Homeಮುಖಪುಟಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

- Advertisement -
- Advertisement -

ಹೊಸದಿಲ್ಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಏರ್ಪಟ್ಟಿರುವುದನ್ನು ಭಾರತ ಸ್ವಾಗತಿಸಿದೆ. ಈ ಕದನವಿರಾಮಕ್ಕೆ ಅಮೆರಿಕ ಮತ್ತು ಕತಾರ್ ವಹಿಸಿದ ಪಾತ್ರವನ್ನು ಶ್ಲಾಘಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ (ಜೂನ್ 24) ಸಂಜೆ ತಿಳಿಸಿದೆ.

ಆದಾಗ್ಯೂ, ಈ ಪ್ರದೇಶದ ಒಟ್ಟಾರೆ ಭದ್ರತೆ ಕುರಿತು ಭಾರತಕ್ಕೆ ಇನ್ನೂ ಕಳವಳವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಎರಡು ದಿನಗಳ ಹಿಂದೆ ಇರಾನಿನ ಪರಮಾಣು ಘಟಕಗಳ ಮೇಲೆ ಅಮೆರಿಕ ದಾಳಿ ನಡೆಸಿದ ಪ್ರತಿಕ್ರಿಯೆಯಾಗಿ, ಇರಾನ್ ಕತಾರ್‌ನಲ್ಲಿರುವ ಅಮೆರಿಕನ್ ಮಿಲಿಟರಿ ನೆಲೆಯ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿತ್ತು. ಇದರ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಮುಂಜಾನೆ (ಭಾರತೀಯ ಕಾಲಮಾನದ ಪ್ರಕಾರ) ಇಸ್ರೇಲ್ ಮತ್ತು ಇರಾನ್ ನಡುವೆ “12 ದಿನಗಳ ಯುದ್ಧ” ಕೊನೆಗೊಳ್ಳಲಿದ್ದು, ಕದನವಿರಾಮಕ್ಕೆ ಮುಂದಾಗಲಿವೆ ಎಂದು ಘೋಷಿಸಿದರು. ಕತಾರ್‌ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರು, ಅಮೆರಿಕದ ಕೋರಿಕೆಯ ಮೇರೆಗೆ ತಾವು ಇರಾನ್‌ನೊಂದಿಗೆ ಸಂಪರ್ಕ ಸಾಧಿಸಿದ್ದೇವೆ ಎಂದು ದೃಢಪಡಿಸಿದ್ದಾರೆ.

ಭಾರತವು ತನ್ನ ಹೇಳಿಕೆಯಲ್ಲಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷಗಳನ್ನು ಬಗೆಹರಿಸಲು “ಸಂವಾದ ಮತ್ತು ರಾಜತಾಂತ್ರಿಕತೆಗೆ ಬೇರೆ ಪರ್ಯಾಯವಿಲ್ಲ” ಎಂದು ಪುನರುಚ್ಚರಿಸಿದೆ. ಈ ಪ್ರಯತ್ನಗಳಲ್ಲಿ ತನ್ನ ಪಾತ್ರವನ್ನು ನಿರ್ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದು, ಎಲ್ಲಾ ಸಂಬಂಧಿತ ಪಕ್ಷಗಳು ಶಾಂತಿ ನೆಲಸುವತ್ತ ಕೆಲಸ ಮಾಡುತ್ತವೆ ಎಂದು ಆಶಿಸಿದೆ.

ಆದಾಗ್ಯೂ, ಕದನವಿರಾಮ ಜಾರಿಗೆ ಬರಬೇಕಿದ್ದ ಕೆಲವೇ ಕ್ಷಣಗಳಲ್ಲಿ ಅದರ ಕುರಿತ ವರದಿ ಅಸ್ಪಷ್ಟವಾಯಿತು. ಇರಾನ್ ತನ್ನ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಆರೋಪಿಸಿತು. ಇದಕ್ಕೆ ಪ್ರತೀಕಾರವಾಗಿ, ಇರಾನ್ ಬಳಿಯ ರೇಡಾರ್ ಸೌಲಭ್ಯವನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿತು. ಆದರೆ, ಇರಾನ್ ಕದನವಿರಾಮವನ್ನು ಉಲ್ಲಂಘಿಸಿರುವುದನ್ನು ನಿರಾಕರಿಸಿದೆ.

ಟ್ರಂಪ್ ಮತ್ತು ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ನಡುವಿನ ಮಾತುಕತೆಯ ನಂತರ ಇಸ್ರೇಲ್ ಇರಾನ್ ಮೇಲೆ ಹೆಚ್ಚುವರಿ ದಾಳಿಗಳಿಂದ ದೂರ ಉಳಿದಿದೆ ಎಂದು ನೆತನ್ಯಾಹು ಅವರ ಕಚೇರಿ ಮೂಲಗಳು ತಿಳಿಸಿವೆ.

ಆದರೆ, ಟ್ರಂಪ್ ಅವರು ಎರಡೂ ದೇಶಗಳು ಕದನವಿರಾಮವನ್ನು ಉಲ್ಲಂಘಿಸಿವೆ ಎಂದು ಹೇಳಿದ್ದಾರೆ. ಒಪ್ಪಂದವು ಜಾರಿಗೆ ಬಂದ ತಕ್ಷಣ ಅಂದರೆ ಅದು ಸಂಪೂರ್ಣವಾಗಿ ಜಾರಿಗೆ ಬರುವ ಮೊದಲು ಇಸ್ರೇಲ್ “ನಾನು ಹಿಂದೆಂದೂ ನೋಡಿರದಂತಹ ಅತ್ಯಂತ ದೊಡ್ಡ ಪ್ರಮಾಣದ ಬಾಂಬ್‌ಗಳನ್ನು” ಹಾಕಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

“ಇಸ್ರೇಲ್‌ನ ಇಂತಹ ನಡೆ ಬಗ್ಗೆ ನಾನು ಸಂತೋಷವಾಗಿಲ್ಲ” ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದರು. ಇರಾನ್ ಬಗ್ಗೆ ಅತೃಪ್ತಿ ಹೊಂದಿದ್ದರೂ, ಇಸ್ರೇಲ್ ಬಗ್ಗೆ ತಮಗೆ ವಿಶೇಷವಾಗಿ ಬೇಸರವಾಗಿದೆ ಎಂದು ಅವರು ಹೇಳಿದರು.

“ಈ ಎರಡು ದೇಶಗಳು ಎಷ್ಟು ಸಮಯದಿಂದ ಮತ್ತು ಎಷ್ಟು ಕಠಿಣವಾಗಿ ಹೋರಾಡುತ್ತಿವೆ ಎಂದರೆ ಅವು ಏನು ಮಾಡುತ್ತಿವೆ ಎಂದು ಅವರಿಗೆ ತಿಳಿದಿಲ್ಲ. ನಿಮಗೆ ಅದು ಅರ್ಥವಾಗುತ್ತಿದೆಯೇ?” ಎಂದು ಟ್ರಂಪ್ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.

ನಂತರ ಅವರು, “ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡುವುದಿಲ್ಲ. ಎಲ್ಲಾ ವಿಮಾನಗಳು ಹಿಂದಿರುಗಿ ಹೋಗುತ್ತವೆ. ಯಾರಿಗೂ ನೋವುಂಟು ಮಾಡುವುದಿಲ್ಲ, ಕದನವಿರಾಮ ಜಾರಿಯಲ್ಲಿದೆ” ಎಂದು ಸ್ಪಷ್ಟಪಡಿಸಿದರು.

ಇರಾನ್ ಮತ್ತು ಇಸ್ರೇಲ್ ನಡುವಿನ ಈ ಸಂಘರ್ಷವು ಜೂನ್ 13ರಂದು ಪ್ರಾರಂಭವಾಗಿದೆ. ಇರಾನ್ ಅಣು ಶಸ್ತ್ರಾಸ್ತ್ರಗಳನ್ನು ಪಡೆಯುವ ಹಂಚಿನಲ್ಲಿತ್ತು ಎಂದು ಆರೋಪಿಸಿ ಇಸ್ರೇಲ್ ಇರಾನ್‌ನಲ್ಲಿ ಮಿಲಿಟರಿ ಮತ್ತು ಅಣು ಗುರಿಗಳ ಮೇಲೆ ದಾಳಿ ಮಾಡಿದೆ. ಇದು ತನ್ನ ಅಸ್ತಿತ್ವಕ್ಕೆ ಬೆದರಿಕೆ ಎಂದು ಇಸ್ರೇಲ್ ಹೇಳಿದೆ.

ಜೂನ್ 13ರ ಘಟನೆಯ ನಂತರ, ಉಭಯ ದೇಶಗಳು ಪರಸ್ಪರ ಕ್ಷಿಪಣಿಗಳನ್ನು ಉಡಾಯಿಸಿದವು. ಎರಡೂ ಕಡೆ ಸಾವುಗಳು ಸಂಭವಿಸಿದವು. ಅಮೆರಿಕವು ಭಾನುವಾರದಂದು ಇರಾನ್‌ನಲ್ಲಿರುವ ಮೂರು ಪ್ರಮುಖ ಪರಮಾಣು ಕೇಂದ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಯುದ್ಧಕ್ಕೆ ಪ್ರವೇಶಿಸಿತು. ಟ್ರಂಪ್ ಈ ಗುರಿಗಳನ್ನು ‘ಸಂಪೂರ್ಣವಾಗಿ ನಾಶಪಡಿಸಲಾಗಿದೆ’ ಎಂದು ಹೇಳಿಕೊಂಡಿದ್ದಾರೆ.

ತನ್ನ ಪರಮಾಣು ಕೇಂದ್ರಗಳ ಮೇಲಿನ ಅಮೆರಿಕ ದಾಳಿಯ ಪ್ರತಿಕ್ರಿಯೆಯಾಗಿ, ಇರಾನ್‌ ದೇಶವು ಕತಾರ್‌ನಲ್ಲಿರುವ ಅಮೆರಿಕದ ಅಲ್ ಉದೈಡ್ ವಾಯುನೆಲೆಯ ಮೇಲೆ ಸೋಮವಾರದಂದು ಕ್ಷಿಪಣಿ ದಾಳಿಯನ್ನು ನಡೆಸಿತು.

Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...