Homeಮುಖಪುಟಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನಿ ಪ್ರಜೆಗಳು: ಎನ್‌ಐಎ

- Advertisement -
- Advertisement -

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆಸಿ 26 ಜನರನ್ನು ಹತ್ಯೆಗೈದ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳಾಗಿದ್ದು, ಅವರು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ.

ಪಹಲ್ಗಾಮ್ ದಾಳಿ ನಡೆಸಿದ ಭಯೋತ್ಪಾದಕರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಪಹಲ್ಗಾಮ್‌ನ ಬಟ್ಕೋಟ್‌ನ ಪರ್ವೈಜ್ ಅಹ್ಮದ್ ಜೋಥರ್ ಮತ್ತು ಹಿಲ್ ಪಾರ್ಕ್‌ನ ಬಶೀರ್ ಅಹ್ಮದ್ ಜೋಥರ್ ಎಂಬವರನ್ನು ಭಾನುವಾರ (ಜೂ.22) ಎನ್‌ಐಎ ಬಂಧಿಸಿದೆ.

ಬಂಧಿತರ ವಿಚಾರಣೆ ವೇಳೆ ದಾಳಿ ನಡೆಸಿ ಮೂವರು ಭಯೋತ್ಪಾದಕರು ಪಾಕಿಸ್ತಾನಿ ಪ್ರಜೆಗಳು ಮತ್ತು ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಗೆ ಸಂಬಂಧಿಸಿದವರು ಎಂಬುವುದನ್ನು ಬಹಿರಂಗಪಡಿಸಿದ್ದಾರೆ ಎಂದು ಎನ್‌ಐಎ ತಿಳಿಸಿದೆ.

“ಪಹಲ್ಗಾಮ್ ದಾಳಿಕೋರರ ಗುರುತುಗಳು ಹಿಂದೆ ನಂಬಲಾಗಿದ್ದಕ್ಕಿಂತ ಈ ಭಿನ್ನವಾಗಿದೆ. ದಾಳಿ ನಡೆದ ಎರಡು ದಿನಗಳ ಬಳಿಕ ಜಮ್ಮು ಕಾಶ್ಮೀರ ಪೊಲೀಸರು ಪಾಕಿಸ್ತಾನಿ ಪ್ರಜೆಗಳು ಎನ್ನಲಾದ ಹಾಶಿಮ್ ಮೂಸಾ ಮತ್ತು ಅಲಿ ಭಾಯ್ ಅಲಿಯಾಸ್ ತಲ್ಹಾ ಹಾಗೂ ಕಾಶ್ಮೀರದ ಸ್ಥಳೀಯ ವ್ಯಕ್ತಿ ಎನ್ನಲಾದ ಆದಿಲ್ ಹುಸೇನ್ ಥೋಕರ್ ಎಂಬವರು ಶಂಕಿತ ಆರೋಪಿಗಳು ಎಂದು ರೇಖಾಚಿತ್ರ ಬಿಡುಗಡೆ ಮಾಡಿತ್ತು. ಆದರೆ, ಆ ರೇಖಾಚಿತ್ರಗಳಲ್ಲಿರುವ ಮೂವರು ಪಹಲ್ಗಾಮ್ ದಾಳಿಕೋರರಲ್ಲ ಎಂಬುವುದಾಗಿ ಎನ್‌ಐಎ ಮೂಲಗಳು ಹೇಳುತ್ತಿವೆ ಎಂದು indianexpress.com ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್ 20ರಂದು ಶ್ರೀನಗರ-ಸೋನಾಮಾರ್ಗ್ ಹೆದ್ದಾರಿಯಲ್ಲಿ ಝಡ್-ಮೋರ್ಹ್ ಸುರಂಗವನ್ನು ನಿರ್ಮಿಸುತ್ತಿದ್ದ ಕಂಪನಿಯ ಏಳು ಉದ್ಯೋಗಿಗಳ ಹತ್ಯೆಯಲ್ಲಿ ಭಾಗಿಯಾಗಿದ್ದ ಸುಲೇಮಾನ್ ಶಾ ದಾಳಿಕೋರರಲ್ಲಿ ಒಬ್ಬನೆಂದು ಮೂಲಗಳು ತಿಳಿಸಿವೆ. ದಾಳಿಯ ಸಹ ಆರೋಪಿ ಜುನೈದ್ ರಂಜಾನ್ ಭಟ್ ಡಿಸೆಂಬರ್ 4ರಂದು ಜಮ್ಮು ಕಾಶ್ಮೀರ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ವರದಿ ವಿವರಿಸಿದೆ.

ಪೊಲೀಸರು ಹತ್ಯೆಯಾದ ಜುನೈದ್ ಫೋನ್‌ನಿಂದ ಆತನ ಜೊತೆಗೆ ಇತರ ಮೂವರು ಉಗ್ರರ ಫೋಟೋವನ್ನು ವಶಪಡಿಸಿಕೊಂಡಿದ್ದರು. ಏಪ್ರಿಲ್ 22ರ ಪಹಲ್ಗಾಮ್ ದಾಳಿಯ ನಂತರ ಈ ಫೋಟೋಗಳು ವೈರಲ್ ಆಗಿತ್ತು. ಮೂಲಗಳು ಹೇಳುವಂತೆ, ಇದನ್ನು ಜಮ್ಮು ಕಾಶ್ಮೀರ ಪೊಲೀಸರು ರೇಖಾಚಿತ್ರಗಳಿಗೆ ಆಧಾರವಾಗಿ ಬಳಸಿಕೊಂಡಿದ್ದಾರೆ.

ತನಿಖೆಯ ಸಮಯದಲ್ಲಿ, ಕೇಂದ್ರೀಯ ಸಂಸ್ಥೆಗಳು ಮತ್ತು ಎನ್‌ಐಎ ಜುನೈದ್ ಫೋನ್‌ನಿಂದ ವಶಪಡಿಸಿಕೊಂಡ ವಿಭಿನ್ನ ಫೋಟೋಗಳನ್ನು ಬಂಧಿತ ಇಬ್ಬರು ಸ್ಥಳೀಯರಿಗೆ ತೋರಿಸಿವೆ. ಅವರು ಪಹಲ್ಗಾಮ್ ದಾಳಿಯ ಎರಡು ದಿನಗಳ ಮೊದಲು ತಮ್ಮನ್ನು ಭೇಟಿ ಮಾಡಿದ್ದ ವ್ಯಕ್ತಿಗಳನ್ನು ಗುರುತಿಸಿದ್ದಾರೆ.

“ಹೊಸ ಫೋಟೋಗಳನ್ನು ಹಲವಾರು ಸಾಕ್ಷಿಗಳಿಗೂ ತೋರಿಸಲಾಗಿದೆ. ಅವರು ಕೂಡ ಫೋಟೋದಲ್ಲಿರುವ ವ್ಯಕ್ತಿಗಳು ಪಹಲ್ಗಾಮ್ ದಾಳಿ ಸ್ಥಳದಲ್ಲಿ ಇದ್ದಿದ್ದನ್ನು ದೃಢಪಡಿಸಿದ್ದಾರೆ. ಝಡ್-ಮೋರ್ಹ್ ದಾಳಿಯ ಆರೋಪಿ ಸುಲೇಮಾನ್ ಶಾ ಸೇರಿದಂತೆ ಮೂವರೂ ಪಾಕಿಸ್ತಾನಿ ಪ್ರಜೆಗಳು” ಎಂಬುವುದಾಗಿ ಮೂಲಗಳು ತಿಳಿಸಿವೆ ಎಂದು indianexpress.com ಹೇಳಿದೆ.

ಕೇಂದ್ರ ಸಂಸ್ಥೆಗಳು ಮತ್ತು ಎನ್‌ಐಎ ಹಿಂದಿನ ಪ್ರಕರಣಗಳನ್ನು ಮರುಪರಿಶೀಲಿಸುತ್ತಿವೆ ಮತ್ತು ಈ ದಾಳಿಕೋರರ ವಿರುದ್ಧ ಬಲವಾದ ಪ್ರಕರಣವನ್ನು ರೂಪಿಸುವುದಕ್ಕಾಗಿ ಬ್ಯಾಲಿಸ್ಟಿಕ್ ವರದಿಗಳನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿವೆ ಎಂದಿದೆ.

ಆಗಸ್ಟ್ 2023ರಲ್ಲಿ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮೂವರು ಸೇನಾ ಸಿಬ್ಬಂದಿಯ ಹತ್ಯೆಯಲ್ಲಿ ಮತ್ತು ಕಳೆದ ವರ್ಷ ಮೇ ತಿಂಗಳಲ್ಲಿ ಜಮ್ಮುವಿನ ಪೂಂಚ್ ಜಿಲ್ಲೆಯಲ್ಲಿ ವಾಯುಪಡೆಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿ ಇತರ ನಾಲ್ವರು ಗಾಯಗೊಂಡಿದ್ದ ಮತ್ತೊಂದು ದಾಳಿಯಲ್ಲಿ ಸುಲೇಮಾನ್ ಭಾಗಿಯಾಗಿದ್ದಾನೆಯೇ ಎಂದು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ದಾಳಿಕೋರರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಎನ್‌ಐಎ ಇಬ್ಬರು ಸ್ಥಳೀಯರನ್ನು ಬಂಧಿಸುವ ಮೊದಲು ಸ್ಥಳೀಯ ಕುದುರೆ ಸೇವಾದಾರರು, ವ್ಯಾಪಾರಿಗಳು ಮತ್ತು ಫೋಟೋಗ್ರಾಫರ್‌ಗಳು ಸೇರಿದಂತೆ 200ಕ್ಕೂ ಹೆಚ್ಚು ಜನರನ್ನು ವಿಚಾರಣೆ ನಡೆಸಿದೆ.

ಬಂಧಿತ ಪರ್ವೈಜ್‌ಗೆ ಕುದುರೆ ಸೇವಾದಾರ ಸ್ನೇಹಿತರಿದ್ದಾರೆ. ಅವರ ಪತ್ನಿಯರು ತಮ್ಮ ಮನೆಗೆ ಭೇಟಿ ನೀಡಿದವರ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ indianexpress.com ಹೇಳಿದೆ.

ಏಪ್ರಿಲ್ 20ರಂದು ಸಂಜೆ ಮೂವರು ದಾಳಿಕೋರರು ಪರ್ವೈಜ್ ಮತ್ತು ಇತರರ ಮನೆಗಳಿಗೆ ಭೇಟಿ ನೀಡಿ ಆಹಾರ ಪ್ಯಾಕ್ ಮಾಡಿ ಕೊಡಲು ಹೇಳಿದ್ದಾರೆ. ಅಲ್ಲಿಂದ ಹೊರಡುವ ಮೊದಲು, ಅವರು ಮನೆಯವರಿಗೆ ಸ್ವಲ್ಪ ಹಣ ನೀಡಿ ತಮ್ಮ ಭೇಟಿಯ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದಿದೆ.

ತನಿಖೆಯ ಪ್ರಕಾರ, ಪರ್ವೈಜ್ ಮತ್ತು ಬಶೀರ್ ದಾಳಿಗೆ ಮೊದಲು ಹಿಲ್ ಪಾರ್ಕ್‌ನಲ್ಲಿರುವ ಗುಡಿಸಲಿನಲ್ಲಿ ಮೂವರು ಶಸ್ತ್ರಸಜ್ಜಿತ ಭಯೋತ್ಪಾದಕರಿಗೆ ತಿಳಿದೇ ಆಶ್ರಯ ನೀಡಿದ್ದಾರೆ. ಭಯೋತ್ಪಾದಕರಿಗೆ ಆಹಾರ, ಆಶ್ರಯ ಮತ್ತು ಸಾಗಣೆ ಬೆಂಬಲವನ್ನು ಒದಗಿಸಿದ್ದಾರೆ. 1967 ರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 19 ರ ಅಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ.

ಪಹಲ್ಗಾಮ್ ದಾಳಿಕೋರರಿಗೆ ಆಶ್ರಯ ನೀಡಿದ ಆರೋಪ: ಇಬ್ಬರನ್ನು ಬಂಧಿಸಿದ ಎನ್‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...