Homeಮುಖಪುಟವೀಕ್ಷಿಸಿ | ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ವಂದೇ ಭಾರತ್ ರೈಲು ಪ್ರಯಾಣಿಕನಿಗೆ ಥಳಿತ!

ವೀಕ್ಷಿಸಿ | ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ವಂದೇ ಭಾರತ್ ರೈಲು ಪ್ರಯಾಣಿಕನಿಗೆ ಥಳಿತ!

- Advertisement -
- Advertisement -

ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ಕಾರಣ ದೆಹಲಿ-ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಥಳಿಸಲಾಗಿದೆ ಎಂದು ಎನ್‌ಡಿಟಿವಿ ಸೋಮವಾರ ವರದಿ ಮಾಡಿದೆ. ಘಟನೆ ಕಳೆದ ವಾರದ ಗುರುವಾರದಂದು ನಡೆದಿದ್ದು, ಉತ್ತರ ಪ್ರದೇಶದ ಝಾನ್ಸಿಯ ಶಾಸಕರಾದ ಬಿಜೆಪಿಯ ರಾಜೀವ್ ಸಿಂಗ್ ತಮ್ಮ ಪತ್ನಿ ಮತ್ತು ಮಗನೊಂದಿಗೆ ತಮ್ಮ ಕ್ಷೇತ್ರಕ್ಕೆ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕನಿಗೆ ಥಳಿಸಲಾಗಿದೆ ಎಂದು ವರದಿ ಹೇಳಿದೆ. ವೀಕ್ಷಿಸಿ | ಬಿಜೆಪಿ ಶಾಸಕನಿಗೆ

ಶಾಸಕ ರಾಜೀವ್ ಸಿಂಗ್ ಅವರಿಗೆ ರೈಲು ಬೋಗಿಯ ಹಿಂಭಾಗದಲ್ಲಿ ಆಸನ ಸಿಕ್ಕಿತ್ತು. ಆದರೆ ಅವರ ಕುಟುಂಬ ಸದಸ್ಯರು ಮುಂಭಾಗದಲ್ಲಿ ಇದ್ದರು. ಈ ವೇಳೆ ಶಾಸಕ ಪ್ರಯಾಣಿಕರೊಬ್ಬರ ಜೊತೆಗೆ ಸೀಟು ಬದಲಾಯಿಸಲು ಕೇಳಿಕೊಂಡಿದ್ದರು. ಆದರೆ ಪ್ರಯಾಣಿಕ ಇದಕ್ಕೆ ನಿರಾಕರಿಸಿದ್ದರು.

ಅದಾಗ್ಯೂ, ರಾಜೀವ್‌ ಸಿಂಗ್ ಅವರ ಆಪ್ತರು ಎನ್ನಲಾದ ಕೆಲವು ದುಷ್ಕರ್ಮಿಗಳು ಝಾನ್ಸಿ ನಿಲ್ದಾಣದಲ್ಲಿ ರೈಲು ಹತ್ತಿ ಭೋಪಾಲ್‌ಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಘಟನೆಯ ವಿಡಿಯೊ ವೈರಲ್ ಆಗಿದ್ದು, ವೀಡಿಯೊದಲ್ಲಿ ಹಲವು ವ್ಯಕ್ತಿಗಳು ಪ್ರಯಾಣಿಕ ತನ್ನ ಸೀಟಿನಲ್ಲಿದ್ದಾಗ ಅವರ ಮೇಲೆ ಗುದ್ದಾಟ ನಡೆಸಿದ್ದಾರೆ.

ಜೊತೆಗೆ ದುಷ್ಕರ್ಮಿಗಳು ಚಪ್ಪಲಿಗಳನ್ನು ಬಳಸಿ ಹಲ್ಲೆ ನಡೆಸುತ್ತಿರುವುದನ್ನು ಸಹ ವಿಡಿಯೊದಲ್ಲಿ ದಾಖಲಾಗಿದೆ. ವೀಡಿಯೊದಲ್ಲಿ ಸಂತ್ರಸ್ತ ವ್ಯಕ್ತಿಯ ಮೂಗಿನಿಂದ ರಕ್ತ ಸೋರುತ್ತಿರುವುದನ್ನು ಮತ್ತು ಅವರ ಬಟ್ಟೆಗಳು ರಕ್ತದಲ್ಲಿ ತೊಯ್ದಿರುವುದನ್ನು ಸಹ ರೆಕಾರ್ಡ್‌ ಆಗಿದೆ.

ಸೀಟು ಬದಲಾಯಿಸುವ ವಿಚಾರದಲ್ಲಿ ಈ ವಾಗ್ವಾದ ನಡೆದಿದೆ ಎಂದು ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ (ಝಾನ್ಸಿ) ವಿಪುಲ್ ಕುಮಾರ್ ಶ್ರೀವಾಸ್ತವ ಅವರು ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅದಾಗ್ಯೂ, ರಾಜೀವ್ ಸಿಂಗ್ ಅವರೇ ಪ್ರಯಾಣಿಕನ ವಿರುದ್ಧ ದೂರು ನೀಡಿದ್ದು, ಹಾಗಾಗಿ ಝಾನ್ಸಿಯ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ನಾನ್-ಕಾಗ್ನಿಜೇಬಲ್ ರಿಪೋರ್ಟ್ (ಎನ್‌ಸಿಆರ್) ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ. ರಾಜೀವ್ ತಮ್ಮ ದೂರಿನಲ್ಲಿ, ತಮ್ಮ ಪತ್ನಿ ಮತ್ತು ಮಗನೊಂದಿಗೆ ಪ್ರಯಾಣಿಸುತ್ತಿದ್ದಾಗ ಸಹ-ಪ್ರಯಾಣಿಕರೊಬ್ಬರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವೀಕ್ಷಿಸಿ | ಬಿಜೆಪಿ ಶಾಸಕನಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...