Homeಮುಖಪುಟಕಾರು ಹರಿದು ವ್ಯಕ್ತಿ ಸಾವು: ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಎಫ್‌ಐಆರ್

ಕಾರು ಹರಿದು ವ್ಯಕ್ತಿ ಸಾವು: ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಗುಂಟೂರು ಹೊರವಲಯದಲ್ಲಿ ಕಾರು ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್‌ಆರ್‌ಸಿ ಪಕ್ಷದ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಜೂನ್ 18ರಂದು ಅಪಘಾತ ನಡೆದಿದೆ. 65 ವರ್ಷ ವಯಸ್ಸಿನ ಚೀಲಿ ಸಿಂಗಯ್ಯ ಎಂಬವರು ಸಾವಿಗೀಡಾಗಿದ್ದಾರೆ.

ಭಾನುವಾರ (ಜೂ.22) ಜಗನ್ ಅವರ ಬೆಂಗಾವಲು ವಾಹನದ ಚಾಲಕ ರಮಣ ರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೀಲಿ ಸಿಂಗಯ್ಯ ಅವರು ತಮ್ಮ ವಾಹನದ ಅಡಿಗೆ ಸಿಲುಕಿಕೊಂಡ ನಂತರವೂ, ರಮಣ ರೆಡ್ಡಿ ವಾಹನ ನಿಲ್ಲಿಸದೆ ತೆರಳಿದ್ದಾರೆ ಎಂದು ಆರೋಪಿಸಲಾಗಿದೆ.

“ಮಾಜಿ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರ ಬೆಂಗಾವಲು ವಾಹನದ ಚಕ್ರಕ್ಕೆ ಸಿಲುಕಿ ಸಿಂಗಯ್ಯ ಅವರು ಸಾವಿಗೀಡಾಗಿದ್ದಾರೆ ಎಂಬುದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ. ಅದಕ್ಕೆ ಅನುಗುಣವಾಗಿ ನಾವು ಪ್ರಕರಣದ ಸೆಕ್ಷನ್‌ಗಳನ್ನು ಬದಲಾಯಿಸಿದ್ದೇವೆ. ಅಲ್ಲದೆ, ಜಗನ್ ಮೋಹನ್ ರೆಡ್ಡಿ, ಬೆಂಗಾವಲು ವಾಹನ ಚಾಲಕ ರಮಣ ರೆಡ್ಡಿ, ಮಾಜಿ ಸಚಿವರಾದ ವೈ.ವಿ ಸುಬ್ಬಾರೆಡ್ಡಿ ಮತ್ತು ವಿಡದಲ ರಜಿನಿ, ಮಾಜಿ ಶಾಸಕ ಪೆರ್ಣಿ ವೆಂಕಟರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಗುಂಟೂರು ಎಸ್ಪಿ ಸತೀಶ್ ಕುಮಾರ್ ಹೇಳಿದ್ದಾರೆ.

ಒಂದು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬವನ್ನು ಭೇಟಿ ಮಾಡಲು ಜಗನ್ ಮೋಹನ್ ರೆಡ್ಡಿ ಅವರು ಬೆಂಗಾವಲು ವಾಹನಗಳೊಂದಿಗೆ ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಗೆ ತೆರಳುತ್ತಿದ್ದಾಗ ಸಿಂಗಯ್ಯ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಅಪಘಾತಕ್ಕೆ ಖಾಸಗಿ ವಾಹನವೇ ಕಾರಣ ಎಂಬ ಪ್ರಕರಣದ ಅಂಶವನ್ನು ಪರಿಷ್ಕರಿಸಲಾಗಿದೆ ಎಂದಿದ್ದಾರೆ.

ಪೊಲೀಸರ ಹೇಳಿಕೆಯಲ್ಲಿನ ಬದಲಾವಣೆಯನ್ನು ವೈಎಸ್‌ಆರ್‌ಸಿ ಪಕ್ಷ ಪ್ರಶ್ನಿಸಿದ್ದು, ಅಪಘಾತಕ್ಕೀಡಾದ ವಾಹನವು ಜಗನ್ ಅವರ ಬೆಂಗಾವಲು ಪಡೆಯ ಭಾಗವಾಗಿರಲಿಲ್ಲ. ಅದು ಖಾಸಗಿ ವಾಹನ ಎಂದು ಗುಂಟೂರು ಎಸ್‌ಪಿ ಬುಧವಾರ ಹೇಳಿದ್ದಾರೆ ಎಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಜಗನ್ ಮೋಹನ್ ರೆಡ್ಡಿ ಅವರು ನಿಂತುಕೊಂಡು ಜನರತ್ತ ಕೈಬೀಸುತ್ತಿದ್ದ ಕಾರಿನ ಚಕ್ರದಡಿಗೆ ವ್ಯಕ್ತಿಯೊಬ್ಬರು ಸಿಲುಕಿರುವುದನ್ನು ನೋಡಬಹುದು.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸಿಂಗಯ್ಯ ಅವರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಬಿಎನ್‌ಎಸ್ ಸೆಕ್ಷನ್ 106(1) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸಿಸಿಟಿವಿ ದೃಶ್ಯಾವಳಿಗಳು, ಡ್ರೋನ್ ದೃಶ್ಯಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ. ಸಿಂಗಯ್ಯ ಅವರ ಮೇಲೆ ಜಗನ್‌ ಅವರ ಬೆಂಗಾವಲು ಪಡೆ ವಾಹನ ಹರಿದಿದ್ದು, ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಪೊಲೀಸರು ಬಿಎನ್‌ಎಸ್ ಸೆಕ್ಷನ್‌ 105 (ಕೊಲೆಗೆ ಸಮಾನವಲ್ಲದ ನರಹತ್ಯೆ) ಮತ್ತು ಸೆಕ್ಷನ್ 49(ಹತ್ಯೆಗೆ ಪ್ರೇರಣೆ) ಅಡಿಯಲ್ಲಿ ಪ್ರಕಣ ದಾಖಲಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...