Homeಮುಖಪುಟವೀಕ್ಷಿಸಿ | ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ವಂದೇ ಭಾರತ್ ರೈಲು ಪ್ರಯಾಣಿಕನಿಗೆ ಥಳಿತ!

ವೀಕ್ಷಿಸಿ | ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ವಂದೇ ಭಾರತ್ ರೈಲು ಪ್ರಯಾಣಿಕನಿಗೆ ಥಳಿತ!

- Advertisement -
- Advertisement -

ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ಕಾರಣ ದೆಹಲಿ-ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಥಳಿಸಲಾಗಿದೆ ಎಂದು ಎನ್‌ಡಿಟಿವಿ ಸೋಮವಾರ ವರದಿ ಮಾಡಿದೆ. ಘಟನೆ ಕಳೆದ ವಾರದ ಗುರುವಾರದಂದು ನಡೆದಿದ್ದು, ಉತ್ತರ ಪ್ರದೇಶದ ಝಾನ್ಸಿಯ ಶಾಸಕರಾದ ಬಿಜೆಪಿಯ ರಾಜೀವ್ ಸಿಂಗ್ ತಮ್ಮ ಪತ್ನಿ ಮತ್ತು ಮಗನೊಂದಿಗೆ ತಮ್ಮ ಕ್ಷೇತ್ರಕ್ಕೆ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕನಿಗೆ ಥಳಿಸಲಾಗಿದೆ ಎಂದು ವರದಿ ಹೇಳಿದೆ. ವೀಕ್ಷಿಸಿ | ಬಿಜೆಪಿ ಶಾಸಕನಿಗೆ

ಶಾಸಕ ರಾಜೀವ್ ಸಿಂಗ್ ಅವರಿಗೆ ರೈಲು ಬೋಗಿಯ ಹಿಂಭಾಗದಲ್ಲಿ ಆಸನ ಸಿಕ್ಕಿತ್ತು. ಆದರೆ ಅವರ ಕುಟುಂಬ ಸದಸ್ಯರು ಮುಂಭಾಗದಲ್ಲಿ ಇದ್ದರು. ಈ ವೇಳೆ ಶಾಸಕ ಪ್ರಯಾಣಿಕರೊಬ್ಬರ ಜೊತೆಗೆ ಸೀಟು ಬದಲಾಯಿಸಲು ಕೇಳಿಕೊಂಡಿದ್ದರು. ಆದರೆ ಪ್ರಯಾಣಿಕ ಇದಕ್ಕೆ ನಿರಾಕರಿಸಿದ್ದರು.

ಅದಾಗ್ಯೂ, ರಾಜೀವ್‌ ಸಿಂಗ್ ಅವರ ಆಪ್ತರು ಎನ್ನಲಾದ ಕೆಲವು ದುಷ್ಕರ್ಮಿಗಳು ಝಾನ್ಸಿ ನಿಲ್ದಾಣದಲ್ಲಿ ರೈಲು ಹತ್ತಿ ಭೋಪಾಲ್‌ಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಘಟನೆಯ ವಿಡಿಯೊ ವೈರಲ್ ಆಗಿದ್ದು, ವೀಡಿಯೊದಲ್ಲಿ ಹಲವು ವ್ಯಕ್ತಿಗಳು ಪ್ರಯಾಣಿಕ ತನ್ನ ಸೀಟಿನಲ್ಲಿದ್ದಾಗ ಅವರ ಮೇಲೆ ಗುದ್ದಾಟ ನಡೆಸಿದ್ದಾರೆ.

ಜೊತೆಗೆ ದುಷ್ಕರ್ಮಿಗಳು ಚಪ್ಪಲಿಗಳನ್ನು ಬಳಸಿ ಹಲ್ಲೆ ನಡೆಸುತ್ತಿರುವುದನ್ನು ಸಹ ವಿಡಿಯೊದಲ್ಲಿ ದಾಖಲಾಗಿದೆ. ವೀಡಿಯೊದಲ್ಲಿ ಸಂತ್ರಸ್ತ ವ್ಯಕ್ತಿಯ ಮೂಗಿನಿಂದ ರಕ್ತ ಸೋರುತ್ತಿರುವುದನ್ನು ಮತ್ತು ಅವರ ಬಟ್ಟೆಗಳು ರಕ್ತದಲ್ಲಿ ತೊಯ್ದಿರುವುದನ್ನು ಸಹ ರೆಕಾರ್ಡ್‌ ಆಗಿದೆ.

ಸೀಟು ಬದಲಾಯಿಸುವ ವಿಚಾರದಲ್ಲಿ ಈ ವಾಗ್ವಾದ ನಡೆದಿದೆ ಎಂದು ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ (ಝಾನ್ಸಿ) ವಿಪುಲ್ ಕುಮಾರ್ ಶ್ರೀವಾಸ್ತವ ಅವರು ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅದಾಗ್ಯೂ, ರಾಜೀವ್ ಸಿಂಗ್ ಅವರೇ ಪ್ರಯಾಣಿಕನ ವಿರುದ್ಧ ದೂರು ನೀಡಿದ್ದು, ಹಾಗಾಗಿ ಝಾನ್ಸಿಯ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ನಾನ್-ಕಾಗ್ನಿಜೇಬಲ್ ರಿಪೋರ್ಟ್ (ಎನ್‌ಸಿಆರ್) ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ. ರಾಜೀವ್ ತಮ್ಮ ದೂರಿನಲ್ಲಿ, ತಮ್ಮ ಪತ್ನಿ ಮತ್ತು ಮಗನೊಂದಿಗೆ ಪ್ರಯಾಣಿಸುತ್ತಿದ್ದಾಗ ಸಹ-ಪ್ರಯಾಣಿಕರೊಬ್ಬರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವೀಕ್ಷಿಸಿ | ಬಿಜೆಪಿ ಶಾಸಕನಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...