Homeಕರ್ನಾಟಕ'ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ' | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ಬೀದಿ ವ್ಯಾಪಾರಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳ ಹಿನ್ನಲೆ, ವ್ಯಾಪಾರಿಗಳು ತಮ್ಮ ಹಕ್ಕಿಗಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ ಎಂದು ಪ್ರಶ್ನಿಸಿರುವ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಹೇಳಿದ್ದು, ಬೀದಿ ವ್ಯಾಪಾರಿಗಳ ಎತ್ತಂಗಡಿ ನಿಲ್ಲಿಸಿ ಎಂದು ಆಗ್ರಹಿಸಿದೆ. ಬೀದಿ ಬದಿ ವ್ಯಾಪಾರಿಗಳಿಂದ

“ಬೆಂಗಳೂರು ನಗರದ ಬೀದಿ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ನಮ್ಮ ಹಕ್ಕಿಗಾಗಿ ದಿನಾಂಕ ಜೂನ್ 24ರ ಮಂಗಳವಾರ, ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಗರದ ಪ್ರಮುಖ ಮಾರುಕಟ್ಟೆಗಳಾದ ಕೆ.ಆರ್.ಮಾರುಕಟ್ಟೆ , ಜಯನಗರ ೪ ನೇ ಬಡಾವಣೆ , ವಿಜಯನಗರ , ಶಿವಾಜಿನಗರ, ಯೆಶವಂತಪುರ , ಗಾಂಧೀ ಬಜಾರ್ ಹಾಗು ಇನ್ನು ಹಲವು ಮಾರುಕಟ್ಟೆಗಳಿಂದ ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ಮಂಗಳವಾರ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಬೀದಿ ವ್ಯಾಪಾರಿಗಳ ಸಂಘ ಹೇಳಿದೆ.

“ಕರ್ನಾಟಕದ ಆರ್ಥಿಕತೆಯಲ್ಲಿ ಬೀದಿಬದಿ ವ್ಯಾಪಾರಸ್ಥರು ಪ್ರಮುಖ ಕೊಡುಗೆಯನ್ನು ನೀಡುತ್ತಲೆ ಇದ್ದಾರೆ. ರೈತರಿಂದ, ಹೋಲ್‌ಸೇಲ್ ವಸ್ತುಗಳನ್ನು ಪಡೆದು ನಮ್ಮ ನಗರಗಳಲ್ಲಿ ಅಗತ್ಯ ವಸ್ತುಗಳು ಹಾಗೂ ಸೇವೆಯನ್ನು ಕೈಗೆಟಕುವ ಬೆಲೆಯಲ್ಲಿ ನೀಡುತ್ತಾ, ಬೀದಿ ವ್ಯಾಪಾರ ರಾಜ್ಯದ ಆರ್ಥಿಕ ಆರೋಗ್ಯದ ಜೊತೆಗೆ ಹೆಣೆದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರದ ನಡೆಯು ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಧಕ್ಕೆಯನ್ನುಂಟು ಮಾಡಲು ಹೊರಟಿದೆ” ಎಂದು ಸಂಘ ಹೇಳಿದೆ.

“ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳು ರಸ್ತೆ ಬದಿ / ಫುಟ್‌ಪಾತ್ ಮೇಲೆ ವ್ಯಾಪಾರ ಮಾಡಬಾರದು, ವೆಂಡಿಂಗ್ ಜೋನ್‌ನಲ್ಲಿ ಮಾತ್ರ ವ್ಯಾಪಾರ ಮಾಡಬೇಕು ಅಥವಾ ದಿನವಿಡೀ ಗಾಡಿಗಳನ್ನು ತಳ್ಳಿಕೊಂಡು ವ್ಯಾಪಾರ ಮಾಡಬೇಕು ಹಾಗೂ ಗುರುತಿನ ಚೀಟಿ ಇಲ್ಲದವರಿಗೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮದಲ್ಲಿ ಹೇಳಿಕೆಯನ್ನು ನೀಡಿದ್ದಾರೆ” ಎಂದು ಸಂಘ ಹೇಳಿದೆ.

“ಫುಟ್ಪಾತ್ತ್ ಅಥವಾ ಬೀದಿ ಬದಿ ಬಿಟ್ಟು ಬೇರೆ ಯಾವ ಜಾಗದಲ್ಲಿ ವ್ಯಾಪಾರ ಮಾಡಲು ಸಾಧ್ಯ? ಇದು ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ, 2014ರ ಉಲ್ಲಂಘನೆ. ಈ ಹೇಳಿಕೆಯಿಂದ ಅಧಿಕಾರಿಗಳು ಬೀದಿ ವ್ಯಾಪಾರಿಗಳ ಮೇಲೆ ಹೇರುವ ಕಿರುಕುಳ ಹೆಚ್ಚಾಗಿದ್ದು, ಬೀದಿ ವ್ಯಾಪಾರಿಗಳು ಆತಂಕ್ಕೊಳಗಾಗಿದ್ದಾರೆ” ಎಂದು ಸಂಘವು ಹೇಳಿದೆ.

“ಅಕ್ಟೋಬರ್ 2024ರಿಂದ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದು ಫೆಬ್ರವರಿ 2025 ಮುಕ್ತಾಯಗೊಂಡಿದ್ದು, ಸುಮಾರು 34,000 ಬೀದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಮತ್ತು ಇತರೆ ಸಾವಿರಾರು ವ್ಯಾಪಾರಿಗಳನ್ನು ಸಮೀಕ್ಷೆಯಿಂದ ಸ್ವೀಕರಿಸಲಾಗದ ವಿವಿಧ ಕಾರಣಗಳಿಂದಾಗಿ ಹೊರಗಿಡಲಾಗಿದೆ. ಪಿ.ಎಂ-ಸ್ವಾನಿಧಿ ಸಾಲವನ್ನು 70,000ಕೂ ಹೆಚ್ಚು ಜನರಿಗೆ ನೀಡಿಲಾಗಿದ್ದು, ಕನಿಷ್ಠ 70,000 ಬೀದಿ ವ್ಯಾಪಾರಿಗಳು ಸಮೀಕ್ಷೆಯಲ್ಲಿ ಒಳಗೊಂಡಿರಬೇಕಲ್ಲವೇ?” ಎಂದು ಸಂಘವು ಪ್ರಶ್ನಿಸಿದೆ.

“ಬೆಂಗಳೂರಿನಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನ ಬೀದಿ ವ್ಯಾಪಾರದ ಮೇಲೆ ಅವಲಂಬಿತರಾಗಿದ್ದು, ಸಮೀಕ್ಷೆಯಲ್ಲಿ ಒಳಗೊಳ್ಳದ ಬೀದಿ ವ್ಯಾಪಾರಿಗಳು ಯಾವುದೇ ರೀತಿಯ ಕಾನೂನಿನ ರಕ್ಷಣೆ ಇಲ್ಲದಂತೆ ಬೇಕು ಅಂತಲೇ ಹೊರದಬ್ಬಲಾಗಿದೆ. ಜೊತೆಗೆ ಸಮೀಕ್ಷೆಯಲ್ಲಿ ಒಳಗೊಂಡ ವ್ಯಾಪಾರಿಗಳಿಗೆ ಇದುವರೆಗೂ ಗುರುತಿನ ಚೀಟಿ ಅಥವಾ ವ್ಯಾಪಾರದ ಪ್ರಮಾಣ ಪತ್ರವನ್ನು ವಿತರಿಸಿರುವುದಿಲ್ಲ” ಎಂದು ಸಂಘವು ಹೇಳಿದೆ.

ಅಷ್ಟೆ ಅಲ್ಲದೆ, ಚರ್ಚ್ ಸ್ಟ್ರೀಟ್‌ನಲ್ಲಿ ಕಳೆದ ವಾರ ಬಿಬಿಎಂಪಿ ಅಧಿಕಾರಿಗಳು ಕಾನೂನು ಬಾಹಿರವಾಗಿ ಬೀದಿ ವ್ಯಾಪಾರಿಗಳ ಸರಕನ್ನು ವಶಪಡಿಸಿಕೊಂಡು ಇನ್ನು ಸಹ ಹಿಂತಿರಿಗಿಸಿಲ್ಲ ಎಂದು ಸಂಘವು ಹೇಳಿದ್ದು, ಜಯನಗರ ೯ ನೇ ಬಡಾವಣೆ ಹಾಗು ಸಾರಕ್ಕಿ ಮಾರುಕಟ್ಟೆಯಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ವ್ಯಾಪಾರಿಗಳ ಸಾವಿರಾರು ರೂಪಾಯಿ ಮೊತ್ತದ ಹಣ್ಣನ್ನು ಕದ್ದಿದ್ದಾರೆ ಎಂದು ಹೇಳಿದೆ.

ಹಲವಾರು ಮಾರುಕಟ್ಟೆಗಳಲ್ಲಿ ಶೌಚಾಲಯ, ನೀರು, ಬೆಳಕು ಮುಂತಾದ ಮೂಲಸೌಕರ್ಯವಿಲ್ಲ. ಬೀದಿ ವ್ಯಾಪಾರಿಗಳಿಗೆ ಯಾವುದೇ ಸಾಮಾಜಿಕ ಭದ್ರತೆಯಿಲ್ಲ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ. ಈ ಹಿನ್ನಲೆಯಲ್ಲಿ ವ್ಯಾಪಾರಿಗಳ ಘನತೆಗಾಗಿ, ಬೀದಿ ವ್ಯಾಪಾರದ ಹಕ್ಕಿಗಾಗಿ, ಮಾರುಕಟ್ಟೆಗಳಲ್ಲಿ ಮೂಲಭೂತ ಸೌಕರ್ಯಕ್ಕಾಗಿ, ಸಾಮಾಜಿಕ ಭಾದ್ರತೆಗಾಗಿ ಈ ಹೋರಾಟವನ್ನು ನಡೆಸುತ್ತಿರುವುದಾಗಿ ಬೀದಿಬದಿ ವ್ಯಾಪಾರಿಗಳ ಸಂಘವು ಹೇಳಿದೆ. ಬೀದಿ ಬದಿ ವ್ಯಾಪಾರಿಗಳಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...