Homeಮುಖಪುಟಮಹಾರಾಷ್ಟ್ರ ಚುನಾವಣೆ: ರಾಹುಲ್ ಗಾಂಧಿಯಿಂದ 'ಮತ ಕಳ್ಳತನ'ದ ಆರೋಪ: ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿ ಬಿಡುಗಡೆಗೆ...

ಮಹಾರಾಷ್ಟ್ರ ಚುನಾವಣೆ: ರಾಹುಲ್ ಗಾಂಧಿಯಿಂದ ‘ಮತ ಕಳ್ಳತನ’ದ ಆರೋಪ: ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿ ಬಿಡುಗಡೆಗೆ ಆಗ್ರಹ

- Advertisement -
- Advertisement -

ಹೊಸದಿಲ್ಲಿ: ಮಹಾರಾಷ್ಟ್ರ ಚುನಾವಣೆಯಲ್ಲಿ “ಮತ ಕಳ್ಳತನ” ನಡೆದಿದ್ದು, ಇದನ್ನು ಚುನಾವಣಾ ಆಯೋಗವು  “ಮುಚ್ಚಿಹಾಕುತ್ತಿದೆ”. ಆಯೋಗವು ಚುನಾವಣೆಗೆ ಸಂಬಂಧಿಸಿ ಮೆಷಿನ್-ರೀಡೆಬಲ್ ಡಿಜಿಟಲ್ ಮತದಾರರ ಪಟ್ಟಿಗಳು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಇಂದು ಎಕ್ಸ್ ಖಾತೆಯಲ್ಲಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆ ಸಂದರ್ಭದಲ್ಲಿ ಕಡ್ಡಾಯ ಪರಿಶೀಲನೆ ನಡೆಸಲಾಗಿಲ್ಲ. ಅಲ್ಲದೇ ಆರು ತಿಂಗಳ ಅವಧಿಯಲ್ಲಿ ಸುಮಾರು 29,000 ಮತದಾರರನ್ನು ಸೇರಿಸಲಾಗಿದೆ ಎಂದು ವರದಿಯೊಂದು ಸೂಚಿಸಿದ ನಂತರ ರಾಹುಲ್ ಗಾಂಧಿಯವರು ಈ ಹೇಳಿಕೆ ನೀಡಿದ್ದಾರೆ.  

ಮಹಾರಾಷ್ಟ್ರ ಚುನಾವಣೆಗಳ ಮೊದಲು 2024ರ ನಂತರದ ಕರಡು ಮತದಾರರ ಪಟ್ಟಿಗಳ ಪ್ರತಿಗಳನ್ನು ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳಿಗೆ ನೀಡಲಾಗಿದೆ ಎಂದು ಮಹಾರಾಷ್ಟ್ರದ ಮುಖ್ಯ ಚುನಾವಣಾ ಅಧಿಕಾರಿ ಹೇಳಿದ್ದಾರೆ.

ಕರಡು ಮತ್ತು ಅಂತಿಮ ಮತದಾರರ ಪಟ್ಟಿಗಳ ಪ್ರಕಟಣೆಯ ನಡುವೆ 19,27,508ರಷ್ಟು ಆಕ್ಷೇಪಣೆಗಳನ್ನು ಸ್ವೀಕರಿಸಲಾಗಿದೆ. ತಪ್ಪಾದ ಸೇರ್ಪಡೆಗಳು ಅಥವಾ ಅಳಿಸುವಿಕೆ ಕುರಿತು ಕೇವಲ 89 ಮನವಿಗಳನ್ನು ಮಾತ್ರ ಸ್ವೀಕರಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ಮಾಹಿತಿ ನೀಡಿದರು. 

ರಾಹುಲ್ ಮತದಾರರ ಪಟ್ಟಿಗಾಗಿ “ಸಂಪೂರ್ಣ ಪಾರದರ್ಶಕತೆ” ಗಾಗಿ ಪದೇ ಪದೇ ಒತ್ತಾಯಿಸಿದ್ದಾರೆ. ಆದರೆ ಚುನಾವಣಾ ಆಯೋಗವು ಮೆಷಿನ್-ರೀಡೆಬಲ್ ಮತದಾರರ ಪಟ್ಟಿಗಳನ್ನು ಬಹಿರಂಗಪಡಿಸಲು ನಿರಾಕರಿಸುತ್ತಿದೆ ಎಂದು ಅವರು ಹೇಳಿದರು.

ನಮ್ಮ ಚುನಾವಣಾ ವ್ಯವಸ್ಥೆಯ ಸಮಗ್ರತೆಯು ಅಧಃಪತನಕ್ಕೆ ತಲುಪಿದೆ. ಇದನ್ನು ಆಡಳಿತ ಪಕ್ಷದ ನಾಯಕರು ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಮ್ಯಾಚ್ ಫಿಕ್ಸಿಂಗ್ ಅಲ್ಲವಲ್ಲದೆ ಇನ್ನೇನು? ಎಂದು ಅವರು ಪ್ರಶ್ನಿಸಿದರು.

ನ್ಯೂಸ್‌ಲಾಂಡ್ರಿ ತನ್ನ ವರದಿಯಲ್ಲಿ ನಾಗ್ಪುರ ನೈಋತ್ಯ ಕ್ಷೇತ್ರದಲ್ಲಿ ಆರು ತಿಂಗಳಲ್ಲಿ 29,219 ಹೊಸ ಮತದಾರರನ್ನು ಸೇರಿಸಲಾಗಿದೆ ಎಂದು ಹೇಳಿದೆ. ಇದು 8.25%ರಷ್ಟು ಹೆಚ್ಚಳವಾಗಿದೆ. ಇದು ಕಡ್ಡಾಯ  ಪರಿಶೀಲನೆಗಳಿಗೆ ಚುನಾವಣಾ ಆಯೋಗವು ನಿಗದಿಪಡಿಸಿದ 4% ಹೆಚ್ಚಳದ ಮಿತಿಗಿಂತ ಹೆಚ್ಚಾಗಿದೆ. ಹಲವಾರು ಮತಗಟ್ಟೆಗಳಲ್ಲಿ ಪರಿಶೀಲನೆಗಳನ್ನು ಮಾಡಲಾಗಿಲ್ಲ ಎಂದು ವರದಿ ಹೇಳಿದೆ.

ಕನಿಷ್ಠ 4,000 ಮತದಾರರಿಗೆ ವಿಳಾಸಗಳಿಲ್ಲ ಎಂದು ವರದಿ ಹೇಳಿದೆ. 70% ಮತಗಟ್ಟೆಗಳಲ್ಲಿ 4%ಕ್ಕಿಂತ ಹೆಚ್ಚು ಮತ ಸೇರ್ಪಡೆಗಳಿದ್ದರೆ, 26 ಮತಗಟ್ಟೆಗಳಲ್ಲಿ 20%ಕ್ಕಿಂತ ಹೆಚ್ಚು ಮತ್ತು ನಾಲ್ಕು ಮತಗಟ್ಟೆಗಳಲ್ಲಿ 40%ಕ್ಕಿಂತ ಹೆಚ್ಚು ಸೇರ್ಪಡೆಗಳಿವೆ ಎಂದು ಅದು ಹೇಳಿದೆ. ಚುನಾವಣಾ ಆಯೋಗವು ಈ ಹೇಳಿಕೆಗಳನ್ನು ನಿರಾಕರಿಸಿದೆ.

ಆಂಧ್ರ: ದಲಿತ ಪ್ರಾಧ್ಯಾಪಕನ ಕುರ್ಚಿ ತೆಗೆದು ನೆಲದ ಮೇಲೆ ಕೂರಿಸಿದ ಪ್ರಿನ್ಸಿಪಾಲ್; ವ್ಯಾಪಕ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...