Homeಮುಖಪುಟಕಾರು ಹರಿದು ವ್ಯಕ್ತಿ ಸಾವು: ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಎಫ್‌ಐಆರ್

ಕಾರು ಹರಿದು ವ್ಯಕ್ತಿ ಸಾವು: ಆಂಧ್ರ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ಎಫ್‌ಐಆರ್

- Advertisement -
- Advertisement -

ಗುಂಟೂರು ಹೊರವಲಯದಲ್ಲಿ ಕಾರು ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್‌ಆರ್‌ಸಿ ಪಕ್ಷದ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಮತ್ತು ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಜೂನ್ 18ರಂದು ಅಪಘಾತ ನಡೆದಿದೆ. 65 ವರ್ಷ ವಯಸ್ಸಿನ ಚೀಲಿ ಸಿಂಗಯ್ಯ ಎಂಬವರು ಸಾವಿಗೀಡಾಗಿದ್ದಾರೆ.

ಭಾನುವಾರ (ಜೂ.22) ಜಗನ್ ಅವರ ಬೆಂಗಾವಲು ವಾಹನದ ಚಾಲಕ ರಮಣ ರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೀಲಿ ಸಿಂಗಯ್ಯ ಅವರು ತಮ್ಮ ವಾಹನದ ಅಡಿಗೆ ಸಿಲುಕಿಕೊಂಡ ನಂತರವೂ, ರಮಣ ರೆಡ್ಡಿ ವಾಹನ ನಿಲ್ಲಿಸದೆ ತೆರಳಿದ್ದಾರೆ ಎಂದು ಆರೋಪಿಸಲಾಗಿದೆ.

“ಮಾಜಿ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರ ಬೆಂಗಾವಲು ವಾಹನದ ಚಕ್ರಕ್ಕೆ ಸಿಲುಕಿ ಸಿಂಗಯ್ಯ ಅವರು ಸಾವಿಗೀಡಾಗಿದ್ದಾರೆ ಎಂಬುದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ. ಅದಕ್ಕೆ ಅನುಗುಣವಾಗಿ ನಾವು ಪ್ರಕರಣದ ಸೆಕ್ಷನ್‌ಗಳನ್ನು ಬದಲಾಯಿಸಿದ್ದೇವೆ. ಅಲ್ಲದೆ, ಜಗನ್ ಮೋಹನ್ ರೆಡ್ಡಿ, ಬೆಂಗಾವಲು ವಾಹನ ಚಾಲಕ ರಮಣ ರೆಡ್ಡಿ, ಮಾಜಿ ಸಚಿವರಾದ ವೈ.ವಿ ಸುಬ್ಬಾರೆಡ್ಡಿ ಮತ್ತು ವಿಡದಲ ರಜಿನಿ, ಮಾಜಿ ಶಾಸಕ ಪೆರ್ಣಿ ವೆಂಕಟರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಗುಂಟೂರು ಎಸ್ಪಿ ಸತೀಶ್ ಕುಮಾರ್ ಹೇಳಿದ್ದಾರೆ.

ಒಂದು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡ ತಮ್ಮ ಪಕ್ಷದ ಕಾರ್ಯಕರ್ತನ ಕುಟುಂಬವನ್ನು ಭೇಟಿ ಮಾಡಲು ಜಗನ್ ಮೋಹನ್ ರೆಡ್ಡಿ ಅವರು ಬೆಂಗಾವಲು ವಾಹನಗಳೊಂದಿಗೆ ಪಲ್ನಾಡು ಜಿಲ್ಲೆಯ ಸತ್ತೇನಪಲ್ಲಿಗೆ ತೆರಳುತ್ತಿದ್ದಾಗ ಸಿಂಗಯ್ಯ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಅಪಘಾತಕ್ಕೆ ಖಾಸಗಿ ವಾಹನವೇ ಕಾರಣ ಎಂಬ ಪ್ರಕರಣದ ಅಂಶವನ್ನು ಪರಿಷ್ಕರಿಸಲಾಗಿದೆ ಎಂದಿದ್ದಾರೆ.

ಪೊಲೀಸರ ಹೇಳಿಕೆಯಲ್ಲಿನ ಬದಲಾವಣೆಯನ್ನು ವೈಎಸ್‌ಆರ್‌ಸಿ ಪಕ್ಷ ಪ್ರಶ್ನಿಸಿದ್ದು, ಅಪಘಾತಕ್ಕೀಡಾದ ವಾಹನವು ಜಗನ್ ಅವರ ಬೆಂಗಾವಲು ಪಡೆಯ ಭಾಗವಾಗಿರಲಿಲ್ಲ. ಅದು ಖಾಸಗಿ ವಾಹನ ಎಂದು ಗುಂಟೂರು ಎಸ್‌ಪಿ ಬುಧವಾರ ಹೇಳಿದ್ದಾರೆ ಎಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಜಗನ್ ಮೋಹನ್ ರೆಡ್ಡಿ ಅವರು ನಿಂತುಕೊಂಡು ಜನರತ್ತ ಕೈಬೀಸುತ್ತಿದ್ದ ಕಾರಿನ ಚಕ್ರದಡಿಗೆ ವ್ಯಕ್ತಿಯೊಬ್ಬರು ಸಿಲುಕಿರುವುದನ್ನು ನೋಡಬಹುದು.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸಿಂಗಯ್ಯ ಅವರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಬಿಎನ್‌ಎಸ್ ಸೆಕ್ಷನ್ 106(1) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸಿಸಿಟಿವಿ ದೃಶ್ಯಾವಳಿಗಳು, ಡ್ರೋನ್ ದೃಶ್ಯಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ. ಸಿಂಗಯ್ಯ ಅವರ ಮೇಲೆ ಜಗನ್‌ ಅವರ ಬೆಂಗಾವಲು ಪಡೆ ವಾಹನ ಹರಿದಿದ್ದು, ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಪೊಲೀಸರು ಬಿಎನ್‌ಎಸ್ ಸೆಕ್ಷನ್‌ 105 (ಕೊಲೆಗೆ ಸಮಾನವಲ್ಲದ ನರಹತ್ಯೆ) ಮತ್ತು ಸೆಕ್ಷನ್ 49(ಹತ್ಯೆಗೆ ಪ್ರೇರಣೆ) ಅಡಿಯಲ್ಲಿ ಪ್ರಕಣ ದಾಖಲಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ವಿಧಾನಸಭೆ ಉಪಚುನಾವಣೆ | ಕೇರಳದ ನಿಲಂಬೂರಿನಲ್ಲಿ ಯುಡಿಎಫ್ ಅಭ್ಯರ್ಥಿ ಆರ್ಯಡನ್ ಶೌಕತ್‌ಗೆ ಭರ್ಜರಿ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...