Homeದಲಿತ್ ಫೈಲ್ಸ್'ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

‘ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ’: ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

- Advertisement -
- Advertisement -

ಇಂಡಿಗೋ ಏರ್‌ಲೈನ್ಸ್‌ನ ದಲಿತ ಸಮುದಾಯದ ತರಬೇತಿ ಪೈಲಟ್‌ ಒಬ್ಬರಿಗೆ ಕೆಲಸದ ಸ್ಥಳದಲ್ಲಿ ಮೂವರು ಸಹೋದ್ಯೋಗಿಗಳು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಇಂಡಿಯಾ ಟುಡೆ ಸೋಮವಾರ ವರದಿ ಮಾಡಿದೆ. ಮೂವರು ಆರೋಪಿಗಳು ದಲಿತ ಪೈಲಟ್‌ ಅನ್ನು ಅವಹೇಳನ ಮಾಡಿದ್ದು, ಅವರು ಕಾಕ್‌ಪಿಟ್‌ನಲ್ಲಿ ಕುಳಿತುಕೊಳ್ಳಲು ಅಥವಾ ವಿಮಾನ ಹಾರಿಸಲು ಅರ್ಹನಲ್ಲ ಎಂದು ಅರೋಪಿಗಳು ಹೇಳಿದ್ದಾಗಿ ದೂರಲಾಗಿದೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಜಾತಿ ನಿಂದನೆ ಮಾಡಿದ ಆರೋಪಿಗಳನ್ನು ತಪಸ್ ಡೇ, ಮನೀಶ್ ಸಹಾನಿ ಮತ್ತು ರಾಹುಲ್ ಪಾಟೀಲ್ ಎಂದು ಗುರುತಿಸಲಾಗಿದ್ದು, ಮೂವರು ಆರೋಪಿಗಳು “ಚಪ್ಪಲಿ ಹೊಲಿಯುವ ಕೆಲಸಕ್ಕೆ ಹಿಂತಿರುಗಿ ಹೋಗು” ಎಂದು ಹೇಳಿದ್ದಾಗಿ ಸಂತ್ರಸ್ತ ಶರಣ್ ಕುಮಾರ್ ಅವರ ತಂದರೆ ಅಶೋಕ್‌ ಕುಮಾರ್‌ ಆರೋಪಿಸಿದ್ದಾರೆ.

“ಇತರರ ಮುಂದೆ ಜಾತಿವಾದಿ ಮತ್ತು ನಿಂದನೀಯ ಹೇಳಿಕೆಗಳನ್ನು ನೀಡಲಾಗಿದ್ದು, ಇದು ಕಾನೂನಿನ ಅಡಿಯಲ್ಲಿ ಗಂಭೀರ ಅಪರಾಧಗಳಾಗಿವೆ: ನನ್ನ ಪೂರ್ವಜರ ಜಾತಿಯ ಕೆಲಸವನ್ನು ಉಲ್ಲೇಖಿಸಿ, ನೀವು ವಿಮಾನ ಹಾರಿಸಲು ಯೋಗ್ಯರಲ್ಲ, ಹಿಂತಿರುಗಿ ಚಪ್ಪಲಿ ಹೊಲಿಯಿರಿ” ಎಂದು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಅವರು ನೀಡಿರುವ ದೂರಿದ್ದಾರೆ ತಿಳಿಸಿದ್ದಾರೆ.

ನೀವು ನನ್ನ ಶೂ ನೆಕ್ಕಲು ಸಹ ಅರ್ಹರಲ್ಲ ಎಂದು ಆರೋಪಿಗಳು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಹೇಳಿದ್ದರೆ. “ಒಬ್ಬ %#$@ ವ್ಯಕ್ತಿಗೆ ನನ್ನ ಮುಂದೆ ಕುಳಿತು ವಿವರಣೆ ಕೇಳುವ ಧೈರ್ಯವಿದೆಯೇ? ಈ ಕಟ್ಟಡಕ್ಕೆ ಕಾವಲುಗಾರನಾಗಲು ಕೂಡಾ ನಿಮಗೆ ಅರ್ಹತೆ ಇಲ್ಲ, ಅಂತದ್ದರಲ್ಲಿ ನೀವು ವಿವರಣೆ ಕೇಳುತ್ತಿದ್ದೀರಾ?” ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಅಶೋಕ್‌ ಕುಮಾರ್ ಆರೋಪಿಸಿದ್ದಾರೆ.

ಅಶೋಕ್ ಅವರ ದೂರಿನ ಆಧಾರದ ಮೇಲೆ, ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸಹೋದ್ಯೋಗಿಗಳು ತಮ್ಮ ಮಗನನ್ನು ಗುರಿಯಾಗಿಸಿ ನಿರಂತರ ಕಿರುಕುಳ ಮತ್ತು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಶೋಕ್ ಕುಮಾರ್, ಈ ಹೇಳಿಕೆಗಳನ್ನು ತಮ್ಮ ಮಗನ ಜಾತಿಯ ಬಗ್ಗೆ ಸ್ಪಷ್ಟ ಉಲ್ಲೇಖದೊಂದಿಗೆ, ಅವರನ್ನು ಅವಮಾನಿಸುವ ಉದ್ದೇಶದಿಂದ ಮತ್ತು ಪರಿಶಿಷ್ಟ ಜಾತಿಯ ವ್ಯಕ್ತಿಯಾಗಿ ಅವರ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೆಲಸಕ್ಕೆ ಲಭ್ಯವಿದ್ದರೂ ಅನಧಿಕೃತ ವೇತನ ಕಡಿತ, ಯಾವುದೇ ಮಾನ್ಯ ಕಾರಣವಿಲ್ಲದೆ ಅನಾರೋಗ್ಯ ರಜೆ ಕಡಿತ, ಸಿಬ್ಬಂದಿ ಪ್ರಯಾಣ ಮತ್ತು ಎಸಿಎಂ ಸವಲತ್ತುಗಳನ್ನು ರದ್ದುಪಡಿಸುವುದು ಮತ್ತು ಪುರಾವೆಗಳಿಲ್ಲದೆ ಎಚ್ಚರಿಕೆ ಪತ್ರವನ್ನು ನೀಡುವುದು ಸೇರಿದಂತೆ ಯಾವುದೇ ವೈಫಲ್ಯವಿಲ್ಲದೆ ಸರಿಪಡಿಸುವ ತರಬೇತಿಗೆ ಒಳಗಾಗಲು “ಬಲವಂತವಾಗಿ” ತನ್ನ ಮಗ ಶರಣ್ ಅವರನ್ನು ಮತ್ತಷ್ಟು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂದು ಅಶೋಕ್‌ ಕುಮಾರ್ ಹೇಳಿದ್ದಾರೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...