Homeಕರ್ನಾಟಕಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

- Advertisement -
- Advertisement -

ಮೂರು ಹಳ್ಳಿಗಳನ್ನು ಕೈಬಿಡಬೇಕು ಮತ್ತು ಪ್ರಸ್ತುತ ಹೋಬಳಿಯಲ್ಲಿ ಮತ್ತೆ ಭೂಸ್ವಾಧೀನ ಮಾಡಬೇಡಿ ಎಂದು ರೈತರು ಪ್ರಮುಖವಾಗಿ ಎರಡು ವಿನಂತಿಗಳನ್ನು ಮಾಡಿಕೊಂಡಿದ್ದರು, ಈ ಬೇಡಿಕೆಗಳನ್ನು ನಾವು ಈಡೇರಿಸಿದ್ದು, ರೈತರು ಹೋರಾಟವನ್ನು ಕೈಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಂಗಳವಾರ ಹೇಳಿದ್ದಾರೆ. ಭೂಸ್ವಾಧೀನಕ್ಕೆ ಒಳಗಾದ ರೈತರಿಗೆ ಜಿಲ್ಲಾಧಿಕಾರಿಗಳು ಪರಿಹಾರವನ್ನು ನೀಡಲಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಎರಡು ಬೇಡಿಕೆ ಈಡೇರಿಸಿದ್ದೇವೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪಾಟೀಲ್, ಸರ್ಕಾರ ಬಹಳ ಮುಂದೆ ಹೋಗಿ ಇಷ್ಟೆಲ್ಲ ಕೆಲಸ ಮಾಡಿದೆ. ದಯವಿಟ್ಟು ಹೋರಾಟವನ್ನು ಕೈಬಿಡಿ ಎಂದು ವಿನಂತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

“ಇಂದಿನ ದಿನಗಳಲ್ಲಿ ಕೈಗಾರಿಕೆಗಳು ಕೂಡಾ ಬರಬೇಕು ಮತ್ತು ರೈತರಿಗೂ ಅನುಕೂಲ ಅಗಬೇಕಿದೆ. ಕೈಗಾರಿಕೆಗಳ ವಿಚಾರದಲ್ಲಿ ಉಳಿದ ರಾಜ್ಯಗಳು ಎಷ್ಟೊಂದು ಸ್ಪರ್ಧಾತ್ಮಕವಾಗಿ ನಡೆದುಕೊಳ್ಳುತ್ತಿವೆ ಎಂದು ಎಲ್ಲರಿಗೂ ತಿಳಿದಿದೆ. ತೀರಾ ಕಡಿಮೆ ಬೆಲೆಗೆ ಕೈಗಾರಿಕೆಗಳಿಗೆ ಭೂಮಿಯನ್ನು ನೀಡುತ್ತಿವೆ. ಕೈಗಾರಿಕೆಗಳು ತರಬೇಕಾಗುತ್ತದೆ ಹಾಗೂ ಹಾಗೆ ಆದರೆ ಮಾತ್ರ ಉದ್ಯೋಗ ಸೃಷ್ಟಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರೈತರು ಕೂಡಾ ಅತ್ಯಂತ ಮಹತ್ವದವರೇ ಆಗಿದ್ದಾರೆ. ನಾನು ಹಾಗೂ ಮುನಿಯಪ್ಪ ಕೂಡಾ ರೈತ ಕುಟುಂಬದಿಂದ ಬಂದಂತಹವರು. ಹೀಗಾಗಿ ನಿಮ್ಮ ಭಾವನೆಗಳನ್ನು ಅರ್ಥ ಮಾಡಿ ನಾವು ಮೂರು ಹಳ್ಳಿಗಳ 500 ಎಕರೆಗಳನ್ನು ಬಿಟ್ಟಿದ್ದೇವೆ. ಮುಂದಿನ ಕಾಲದಲ್ಲಿ ಚನ್ನರಾಯಪಟ್ಟಣದಲ್ಲಿ ಕೈಗಾರಿಕೆ ಸಲುವಾಗಿ ಭೂಸ್ವಾಧೀನ ಮಾಡಬೇಡಿ ಎಂದು ರೈತರ ಬೇಡಿಕೆ ಸಲ್ಲಿಸಿದ್ದು, ಅದನ್ನು ಒಪ್ಪಿಕೊಂಡಿದ್ದೇವೆ. ಜೊತೆಗೆ ಅಭಿವೃದ್ಧ ಭೂಮಿಯನ್ನು ಕೂಡಾ ನೀಡಲಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಸಚಿವ ಕೆ.ಎಚ್‌. ಮುನಿಯಪ್ಪ ಮಾತನಾಡಿ, ಮೊಟ್ಟಮೊದಲಿನ ಹಂತದಲ್ಲಿ ಈ ಹೋಬಳಿಯಲ್ಲಿ ಜಾಸ್ತಿಯಾಗಿ ಭೂಸ್ವಾಧೀನ ಆಗಿದ್ದು, ಅದನ್ನು ಕೈಬಿಡಬೇಕು ಎಂದು ರೈತರ ಪರವಾಗಿ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರನ್ನು ಒತ್ತಾಯ ಮಾಡಿದ್ದೆ ಎಂದು ಹೇಳಿದ್ದಾರೆ.

“ನೀರಾವರಿ ಭೂಮಿಯನ್ನು ಕೈಬಿಡಲೇಬೇಕು ಎಂದು ಕೂಡಾ ಒತ್ತಾಯ ಮಾಡಿದ್ದೆ. ಅದರಲ್ಲಿ ಸ್ವಲ್ಪ ಮಟ್ಟಿಗೆ ಅಂದರೆ ಸುಮಾರು 500 ಎಕರೆ ನೀರಾವರಿ ಭೂಮಿಯನ್ನು ಬಿಟ್ಟಿದ್ದಾರೆ. ಜೊತೆಗೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಇನ್ನು ಮುಂದೆ ಭೂಸ್ವಾಧೀನ ಮಾಡಬಾರದು ಎಂದು ಒತ್ತಾಯ ಕೂಡಾ ಮಾಡಿದ್ದೆ. ಅದಕ್ಕೆ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದು ಬಿಜೆಪಿಯವರಾಗಿದ್ದಾರೆ. ಅವರು ರೈತರಿಗಾಗಿ ಏನೂ ಮಾಡಿಲ್ಲ. ನಮ್ಮ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಹೋರಾಟ ಸ್ಥಳಕ್ಕೆ ಹೋಗಿ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಮಾತುಕೊಟ್ಟಿದ್ದರು. ಅದರಂತೆ ಅವರ ಎರಡು ಬೇಡಿಕೆಗಳನ್ನು ಈಡೇರಿಸಿದ್ದೇವೆ. ಇಂತಹ ಘಟನೆ ರಾಜ್ಯದಲ್ಲಿ ನಡೆದಿದ್ದು ಇದೆ ಮೊದಲ ಬಾರಿಯಾಗಿದೆ. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ನಾವು ಈ ಮಟ್ಟದಲ್ಲಿ ರೈತರ ಪರವಾಗಿ ಇದ್ದೇವೆ. ನಮಗೆ ಕೈಗಾರಿಕೆಗಳು ಕೂಡಾ ಬರಬೇಕಿದೆ. ಈ ಕೈಗಾರಿಕೆಗಳು ಬರುವಾಗ ನೇರವಾಗಿ ಜಮೀನು ಕಳೆದುಕೊಳ್ಳುವವರಿಗೆ ಅಭಿವೃದ್ಧಿ ಹೊಂದಿರುವ ಭೂಮಿಯನ್ನು ನೀಡಲಿದ್ದೇವೆ. ನಾವು ಈ ರೀತಿ ತೀರ್ಮಾನ ತೆಗೆದುಕೊಂಡಿದ್ದೇವೆ. ಇಷ್ಟಲ್ಲಾ ಕೆಲಸವನ್ನು ಮಾಡಿದ್ದೇವೆ ಎಂದು ಹೋರಾಟ ಸಮಿತಿಯ ಜೊತೆಗೆ ಹೇಳಿ, ಹೋರಾಟ ಕೈಬಿಡಬೇಕು ಎಂದು ಕೇಳಿಕೊಂಡಿದ್ದೇನೆ” ಎಂದು ಮುನಿಯಪ್ಪ ಅವರು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟವು ‘ದೇವನಹಳ್ಳಿ ಚಲೋ’ ಹೋರಾಟವನ್ನು ಆಯೋಜಿಸಿದೆ. ಎರಡು ಬೇಡಿಕೆ ಈಡೇರಿಸಿದ್ದೇವೆ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...