Homeಮುಖಪುಟಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

- Advertisement -
- Advertisement -

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆಸಿ 26 ಜನರನ್ನು ಹತ್ಯೆಗೈದ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅವರು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ.

ಪಹಲ್ಗಾಮ್ ದಾಳಿ ನಡೆಸಿದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಪಹಲ್ಗಾಮ್‌ನ ಬಟ್ಕೋಟ್‌ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಹಿಲ್ ಪಾರ್ಕ್‌ನ ಬಶೀರ್ ಅಹ್ಮದ್ ಜೋಥರ್ ಎಂಬವರನ್ನು ಭಾನುವಾರ (ಜೂ.22) ಎನ್‌ಐಎ ಬಂಧಿಸಿದೆ.

ಬಂಧಿತರ ವಿಚಾರಣೆ ವೇಳೆ ದಾಳಿ ನಡೆಸಿ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳು ಮತ್ತು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸಂಬಂಧಿಸಿದವರು ಎಂಬುವುದನ್ನು ಬಹಿರಂಗಪಡಿಸಿದ್ದಾರೆ ಎಂದು ಎನ್‌ಐಎ ತಿಳಿಸಿದೆ.

“ಪಹಲ್ಗಾಮ್ ದಾಳಿಕೋರರ ಗುರುತುಗಳು ಹಿಂದೆ ನಂಬಲಾಗಿದ್ದಕ್ಕಿಂತ ಈ ಭಿನ್ನವಾಗಿದೆ. ದಾಳಿ ನಡೆದ ಎರಡು ದಿನಗಳ ಬಳಿಕ ಜಮ್ಮು ಕಾಶ್ಮೀರ ಪೊಲೀಸರು ಪಾಕಿಸ್ತಾನಿ ಪ್ರಜೆಗಳು ಎನ್ನಲಾದ ಹಾಶಿಮ್ ಮೂಸಾ ಮತ್ತು ಅಲಿ ಭಾಯ್ ಅಲಿಯಾಸ್ ತಲ್ಹಾ ಹಾಗೂ ಕಾಶ್ಮೀರದ ಸ್ಥಳೀಯ ವ್ಯಕ್ತಿ ಎನ್ನಲಾದ ಆದಿಲ್ ಹುಸೇನ್ ಥೋಕರ್ ಎಂಬವರು ಶಂಕಿತ ಆರೋಪಿಗಳು ಎಂದು ರೇಖಾಚಿತ್ರ ಬಿಡುಗಡೆ ಮಾಡಿತ್ತು. ಆದರೆ, ಆ ರೇಖಾಚಿತ್ರಗಳಲ್ಲಿರುವ ಮೂವರು ಪಹಲ್ಗಾಮ್ ದಾಳಿಕೋರರಲ್ಲ ಎಂಬುವುದಾಗಿ ಎನ್‌ಐಎ ಮೂಲಗಳು ಹೇಳುತ್ತಿವೆ ಎಂದು indianexpress.com ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 20ರಂದು ಶ್ರೀನಗರ-ಸೋನಾಮಾರ್ಗ್ ಹೆದ್ದಾರಿಯಲ್ಲಿ ಝಡ್-ಮೋರ್ಹ್ ಸುರಂಗವನ್ನು ನಿರ್ಮಿಸುತ್ತಿದ್ದ ಕಂಪನಿಯ ಏಳು ಉದ್ಯೋಗಿಗಳ ಹತ್ಯೆಯಲ್ಲಿ ಭಾಗಿಯಾಗಿದ್ದ ಸುಲೇಮಾನ್ ಶಾ ದಾಳಿಕೋರರಲ್ಲಿ ಒಬ್ಬನೆಂದು ಮೂಲಗಳು ತಿಳಿಸಿವೆ. ದಾಳಿಯ ಸಹ ಆರೋಪಿ ಜುನೈದ್ ರಂಜಾನ್ ಭಟ್ ಡಿಸೆಂಬರ್ 4ರಂದು ಜಮ್ಮು ಕಾಶ್ಮೀರ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ವರದಿ ವಿವರಿಸಿದೆ.

ಪೊಲೀಸರು ಹತ್ಯೆಯಾದ ಜುನೈದ್ ಫೋನ್‌ನಿಂದ ಆತನ ಜೊತೆಗೆ ಇತರ ಮೂವರು ಉಗ್ರರ ಫೋಟೋವನ್ನು ವಶಪಡಿಸಿಕೊಂಡಿದ್ದರು. ಏಪ್ರಿಲ್ 22ರ ಪಹಲ್ಗಾಮ್ ದಾಳಿಯ ನಂತರ ಈ ಫೋಟೋಗಳು ವೈರಲ್ ಆಗಿತ್ತು. ಮೂಲಗಳು ಹೇಳುವಂತೆ, ಇದನ್ನು ಜಮ್ಮು ಕಾಶ್ಮೀರ ಪೊಲೀಸರು ರೇಖಾಚಿತ್ರಗಳಿಗೆ ಆಧಾರವಾಗಿ ಬಳಸಿಕೊಂಡಿದ್ದಾರೆ.

ತನಿಖೆಯ ಸಮಯದಲ್ಲಿ, ಕೇಂದ್ರೀಯ ಸಂಸ್ಥೆಗಳು ಮತ್ತು ಎನ್‌ಐಎ ಜುನೈದ್ ಫೋನ್‌ನಿಂದ ವಶಪಡಿಸಿಕೊಂಡ ವಿಭಿನ್ನ ಫೋಟೋಗಳನ್ನು ಬಂಧಿತ ಇಬ್ಬರು ಸ್ಥಳೀಯರಿಗೆ ತೋರಿಸಿವೆ. ಅವರು ಪಹಲ್ಗಾಮ್ ದಾಳಿಯ ಎರಡು ದಿನಗಳ ಮೊದಲು ತಮ್ಮನ್ನು ಭೇಟಿ ಮಾಡಿದ್ದ ವ್ಯಕ್ತಿಗಳನ್ನು ಗುರುತಿಸಿದ್ದಾರೆ.

“ಹೊಸ ಫೋಟೋಗಳನ್ನು ಹಲವಾರು ಸಾಕ್ಷಿಗಳಿಗೂ ತೋರಿಸಲಾಗಿದೆ. ಅವರು ಕೂಡ ಫೋಟೋದಲ್ಲಿರುವ ವ್ಯಕ್ತಿಗಳು ಪಹಲ್ಗಾಮ್ ದಾಳಿ ಸ್ಥಳದಲ್ಲಿ ಇದ್ದಿದ್ದನ್ನು ದೃಢಪಡಿಸಿದ್ದಾರೆ. ಝಡ್-ಮೋರ್ಹ್ ದಾಳಿಯ ಆರೋಪಿ ಸುಲೇಮಾನ್ ಶಾ ಸೇರಿದಂತೆ ಮೂವರೂ ಪಾಕಿಸ್ತಾನಿ ಪ್ರಜೆಗಳು” ಎಂಬುವುದಾಗಿ ಮೂಲಗಳು ತಿಳಿಸಿವೆ ಎಂದು indianexpress.com ಹೇಳಿದೆ.

ಕೇಂದ್ರ ಸಂಸ್ಥೆಗಳು ಮತ್ತು ಎನ್‌ಐಎ ಹಿಂದಿನ ಪ್ರಕರಣಗಳನ್ನು ಮರುಪರಿಶೀಲಿಸುತ್ತಿವೆ ಮತ್ತು ಈ ದಾಳಿಕೋರರ ವಿರುದ್ಧ ಬಲವಾದ ಪ್ರಕರಣವನ್ನು ರೂಪಿಸುವುದಕ್ಕಾಗಿ ಬ್ಯಾಲಿಸ್ಟಿಕ್ ವರದಿಗಳನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿವೆ ಎಂದಿದೆ.

ಆಗಸ್ಟ್ 2023ರಲ್ಲಿ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮೂವರು ಸೇನಾ ಸಿಬ್ಬಂದಿಯ ಹತ್ಯೆಯಲ್ಲಿ ಮತ್ತು ಕಳೆದ ವರ್ಷ ಮೇ ತಿಂಗಳಲ್ಲಿ ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿ ಇತರ ನಾಲ್ವರು ಗಾಯಗೊಂಡಿದ್ದ ಮತ್ತೊಂದು ದಾಳಿಯಲ್ಲಿ ಸುಲೇಮಾನ್ ಭಾಗಿಯಾಗಿದ್ದಾನೆಯೇ ಎಂದು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ದಾಳಿಕೋರರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಎನ್‌ಐಎ ಇಬ್ಬರು ಸ್ಥಳೀಯರನ್ನು ಬಂಧಿಸುವ ಮೊದಲು ಸ್ಥಳೀಯ ಕುದುರೆ ಸೇವಾದಾರರು, ವ್ಯಾಪಾರಿಗಳು ಮತ್ತು ಫೋಟೋಗ್ರಾಫರ್‌ಗಳು ಸೇರಿದಂತೆ 200ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿದೆ.

ಬಂಧಿತ ಪರ್ವೈಜ್‌ಗೆ ಕುದುರೆ ಸೇವಾದಾರ ಸ್ನೇಹಿತರಿದ್ದಾರೆ. ಅವರ ಪತ್ನಿಯರು ತಮ್ಮ ಮನೆಗೆ ಭೇಟಿ ನೀಡಿದವರ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ indianexpress.com ಹೇಳಿದೆ.

ಏಪ್ರಿಲ್ 20ರಂದು ಸಂಜೆ ಮೂವರು ದಾಳಿಕೋರರು ಪರ್ವೈಜ್ ಮತ್ತು ಇತರರ ಮನೆಗಳಿಗೆ ಭೇಟಿ ನೀಡಿ ಆಹಾರ ಪ್ಯಾಕ್ ಮಾಡಿ ಕೊಡಲು ಹೇಳಿದ್ದಾರೆ. ಅಲ್ಲಿಂದ ಹೊರಡುವ ಮೊದಲು, ಅವರು ಮನೆಯವರಿಗೆ ಸ್ವಲ್ಪ ಹಣ ನೀಡಿ ತಮ್ಮ ಭೇಟಿಯ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದಿದೆ.

ತನಿಖೆಯ ಪ್ರಕಾರ, ಪರ್ವೈಜ್ ಮತ್ತು ಬಶೀರ್ ದಾಳಿಗೆ ಮೊದಲು ಹಿಲ್ ಪಾರ್ಕ್‌ನಲ್ಲಿರುವ ಗುಡಿಸಲಿನಲ್ಲಿ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ತಿಳಿದೇ ಆಶ್ರಯ ನೀಡಿದ್ದಾರೆ. ಭಯೋತ್ಪಾದಕರಿಗೆ ಆಹಾರ, ಆಶ್ರಯ ಮತ್ತು ಸಾಗಣೆ ಬೆಂಬಲವನ್ನು ಒದಗಿಸಿದ್ದಾರೆ. 1967 ರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 19 ರ ಅಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ.

ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...