Homeಕರ್ನಾಟಕಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

- Advertisement -
- Advertisement -

ಮೂರು ಹಳ್ಳಿಗಳನ್ನು ಕೈಬಿಡಬೇಕು ಮತ್ತು ಪ್ರಸ್ತುತ ಹೋಬಳಿಯಲ್ಲಿ ಮತ್ತೆ ಭೂಸ್ವಾಧೀನ ಮಾಡಬೇಡಿ ಎಂದು ರೈತರು ಪ್ರಮುಖವಾಗಿ ಎರಡು ವಿನಂತಿಗಳನ್ನು ಮಾಡಿಕೊಂಡಿದ್ದರು, ಈ ಬೇಡಿಕೆಗಳನ್ನು ನಾವು ಈಡೇರಿಸಿದ್ದು, ರೈತರು ಹೋರಾಟವನ್ನು ಕೈಬಿಡಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಂಗಳವಾರ ಹೇಳಿದ್ದಾರೆ. ಭೂಸ್ವಾಧೀನಕ್ಕೆ ಒಳಗಾದ ರೈತರಿಗೆ ಜಿಲ್ಲಾಧಿಕಾರಿಗಳು ಪರಿಹಾರವನ್ನು ನೀಡಲಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ. ಎರಡು ಬೇಡಿಕೆ ಈಡೇರಿಸಿದ್ದೇವೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪಾಟೀಲ್, ಸರ್ಕಾರ ಬಹಳ ಮುಂದೆ ಹೋಗಿ ಇಷ್ಟೆಲ್ಲ ಕೆಲಸ ಮಾಡಿದೆ. ದಯವಿಟ್ಟು ಹೋರಾಟವನ್ನು ಕೈಬಿಡಿ ಎಂದು ವಿನಂತಿ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

“ಇಂದಿನ ದಿನಗಳಲ್ಲಿ ಕೈಗಾರಿಕೆಗಳು ಕೂಡಾ ಬರಬೇಕು ಮತ್ತು ರೈತರಿಗೂ ಅನುಕೂಲ ಅಗಬೇಕಿದೆ. ಕೈಗಾರಿಕೆಗಳ ವಿಚಾರದಲ್ಲಿ ಉಳಿದ ರಾಜ್ಯಗಳು ಎಷ್ಟೊಂದು ಸ್ಪರ್ಧಾತ್ಮಕವಾಗಿ ನಡೆದುಕೊಳ್ಳುತ್ತಿವೆ ಎಂದು ಎಲ್ಲರಿಗೂ ತಿಳಿದಿದೆ. ತೀರಾ ಕಡಿಮೆ ಬೆಲೆಗೆ ಕೈಗಾರಿಕೆಗಳಿಗೆ ಭೂಮಿಯನ್ನು ನೀಡುತ್ತಿವೆ. ಕೈಗಾರಿಕೆಗಳು ತರಬೇಕಾಗುತ್ತದೆ ಹಾಗೂ ಹಾಗೆ ಆದರೆ ಮಾತ್ರ ಉದ್ಯೋಗ ಸೃಷ್ಟಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರೈತರು ಕೂಡಾ ಅತ್ಯಂತ ಮಹತ್ವದವರೇ ಆಗಿದ್ದಾರೆ. ನಾನು ಹಾಗೂ ಮುನಿಯಪ್ಪ ಕೂಡಾ ರೈತ ಕುಟುಂಬದಿಂದ ಬಂದಂತಹವರು. ಹೀಗಾಗಿ ನಿಮ್ಮ ಭಾವನೆಗಳನ್ನು ಅರ್ಥ ಮಾಡಿ ನಾವು ಮೂರು ಹಳ್ಳಿಗಳ 500 ಎಕರೆಗಳನ್ನು ಬಿಟ್ಟಿದ್ದೇವೆ. ಮುಂದಿನ ಕಾಲದಲ್ಲಿ ಚನ್ನರಾಯಪಟ್ಟಣದಲ್ಲಿ ಕೈಗಾರಿಕೆ ಸಲುವಾಗಿ ಭೂಸ್ವಾಧೀನ ಮಾಡಬೇಡಿ ಎಂದು ರೈತರ ಬೇಡಿಕೆ ಸಲ್ಲಿಸಿದ್ದು, ಅದನ್ನು ಒಪ್ಪಿಕೊಂಡಿದ್ದೇವೆ. ಜೊತೆಗೆ ಅಭಿವೃದ್ಧ ಭೂಮಿಯನ್ನು ಕೂಡಾ ನೀಡಲಿದ್ದೇವೆ.” ಎಂದು ಅವರು ಹೇಳಿದ್ದಾರೆ.

ಸಚಿವ ಕೆ.ಎಚ್‌. ಮುನಿಯಪ್ಪ ಮಾತನಾಡಿ, ಮೊಟ್ಟಮೊದಲಿನ ಹಂತದಲ್ಲಿ ಈ ಹೋಬಳಿಯಲ್ಲಿ ಜಾಸ್ತಿಯಾಗಿ ಭೂಸ್ವಾಧೀನ ಆಗಿದ್ದು, ಅದನ್ನು ಕೈಬಿಡಬೇಕು ಎಂದು ರೈತರ ಪರವಾಗಿ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರನ್ನು ಒತ್ತಾಯ ಮಾಡಿದ್ದೆ ಎಂದು ಹೇಳಿದ್ದಾರೆ.

“ನೀರಾವರಿ ಭೂಮಿಯನ್ನು ಕೈಬಿಡಲೇಬೇಕು ಎಂದು ಕೂಡಾ ಒತ್ತಾಯ ಮಾಡಿದ್ದೆ. ಅದರಲ್ಲಿ ಸ್ವಲ್ಪ ಮಟ್ಟಿಗೆ ಅಂದರೆ ಸುಮಾರು 500 ಎಕರೆ ನೀರಾವರಿ ಭೂಮಿಯನ್ನು ಬಿಟ್ಟಿದ್ದಾರೆ. ಜೊತೆಗೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಇನ್ನು ಮುಂದೆ ಭೂಸ್ವಾಧೀನ ಮಾಡಬಾರದು ಎಂದು ಒತ್ತಾಯ ಕೂಡಾ ಮಾಡಿದ್ದೆ. ಅದಕ್ಕೆ ಮುಖ್ಯಮಂತ್ರಿ ಮತ್ತು ಕೈಗಾರಿಕಾ ಸಚಿವರು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

“ಭೂಮಿಯನ್ನು ಸ್ವಾಧೀನ ಮಾಡಿಕೊಂಡಿದ್ದು ಬಿಜೆಪಿಯವರಾಗಿದ್ದಾರೆ. ಅವರು ರೈತರಿಗಾಗಿ ಏನೂ ಮಾಡಿಲ್ಲ. ನಮ್ಮ ಸರ್ಕಾರ ಬಂದ ನಂತರ ಮುಖ್ಯಮಂತ್ರಿ ಹೋರಾಟ ಸ್ಥಳಕ್ಕೆ ಹೋಗಿ ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಮಾತುಕೊಟ್ಟಿದ್ದರು. ಅದರಂತೆ ಅವರ ಎರಡು ಬೇಡಿಕೆಗಳನ್ನು ಈಡೇರಿಸಿದ್ದೇವೆ. ಇಂತಹ ಘಟನೆ ರಾಜ್ಯದಲ್ಲಿ ನಡೆದಿದ್ದು ಇದೆ ಮೊದಲ ಬಾರಿಯಾಗಿದೆ. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ನಾವು ಈ ಮಟ್ಟದಲ್ಲಿ ರೈತರ ಪರವಾಗಿ ಇದ್ದೇವೆ. ನಮಗೆ ಕೈಗಾರಿಕೆಗಳು ಕೂಡಾ ಬರಬೇಕಿದೆ. ಈ ಕೈಗಾರಿಕೆಗಳು ಬರುವಾಗ ನೇರವಾಗಿ ಜಮೀನು ಕಳೆದುಕೊಳ್ಳುವವರಿಗೆ ಅಭಿವೃದ್ಧಿ ಹೊಂದಿರುವ ಭೂಮಿಯನ್ನು ನೀಡಲಿದ್ದೇವೆ. ನಾವು ಈ ರೀತಿ ತೀರ್ಮಾನ ತೆಗೆದುಕೊಂಡಿದ್ದೇವೆ. ಇಷ್ಟಲ್ಲಾ ಕೆಲಸವನ್ನು ಮಾಡಿದ್ದೇವೆ ಎಂದು ಹೋರಾಟ ಸಮಿತಿಯ ಜೊತೆಗೆ ಹೇಳಿ, ಹೋರಾಟ ಕೈಬಿಡಬೇಕು ಎಂದು ಕೇಳಿಕೊಂಡಿದ್ದೇನೆ” ಎಂದು ಮುನಿಯಪ್ಪ ಅವರು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪ್ಪಟ್ಟಣದ ರೈತರು ಕಳೆದ 1000 ದಿನಗಳಿಗಿಂತಲೂ ಹೆಚ್ಚು ಕಾಲದಿಂದ ತಮ್ಮ ಭೂಮಿಯನ್ನು ಉಳಿಸಲು ಹೋರಾಟವನ್ನು ನಡೆಸುತ್ತಲೆ ಬಂದಿದ್ದಾರೆ. ಭೂಸ್ವಾಧೀನ ವಿರೋಧಿ ಹೋರಾಟದ 1150ನೇ ದಿನವಾದ ಗುರುವಾರ ರೈತರನ್ನು ಬೆಂಬಲಿಸಿ ‘ಸಂಯುಕ್ತ ಹೋರಾಟ- ಕರ್ನಾಟಕ’ ಸಂಘಟನೆಗಳ ಒಕ್ಕೂಟವು ‘ದೇವನಹಳ್ಳಿ ಚಲೋ’ ಹೋರಾಟವನ್ನು ಆಯೋಜಿಸಿದೆ. ಎರಡು ಬೇಡಿಕೆ ಈಡೇರಿಸಿದ್ದೇವೆ 

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ಚನ್ನರಾಯಪಟ್ಟಣ ರೈತ ಹೋರಾಟ ಬೆಂಬಲಿಸಿ ಸಾಹಿತಿ, ಚಿಂತಕರಿಂದ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...