Homeದಲಿತ್ ಫೈಲ್ಸ್'ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

‘ಪೈಲಟ್‌ ಆಗಲು ಅರ್ಹತೆಯಿಲ್ಲ, ಹೋಗಿ ಚಪ್ಪಲಿ ಹೊಲಿ’: ಇಂಡಿಗೊ ಸಂಸ್ಥೆಯಲ್ಲಿ ದಲಿತ ಪೈಲಟ್‌ಗೆ ಜಾತಿ ನಿಂದನೆ

- Advertisement -
- Advertisement -

ಇಂಡಿಗೋ ಏರ್‌ಲೈನ್ಸ್‌ನ ದಲಿತ ಸಮುದಾಯದ ತರಬೇತಿ ಪೈಲಟ್‌ ಒಬ್ಬರಿಗೆ ಕೆಲಸದ ಸ್ಥಳದಲ್ಲಿ ಮೂವರು ಸಹೋದ್ಯೋಗಿಗಳು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಇಂಡಿಯಾ ಟುಡೆ ಸೋಮವಾರ ವರದಿ ಮಾಡಿದೆ. ಮೂವರು ಆರೋಪಿಗಳು ದಲಿತ ಪೈಲಟ್‌ ಅನ್ನು ಅವಹೇಳನ ಮಾಡಿದ್ದು, ಅವರು ಕಾಕ್‌ಪಿಟ್‌ನಲ್ಲಿ ಕುಳಿತುಕೊಳ್ಳಲು ಅಥವಾ ವಿಮಾನ ಹಾರಿಸಲು ಅರ್ಹನಲ್ಲ ಎಂದು ಅರೋಪಿಗಳು ಹೇಳಿದ್ದಾಗಿ ದೂರಲಾಗಿದೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಜಾತಿ ನಿಂದನೆ ಮಾಡಿದ ಆರೋಪಿಗಳನ್ನು ತಪಸ್ ಡೇ, ಮನೀಶ್ ಸಹಾನಿ ಮತ್ತು ರಾಹುಲ್ ಪಾಟೀಲ್ ಎಂದು ಗುರುತಿಸಲಾಗಿದ್ದು, ಮೂವರು ಆರೋಪಿಗಳು “ಚಪ್ಪಲಿ ಹೊಲಿಯುವ ಕೆಲಸಕ್ಕೆ ಹಿಂತಿರುಗಿ ಹೋಗು” ಎಂದು ಹೇಳಿದ್ದಾಗಿ ಸಂತ್ರಸ್ತ ಶರಣ್ ಕುಮಾರ್ ಅವರ ತಂದರೆ ಅಶೋಕ್‌ ಕುಮಾರ್‌ ಆರೋಪಿಸಿದ್ದಾರೆ.

“ಇತರರ ಮುಂದೆ ಜಾತಿವಾದಿ ಮತ್ತು ನಿಂದನೀಯ ಹೇಳಿಕೆಗಳನ್ನು ನೀಡಲಾಗಿದ್ದು, ಇದು ಕಾನೂನಿನ ಅಡಿಯಲ್ಲಿ ಗಂಭೀರ ಅಪರಾಧಗಳಾಗಿವೆ: ನನ್ನ ಪೂರ್ವಜರ ಜಾತಿಯ ಕೆಲಸವನ್ನು ಉಲ್ಲೇಖಿಸಿ, ನೀವು ವಿಮಾನ ಹಾರಿಸಲು ಯೋಗ್ಯರಲ್ಲ, ಹಿಂತಿರುಗಿ ಚಪ್ಪಲಿ ಹೊಲಿಯಿರಿ” ಎಂದು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಅವರು ನೀಡಿರುವ ದೂರಿದ್ದಾರೆ ತಿಳಿಸಿದ್ದಾರೆ.

ನೀವು ನನ್ನ ಶೂ ನೆಕ್ಕಲು ಸಹ ಅರ್ಹರಲ್ಲ ಎಂದು ಆರೋಪಿಗಳು ಹೇಳಿದ್ದಾಗಿ ಶರಣ್ ಅವರ ತಂದೆ ಅಶೋಕ್ ಕುಮಾರ್ ಹೇಳಿದ್ದರೆ. “ಒಬ್ಬ %#$@ ವ್ಯಕ್ತಿಗೆ ನನ್ನ ಮುಂದೆ ಕುಳಿತು ವಿವರಣೆ ಕೇಳುವ ಧೈರ್ಯವಿದೆಯೇ? ಈ ಕಟ್ಟಡಕ್ಕೆ ಕಾವಲುಗಾರನಾಗಲು ಕೂಡಾ ನಿಮಗೆ ಅರ್ಹತೆ ಇಲ್ಲ, ಅಂತದ್ದರಲ್ಲಿ ನೀವು ವಿವರಣೆ ಕೇಳುತ್ತಿದ್ದೀರಾ?” ಪೊಲೀಸರಿಗೆ ಸಲ್ಲಿಸಿದ ದೂರಿನಲ್ಲಿ ಅಶೋಕ್‌ ಕುಮಾರ್ ಆರೋಪಿಸಿದ್ದಾರೆ.

ಅಶೋಕ್ ಅವರ ದೂರಿನ ಆಧಾರದ ಮೇಲೆ, ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸಹೋದ್ಯೋಗಿಗಳು ತಮ್ಮ ಮಗನನ್ನು ಗುರಿಯಾಗಿಸಿ ನಿರಂತರ ಕಿರುಕುಳ ಮತ್ತು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಶೋಕ್ ಕುಮಾರ್, ಈ ಹೇಳಿಕೆಗಳನ್ನು ತಮ್ಮ ಮಗನ ಜಾತಿಯ ಬಗ್ಗೆ ಸ್ಪಷ್ಟ ಉಲ್ಲೇಖದೊಂದಿಗೆ, ಅವರನ್ನು ಅವಮಾನಿಸುವ ಉದ್ದೇಶದಿಂದ ಮತ್ತು ಪರಿಶಿಷ್ಟ ಜಾತಿಯ ವ್ಯಕ್ತಿಯಾಗಿ ಅವರ ಘನತೆ ಮತ್ತು ಸ್ಥಾನಮಾನವನ್ನು ಕುಗ್ಗಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕೆಲಸಕ್ಕೆ ಲಭ್ಯವಿದ್ದರೂ ಅನಧಿಕೃತ ವೇತನ ಕಡಿತ, ಯಾವುದೇ ಮಾನ್ಯ ಕಾರಣವಿಲ್ಲದೆ ಅನಾರೋಗ್ಯ ರಜೆ ಕಡಿತ, ಸಿಬ್ಬಂದಿ ಪ್ರಯಾಣ ಮತ್ತು ಎಸಿಎಂ ಸವಲತ್ತುಗಳನ್ನು ರದ್ದುಪಡಿಸುವುದು ಮತ್ತು ಪುರಾವೆಗಳಿಲ್ಲದೆ ಎಚ್ಚರಿಕೆ ಪತ್ರವನ್ನು ನೀಡುವುದು ಸೇರಿದಂತೆ ಯಾವುದೇ ವೈಫಲ್ಯವಿಲ್ಲದೆ ಸರಿಪಡಿಸುವ ತರಬೇತಿಗೆ ಒಳಗಾಗಲು “ಬಲವಂತವಾಗಿ” ತನ್ನ ಮಗ ಶರಣ್ ಅವರನ್ನು ಮತ್ತಷ್ಟು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎಂದು ಅಶೋಕ್‌ ಕುಮಾರ್ ಹೇಳಿದ್ದಾರೆ. ‘ಪೈಲಟ್‌ ಆಗಲು ಅರ್ಹತೆಯಿಲ್ಲ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...