Homeಅಂತರಾಷ್ಟ್ರೀಯಇರಾನ್ ಜನರಿಗೆ ಸಹಾಯ ಮಾಡಲು ರಷ್ಯಾ ಸಿದ್ಧ - ವ್ಲಾದಿಮಿರ್ ಪುಟಿನ್

ಇರಾನ್ ಜನರಿಗೆ ಸಹಾಯ ಮಾಡಲು ರಷ್ಯಾ ಸಿದ್ಧ – ವ್ಲಾದಿಮಿರ್ ಪುಟಿನ್

- Advertisement -
- Advertisement -

ಇರಾನ್ ವಿರುದ್ಧದ ಆಕ್ರಮಣವು ಆಧಾರರಹಿತವಾಗಿದೆ ಎಂದು ಮಾಸ್ಕೋದಲ್ಲಿ ನಡೆದ ಮಾತುಕತೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರಿಗೆ ತಿಳಿಸಿದ್ದಾರೆ ಎಂದು ಅಲ್‌ಜಝೀರಾ ಸೋಮವಾರ ವರದಿ ಮಾಡಿದೆ. ಇರಾನ್ ಮತ್ತು ರಷ್ಯಾದ ಮಾತುಕತೆಯ ಆರಂಭದಲ್ಲಿ ಪುಟಿನ್ ಈ ಹೇಳಿಕೆ ನೀಡಿದ್ದು, ಇರಾನ್ ಜನರಿಗೆ ಸಹಾಯ ಮಾಡಲು ರಷ್ಯಾ ಸಿದ್ಧವಾಗಿದೆ ಎಂದು ತಿಳಿದ್ದಾರೆ.

ಈ ಮಧ್ಯೆ, ಇರಾನ್ ಮೇಲಿನ ಅಮೆರಿಕದ ದಾಳಿಯನ್ನು ಖಂಡಿಸಿದ್ದಕ್ಕಾಗಿ ಅರಾಘ್ಚಿ ಅವರು ಪುಟಿನ್ ಅವರಿಗೆ ಧನ್ಯವಾದ ಅರ್ಪಿಸಿದ್ದು, ರಷ್ಯಾವು “ಇತಿಹಾಸದ ಸರಿಯಾದ ಭಾಗ”ದಲ್ಲಿ ನಿಂತಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಅವರು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಾಲಿನೈ ಮತ್ತು ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರ ಶುಭಾಶಯಗಳನ್ನು ಪುಟಿನ್ ಅವರಿಗೆ ತಿಳಿಸಲು ಕೇಳಿಕೊಂಡರು ಎಂದು ಅರಾಘ್ಚಿ ಅವರು ಹೇಳಿದ್ದಾರೆ.

ಇರಾನಿನ ಮೂರು ಪ್ರಮುಖ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಒಂದು ದಿನದ ನಂತರ ಇಸ್ರೇಲ್ ಮತ್ತು ಇರಾನ್ ನಡುವೆ ಭಾರೀ ವಾಯುದಾಳಿಗಳು ನಡೆದಿವೆ ಎಂದು ಅಲ್‌ಜಝೀರಾ ವರದಿ ಮಾಡಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿ ಸ್ಫೋಟಗಳು ಸಂಭವಿಸಿದೆ ಎಂದು ವರದಿಯಾಗಿದೆ. ಇಸ್ರೇಲ್ ಸೇನೆಯು ಇರಾನ್‌ನ ಸರ್ಕಾರಿ ಮತ್ತು ಮಿಲಿಟರಿ ತಾಣಗಳ ಮೇಲೆ ದಾಳಿಗಳನ್ನು ಘೋಷಿಸುತ್ತಿದ್ದಂತೆ; ಇರಾನ್ ಕೂಡ ಇಸ್ರೇಲ್‌ಗೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಸುರಿಮಳೆಗಳನ್ನು ಕಳುಹಿಸುತ್ತಿದೆ, ಹಲವಾರು ನಗರಗಳಲ್ಲಿ ಸ್ಫೋಟಗಳ ಸದ್ದು ಕೇಳಿಬರುತ್ತಿದೆ ಎಂದು ವರದಿ ಹೇಳಿದೆ.

ಈ ನಡುವೆ ಇರಾನ್‌ನ ಶಿಕ್ಷಣ ಮತ್ತು ಸಂಶೋಧನೆಗಾಗಿ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಸಯೀದ್ ಖತಿಬ್ಜಾದೆಹ್ ಪ್ರತಿಕ್ರಿಯಿಸಿ, ತನ್ನ ದೇಶವು ತನ್ನ ಪರಮಾಣು ಕೇಂದ್ರಗಳ ಮೇಲಿನ ಅಮೆರಿಕದ ದಾಳಿಗಳಿಗೆ ಸೂಕ್ತವೆಂದು ಭಾವಿಸಿದಾಗ ಪ್ರತಿಕ್ರಿಯಿಸುವ ಹಕ್ಕಿದೆ ಎಂದು ಹೇಳಿದ್ದಾರೆ.

ಮಧ್ಯಪ್ರಾಚ್ಯ ಪ್ರದೇಶದಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಇರಾನಿನ ದಾಳಿಯ ಸಾಧ್ಯತೆಯನ್ನು ಖತಿಬ್ಜಾದೆಹ್ ತಳ್ಳಿಹಾಕದೆ, “[ಅಮೆರಿಕನ್ನರಿಗೆ] ಹೇಗೆ, ಯಾವಾಗ ಮತ್ತು ಯಾವ ಮಟ್ಟದಲ್ಲಿ ಪ್ರತಿಕ್ರಿಯಿಸಬೇಕು ಎಂಬುದನ್ನು ಇರಾನ್ ನಿರ್ಧರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಇರಾನ್‌ ಫೋರ್ಡೋವ್‌ನಂತಹ ಪರಮಾಣು ತಾಣಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದ್ದು ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸುವ “ಗಂಭೀರ ತಪ್ಪು” ಎಂದು ಸಚಿವರು ಬಣ್ಣಿಸಿದ್ದಾರೆ.

ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ 13 ಮಕ್ಕಳು ಸೇರಿದಂತೆ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3,056 ಜನರು ಗಾಯಗೊಂಡಿದ್ದಾರೆ ಎಂದು ಇರಾನ್ ಆರೋಗ್ಯ ಸಚಿವಾಲಯ ಹೇಳಿದೆ. ಇಸ್ರೇಲ್‌ನಲ್ಲಿ ಇರಾನಿನ ದಾಳಿಯಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇರಾನ್ ಜನರಿಗೆ ಸಹಾಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಂಬೈ: 60 ವರ್ಷದ ಕ್ಯಾನ್ಸರ್ ರೋಗಿಯನ್ನು ಕಸದ ರಾಶಿಯಲ್ಲಿ ಮಲಗಿಸಿದ ಮೊಮ್ಮಗ

ಮುಂಬೈ: 60 ವರ್ಷದ ಕ್ಯಾನ್ಸರ್ ರೋಗಿಯನ್ನು ಕಸದ ರಾಶಿಯಲ್ಲಿ ಮಲಗಿಸಿದ ಮೊಮ್ಮಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...