು ಮೌನಗೊಳಿಸಲಿ, ರಾಷ್ಟ್ರಗಳು ತಮ್ಮ ಭವಿಷ್ಯವನ್ನು ಹಿಂಸೆ ಮತ್ತು ರಕ್ತಸಿಕ್ತ ಸಂಘರ್ಷಗಳೊಂದಿಗೆ ರೂಪಿಸುವುದರ ಬದಲಾಗಿ, ಶಾಂತಿ ಪ್ರಯತ್ನಗಳೊಂದಿಗೆ ರೂಪಿಸಲಿ ಎಂದು ಲಿಯೋ ಹೇಳಿದ್ದಾರೆ. “ಯುದ್ಧದ ದುರಂತವು ಸರಿಪಡಿಸಲಾಗದ ಪ್ರಪಾತವಾಗುವ ಮೊದಲು ಅದನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಪ್ರತಿಯೊಬ್ಬ ಸದಸ್ಯರಿಗೂ ನೈತಿಕ ಜವಾಬ್ದಾರಿ ಇದೆ” ಎಂದು ಅವರು ಹೇಳಿದ್ದಾರೆ.

ಇರಾನ್ ಜೊತೆ ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿದ್ದರೂ, ಇಸ್ರೇಲ್ ಸೇನೆಯು ಗಾಝಾ ಮೇಲೆ ಮಾರಕ ದಾಳಿಗಳನ್ನು ಮುಂದುವರೆಸಿದೆ. ಕಳೆದ 24 ಗಂಟೆಗಳ ವರದಿ ಅವಧಿಯಲ್ಲಿ ಗಾಝಾದಲ್ಲಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 104 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ದಕ್ಷಿಣ ಖಾನ್ ಯೂನಿಸ್, ಮಧ್ಯ ಗಾಝಾ ಮತ್ತು ಉತ್ತರ ಗಾಝಾ ನಗರದಲ್ಲಿ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಲ್‌ ಜಝೀರಾ ಹೇಳಿದೆ. “ಇರಾನ್ ಜೊತೆಗಿನ ಹೆಚ್ಚುತ್ತಿರುವ ಘರ್ಷಣೆಯಿಂದ ಸೃಷ್ಟಿಯಾದ ಗೊಂದಲದ ಲಾಭವನ್ನು ಪಡೆದುಕೊಂಡು ಇಸ್ರೇಲ್ ಸೇನೆಯು [ಗಾಜಾದಲ್ಲಿ] ಹೆಚ್ಚು ಮಾರಕ ದಾಳಿಗಳನ್ನು ಮುಂದುವರಿಸುತ್ತಿದೆ” ಎಂದು ವರದಿ ಹೇಳಿದೆ.

ಗಾಝಾದಲ್ಲಿ ಇಸ್ರೇಲಿ ದಾಳಿಗಳು ತೀವ್ರಗೊಂಡಿದ್ದು, ದಕ್ಷಿಣ ಗಾಝಾದ ರಫಾ ಬಳಿ ಇಸ್ರೇಲಿ ಸೇನೆಯು ವೈಮಾನಿಕ ದಾಳಿಗಳನ್ನು ನಡೆಸಿದ್ದು, ಕನಿಷ್ಠ 11 ಫೆಲಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಗಾಝಾದ ಜಬಲಿಯಾ ನಿರಾಶ್ರಿತರ ಶಿಬಿರದಲ್ಲಿ ಸಹ ದಾಳಿಗಳು ನಡೆದಿದ್ದು, ಆದರೆ ನಿರ್ದಿಷ್ಟ ಸಾವು-ನೋವಿನ ವಿವರಗಳು ಸ್ಪಷ್ಟವಾಗಿ ದಾಖಲಾಗಿಲ್ಲ.

ಇಸ್ರೇಲಿ ಸೇನೆಯು ಗಾಝಾದ ವಿವಿಧ ಭಾಗಗಳಲ್ಲಿ “ಹಮಾಸ್‌ನ ಗುರಿಗಳನ್ನು” ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ ಎಂದು ಹೇಳಿದೆ, ಆದರೆ ಈ ದಾಳಿಗಳಿಂದ ಸಾಮಾನ್ಯ ನಾಗರಿಕರಿಗೆ ತೀವ್ರ ಹಾನಿಯಾಗುತ್ತಿದೆ ಎಂದು ಫೆಲಸ್ತೀನಿಯ ಮೂಲಗಳು ಆರೋಪಿಸಿವೆ. ಇಂಟರ್ನೆಟ್ ಮತ್ತು ಸಂವಹನ ಸಂಪರ್ಕ ಕಡಿತಗೊಂಡಿರುವುದರಿಂದ ಗಾಝಾದಿಂದ ನಿಖರ ಮಾಹಿತಿ ಬರುವುದು ಕಷ್ಟವಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಅಕ್ಟೋಬರ್ 2023 ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕನಿಷ್ಠ 55,959 ಕ್ಕೆ ಏರಿಕೆಯಾಗಿದ್ದು, 131,242 ಜನರು ಗಾಯಗೊಂಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...