Homeಅಂತರಾಷ್ಟ್ರೀಯಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

- Advertisement -
- Advertisement -

ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ನಂತರ ಇರಾನ್‌ನೊಂದಿಗಿನ ಇಸ್ರೇಲ್‌ನ ಸಂಘರ್ಷ ಉಲ್ಬಣಗೊಳ್ಳುತ್ತಿದ್ದರೂ, ಗಾಝಾದಲ್ಲಿ ಪ್ರತಿದಿನ ಇಸ್ರೇಲಿ ದಾಳಿಗಳಿಂದ ನೂರಾರು ಜನರು ಹತ್ಯೆಯಾಗುತ್ತಿದ್ದು ಮತ್ತು ಗಾಯಗೊಳ್ಳುತ್ತಿದ್ದಾರೆ. ಈ ನಡುವೆ ರೋಮನ್ ಕ್ಯಾಥೋಲಿಕ್ ಚರ್ಚ್‌ನ ಪರಮೋಚ್ಚ ನಾಯಕ ಪೋಪ್ ಲಿಯೋ, “ಗಾಜಾದಲ್ಲಿನ ನೋವನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು” ಎಂದು ಜನತೆಗೆ ಕರೆ ನೀಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

“ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ಅನ್ನು ಒಳಗೊಂಡಿರುವ ಈ ನಾಟಕೀಯ ಸನ್ನಿವೇಶದಲ್ಲಿ, ವಿಶೇಷವಾಗಿ ಗಾಝಾ ಮತ್ತು ಇತರ ಪ್ರದೇಶಗಳಲ್ಲಿ ಜನರ ದೈನಂದಿನ ನೋವನ್ನು ಮರೆತುಬಿಡುವ ಅಪಾಯವಿದೆ. ಅಲ್ಲಿ ಸಾಕಷ್ಟು ಮಾನವೀಯ ಬೆಂಬಲದ ಅಗತ್ಯದ ತುರ್ತಿದೆ” ಎಂದು ಪೋಪ್ ಲಿಯೋ ಪವಿತ್ರ ಯಾತ್ರೆಗೆ ಬಂದವರೊಂದಿಗೆ ವಾರದ ಪ್ರಾರ್ಥನೆಯಲ್ಲಿ ಹೇಳಿದ್ದಾರೆ.

ರಾಜತಾಂತ್ರಿಕತೆಯು ಶಸ್ತ್ರಾಸ್ತ್ರಗಳನ್ನು ಮೌನಗೊಳಿಸಲಿ, ರಾಷ್ಟ್ರಗಳು ತಮ್ಮ ಭವಿಷ್ಯವನ್ನು ಹಿಂಸೆ ಮತ್ತು ರಕ್ತಸಿಕ್ತ ಸಂಘರ್ಷಗಳೊಂದಿಗೆ ರೂಪಿಸುವುದರ ಬದಲಾಗಿ, ಶಾಂತಿ ಪ್ರಯತ್ನಗಳೊಂದಿಗೆ ರೂಪಿಸಲಿ ಎಂದು ಲಿಯೋ ಹೇಳಿದ್ದಾರೆ. “ಯುದ್ಧದ ದುರಂತವು ಸರಿಪಡಿಸಲಾಗದ ಪ್ರಪಾತವಾಗುವ ಮೊದಲು ಅದನ್ನು ನಿಲ್ಲಿಸುವುದು ಅಂತರರಾಷ್ಟ್ರೀಯ ಸಮುದಾಯದ ಪ್ರತಿಯೊಬ್ಬ ಸದಸ್ಯರಿಗೂ ನೈತಿಕ ಜವಾಬ್ದಾರಿ ಇದೆ” ಎಂದು ಅವರು ಹೇಳಿದ್ದಾರೆ.

ಇರಾನ್ ಜೊತೆ ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿದ್ದರೂ, ಇಸ್ರೇಲ್ ಸೇನೆಯು ಗಾಝಾ ಮೇಲೆ ಮಾರಕ ದಾಳಿಗಳನ್ನು ಮುಂದುವರೆಸಿದೆ. ಕಳೆದ 24 ಗಂಟೆಗಳ ವರದಿ ಅವಧಿಯಲ್ಲಿ ಗಾಝಾದಲ್ಲಿ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಮತ್ತು ಇನ್ನೂ 104 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಗಾಝಾದ ದಕ್ಷಿಣ ಖಾನ್ ಯೂನಿಸ್, ಮಧ್ಯ ಗಾಝಾ ಮತ್ತು ಉತ್ತರ ಗಾಝಾ ನಗರದಲ್ಲಿ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸುತ್ತಿದೆ ಎಂದು ಅಲ್‌ ಜಝೀರಾ ಹೇಳಿದೆ. “ಇರಾನ್ ಜೊತೆಗಿನ ಹೆಚ್ಚುತ್ತಿರುವ ಘರ್ಷಣೆಯಿಂದ ಸೃಷ್ಟಿಯಾದ ಗೊಂದಲದ ಲಾಭವನ್ನು ಪಡೆದುಕೊಂಡು ಇಸ್ರೇಲ್ ಸೇನೆಯು [ಗಾಜಾದಲ್ಲಿ] ಹೆಚ್ಚು ಮಾರಕ ದಾಳಿಗಳನ್ನು ಮುಂದುವರಿಸುತ್ತಿದೆ” ಎಂದು ವರದಿ ಹೇಳಿದೆ.

ಗಾಝಾದಲ್ಲಿ ಇಸ್ರೇಲಿ ದಾಳಿಗಳು ತೀವ್ರಗೊಂಡಿದ್ದು, ದಕ್ಷಿಣ ಗಾಝಾದ ರಫಾ ಬಳಿ ಇಸ್ರೇಲಿ ಸೇನೆಯು ವೈಮಾನಿಕ ದಾಳಿಗಳನ್ನು ನಡೆಸಿದ್ದು, ಕನಿಷ್ಠ 11 ಫೆಲಸ್ತೀನಿಯರು ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಗಾಝಾದ ಜಬಲಿಯಾ ನಿರಾಶ್ರಿತರ ಶಿಬಿರದಲ್ಲಿ ಸಹ ದಾಳಿಗಳು ನಡೆದಿದ್ದು, ಆದರೆ ನಿರ್ದಿಷ್ಟ ಸಾವು-ನೋವಿನ ವಿವರಗಳು ಸ್ಪಷ್ಟವಾಗಿ ದಾಖಲಾಗಿಲ್ಲ.

ಇಸ್ರೇಲಿ ಸೇನೆಯು ಗಾಝಾದ ವಿವಿಧ ಭಾಗಗಳಲ್ಲಿ “ಹಮಾಸ್‌ನ ಗುರಿಗಳನ್ನು” ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ ಎಂದು ಹೇಳಿದೆ, ಆದರೆ ಈ ದಾಳಿಗಳಿಂದ ಸಾಮಾನ್ಯ ನಾಗರಿಕರಿಗೆ ತೀವ್ರ ಹಾನಿಯಾಗುತ್ತಿದೆ ಎಂದು ಫೆಲಸ್ತೀನಿಯ ಮೂಲಗಳು ಆರೋಪಿಸಿವೆ. ಇಂಟರ್ನೆಟ್ ಮತ್ತು ಸಂವಹನ ಸಂಪರ್ಕ ಕಡಿತಗೊಂಡಿರುವುದರಿಂದ ಗಾಝಾದಿಂದ ನಿಖರ ಮಾಹಿತಿ ಬರುವುದು ಕಷ್ಟವಾಗಿದೆ ಎಂದು ವರದಿ ಉಲ್ಲೇಖಿಸಿವೆ.

ಅಕ್ಟೋಬರ್ 2023 ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇಸ್ರೇಲ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕನಿಷ್ಠ 55,959 ಕ್ಕೆ ಏರಿಕೆಯಾಗಿದ್ದು, 131,242 ಜನರು ಗಾಯಗೊಂಡಿದ್ದಾರೆ. ಇರಾನ್-ಅಮೆರಿಕ ಸಂಘರ್ಷದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....