Homeಮುಖಪುಟಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

- Advertisement -
- Advertisement -

ಆಂಧ್ರಪ್ರದೇಶದ ಎಸ್‌.ವಿ.ವೆಟರ್ನರಿ ವಿಶ್ವವಿದ್ಯಾಲಯದ ಡೈರಿ ಟೆಕ್ನಾಲಜಿ ಕಾಲೇಜಿನಲ್ಲಿ ದಲಿತ ಸಹಾಯಕ ಪ್ರಾಧ್ಯಾಪಕ ಡಾ. ರವಿ ಅವರ ಕಚೇರಿಯಿಂದ ಪ್ರಾಚಾರ್ಯರು ಕುರ್ಚಿಯನ್ನು ತೆಗೆದುಹಾಕಿದ ಘಟನೆ ವರದಿಯಾಗಿದೆ. ಇದರ ಪರಿಣಾಮವಾಗಿ ಪ್ರಾಧ್ಯಾಪಕರು ನೆಲದ ಮೇಲೆ ಕುಳಿತು ಕೆಲಸ ಮಾಡುವಂತಾಗಿದ್ದು,   ಇದು ಜಾತಿ ತಾರತಮ್ಯದ ಪ್ರಕರಣ ಎಂದು ಹಲವರು ಆರೋಪಿಸಿದ್ದಾರೆ.

ಕಳೆದ ಗುರುವಾರ (ಜೂ.19) ಕಾಲೇಜಿನಿಂದ ರಜೆ ತೆಗೆದುಕೊಂಡಿದ್ದ ಡಾ.ರವಿಯವರು ಶುಕ್ರವಾರ ಕಾಲೇಜಿಗೆ ಮರಳಿ ಬಂದಾಗ ತಮ್ಮ ಕೊಠಡಿಯಲ್ಲಿ ಕುರ್ಚಿ ಇಲ್ಲದಿರುವುದು ಕಂಡುಬಂದಿತ್ತು. ಅಸೋಸಿಯೇಟ್ ಡೀನ್ ರವೀಂದ್ರ ರೆಡ್ಡಿ ಅವರು ಕೊಠಡಿಯನ್ನು ಪರೀಕ್ಷಿಸಲು ಬಂದಿದ್ದಾಗ ಡಾ.ರವಿಯವರು ಕುಳಿತುಕೊಳ್ಳುತ್ತಿದ್ದ ಕುರ್ಚಿಯನ್ನು ತೆಗೆಸಿಹಾಕಿಸಿದ್ದರು.

ವೈರಲ್ ಆಗಿರುವ ಚಿತ್ರಗಳಲ್ಲಿ ಡಾ.ರವಿ ತಮ್ಮ ಕಚೇರಿ ಅಥವಾ ಕೊಠಡಿಯೊಳಗಿನ ನೆಲದ ಮೇಲೆ ಬಿಳಿ ಬಟ್ಟೆಯೊಂದರ ಮೇಲೆ ಕುಳಿತಿರುವುದು ಕಾಣಿಸುತ್ತದೆ. ಇದು ಅವರ ಪ್ರತಿಭಟನೆಯ ಸಂಕೇತವಾಗಿದೆ. ಅವರ ಮುಂದೆ ಕಂಪ್ಯೂಟರ್ ಮಾನಿಟರ್, ಕೀಬೋರ್ಡ್ ಮತ್ತು ಸಿಪಿಯು ಇವೆ. ಕಂಪ್ಯೂಟರ್ ಗೆ ಸಂಬಂಧಿಸಿದ ವೈರ್‌ಗಳು ಸಹ ನೆಲದ ಮೇಲೆ ಹರಡಿಕೊಂಡಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಈ ಚಿತ್ರಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಅನೇಕರು ಈ ಘಟನೆಯನ್ನು “ಹಾಸ್ಯಾಸ್ಪದ” ಮತ್ತು “ಅಸಹ್ಯಕರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಲೇಜಿನ ಡೀನ್ ನಾಗೇಶ್ವರ ರಾವ್ ಅವರು ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ. ಡಿಬಿಎಂ ವಿಭಾಗಕ್ಕೆ ಅಗತ್ಯಕ್ಕೆ ತಕ್ಕಂತೆ ಎರಡು ಕುರ್ಚಿಗಳನ್ನು ಖರೀದಿಸಲಾಗಿತ್ತು ಮತ್ತು ಅವುಗಳಲ್ಲಿ ಒಂದು ಡೈರಿ ಟೆಕ್ನಾಲಜಿ ವಿಭಾಗದಲ್ಲಿ ಕಂಡುಬಂದಿದ್ದರಿಂದ ಅದನ್ನು ಬದಲಾಯಿಸಲಾಯಿತು ಎಂದು ತಿಳಿಸಿದ್ದಾರೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಈ ಘಟನೆ ಕುರಿತು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರನ್ನು ತರಾಟೆಗೆ ತಗೆದುಕೊಂಡಿದೆ. ದಲಿತ ಸಹಾಯಕ ಪ್ರಾಧ್ಯಾಪಕರ ಮೇಲೆ ಇಂತಹ ಅವಮಾನ ನಡೆಯುತ್ತಿದ್ದರೂ, ಮುಖ್ಯಮಂತ್ರಿ ನಾಯ್ಡು ಅವರು ಯಾವುದೇ ಕ್ರಮ ಕೈಗೊಳ್ಳದೆ ಏಕೆ ಮೌನ ವಹಿಸಿದ್ದಾರೆ ಎಂದು ಅದು ಪ್ರಶ್ನಿಸಿದೆ.

ಸಾಮಾಜಿಕ ಜಾಲತಾಣದ ಅನೇಕ ಬಳಕೆದಾರರು ಈ ಘಟನೆಯನ್ನು ಖಂಡಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ  ಜಾತಿ ತಾರತಮ್ಯವು ಇನ್ನೂ ಆಳವಾಗಿ ಬೇರೂರಿರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಅದು ಹೇಳಿದೆ. ಕೆಲವು ಪಕ್ಷದವರು ಮೀಸಲಾತಿಯನ್ನು ತೆಗೆದುಹಾಕಲು ಬಯಸುತ್ತಿದ್ದರೂ, ಜಾತಿ ತಾರತಮ್ಯವನ್ನು ತೊಡೆದುಹಾಕಲು ಏನೂ ಕ್ರಮಕೈಗೊಳ್ಳುತ್ತಿಲ್ಲ ಎಂದು ವೈಎಸ್ಆರ್ ಪಕ್ಷವು ಆರೋಪಿಸಿದೆ.

ಎರಡು ಬೇಡಿಕೆ ಈಡೇರಿಸಿದ್ದೇವೆ; ದಯವಿಟ್ಟು ಹೋರಾಟ ಕೈಬಿಡಿ: ಚನ್ನರಾಯಪಟ್ಟಣ ರೈತರಿಗೆ ಸಚಿವ ಎಂ.ಬಿ. ಪಾಟೀಲ್ ವಿನಂತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...